Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಯುಗಾದಿ ಹಬ್ಬದಂದು ಪೂಜೆಗೆ ಶುಭ ಗಳಿಗೆ, ರಾಹುಕಾಲ ಕುರಿತ ಮಾಹಿತಿ ಇಲ್ಲಿದೆ..!
ಭಾರತೀಯರಿಗೆ ಯುಗಾದಿಯಿಂದ ಹೊಸ ವರ್ಷ ಆರಂಭವಾಗುವುದು ಎನ್ನುವ ನಂಬಿಕೆಯಿದೆ. ಯುಗಾದಿಯನ್ನು ದೇಶದ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ರೀತಿಯಿಂದ ಆಚರಿಸುವರು. ಒಂದು ಚಂದ್ರಮಾನ ಯುಗಾದಿ ಮತ್ತೊಂದು ಸೂರ್ಯಮಾನ ಯುಗಾದಿ ಎನ್ನುವುದು.
ಈ ವರ್ಷ ಚಾಂದ್ರಮಾನ ಯುಗಾದಿಯು ಚೈತ್ರ ಮಾಸದ ಮೊದಲ ದಿನ, ಇಂಗ್ಲಿಷ್ ಕ್ಯಾಲೆಂಡರ್ ಪ್ರಕಾರ ಎಪ್ರಿಲ್ 9ಕ್ಕೆ ಬಂದಿದೆ. ಹಿಂದೂಗಳ ಪಾಲಿನ ಪ್ರಮುಖ ಹಬ್ಬ ಇದಾಗಿದ್ದು, ಪ್ರತಿಯೊಂದು ಕಡೆಗಳಲ್ಲೂ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.

ಯುಗಾದಿ ಅಥವಾ ಉಗಾದಿಯು ಹಿಂದೂ ಪಂಚಾಂಗದ ಹೊಸ ವರ್ಷ ಎಂದು ಆಚರಿಸಲಾಗುತ್ತದೆ ಮತ್ತು ಇದು ದಕ್ಷಿಣ ಭಾರತದ ರಾಜ್ಯಗಳಾಗಿರುವಂತಹ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ತುಂಬಾ ಜನಪ್ರಿಯ ಹಬ್ಬ. ಮಹಾರಾಷ್ಟ್ರದಲ್ಲಿ ಇದು ಗುಡಿ ಪಾಡ್ವ ಎಂದು ಮತ್ತು ಪಶ್ಚಿಮ ಬಂಗಾಳದಲ್ಲಿ ನೊಬೊ ಬೊರ್ಸೊ ಎಂದು ಕರೆಯುವರು. ಆದರೆ ಎಲ್ಲಾ ಕಡೆಗಳಲ್ಲೂ ಬಹುಪಾಲು ಒಂದೇ ರೀತಿ ಆಚರಣೆ ರೂಢಿಯಲ್ಲಿದೆ.
ಯುಗಾದಿ ಆಚರಣೆಯ ವಿಧಾನವೇನು?
ಈ ದಿನದಂದು ಸೂರ್ಯೋದಯದ ಮೊದಲು ಎದ್ದು ಸ್ನಾನ ಮಾಡಿದ ಬಳಿಕ ದೇವರ ಸ್ತೋತ್ರ ಜಪಿಸಲಾಗುತ್ತದೆ. ಈ ವೇಳೆಯಲ್ಲಿ ಕೆಲವು ಕಡೆ ಎಣ್ಣೆ ಸ್ನಾನ ಮಾಡಲಾಗುತ್ತದೆ, ತೈಲಅಭ್ಯಂಗನ ಸ್ನಾನಂ'' ಎಂದು ಹೇಳಲಾಗುತ್ತದೆ. ಎಣ್ಣೆ ಹಚ್ಚಿಕೊಂಡು ಈ ದಿನ ಸ್ನಾನ ಮಾಡಿದರೆ, ತುಂಬಾ ಪವಿತ್ರ ಎಂದು ಪರಿಗಣಿಸಲಾಗಿದೆ. ಈ ದಿನ ದೇವರ ಮೂರ್ತಿಗಳಿಗೂ ನೀರಿನಿಂದ ಅಭಿಷೇಕ ಮಾಡಿ ಶುದ್ಧೀಕರಿಸಬೇಕು. ಮೂರ್ತಿಗಳನ್ನು ತೊಳೆದು, ದೇವರ ಕೋಣೆ ಸ್ವಚ್ಛ ಮಾಡಿದ ಬಳಿಕ ಹೊಸ ಬಟ್ಟೆಗಳನ್ನು ಧರಿಸಿ, ಪ್ರಸಾದವನ್ನು ಇಟ್ಟು ಪೂಜೆ ಮಾಡಬೇಕು. ಪೂಜೆಗಾಗಿ ವಿಶೇಷವಾಗಿ ಬೇವು ಬೆಲ್ಲ ಅಥವಾ ಯುಗಾದಿ ಪಚಡಿಯನ್ನು ಇಡಬೇಕು. ಬಳಿಕ ಊಟದ ಜೊತೆ ಇದನ್ನು ಪ್ರಸಾದದಂತೆ ಸೇವಿಸಬಹುದು.
ಯುಗಾದಿ ಹಬ್ಬದ ಶುಭ ಗಳಿಗೆ ಯಾವುದು?
ಯುಗಾದಿಯನ್ನು ಈ ವರ್ಷ ಏಪ್ರಿಲ್ 9 ರಂದು ಆಚರಿಸಲಾಗುತ್ತದೆ. ಪ್ರತಿಪದ ತಿಥಿಯು ಏಪ್ರಿಲ್ 8, 2024 ರಂದು ರಾತ್ರಿ 11:50 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಏಪ್ರಿಲ್ 9, 2024 ರಂದು ರಾತ್ರಿ 8:30 ಕ್ಕೆ ಕೊನೆಗೊಳ್ಳುತ್ತದೆ.
ಯುಗಾದಿ ಆಚರಣೆ ಹೇಗೆ?
ಯುಗಾದಿಯು ದಕ್ಷಿಣ ಭಾರತದ ಜನಪ್ರಿಯ ಹಬ್ಬವಾಗಿದೆ. ಇದು ಸಂಪತ್ತು, ಅಭಿವೃದ್ಧಿ, ಹೊಸ ಆರಂಭಗಳು ಮತ್ತು ಕೆಟ್ಟದ್ದರ ವಿರುದ್ಧ ಒಳ್ಳೆಯದ ವಿಜಯವನ್ನು ಪ್ರತಿನಿಧಿಸುತ್ತದೆ.
ದಿನವು ಸಾಂಪ್ರದಾಯಿಕ ಎಣ್ಣೆ ಸ್ನಾನದಿಂದ ಪ್ರಾರಂಭವಾಗುತ್ತದೆ, ನಂತರ ಪೂಜೆಗಳು, ಎಣ್ಣೆ ಸ್ನಾನ ಮಾಡಿ ಎಳ್ಳು ಬೆಲ್ಲ ಸೇವಿಸಲಾಗುತ್ತದೆ.
ಕೆಲವು ಕಡೆ ಕಹಿ ಬೇವು, ಬೆಲ್ಲ, ಕೊತ್ತಂಬರಿ ಬೀಜ, ಹುಣಸೆ ಹಣ್ಣುಗಳ ಸೇರಿಸಿ ಅದನ್ನು ಪೇಸ್ಟ್ನಂತೆ ಮಾಡಿ ಸೇವಿಸುತ್ತಾರೆ. ಇದರಿಂದ ರಕ್ತ ಶುದ್ಧಿಯಾಗುತ್ತದೆ ಎಂಬ ನಂಬಿಕೆ ಇದೆ.
ಇದಲ್ಲದೆ, ಕೆಲವರು ಯುಗಾದಿಯಂದು ಎಣ್ಣೆ ಸ್ನಾನ ಮಾಡುತ್ತಾರೆ ಏಕೆಂದರೆ ಎಣ್ಣೆಯಲ್ಲಿ ಲಕ್ಷ್ಮಿ ದೇವಿ ವಾಸವಿದ್ದಾಳೆ ಮತ್ತು ನೀರಿನಲ್ಲಿ ಗಂಗಾ ದೇವಿ ವಾಸವಿದ್ದಾಳೆ ಎಂದು ನಂಬಲಾಗಿದೆ.
ತಾಜಾ ಮಾವಿನ ಎಲೆಗಳಿಂದ ಮನೆಯ ಮುಂಭಾಗವನ್ನು ಅಲಂಕರಿಸುತ್ತಾರೆ. ಇದಕ್ಕೂ ಕೂಡ ವೈಜ್ಞಾನಿಕ ಕಾರಣವಿದೆ. ಹೀಗೆ ತಾಜಾ ಮಾವಿನ ಎಲೆಗಳನ್ನು ಮನೆಯ ಮುಂಭಾಗದಲ್ಲಿ ಹಾಕುವುದರಿಂದಾಗಿ ತಾಜಾ ಗಾಳಿ ಮನೆಯೊಳಗೆ ಪ್ರವೇಶಿಸುತ್ತದೆ ಮತ್ತು ಇದು ತಂಪಾದ ಅನುಭವವನ್ನು ಮನೆಯೊಳಗೆ ನೀಡುತ್ತದೆ.
ಜನರು ಹೊಸ ಬಟ್ಟೆಗಳನ್ನು ತೊಡುತ್ತಾರೆ ಯಾಕೆಂದರೆ ಇದರಿಂದ ಅವರೊಳಗೊಂದು ಹೊಸತನದ ಭಾವನೆ ಹುಟ್ಟುತ್ತದೆ.
ಯುಗಾದಿ ದಿನದಂದು ಕರಗಿಸಿದ ತುಪ್ಪವನ್ನು ಒಂದು ಬೌಲ್ ನಲ್ಲಿ ಹಾಕಿ ಮುಖವನ್ನು ನೋಡಿಕೊಳ್ಳುವ ಪದ್ದತಿ ಕೆಲವು ಕಡೆಗಳಲ್ಲಿ ರೂಢಿಯಲ್ಲಿದೆ.
ಕುಟುಂಬದ ಹಿರಿಯ ಮಹಿಳೆಯು ಕುಟುಂಬದ ಕಿರಿಯ ಸದಸ್ಯರಿಗೆ ಕುಂಕುಮ ಹಚ್ಚಿ ಆರತಿ ಎತ್ತುವ ಪದ್ದತಿ ರೂಢಿಯಲ್ಲಿದೆ.
ಯುಗಾದಿಯಂದು ರಾಹುಕಾಲ, ಶುಭ ಕಾಲ ಯಾವಾಗ?
ರಾಹುಕಾಲ- 3 ಗಂಟೆಯಿಂದ 4:30
ಗುಳಿಕ ಕಾಲ- ಬೆಳಗ್ಗೆ 10:30 ರಿಂದ 12 ಗಂಟೆ



Click it and Unblock the Notifications