Latest Updates
-
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ!
ಯುಗಾದಿ 2023: ಯುಗಾದಿಯಂದು ಯಾವ ದೇವರನ್ನು ಪೂಜಿಸುತ್ತಾರೆ?
ಹಿಂದೂಗಳಿಗೆ ಹೊಸ ವರ್ಷ ಅಂದರೆ ಹೊಸ ಸಂವತ್ಸರ ಶುರುವಾಗುವುದು ಯುಗಾದಿಯಿಂದ. ಈ ವರ್ಷ ಮಾರ್ಚ್ 22ಕ್ಕೆ ಶುಭಕೃತ್ ಸಂವತ್ಸರ ಮುಗಿದು ಶೋಭಾಕೃತ ಸಂವತ್ಸರ ಪ್ರಾರಂಭವಾಗಲಿದೆ.

ಯುಗಾದಿ ಹಬ್ಬವೆಂದರೆ ನಮ್ಮೆಲ್ಲರಿಗೂ ಸಂಭ್ರಮದ ಆಚರಣೆ. ಈ ದಿನ ದೇವರಿಗೆ ಪೂಜಿಸಿ, ಸಮೀಪದ ದೇವಾಲಯಕ್ಕೆ ಹೋಗಿ ಪೂಜೆ ಮಾಡಿ ಬಂದು ಬೇವು-ಬೆಲ್ಲ ಸವಿಯುತ್ತೇವೆ. ಹೊಸ ವರ್ಷದಲ್ಲಿ ಬರುವ ಖುಷಿ-ದುಃಖವನ್ನು ಸಮಾನವಾಗಿ ಸ್ವೀಕರಿಸುತ್ತೇವೆ ಎಂಬ ಉದ್ದೇಶದಿಂದ ಬೇವು ಬೆಲ್ಲವನ್ನು ಸವಿಯುತ್ತೇವೆ.
ಯುಗಾದಿ ಹಬ್ಬದ ದಿನ ಯಾವ ದೇವರನ್ನು ಪೂಜಿಸುತ್ತಾರೆ ಎಂಬುವುದು ಬಹುತೇಕರು ಕೇಳುವ ಪ್ರಶ್ನೆಯಾಗಿದೆ. ಯುಗಾದಿಯಂದು ಯಾವ ದೇವರನ್ನು ಪೂಜಿಸಲಾಗುವುದು ಎಂದು ನೋಡೋಣ ಬನ್ನಿ:
ಯುಗಾದಿಯಂದು ಸೃಷ್ಟಿಕರ್ತ ಬ್ರಹ್ಮನನ್ನು ಪೂಜಿಸಲಾಗುವುದು
ಬ್ರಹ್ಮ ಚೈತ್ರಮಾನ ಯುಗಾದಿಯಂದ ಇಡೀ ಬ್ರಹ್ಮಾಂಡವನ್ನು ಸೃಷ್ಟಿಸಿದ ಎಂಬ ಪೌರಾಣಿಕ ನಂಬಿಕೆಯಿದೆ. ಯುಗಾದಿ ಎಂಬುವುದು ಹೊಸತನದ ಸಂಕೇತ, ಸೂಚನೆಯಾಗಿದೆ. ನೀವು ಯುಗಾದಿ ಸಮಯದಲ್ಲಿ ಪ್ರಕೃತ್ತಿಯಲ್ಲೂ ಹೊಸತನ ಕಾಣುವಿರಿ. ಒಣಲೆಗಳು ಉದುರಿ ಚಿಗುರೆಲೆಗಳು ಮೂಡಿರುತ್ತವೆ, ಪ್ರಕೃತಿ ತುಂಬಾನೇ ಸುಂದರವಾಗಿ ಕಾಣುತ್ತಿರುತ್ತದೆ. ಚಿಗುರು ಬಂದ ಮಾವಿನ ಮರದಲ್ಲಿ ಕುಳಿತು ಕೋಗಿಲೇ ಕುಹೂ ಕುಹೂ ಎಂದು ಹಾಡುತ್ತಿರುತ್ತದೆ. ಇವೆಲ್ಲಾ ನಾವು ಪ್ರಕೃತಿಯಲ್ಲಿ ಕಾಣುವ ವಿಶೇಷವಾಗಿದೆ. ಆ ಬ್ರಹ್ಮ ಇಂಥ ಸುಂದರ ಪ್ರಪಂಚವನ್ನು ಯುಗಾದಿಯಂದು ಸೃಷ್ಟಿಸಿದ ಎಂದು ಹೇಳಲಾಗುವುದು. ಆದ್ದರಿಂದ ಆ ದಿನ ಸೃಷ್ಟಿಕರ್ತ ಬ್ರಹ್ಮನನ್ನು ಪೂಜಿಸಲಾಗುವುದು.
ಕುಲ ದೇವರನ್ನು ಪೂಜಿಸಲಾಗುವುದು
ಪ್ರತಿಯೊಬ್ಬರಿಗೂ ಅವರದ್ದೇ ಆದ ಕುಲದೇವರು ಇರುತ್ತಾರೆ. ಇಡೀ ಕುಡುಂಬ ತಮ್ಮ ಕುಟುಂಬದ ಏಳಿಗೆಗೆ, ಒಳಿತಿಗೆ ಆ ಕುಲದೈವರೇ ಕಾರಣ ಎಂದು ನಂಬಿರುತ್ತದೆ. ಈ ದಿನ ಮನೆಮಂದಿಯೆಲ್ಲಾ ಮೂಲ ಮನೆಯಲ್ಲಿ ಸೇರಿ ಕುಲದೇವರಿಗೆ ಪೂಜೆಯನ್ನು ಮಾಡಿ ನಮ್ಮೆಲ್ಲರನ್ನು ಹರಿಸಿ ಚೆನ್ನಾಗಿಡು ದೇವರೇ ಎಂದು ಬೇಡಿಕೊಳ್ಳಲಾಗುವುದು.
ಈ ದಿನ ಗಣಪತಿ, ಶಿವ-ಪಾರ್ವತಿ, ವಿಷ್ಣು-ಲಕ್ಷ್ಮಿಗೆ ವಿಶೇಷ ಪೂಜೆ ಮಾಡಲಾಗುವುದು
ಯಾವುದೇ ಪೂಜೆಯಿರಲಿ ಮೊದಲು ಶ್ರೀ ಗಣೇಶನನ್ನು ಆರಾಧಿಸುವ ಮೂಲಕವೇ ಪ್ರಾರಂಭಿಸಬೇಕು ಎಂಬ ನಿಯಮವಿದೆ. ಮೊದಲು ಗಣೇಶನಿಗೆ ತೆಂಗಿನಕಾಯಿ ಒಡೆದು ನಂತರ ತಮ್ಮ ಇಷ್ಟ ದೈವವನ್ನು ಪೂಜಿಸುತ್ತಾರೆ. ಈ ದಿನ ಶಿವನ ದೇವಾಲಯ, ಶ್ರೀ ವಿಷ್ಣು ದೇವಾಲಯ, ಲಕ್ಷ್ಮಿ ದೇವಾಲಯಕ್ಕೆ ಹೋಗಿ ಪೂಜೆಯನ್ನು ಸಲ್ಲಿಸಿ ಬರುತ್ತಾರೆ.
ಯುಗಾದಿಯನ್ನು ಹೇಗೆ ಆಚರಿಸಲಾಗುವುದು?
ಯುಗಾದಿ ಆಚರಣೆಯಲ್ಲಿ ಬೇವು ಬೆಲ್ಲ ಇರಲೇಬೇಕು. ಈ ನಂತರ ಯುಗಾದಿ ಪಚಡಿ ಕೂಡ ತಯಾರಿಸಲಾಗುವುದು.
ಬೆಳಗ್ಗೆ ಎದ್ದು ಸ್ನಾನ ಮಾಡಿ ಮನೆ ಮುಂದೆ ರಂಗೋಲಿ ಬಿಡಿಸಿ. ದೇವರಿಗೆ ಪೂಜೆ ಸಲ್ಲಿಸಿ ಬೇವು ಬೆಲ್ಲ ತಿಂದು ನಂತರ ಹಬ್ಬದ ಅಡುಗೆಗಳನ್ನು ಹಬ್ಬವನ್ನು ಸಂಭ್ರಮಿಸಲಾಗುವುದು.



Click it and Unblock the Notifications
