Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಯುಗಾದಿ 2023: ಯುಗಾದಿಯಂದು ಯಾವ ದೇವರನ್ನು ಪೂಜಿಸುತ್ತಾರೆ?
ಹಿಂದೂಗಳಿಗೆ ಹೊಸ ವರ್ಷ ಅಂದರೆ ಹೊಸ ಸಂವತ್ಸರ ಶುರುವಾಗುವುದು ಯುಗಾದಿಯಿಂದ. ಈ ವರ್ಷ ಮಾರ್ಚ್ 22ಕ್ಕೆ ಶುಭಕೃತ್ ಸಂವತ್ಸರ ಮುಗಿದು ಶೋಭಾಕೃತ ಸಂವತ್ಸರ ಪ್ರಾರಂಭವಾಗಲಿದೆ.

ಯುಗಾದಿ ಹಬ್ಬವೆಂದರೆ ನಮ್ಮೆಲ್ಲರಿಗೂ ಸಂಭ್ರಮದ ಆಚರಣೆ. ಈ ದಿನ ದೇವರಿಗೆ ಪೂಜಿಸಿ, ಸಮೀಪದ ದೇವಾಲಯಕ್ಕೆ ಹೋಗಿ ಪೂಜೆ ಮಾಡಿ ಬಂದು ಬೇವು-ಬೆಲ್ಲ ಸವಿಯುತ್ತೇವೆ. ಹೊಸ ವರ್ಷದಲ್ಲಿ ಬರುವ ಖುಷಿ-ದುಃಖವನ್ನು ಸಮಾನವಾಗಿ ಸ್ವೀಕರಿಸುತ್ತೇವೆ ಎಂಬ ಉದ್ದೇಶದಿಂದ ಬೇವು ಬೆಲ್ಲವನ್ನು ಸವಿಯುತ್ತೇವೆ.
ಯುಗಾದಿ ಹಬ್ಬದ ದಿನ ಯಾವ ದೇವರನ್ನು ಪೂಜಿಸುತ್ತಾರೆ ಎಂಬುವುದು ಬಹುತೇಕರು ಕೇಳುವ ಪ್ರಶ್ನೆಯಾಗಿದೆ. ಯುಗಾದಿಯಂದು ಯಾವ ದೇವರನ್ನು ಪೂಜಿಸಲಾಗುವುದು ಎಂದು ನೋಡೋಣ ಬನ್ನಿ:
ಯುಗಾದಿಯಂದು ಸೃಷ್ಟಿಕರ್ತ ಬ್ರಹ್ಮನನ್ನು ಪೂಜಿಸಲಾಗುವುದು
ಬ್ರಹ್ಮ ಚೈತ್ರಮಾನ ಯುಗಾದಿಯಂದ ಇಡೀ ಬ್ರಹ್ಮಾಂಡವನ್ನು ಸೃಷ್ಟಿಸಿದ ಎಂಬ ಪೌರಾಣಿಕ ನಂಬಿಕೆಯಿದೆ. ಯುಗಾದಿ ಎಂಬುವುದು ಹೊಸತನದ ಸಂಕೇತ, ಸೂಚನೆಯಾಗಿದೆ. ನೀವು ಯುಗಾದಿ ಸಮಯದಲ್ಲಿ ಪ್ರಕೃತ್ತಿಯಲ್ಲೂ ಹೊಸತನ ಕಾಣುವಿರಿ. ಒಣಲೆಗಳು ಉದುರಿ ಚಿಗುರೆಲೆಗಳು ಮೂಡಿರುತ್ತವೆ, ಪ್ರಕೃತಿ ತುಂಬಾನೇ ಸುಂದರವಾಗಿ ಕಾಣುತ್ತಿರುತ್ತದೆ. ಚಿಗುರು ಬಂದ ಮಾವಿನ ಮರದಲ್ಲಿ ಕುಳಿತು ಕೋಗಿಲೇ ಕುಹೂ ಕುಹೂ ಎಂದು ಹಾಡುತ್ತಿರುತ್ತದೆ. ಇವೆಲ್ಲಾ ನಾವು ಪ್ರಕೃತಿಯಲ್ಲಿ ಕಾಣುವ ವಿಶೇಷವಾಗಿದೆ. ಆ ಬ್ರಹ್ಮ ಇಂಥ ಸುಂದರ ಪ್ರಪಂಚವನ್ನು ಯುಗಾದಿಯಂದು ಸೃಷ್ಟಿಸಿದ ಎಂದು ಹೇಳಲಾಗುವುದು. ಆದ್ದರಿಂದ ಆ ದಿನ ಸೃಷ್ಟಿಕರ್ತ ಬ್ರಹ್ಮನನ್ನು ಪೂಜಿಸಲಾಗುವುದು.
ಕುಲ ದೇವರನ್ನು ಪೂಜಿಸಲಾಗುವುದು
ಪ್ರತಿಯೊಬ್ಬರಿಗೂ ಅವರದ್ದೇ ಆದ ಕುಲದೇವರು ಇರುತ್ತಾರೆ. ಇಡೀ ಕುಡುಂಬ ತಮ್ಮ ಕುಟುಂಬದ ಏಳಿಗೆಗೆ, ಒಳಿತಿಗೆ ಆ ಕುಲದೈವರೇ ಕಾರಣ ಎಂದು ನಂಬಿರುತ್ತದೆ. ಈ ದಿನ ಮನೆಮಂದಿಯೆಲ್ಲಾ ಮೂಲ ಮನೆಯಲ್ಲಿ ಸೇರಿ ಕುಲದೇವರಿಗೆ ಪೂಜೆಯನ್ನು ಮಾಡಿ ನಮ್ಮೆಲ್ಲರನ್ನು ಹರಿಸಿ ಚೆನ್ನಾಗಿಡು ದೇವರೇ ಎಂದು ಬೇಡಿಕೊಳ್ಳಲಾಗುವುದು.
ಈ ದಿನ ಗಣಪತಿ, ಶಿವ-ಪಾರ್ವತಿ, ವಿಷ್ಣು-ಲಕ್ಷ್ಮಿಗೆ ವಿಶೇಷ ಪೂಜೆ ಮಾಡಲಾಗುವುದು
ಯಾವುದೇ ಪೂಜೆಯಿರಲಿ ಮೊದಲು ಶ್ರೀ ಗಣೇಶನನ್ನು ಆರಾಧಿಸುವ ಮೂಲಕವೇ ಪ್ರಾರಂಭಿಸಬೇಕು ಎಂಬ ನಿಯಮವಿದೆ. ಮೊದಲು ಗಣೇಶನಿಗೆ ತೆಂಗಿನಕಾಯಿ ಒಡೆದು ನಂತರ ತಮ್ಮ ಇಷ್ಟ ದೈವವನ್ನು ಪೂಜಿಸುತ್ತಾರೆ. ಈ ದಿನ ಶಿವನ ದೇವಾಲಯ, ಶ್ರೀ ವಿಷ್ಣು ದೇವಾಲಯ, ಲಕ್ಷ್ಮಿ ದೇವಾಲಯಕ್ಕೆ ಹೋಗಿ ಪೂಜೆಯನ್ನು ಸಲ್ಲಿಸಿ ಬರುತ್ತಾರೆ.
ಯುಗಾದಿಯನ್ನು ಹೇಗೆ ಆಚರಿಸಲಾಗುವುದು?
ಯುಗಾದಿ ಆಚರಣೆಯಲ್ಲಿ ಬೇವು ಬೆಲ್ಲ ಇರಲೇಬೇಕು. ಈ ನಂತರ ಯುಗಾದಿ ಪಚಡಿ ಕೂಡ ತಯಾರಿಸಲಾಗುವುದು.
ಬೆಳಗ್ಗೆ ಎದ್ದು ಸ್ನಾನ ಮಾಡಿ ಮನೆ ಮುಂದೆ ರಂಗೋಲಿ ಬಿಡಿಸಿ. ದೇವರಿಗೆ ಪೂಜೆ ಸಲ್ಲಿಸಿ ಬೇವು ಬೆಲ್ಲ ತಿಂದು ನಂತರ ಹಬ್ಬದ ಅಡುಗೆಗಳನ್ನು ಹಬ್ಬವನ್ನು ಸಂಭ್ರಮಿಸಲಾಗುವುದು.



Click it and Unblock the Notifications