Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಧನು ರಾಶಿ ಯುಗಾದಿ ರಾಶಿಫಲ (2023-24): ಈ ವರ್ಷ ಇವುಗಳಲ್ಲಿ ನಿಮಗೆ ಶುಭವೋ ಶುಭ
ಮಾರ್ಚ್ 22ಕ್ಕೆ ಶುಭಕೃತ ಸಂವತ್ಸರ ಕಳೆದು ಶೋಭಾಕೃತ ಸಂವತ್ಸರ ಪ್ರಾರಂಭವಾಗಲಿದೆ. ಈ ಹೊಸ ಸಂವತ್ಸರ ನಿಮ್ಮ ಬಾಳಿನಲ್ಲಿ ಒಳಿತನ್ನು ತರಲಿ, ನಿಮ್ಮ ಆಸೆ ಆಕಾಂಕ್ಷೆಗಳು ಈಡೇರಲಿ.

2023-24 ಯುಗಾದಿ ರಾಶಿಫಲ ಪ್ರಕಾರ ಧನು ರಾಶಿಯವರಿಗೆ ಒಂದು ವರ್ಷ ಹೇಗಿರಲಿದೆ ಎಂದು ನೋಡೋಣ:
ಧನು ರಾಶಿಯವರ ಮೇಲೆ 4 ಪ್ರಮುಖ ಗ್ರಹಗಳ ಪ್ರಭಾವ
ಯುಗಾದಿ ರಾಶಿಫಲದ ಪ್ರಕಾರ ಧನು ರಾಶಿಯವರಲ್ಲಿ ರಾಹು-ಗುರು 5ನೇ ಸ್ಥಾನದಲ್ಲಿದೆ. ರಾಹು ನಿಮ್ಮ ರಾಶಿಯಲ್ಲಿ ನವೆಂಬರ್ 29ರವರೆಗೆ ಇರಲಿದೆ. ಏಪ್ರಿಲ್ 22ಕ್ಕೆ ನಿಮ್ಮ ರಾಶಿಯಲ್ಲಿ ಗುರು 5ನೇ ಸ್ಥಾನಕ್ಕೆ ಬರಲಿದೆ. ಇನ್ನೆರಡು ಪ್ರಮುಖ ಗ್ರಹಗಳಾದ ಕೇತು ನಿಮ್ಮ 12ನೇ ಮನೆಯಲ್ಲಿ ಶನಿ ನಿಮ್ಮ 3ನೇ ಮನೆಯಲ್ಲಿದೆ. ಈ ನಾಲ್ಕು ಗ್ರಹಗಳ ಸ್ಥಾನವೂ ನಿಮಗೆ ಅನುಕೂಲಕರವಾಗಿಯೇ ಇರಲಿದೆ. ಇವುಗಳು ನಿಮಗೆ ಶುಭ ಫಲ ನೀಡಲಿದೆ.
ಆರ್ಥಿಕ ಸ್ಥಿತಿ
ಈ ಗ್ರಹಗಳ ಸ್ಥಾನದಿಂದಾಗಿ ನಿಮ್ಮ ಆರ್ಥಿಕ ಸ್ಥಿತಿ ತುಂಬಾನೇ ಚೆನ್ನಾಗಿರಲಿದೆ. ಯಾವುದಾದರೂ ಹಳೆಯ ಸಾಲವಿದ್ದರೆ ಅದನ್ನು ಮರುಪಾವತಿ ಮಾಡುವಿರಿ. ಅಲ್ಲದೆ ಜನವರಿ 17ಕ್ಕೆ ನಿಮಗೆ ಸಾಡೇಸಾತಿಯಿಂದ ಬಿಡುಗಡೆಯಾಗಿದ್ದೀರಿ. ಹಾಗಾಗಿ ಸಾಡೇಸಾತಿ ಸಮಯದಲ್ಲಿ ಅನುಭವಿಸಿದ ಕಷ್ಟಗಳು, ನೋವುಗಳು ಎಲ್ಲವೂ ದೂರಾಗಲಿದೆ. ಈ ವರ್ಷ ಹಣ ಉಳಿತಾಯ ಮಾಡಲು ಸಾಧ್ಯವಾಗುವುದು.
ವೃತ್ತಿ ಜೀವನ
ಈ ವರ್ಷ ವೃತ್ತಿ ಜೀವನದಲ್ಲಿ ತುಂಬಾನೇ ಪ್ರಗತಿ ಕಾಣುವಿರಿ. ಉದ್ಯೋಗ ಬದಲಾಯಿಸಲು ಬಯಸುವವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ದೊರೆಯಲಿದೆ. ಈ ವರ್ಷ ನಿಮಗೆ ಬಡ್ತಿ ಸಿಗಲಿದೆ. ನಿಮ್ಮ ಸ್ಥಾನಮಾನ, ಜವಾಬ್ದಾರಿ ಎಲ್ಲವೂ ಹೆಚ್ಚಾಗಲಿದೆ. ಈ ವರ್ಷ ಕರ್ಚು ಕಮ್ಮಿಯಿರಲಿದೆ.
ಆರೋಗ್ಯ ಹಾಗೂ ಕುಟುಂಬ ಜೀವನ
ಪಂಚಮ ಸ್ಥಾನದಲ್ಲಿ ಗುರು ಇರುವುದರಿಂದ ನಿಮಗೆ ಒಳ್ಳೆಯದಾಗಲಿದೆ. ಆಸ್ತಿಗೆ ಸಂಬಂಧಿಸಿದ ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ. ಶನಿ ಸಾಡೇಸಾತಿ ಇರುವಾಗ ಕುಟುಂಬದಲ್ಲಿ ಉಂಟಾದ ಸಮಸ್ಯೆಗಳಿಂದ ಹೊರಬರುವಿರಿ. ಈ ವರ್ಷ ಗುರುದೆಸೆ ಇರುವುದರಿಂದ ನಿಮಗೆ ತುಂಬಾನೇ ಒಳ್ಳೆಯದಾಗಲಿದೆ. ವಿದ್ಯಾರ್ಥಿಗಳಿಗೆ ಈ ಸಮಯ ಅನುಕೂಲರವಾಗಿದೆ. ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಅಥವಾ ಸಂಶೋಧನೆ ಮಾಡಲು ಬಯಸಿದರೆ ಈ ಅವಧಿಯಲ್ಲಿ ನಿಮ್ಮ ಕನಸು ನನಸಾಗಲಿದೆ.
ಕುಟುಂಬದಲ್ಲಿ ಸಂತೋಷ, ನೆಮ್ಮದಿ ಇರಲಿದೆ. ಒಟ್ಟಿನಲ್ಲಿ ಈ ವರ್ಷ ಯುಗಾದಿ ನಿಮಗೆ ಬೆಲ್ಲದ ಸಿಹಿಯನ್ನೇ ಹೆಚ್ಚಾಗಿ ನೀಡಿರುವುದರಿಂದ ಈ ವರ್ಷ ಖುಷಿಯಾಗಿರುವಿರಿ.
ಪರಿಹಾರ:
ನವೆಂಬರ್ವರೆಗೆ ದೇವಾಲಯಕ್ಕೆ ಉದ್ದಿನ ಬೇಳೆ ದಾನ ಮಾಡುವುದು ಒಳ್ಳೆಯದು.



Click it and Unblock the Notifications
