Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Ugadi 2026: ಯುಗಾದಿ ಹಬ್ಬದಂದು ಬೇವು-ಬೆಲ್ಲ ಸವಿಯುವುದರ ವೈಜ್ಞಾನಿಕ ಕಾರಣ ಏನು ಗೊತ್ತಾ?
ಯುಗಾದಿ ಹಿಂದೂಗಳಿಗೆ ಹೊಸ ವರ್ಷದ ಆರಂಭದ ದಿನ ಎಂದು ಪರಿಗಣಿಸಲಾಗುತ್ತದೆ. ಈ ದಿನದಿಂದ ಚೈತ್ರ ಮಾಸ ಆರಂಭವಾಗಲಿದೆ. ಇದು ವೈದಿಕ ಕ್ಯಾಲೆಂಡರ್ ಪ್ರಕಾರ ಹೊಸ ವರ್ಷವಾಗಿ ಆಚರಿಸಲಾಗುತ್ತದೆ. ಚೈತ್ರ ಮಾಸದಲ್ಲಿ ಹೊಸ ಚಿಗುರು ಪಡೆಯುತ್ತೇವೆ. ಹೀಗಾಗಿ ಈ ದಿನದಂದು ವಿಶೇಷ ಆಚರಣೆಗಳ ನೋಡಬಹುದು. ಹಾಗೆ ಯುಗಾದಿಯಲ್ಲಿ ಸಿಹಿ ತಿಂಡಿಗಳು, ಹಬ್ಬದ ಅಡುಗೆ, ಸಂಭ್ರಮ ದುಪ್ಪಟ್ಟಾಗಿಸುವ ಅಂಶ.
ಈ ಶುಭ ದಿನದಂದೇ ಬ್ರಹ್ಮನು ಸೃಷ್ಟಿಯನ್ನು ಆರಂಭಿಸಿದನು ಎಂದು ಸಹ ನಂಬಲಾಗಿದೆ. ಪ್ರಕೃತಿಯಲ್ಲಿಯೂ ವಿಭಿನ್ನ ಬದಲಾವಣೆಯ ಮೂಲಕ ಹೊಸ ವರ್ಷದ ಆರಂಭವಾಗುವುದು. ಹಾಗೆ ಯುಗಾದಿಯಲ್ಲಿ ಬೇವು ಬೆಲ್ಲ ಸವಿಯೋದು ಸಂಪ್ರಾಯದಂತೆ ನಡೆದು ಬಂದಿದೆ. ಬೇವು ಬೆಲ್ಲ ಸವಿಯದೆ ಯುಗಾದಿ ಪೂರ್ಣವಾಗೋದಿಲ್ಲ. ಹಾಗೆ ಬೇವು ಬೆಲ್ಲವನ್ನು ಹಂಚಿ ಸವಿಯುವುದು ಈ ಹಬ್ಬದ ಸಂಪ್ರದಾಯದಲ್ಲಿ ಒಂದು.

ಪ್ರತಿಯೊಬ್ಬರ ಜೀವನವು ನೋವು-ನಲಿವಿನಿಂದ ಕೂಡಿರುತ್ತದೆ. ಅವುಗಳನ್ನು ಸಮಾನ ದೃಷ್ಟಿಯಲ್ಲಿ ಸ್ವೀಕರಿಸಬೇಕು. ನೋವು ಎದುರಾದಾಗ ದೃತಿಗೆಡದೆ, ನಲಿವಿನಿಂದಾಗಿ ಅಹಂಕಾರಕ್ಕೆ ಒಳಗಾಗದೆ, ಎರಡು ಸಂದರ್ಭದಲ್ಲೂ ಸಮತೋಲನವನ್ನು ಕಾಯ್ದುಕೊಂಡು ಜೀವನವನ್ನು ನಡೆಸಬೇಕು ಎಂಬುದು ಈ ಬೇವು ಬೆಲ್ಲ ನೀಡುವುದರ ಕಾರಣವೂ ಹೌದು. ಸುಖ ದುಃಖವನ್ನು ಸಮವಾಗಿ ಸ್ವೀಕರಿಸಬೇಕು. ಸುಖವಿದ್ದಾಗ ಹಿಗ್ಗುವುದು ದುಃಖದಲ್ಲಿ ಕುಗ್ಗವುದಲ್ಲ ಎಂಬ ಸಂದೇಶ ನೀಡಲಿದೆ. ಹಾಗೆ ಬೇವು ಬೆಲ್ಲವು ವೈಜ್ಞಾನಿಕ ಕಾರಣದಿಂದಾಗಿಯೂ ಬಹಳ ಮುಖ್ಯವಾಗಿದೆ.
ಯುಗಾದಿಯಲ್ಲಿ ಬೇವು ಬೆಲ್ಲದ ಪ್ರಾಮುಖ್ಯತೆ ಏನು?
ಯುಗಾದಿಯಲ್ಲಿ ಬೆಲ್ಲ ಮತ್ತು ಬೇವಿನ ಎಲೆಗಳು ಜೀವನದಲ್ಲಿ ಕಹಿಯನ್ನು ಸೂಚಿಸುತ್ತವೆ ಎಂದು ನೀವು ತಿಳಿದಿರಬೇಕು. ಮಾನವ ಜೀವನವು ಸಂತೋಷದ ಸವಾರಿಯಾಗಲು ಸಾಧ್ಯವಿಲ್ಲ. ನಿಮ್ಮ ಸುತ್ತಲಿನ ಜೀವನದ ಕಹಿಗಳನ್ನು ನೀವು ಒಪ್ಪಿಕೊಳ್ಳಬೇಕು. ಹಾಗೆ ವೈಜ್ಞಾನಿಕವಾಗಿಯೂ ಇದು ಪ್ರಾಮುಖ್ಯತೆ ಹೊಂದಿದೆ. ಬೇವಿನ ಎಲೆಗಳು, ಹೂಗಳು, ಕಾಂಡಗಳು ಔಷಧೀಯ ಗುಣ ಹೊಂದಿದೆ. ಬೇವಿನ ಎಲೆಗಳನ್ನು ನೀರಿಗೆ ಹಾಕಿ ಸ್ನಾನ ಮಾಡುವುದು ದೇಹವು ಹಲವು ಸಮಸ್ಯೆಗಳಿಂದ ಮುಕ್ತವಾಗುತ್ತೆ. ಬೇವು ರಕ್ತವನ್ನು ಶುದ್ಧೀಕರಿಸುತ್ತದೆ. ಒಂದು ಹಸುವಿಗೆ ಅದರ ಎಲೆಗಳನ್ನು ನೀಡಿದರೆ ಸಾಕಷ್ಟು ಹಾಲು ಸಿಗುತ್ತದೆ. ಇದು ಚರ್ಮದ ಅಲರ್ಜಿಗಳು, ಉದರ ಸಂಬಂಧಿ ಸಮಸ್ಯೆಗಳು ಸೇರಿ ಹಲವು ಸಮಸ್ಯೆಗಳಿಗೆ ಮುಕ್ತಿ ನೀಡಲಿದೆ. ನಕಾರಾತ್ಮಕತೆಯನ್ನು ಶುದ್ಧೀಕರಿಸುತ್ತದೆ ಮತ್ತು ಸಕಾರಾತ್ಮಕತೆಯನ್ನು ಆಕರ್ಷಿಸುತ್ತದೆ. ತಪಸ್ಸು ಮಾಡುವ ಋಷಿಮುನಿಗಳು ತಪಸ್ಸಿನ ಸಮಯದಲ್ಲಿ ನಿಯಮಿತವಾಗಿ ಬೇವಿನ ಎಲೆಗಳನ್ನು ಅಥವಾ ಅದರ ರಸವನ್ನು ಸೇವಿಸುತ್ತಿದ್ದರು ಎಂದು ತಿಳಿದುಬಂದಿದೆ.
ಹಾಗೆ ಬೆಲ್ಲವು ದೇಹಕ್ಕೆ ಉತ್ತಮ ಅಂಶವಾಗಿದೆ. ಕೊಬ್ಬಿನ ಕೋಶಗಳನ್ನು ಸುಡುವ ನಿಮ್ಮ ದೇಹದ ಸಾಮರ್ಥ್ಯವನ್ನು ಸುಧಾರಿಸುತ್ತದೆ, ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಬೆಲ್ಲವು ದೇಹವು ಸಮತೋಲನದಿಂದ ಇರಲು ಸಹಕಾರಿ. ಇದರಲ್ಲಿನ ಗ್ಯಾಸ್ಟ್ರೊ-ಪ್ರೊಟೆಕ್ಟಿವ್ ಅಂಶವು ಉದರ ಸಂಬಂಧಿ ಸಮಸ್ಯೆಗಳನ್ನು ಕಡಿಮೆ ಮಾಡಲಿದೆ. ಹೀಗಾಗಿ ಬೆಲ್ಲದಿಂದ ಮಾಡಿದ ಯಾವುದೇ ಖಾದ್ಯವನ್ನು ನೀವು ಯಾವುದೇ ಭಯವಿಲ್ಲದೆ ಸೇವಿಸಬಹುದು. ಬಾಯಿ ಹುಣ್ಣು, ವಾಂತಿ, ಎದೆಯುರಿ, ಅತಿಯಾದ ಬೆವರುವಿಕೆ, ತುರಿಕೆ ಸೇರಿ ಹಲವು ಸಮಸ್ಯೆಗಳಿಗೆ ಇದು ಪರಿಹಾರ ನೀಡಲಿದೆ.
ಹಾಗೆ ಬೇವು-ಬೆಲ್ಲ ಸೇವಿಸುವಾಗ ಶತಾಯುರ್ವಜ್ರದೇಹಾಯ ಸರ್ವಸಂಪತ್ಕರಾಯ ಚ ಸರ್ವಾರಿಷ್ಟವಿನಾಶಾಯ ನಿಂಬಕಂದಳ ಭಕ್ಷಣಮ್ ಎಂಬ ಶ್ಲೋಕವನ್ನು ಉಚ್ಚರಿಸುತ್ತಾರೆ. ಇದರ ಅರ್ಥ ನೂರು ವರ್ಷಗಳ ಆಯುಷ್ಯ, ವಜ್ರದಂತೆ ದೃಢ ದೇಹ, ಸಂಪತ್ತು ಮತ್ತು ಎಲ್ಲ ಅನಿಷ್ಟಗಳ ನಿವಾರಣೆಗಾಗಿ ಈ ಬೇವನ್ನು ಸೇವಿಸುತ್ತೇನೆ. ಆಯುರ್ವೇದ ಪ್ರಕಾರ ಬೇವಿನ ಎಲೆಗಳು ಅನಿಷ್ಟಗಳನ್ನು ನಾಶಮಾಡುತ್ತವೆ ಎಂಬ ನಂಬಿಕೆ ಇದೆ.



Click it and Unblock the Notifications