Latest Updates
-
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು
ಧನು ರಾಶಿ ಯುಗಾದಿ ರಾಶಿಫಲ (2023-24): ಈ ವರ್ಷ ಇವುಗಳಲ್ಲಿ ನಿಮಗೆ ಶುಭವೋ ಶುಭ
ಮಾರ್ಚ್ 22ಕ್ಕೆ ಶುಭಕೃತ ಸಂವತ್ಸರ ಕಳೆದು ಶೋಭಾಕೃತ ಸಂವತ್ಸರ ಪ್ರಾರಂಭವಾಗಲಿದೆ. ಈ ಹೊಸ ಸಂವತ್ಸರ ನಿಮ್ಮ ಬಾಳಿನಲ್ಲಿ ಒಳಿತನ್ನು ತರಲಿ, ನಿಮ್ಮ ಆಸೆ ಆಕಾಂಕ್ಷೆಗಳು ಈಡೇರಲಿ.

2023-24 ಯುಗಾದಿ ರಾಶಿಫಲ ಪ್ರಕಾರ ಧನು ರಾಶಿಯವರಿಗೆ ಒಂದು ವರ್ಷ ಹೇಗಿರಲಿದೆ ಎಂದು ನೋಡೋಣ:
ಧನು ರಾಶಿಯವರ ಮೇಲೆ 4 ಪ್ರಮುಖ ಗ್ರಹಗಳ ಪ್ರಭಾವ
ಯುಗಾದಿ ರಾಶಿಫಲದ ಪ್ರಕಾರ ಧನು ರಾಶಿಯವರಲ್ಲಿ ರಾಹು-ಗುರು 5ನೇ ಸ್ಥಾನದಲ್ಲಿದೆ. ರಾಹು ನಿಮ್ಮ ರಾಶಿಯಲ್ಲಿ ನವೆಂಬರ್ 29ರವರೆಗೆ ಇರಲಿದೆ. ಏಪ್ರಿಲ್ 22ಕ್ಕೆ ನಿಮ್ಮ ರಾಶಿಯಲ್ಲಿ ಗುರು 5ನೇ ಸ್ಥಾನಕ್ಕೆ ಬರಲಿದೆ. ಇನ್ನೆರಡು ಪ್ರಮುಖ ಗ್ರಹಗಳಾದ ಕೇತು ನಿಮ್ಮ 12ನೇ ಮನೆಯಲ್ಲಿ ಶನಿ ನಿಮ್ಮ 3ನೇ ಮನೆಯಲ್ಲಿದೆ. ಈ ನಾಲ್ಕು ಗ್ರಹಗಳ ಸ್ಥಾನವೂ ನಿಮಗೆ ಅನುಕೂಲಕರವಾಗಿಯೇ ಇರಲಿದೆ. ಇವುಗಳು ನಿಮಗೆ ಶುಭ ಫಲ ನೀಡಲಿದೆ.
ಆರ್ಥಿಕ ಸ್ಥಿತಿ
ಈ ಗ್ರಹಗಳ ಸ್ಥಾನದಿಂದಾಗಿ ನಿಮ್ಮ ಆರ್ಥಿಕ ಸ್ಥಿತಿ ತುಂಬಾನೇ ಚೆನ್ನಾಗಿರಲಿದೆ. ಯಾವುದಾದರೂ ಹಳೆಯ ಸಾಲವಿದ್ದರೆ ಅದನ್ನು ಮರುಪಾವತಿ ಮಾಡುವಿರಿ. ಅಲ್ಲದೆ ಜನವರಿ 17ಕ್ಕೆ ನಿಮಗೆ ಸಾಡೇಸಾತಿಯಿಂದ ಬಿಡುಗಡೆಯಾಗಿದ್ದೀರಿ. ಹಾಗಾಗಿ ಸಾಡೇಸಾತಿ ಸಮಯದಲ್ಲಿ ಅನುಭವಿಸಿದ ಕಷ್ಟಗಳು, ನೋವುಗಳು ಎಲ್ಲವೂ ದೂರಾಗಲಿದೆ. ಈ ವರ್ಷ ಹಣ ಉಳಿತಾಯ ಮಾಡಲು ಸಾಧ್ಯವಾಗುವುದು.
ವೃತ್ತಿ ಜೀವನ
ಈ ವರ್ಷ ವೃತ್ತಿ ಜೀವನದಲ್ಲಿ ತುಂಬಾನೇ ಪ್ರಗತಿ ಕಾಣುವಿರಿ. ಉದ್ಯೋಗ ಬದಲಾಯಿಸಲು ಬಯಸುವವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ದೊರೆಯಲಿದೆ. ಈ ವರ್ಷ ನಿಮಗೆ ಬಡ್ತಿ ಸಿಗಲಿದೆ. ನಿಮ್ಮ ಸ್ಥಾನಮಾನ, ಜವಾಬ್ದಾರಿ ಎಲ್ಲವೂ ಹೆಚ್ಚಾಗಲಿದೆ. ಈ ವರ್ಷ ಕರ್ಚು ಕಮ್ಮಿಯಿರಲಿದೆ.
ಆರೋಗ್ಯ ಹಾಗೂ ಕುಟುಂಬ ಜೀವನ
ಪಂಚಮ ಸ್ಥಾನದಲ್ಲಿ ಗುರು ಇರುವುದರಿಂದ ನಿಮಗೆ ಒಳ್ಳೆಯದಾಗಲಿದೆ. ಆಸ್ತಿಗೆ ಸಂಬಂಧಿಸಿದ ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ. ಶನಿ ಸಾಡೇಸಾತಿ ಇರುವಾಗ ಕುಟುಂಬದಲ್ಲಿ ಉಂಟಾದ ಸಮಸ್ಯೆಗಳಿಂದ ಹೊರಬರುವಿರಿ. ಈ ವರ್ಷ ಗುರುದೆಸೆ ಇರುವುದರಿಂದ ನಿಮಗೆ ತುಂಬಾನೇ ಒಳ್ಳೆಯದಾಗಲಿದೆ. ವಿದ್ಯಾರ್ಥಿಗಳಿಗೆ ಈ ಸಮಯ ಅನುಕೂಲರವಾಗಿದೆ. ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಅಥವಾ ಸಂಶೋಧನೆ ಮಾಡಲು ಬಯಸಿದರೆ ಈ ಅವಧಿಯಲ್ಲಿ ನಿಮ್ಮ ಕನಸು ನನಸಾಗಲಿದೆ.
ಕುಟುಂಬದಲ್ಲಿ ಸಂತೋಷ, ನೆಮ್ಮದಿ ಇರಲಿದೆ. ಒಟ್ಟಿನಲ್ಲಿ ಈ ವರ್ಷ ಯುಗಾದಿ ನಿಮಗೆ ಬೆಲ್ಲದ ಸಿಹಿಯನ್ನೇ ಹೆಚ್ಚಾಗಿ ನೀಡಿರುವುದರಿಂದ ಈ ವರ್ಷ ಖುಷಿಯಾಗಿರುವಿರಿ.
ಪರಿಹಾರ:
ನವೆಂಬರ್ವರೆಗೆ ದೇವಾಲಯಕ್ಕೆ ಉದ್ದಿನ ಬೇಳೆ ದಾನ ಮಾಡುವುದು ಒಳ್ಳೆಯದು.



Click it and Unblock the Notifications
