Latest Updates
-
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ
ಯುಗಾದಿ 2023: ಯುಗಾದಿಯಂದು ಯಾವ ದೇವರನ್ನು ಪೂಜಿಸುತ್ತಾರೆ?
ಹಿಂದೂಗಳಿಗೆ ಹೊಸ ವರ್ಷ ಅಂದರೆ ಹೊಸ ಸಂವತ್ಸರ ಶುರುವಾಗುವುದು ಯುಗಾದಿಯಿಂದ. ಈ ವರ್ಷ ಮಾರ್ಚ್ 22ಕ್ಕೆ ಶುಭಕೃತ್ ಸಂವತ್ಸರ ಮುಗಿದು ಶೋಭಾಕೃತ ಸಂವತ್ಸರ ಪ್ರಾರಂಭವಾಗಲಿದೆ.

ಯುಗಾದಿ ಹಬ್ಬವೆಂದರೆ ನಮ್ಮೆಲ್ಲರಿಗೂ ಸಂಭ್ರಮದ ಆಚರಣೆ. ಈ ದಿನ ದೇವರಿಗೆ ಪೂಜಿಸಿ, ಸಮೀಪದ ದೇವಾಲಯಕ್ಕೆ ಹೋಗಿ ಪೂಜೆ ಮಾಡಿ ಬಂದು ಬೇವು-ಬೆಲ್ಲ ಸವಿಯುತ್ತೇವೆ. ಹೊಸ ವರ್ಷದಲ್ಲಿ ಬರುವ ಖುಷಿ-ದುಃಖವನ್ನು ಸಮಾನವಾಗಿ ಸ್ವೀಕರಿಸುತ್ತೇವೆ ಎಂಬ ಉದ್ದೇಶದಿಂದ ಬೇವು ಬೆಲ್ಲವನ್ನು ಸವಿಯುತ್ತೇವೆ.
ಯುಗಾದಿ ಹಬ್ಬದ ದಿನ ಯಾವ ದೇವರನ್ನು ಪೂಜಿಸುತ್ತಾರೆ ಎಂಬುವುದು ಬಹುತೇಕರು ಕೇಳುವ ಪ್ರಶ್ನೆಯಾಗಿದೆ. ಯುಗಾದಿಯಂದು ಯಾವ ದೇವರನ್ನು ಪೂಜಿಸಲಾಗುವುದು ಎಂದು ನೋಡೋಣ ಬನ್ನಿ:
ಯುಗಾದಿಯಂದು ಸೃಷ್ಟಿಕರ್ತ ಬ್ರಹ್ಮನನ್ನು ಪೂಜಿಸಲಾಗುವುದು
ಬ್ರಹ್ಮ ಚೈತ್ರಮಾನ ಯುಗಾದಿಯಂದ ಇಡೀ ಬ್ರಹ್ಮಾಂಡವನ್ನು ಸೃಷ್ಟಿಸಿದ ಎಂಬ ಪೌರಾಣಿಕ ನಂಬಿಕೆಯಿದೆ. ಯುಗಾದಿ ಎಂಬುವುದು ಹೊಸತನದ ಸಂಕೇತ, ಸೂಚನೆಯಾಗಿದೆ. ನೀವು ಯುಗಾದಿ ಸಮಯದಲ್ಲಿ ಪ್ರಕೃತ್ತಿಯಲ್ಲೂ ಹೊಸತನ ಕಾಣುವಿರಿ. ಒಣಲೆಗಳು ಉದುರಿ ಚಿಗುರೆಲೆಗಳು ಮೂಡಿರುತ್ತವೆ, ಪ್ರಕೃತಿ ತುಂಬಾನೇ ಸುಂದರವಾಗಿ ಕಾಣುತ್ತಿರುತ್ತದೆ. ಚಿಗುರು ಬಂದ ಮಾವಿನ ಮರದಲ್ಲಿ ಕುಳಿತು ಕೋಗಿಲೇ ಕುಹೂ ಕುಹೂ ಎಂದು ಹಾಡುತ್ತಿರುತ್ತದೆ. ಇವೆಲ್ಲಾ ನಾವು ಪ್ರಕೃತಿಯಲ್ಲಿ ಕಾಣುವ ವಿಶೇಷವಾಗಿದೆ. ಆ ಬ್ರಹ್ಮ ಇಂಥ ಸುಂದರ ಪ್ರಪಂಚವನ್ನು ಯುಗಾದಿಯಂದು ಸೃಷ್ಟಿಸಿದ ಎಂದು ಹೇಳಲಾಗುವುದು. ಆದ್ದರಿಂದ ಆ ದಿನ ಸೃಷ್ಟಿಕರ್ತ ಬ್ರಹ್ಮನನ್ನು ಪೂಜಿಸಲಾಗುವುದು.
ಕುಲ ದೇವರನ್ನು ಪೂಜಿಸಲಾಗುವುದು
ಪ್ರತಿಯೊಬ್ಬರಿಗೂ ಅವರದ್ದೇ ಆದ ಕುಲದೇವರು ಇರುತ್ತಾರೆ. ಇಡೀ ಕುಡುಂಬ ತಮ್ಮ ಕುಟುಂಬದ ಏಳಿಗೆಗೆ, ಒಳಿತಿಗೆ ಆ ಕುಲದೈವರೇ ಕಾರಣ ಎಂದು ನಂಬಿರುತ್ತದೆ. ಈ ದಿನ ಮನೆಮಂದಿಯೆಲ್ಲಾ ಮೂಲ ಮನೆಯಲ್ಲಿ ಸೇರಿ ಕುಲದೇವರಿಗೆ ಪೂಜೆಯನ್ನು ಮಾಡಿ ನಮ್ಮೆಲ್ಲರನ್ನು ಹರಿಸಿ ಚೆನ್ನಾಗಿಡು ದೇವರೇ ಎಂದು ಬೇಡಿಕೊಳ್ಳಲಾಗುವುದು.
ಈ ದಿನ ಗಣಪತಿ, ಶಿವ-ಪಾರ್ವತಿ, ವಿಷ್ಣು-ಲಕ್ಷ್ಮಿಗೆ ವಿಶೇಷ ಪೂಜೆ ಮಾಡಲಾಗುವುದು
ಯಾವುದೇ ಪೂಜೆಯಿರಲಿ ಮೊದಲು ಶ್ರೀ ಗಣೇಶನನ್ನು ಆರಾಧಿಸುವ ಮೂಲಕವೇ ಪ್ರಾರಂಭಿಸಬೇಕು ಎಂಬ ನಿಯಮವಿದೆ. ಮೊದಲು ಗಣೇಶನಿಗೆ ತೆಂಗಿನಕಾಯಿ ಒಡೆದು ನಂತರ ತಮ್ಮ ಇಷ್ಟ ದೈವವನ್ನು ಪೂಜಿಸುತ್ತಾರೆ. ಈ ದಿನ ಶಿವನ ದೇವಾಲಯ, ಶ್ರೀ ವಿಷ್ಣು ದೇವಾಲಯ, ಲಕ್ಷ್ಮಿ ದೇವಾಲಯಕ್ಕೆ ಹೋಗಿ ಪೂಜೆಯನ್ನು ಸಲ್ಲಿಸಿ ಬರುತ್ತಾರೆ.
ಯುಗಾದಿಯನ್ನು ಹೇಗೆ ಆಚರಿಸಲಾಗುವುದು?
ಯುಗಾದಿ ಆಚರಣೆಯಲ್ಲಿ ಬೇವು ಬೆಲ್ಲ ಇರಲೇಬೇಕು. ಈ ನಂತರ ಯುಗಾದಿ ಪಚಡಿ ಕೂಡ ತಯಾರಿಸಲಾಗುವುದು.
ಬೆಳಗ್ಗೆ ಎದ್ದು ಸ್ನಾನ ಮಾಡಿ ಮನೆ ಮುಂದೆ ರಂಗೋಲಿ ಬಿಡಿಸಿ. ದೇವರಿಗೆ ಪೂಜೆ ಸಲ್ಲಿಸಿ ಬೇವು ಬೆಲ್ಲ ತಿಂದು ನಂತರ ಹಬ್ಬದ ಅಡುಗೆಗಳನ್ನು ಹಬ್ಬವನ್ನು ಸಂಭ್ರಮಿಸಲಾಗುವುದು.



Click it and Unblock the Notifications