Latest Updates
-
ತೀವ್ರ ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಆರೋಗ್ಯವಾಗಿರಲು ಈ ಸುರಕ್ಷತಾ ಕ್ರಮಗಳನ್ನು ಮಿಸ್ ಮಾಡ್ಬೇಡಿ! -
ಲಿವ್-ಇನ್ ಸಂಬಂಧದಲ್ಲಿರುವ ಯುವ ಜೋಡಿಗಳಿಗೆ ಶಾಕ್: ಹೈಕೋರ್ಟ್ನಿಂದ ಹೊಸ ಆದೇಶ, ಇನ್ನು ರಕ್ಷಣೆ ಸಿಗಲ್ಲ! -
ಬಿಸಿಲಿಗೆ ಬಾಲ್ಕನಿ ಗಿಡಗಳು ಬಾಡುತ್ತಿವೆಯೇ? ಈ 5 ಸರಳ ಟ್ರಿಕ್ಸ್ ಬಳಸಿ ಗಿಡಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಿ! -
ಹಾಲಿನ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಹಾಳಾಗದಂತೆ ಆರೋಗ್ಯ ಕಾಪಾಡಿಕೊಳ್ಳಲು ಈ ಪರ್ಯಾಯ ಆಹಾರಗಳೇ ದಾರಿ! -
ರೆಡ್ ಕಾರ್ಪೆಟ್ ಮೇಲೆ ಸದ್ದು ಮಾಡುತ್ತಿರುವ 'ಸೀರೆ-ಗೌನ್' ಮ್ಯಾಜಿಕ್: 2026ರ ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿಯ ಅಬ್ಬರ: ಆರೋಗ್ಯ ಹಾಳಾಗದಂತೆ ವರ್ಕೌಟ್ ಮಾಡಲು ಈ ಬದಲಾವಣೆಗಳನ್ನು ಮಾಡಿಕೊಳ್ಳುವುದು ಅತ್ಯಗತ್ಯ, ಇಲ್ಲದಿದ್ದರೆ ಅಪಾಯ! -
ಬಿಸಿಲು ಅಥವಾ ಮಳೆ: ಹವಾಮಾನದ ಅಬ್ಬರದ ನಡುವೆಯೂ ನಿಮ್ಮ ಮದುವೆ ಸಂಭ್ರಮವನ್ನು ಅಚ್ಚುಕಟ್ಟಾಗಿ ಪ್ಲಾನ್ ಮಾಡುವುದು ಹೇಗೆ? -
ಬಿಸಿಲ ಧಗೆಗೆ ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ನಿಮ್ಮ ಮನೆಯನ್ನು ತಂಪಾಗಿರಿಸಲು ಮತ್ತು ಗಿಡಗಳನ್ನು ಉಳಿಸಲು ಇಲ್ಲಿವೆ ಅದ್ಭುತ ಟಿಪ್ಸ್! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಅಡುಗೆ ಮನೆಯಲ್ಲಿರುವ ಈ ಪದಾರ್ಥಗಳೇ ಸಾಕು, ಇಂದೇ ಟ್ರೈ ಮಾಡಿ! -
ಕಾನ್ 2026 ರೆಡ್ ಕಾರ್ಪೆಟ್ನಲ್ಲಿ ಭಾರತೀಯ ತಾರೆಯರ ಮಿಂಚಿನ ಸಂಚಲನ: ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ!
Ugadi 2026: ಯುಗಾದಿ ಹಬ್ಬದಂದು ಬೇವು-ಬೆಲ್ಲ ಸವಿಯುವುದರ ವೈಜ್ಞಾನಿಕ ಕಾರಣ ಏನು ಗೊತ್ತಾ?
ಯುಗಾದಿ ಹಿಂದೂಗಳಿಗೆ ಹೊಸ ವರ್ಷದ ಆರಂಭದ ದಿನ ಎಂದು ಪರಿಗಣಿಸಲಾಗುತ್ತದೆ. ಈ ದಿನದಿಂದ ಚೈತ್ರ ಮಾಸ ಆರಂಭವಾಗಲಿದೆ. ಇದು ವೈದಿಕ ಕ್ಯಾಲೆಂಡರ್ ಪ್ರಕಾರ ಹೊಸ ವರ್ಷವಾಗಿ ಆಚರಿಸಲಾಗುತ್ತದೆ. ಚೈತ್ರ ಮಾಸದಲ್ಲಿ ಹೊಸ ಚಿಗುರು ಪಡೆಯುತ್ತೇವೆ. ಹೀಗಾಗಿ ಈ ದಿನದಂದು ವಿಶೇಷ ಆಚರಣೆಗಳ ನೋಡಬಹುದು. ಹಾಗೆ ಯುಗಾದಿಯಲ್ಲಿ ಸಿಹಿ ತಿಂಡಿಗಳು, ಹಬ್ಬದ ಅಡುಗೆ, ಸಂಭ್ರಮ ದುಪ್ಪಟ್ಟಾಗಿಸುವ ಅಂಶ.
ಈ ಶುಭ ದಿನದಂದೇ ಬ್ರಹ್ಮನು ಸೃಷ್ಟಿಯನ್ನು ಆರಂಭಿಸಿದನು ಎಂದು ಸಹ ನಂಬಲಾಗಿದೆ. ಪ್ರಕೃತಿಯಲ್ಲಿಯೂ ವಿಭಿನ್ನ ಬದಲಾವಣೆಯ ಮೂಲಕ ಹೊಸ ವರ್ಷದ ಆರಂಭವಾಗುವುದು. ಹಾಗೆ ಯುಗಾದಿಯಲ್ಲಿ ಬೇವು ಬೆಲ್ಲ ಸವಿಯೋದು ಸಂಪ್ರಾಯದಂತೆ ನಡೆದು ಬಂದಿದೆ. ಬೇವು ಬೆಲ್ಲ ಸವಿಯದೆ ಯುಗಾದಿ ಪೂರ್ಣವಾಗೋದಿಲ್ಲ. ಹಾಗೆ ಬೇವು ಬೆಲ್ಲವನ್ನು ಹಂಚಿ ಸವಿಯುವುದು ಈ ಹಬ್ಬದ ಸಂಪ್ರದಾಯದಲ್ಲಿ ಒಂದು.

ಪ್ರತಿಯೊಬ್ಬರ ಜೀವನವು ನೋವು-ನಲಿವಿನಿಂದ ಕೂಡಿರುತ್ತದೆ. ಅವುಗಳನ್ನು ಸಮಾನ ದೃಷ್ಟಿಯಲ್ಲಿ ಸ್ವೀಕರಿಸಬೇಕು. ನೋವು ಎದುರಾದಾಗ ದೃತಿಗೆಡದೆ, ನಲಿವಿನಿಂದಾಗಿ ಅಹಂಕಾರಕ್ಕೆ ಒಳಗಾಗದೆ, ಎರಡು ಸಂದರ್ಭದಲ್ಲೂ ಸಮತೋಲನವನ್ನು ಕಾಯ್ದುಕೊಂಡು ಜೀವನವನ್ನು ನಡೆಸಬೇಕು ಎಂಬುದು ಈ ಬೇವು ಬೆಲ್ಲ ನೀಡುವುದರ ಕಾರಣವೂ ಹೌದು. ಸುಖ ದುಃಖವನ್ನು ಸಮವಾಗಿ ಸ್ವೀಕರಿಸಬೇಕು. ಸುಖವಿದ್ದಾಗ ಹಿಗ್ಗುವುದು ದುಃಖದಲ್ಲಿ ಕುಗ್ಗವುದಲ್ಲ ಎಂಬ ಸಂದೇಶ ನೀಡಲಿದೆ. ಹಾಗೆ ಬೇವು ಬೆಲ್ಲವು ವೈಜ್ಞಾನಿಕ ಕಾರಣದಿಂದಾಗಿಯೂ ಬಹಳ ಮುಖ್ಯವಾಗಿದೆ.
ಯುಗಾದಿಯಲ್ಲಿ ಬೇವು ಬೆಲ್ಲದ ಪ್ರಾಮುಖ್ಯತೆ ಏನು?
ಯುಗಾದಿಯಲ್ಲಿ ಬೆಲ್ಲ ಮತ್ತು ಬೇವಿನ ಎಲೆಗಳು ಜೀವನದಲ್ಲಿ ಕಹಿಯನ್ನು ಸೂಚಿಸುತ್ತವೆ ಎಂದು ನೀವು ತಿಳಿದಿರಬೇಕು. ಮಾನವ ಜೀವನವು ಸಂತೋಷದ ಸವಾರಿಯಾಗಲು ಸಾಧ್ಯವಿಲ್ಲ. ನಿಮ್ಮ ಸುತ್ತಲಿನ ಜೀವನದ ಕಹಿಗಳನ್ನು ನೀವು ಒಪ್ಪಿಕೊಳ್ಳಬೇಕು. ಹಾಗೆ ವೈಜ್ಞಾನಿಕವಾಗಿಯೂ ಇದು ಪ್ರಾಮುಖ್ಯತೆ ಹೊಂದಿದೆ. ಬೇವಿನ ಎಲೆಗಳು, ಹೂಗಳು, ಕಾಂಡಗಳು ಔಷಧೀಯ ಗುಣ ಹೊಂದಿದೆ. ಬೇವಿನ ಎಲೆಗಳನ್ನು ನೀರಿಗೆ ಹಾಕಿ ಸ್ನಾನ ಮಾಡುವುದು ದೇಹವು ಹಲವು ಸಮಸ್ಯೆಗಳಿಂದ ಮುಕ್ತವಾಗುತ್ತೆ. ಬೇವು ರಕ್ತವನ್ನು ಶುದ್ಧೀಕರಿಸುತ್ತದೆ. ಒಂದು ಹಸುವಿಗೆ ಅದರ ಎಲೆಗಳನ್ನು ನೀಡಿದರೆ ಸಾಕಷ್ಟು ಹಾಲು ಸಿಗುತ್ತದೆ. ಇದು ಚರ್ಮದ ಅಲರ್ಜಿಗಳು, ಉದರ ಸಂಬಂಧಿ ಸಮಸ್ಯೆಗಳು ಸೇರಿ ಹಲವು ಸಮಸ್ಯೆಗಳಿಗೆ ಮುಕ್ತಿ ನೀಡಲಿದೆ. ನಕಾರಾತ್ಮಕತೆಯನ್ನು ಶುದ್ಧೀಕರಿಸುತ್ತದೆ ಮತ್ತು ಸಕಾರಾತ್ಮಕತೆಯನ್ನು ಆಕರ್ಷಿಸುತ್ತದೆ. ತಪಸ್ಸು ಮಾಡುವ ಋಷಿಮುನಿಗಳು ತಪಸ್ಸಿನ ಸಮಯದಲ್ಲಿ ನಿಯಮಿತವಾಗಿ ಬೇವಿನ ಎಲೆಗಳನ್ನು ಅಥವಾ ಅದರ ರಸವನ್ನು ಸೇವಿಸುತ್ತಿದ್ದರು ಎಂದು ತಿಳಿದುಬಂದಿದೆ.
ಹಾಗೆ ಬೆಲ್ಲವು ದೇಹಕ್ಕೆ ಉತ್ತಮ ಅಂಶವಾಗಿದೆ. ಕೊಬ್ಬಿನ ಕೋಶಗಳನ್ನು ಸುಡುವ ನಿಮ್ಮ ದೇಹದ ಸಾಮರ್ಥ್ಯವನ್ನು ಸುಧಾರಿಸುತ್ತದೆ, ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಬೆಲ್ಲವು ದೇಹವು ಸಮತೋಲನದಿಂದ ಇರಲು ಸಹಕಾರಿ. ಇದರಲ್ಲಿನ ಗ್ಯಾಸ್ಟ್ರೊ-ಪ್ರೊಟೆಕ್ಟಿವ್ ಅಂಶವು ಉದರ ಸಂಬಂಧಿ ಸಮಸ್ಯೆಗಳನ್ನು ಕಡಿಮೆ ಮಾಡಲಿದೆ. ಹೀಗಾಗಿ ಬೆಲ್ಲದಿಂದ ಮಾಡಿದ ಯಾವುದೇ ಖಾದ್ಯವನ್ನು ನೀವು ಯಾವುದೇ ಭಯವಿಲ್ಲದೆ ಸೇವಿಸಬಹುದು. ಬಾಯಿ ಹುಣ್ಣು, ವಾಂತಿ, ಎದೆಯುರಿ, ಅತಿಯಾದ ಬೆವರುವಿಕೆ, ತುರಿಕೆ ಸೇರಿ ಹಲವು ಸಮಸ್ಯೆಗಳಿಗೆ ಇದು ಪರಿಹಾರ ನೀಡಲಿದೆ.
ಹಾಗೆ ಬೇವು-ಬೆಲ್ಲ ಸೇವಿಸುವಾಗ ಶತಾಯುರ್ವಜ್ರದೇಹಾಯ ಸರ್ವಸಂಪತ್ಕರಾಯ ಚ ಸರ್ವಾರಿಷ್ಟವಿನಾಶಾಯ ನಿಂಬಕಂದಳ ಭಕ್ಷಣಮ್ ಎಂಬ ಶ್ಲೋಕವನ್ನು ಉಚ್ಚರಿಸುತ್ತಾರೆ. ಇದರ ಅರ್ಥ ನೂರು ವರ್ಷಗಳ ಆಯುಷ್ಯ, ವಜ್ರದಂತೆ ದೃಢ ದೇಹ, ಸಂಪತ್ತು ಮತ್ತು ಎಲ್ಲ ಅನಿಷ್ಟಗಳ ನಿವಾರಣೆಗಾಗಿ ಈ ಬೇವನ್ನು ಸೇವಿಸುತ್ತೇನೆ. ಆಯುರ್ವೇದ ಪ್ರಕಾರ ಬೇವಿನ ಎಲೆಗಳು ಅನಿಷ್ಟಗಳನ್ನು ನಾಶಮಾಡುತ್ತವೆ ಎಂಬ ನಂಬಿಕೆ ಇದೆ.



Click it and Unblock the Notifications