Latest Updates
-
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ -
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ! -
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ!
ಯುಗಾದಿ ಹಬ್ಬದಂದು ಪೂಜೆಗೆ ಶುಭ ಗಳಿಗೆ, ರಾಹುಕಾಲ ಕುರಿತ ಮಾಹಿತಿ ಇಲ್ಲಿದೆ..!
ಭಾರತೀಯರಿಗೆ ಯುಗಾದಿಯಿಂದ ಹೊಸ ವರ್ಷ ಆರಂಭವಾಗುವುದು ಎನ್ನುವ ನಂಬಿಕೆಯಿದೆ. ಯುಗಾದಿಯನ್ನು ದೇಶದ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ರೀತಿಯಿಂದ ಆಚರಿಸುವರು. ಒಂದು ಚಂದ್ರಮಾನ ಯುಗಾದಿ ಮತ್ತೊಂದು ಸೂರ್ಯಮಾನ ಯುಗಾದಿ ಎನ್ನುವುದು.
ಈ ವರ್ಷ ಚಾಂದ್ರಮಾನ ಯುಗಾದಿಯು ಚೈತ್ರ ಮಾಸದ ಮೊದಲ ದಿನ, ಇಂಗ್ಲಿಷ್ ಕ್ಯಾಲೆಂಡರ್ ಪ್ರಕಾರ ಎಪ್ರಿಲ್ 9ಕ್ಕೆ ಬಂದಿದೆ. ಹಿಂದೂಗಳ ಪಾಲಿನ ಪ್ರಮುಖ ಹಬ್ಬ ಇದಾಗಿದ್ದು, ಪ್ರತಿಯೊಂದು ಕಡೆಗಳಲ್ಲೂ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.

ಯುಗಾದಿ ಅಥವಾ ಉಗಾದಿಯು ಹಿಂದೂ ಪಂಚಾಂಗದ ಹೊಸ ವರ್ಷ ಎಂದು ಆಚರಿಸಲಾಗುತ್ತದೆ ಮತ್ತು ಇದು ದಕ್ಷಿಣ ಭಾರತದ ರಾಜ್ಯಗಳಾಗಿರುವಂತಹ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ತುಂಬಾ ಜನಪ್ರಿಯ ಹಬ್ಬ. ಮಹಾರಾಷ್ಟ್ರದಲ್ಲಿ ಇದು ಗುಡಿ ಪಾಡ್ವ ಎಂದು ಮತ್ತು ಪಶ್ಚಿಮ ಬಂಗಾಳದಲ್ಲಿ ನೊಬೊ ಬೊರ್ಸೊ ಎಂದು ಕರೆಯುವರು. ಆದರೆ ಎಲ್ಲಾ ಕಡೆಗಳಲ್ಲೂ ಬಹುಪಾಲು ಒಂದೇ ರೀತಿ ಆಚರಣೆ ರೂಢಿಯಲ್ಲಿದೆ.
ಯುಗಾದಿ ಆಚರಣೆಯ ವಿಧಾನವೇನು?
ಈ ದಿನದಂದು ಸೂರ್ಯೋದಯದ ಮೊದಲು ಎದ್ದು ಸ್ನಾನ ಮಾಡಿದ ಬಳಿಕ ದೇವರ ಸ್ತೋತ್ರ ಜಪಿಸಲಾಗುತ್ತದೆ. ಈ ವೇಳೆಯಲ್ಲಿ ಕೆಲವು ಕಡೆ ಎಣ್ಣೆ ಸ್ನಾನ ಮಾಡಲಾಗುತ್ತದೆ, ತೈಲಅಭ್ಯಂಗನ ಸ್ನಾನಂ'' ಎಂದು ಹೇಳಲಾಗುತ್ತದೆ. ಎಣ್ಣೆ ಹಚ್ಚಿಕೊಂಡು ಈ ದಿನ ಸ್ನಾನ ಮಾಡಿದರೆ, ತುಂಬಾ ಪವಿತ್ರ ಎಂದು ಪರಿಗಣಿಸಲಾಗಿದೆ. ಈ ದಿನ ದೇವರ ಮೂರ್ತಿಗಳಿಗೂ ನೀರಿನಿಂದ ಅಭಿಷೇಕ ಮಾಡಿ ಶುದ್ಧೀಕರಿಸಬೇಕು. ಮೂರ್ತಿಗಳನ್ನು ತೊಳೆದು, ದೇವರ ಕೋಣೆ ಸ್ವಚ್ಛ ಮಾಡಿದ ಬಳಿಕ ಹೊಸ ಬಟ್ಟೆಗಳನ್ನು ಧರಿಸಿ, ಪ್ರಸಾದವನ್ನು ಇಟ್ಟು ಪೂಜೆ ಮಾಡಬೇಕು. ಪೂಜೆಗಾಗಿ ವಿಶೇಷವಾಗಿ ಬೇವು ಬೆಲ್ಲ ಅಥವಾ ಯುಗಾದಿ ಪಚಡಿಯನ್ನು ಇಡಬೇಕು. ಬಳಿಕ ಊಟದ ಜೊತೆ ಇದನ್ನು ಪ್ರಸಾದದಂತೆ ಸೇವಿಸಬಹುದು.
ಯುಗಾದಿ ಹಬ್ಬದ ಶುಭ ಗಳಿಗೆ ಯಾವುದು?
ಯುಗಾದಿಯನ್ನು ಈ ವರ್ಷ ಏಪ್ರಿಲ್ 9 ರಂದು ಆಚರಿಸಲಾಗುತ್ತದೆ. ಪ್ರತಿಪದ ತಿಥಿಯು ಏಪ್ರಿಲ್ 8, 2024 ರಂದು ರಾತ್ರಿ 11:50 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಏಪ್ರಿಲ್ 9, 2024 ರಂದು ರಾತ್ರಿ 8:30 ಕ್ಕೆ ಕೊನೆಗೊಳ್ಳುತ್ತದೆ.
ಯುಗಾದಿ ಆಚರಣೆ ಹೇಗೆ?
ಯುಗಾದಿಯು ದಕ್ಷಿಣ ಭಾರತದ ಜನಪ್ರಿಯ ಹಬ್ಬವಾಗಿದೆ. ಇದು ಸಂಪತ್ತು, ಅಭಿವೃದ್ಧಿ, ಹೊಸ ಆರಂಭಗಳು ಮತ್ತು ಕೆಟ್ಟದ್ದರ ವಿರುದ್ಧ ಒಳ್ಳೆಯದ ವಿಜಯವನ್ನು ಪ್ರತಿನಿಧಿಸುತ್ತದೆ.
ದಿನವು ಸಾಂಪ್ರದಾಯಿಕ ಎಣ್ಣೆ ಸ್ನಾನದಿಂದ ಪ್ರಾರಂಭವಾಗುತ್ತದೆ, ನಂತರ ಪೂಜೆಗಳು, ಎಣ್ಣೆ ಸ್ನಾನ ಮಾಡಿ ಎಳ್ಳು ಬೆಲ್ಲ ಸೇವಿಸಲಾಗುತ್ತದೆ.
ಕೆಲವು ಕಡೆ ಕಹಿ ಬೇವು, ಬೆಲ್ಲ, ಕೊತ್ತಂಬರಿ ಬೀಜ, ಹುಣಸೆ ಹಣ್ಣುಗಳ ಸೇರಿಸಿ ಅದನ್ನು ಪೇಸ್ಟ್ನಂತೆ ಮಾಡಿ ಸೇವಿಸುತ್ತಾರೆ. ಇದರಿಂದ ರಕ್ತ ಶುದ್ಧಿಯಾಗುತ್ತದೆ ಎಂಬ ನಂಬಿಕೆ ಇದೆ.
ಇದಲ್ಲದೆ, ಕೆಲವರು ಯುಗಾದಿಯಂದು ಎಣ್ಣೆ ಸ್ನಾನ ಮಾಡುತ್ತಾರೆ ಏಕೆಂದರೆ ಎಣ್ಣೆಯಲ್ಲಿ ಲಕ್ಷ್ಮಿ ದೇವಿ ವಾಸವಿದ್ದಾಳೆ ಮತ್ತು ನೀರಿನಲ್ಲಿ ಗಂಗಾ ದೇವಿ ವಾಸವಿದ್ದಾಳೆ ಎಂದು ನಂಬಲಾಗಿದೆ.
ತಾಜಾ ಮಾವಿನ ಎಲೆಗಳಿಂದ ಮನೆಯ ಮುಂಭಾಗವನ್ನು ಅಲಂಕರಿಸುತ್ತಾರೆ. ಇದಕ್ಕೂ ಕೂಡ ವೈಜ್ಞಾನಿಕ ಕಾರಣವಿದೆ. ಹೀಗೆ ತಾಜಾ ಮಾವಿನ ಎಲೆಗಳನ್ನು ಮನೆಯ ಮುಂಭಾಗದಲ್ಲಿ ಹಾಕುವುದರಿಂದಾಗಿ ತಾಜಾ ಗಾಳಿ ಮನೆಯೊಳಗೆ ಪ್ರವೇಶಿಸುತ್ತದೆ ಮತ್ತು ಇದು ತಂಪಾದ ಅನುಭವವನ್ನು ಮನೆಯೊಳಗೆ ನೀಡುತ್ತದೆ.
ಜನರು ಹೊಸ ಬಟ್ಟೆಗಳನ್ನು ತೊಡುತ್ತಾರೆ ಯಾಕೆಂದರೆ ಇದರಿಂದ ಅವರೊಳಗೊಂದು ಹೊಸತನದ ಭಾವನೆ ಹುಟ್ಟುತ್ತದೆ.
ಯುಗಾದಿ ದಿನದಂದು ಕರಗಿಸಿದ ತುಪ್ಪವನ್ನು ಒಂದು ಬೌಲ್ ನಲ್ಲಿ ಹಾಕಿ ಮುಖವನ್ನು ನೋಡಿಕೊಳ್ಳುವ ಪದ್ದತಿ ಕೆಲವು ಕಡೆಗಳಲ್ಲಿ ರೂಢಿಯಲ್ಲಿದೆ.
ಕುಟುಂಬದ ಹಿರಿಯ ಮಹಿಳೆಯು ಕುಟುಂಬದ ಕಿರಿಯ ಸದಸ್ಯರಿಗೆ ಕುಂಕುಮ ಹಚ್ಚಿ ಆರತಿ ಎತ್ತುವ ಪದ್ದತಿ ರೂಢಿಯಲ್ಲಿದೆ.
ಯುಗಾದಿಯಂದು ರಾಹುಕಾಲ, ಶುಭ ಕಾಲ ಯಾವಾಗ?
ರಾಹುಕಾಲ- 3 ಗಂಟೆಯಿಂದ 4:30
ಗುಳಿಕ ಕಾಲ- ಬೆಳಗ್ಗೆ 10:30 ರಿಂದ 12 ಗಂಟೆ



Click it and Unblock the Notifications