Latest Updates
-
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ! -
ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯನ್ನು ತೋರಿಸುವ ಹೊಸ ಟ್ರೆಂಡ್: 'ಸಾಫ್ಟ್ ಲಾಂಚ್' ಮೂಲಕ ನಿಮ್ಮ ಸಂಬಂಧವನ್ನು ಭದ್ರಪಡಿಸಿಕೊಳ್ಳಿ! -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಲ್ಲೂ ನಿಮ್ಮ ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಉಳಿಸಲು ಈ ಟಿಪ್ಸ್ ಸಾಕು! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಆಹಾರ ಕ್ರಮಗಳನ್ನು ಮರೆಯದೆ ಪಾಲಿಸಿ! -
ಮುಟ್ಟಿನ ನೈರ್ಮಲ್ಯ ದಿನ: ಕೇವಲ 200 ರೂಪಾಯಿಗೂ ಕಡಿಮೆ ಬೆಲೆಯಲ್ಲಿ ಸಿಗುತ್ತಿವೆ ಈ ಅಗತ್ಯ ಉತ್ಪನ್ನಗಳು, ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ!
ಧನು ರಾಶಿ ಯುಗಾದಿ ರಾಶಿಫಲ (2023-24): ಈ ವರ್ಷ ಇವುಗಳಲ್ಲಿ ನಿಮಗೆ ಶುಭವೋ ಶುಭ
ಮಾರ್ಚ್ 22ಕ್ಕೆ ಶುಭಕೃತ ಸಂವತ್ಸರ ಕಳೆದು ಶೋಭಾಕೃತ ಸಂವತ್ಸರ ಪ್ರಾರಂಭವಾಗಲಿದೆ. ಈ ಹೊಸ ಸಂವತ್ಸರ ನಿಮ್ಮ ಬಾಳಿನಲ್ಲಿ ಒಳಿತನ್ನು ತರಲಿ, ನಿಮ್ಮ ಆಸೆ ಆಕಾಂಕ್ಷೆಗಳು ಈಡೇರಲಿ.

2023-24 ಯುಗಾದಿ ರಾಶಿಫಲ ಪ್ರಕಾರ ಧನು ರಾಶಿಯವರಿಗೆ ಒಂದು ವರ್ಷ ಹೇಗಿರಲಿದೆ ಎಂದು ನೋಡೋಣ:
ಧನು ರಾಶಿಯವರ ಮೇಲೆ 4 ಪ್ರಮುಖ ಗ್ರಹಗಳ ಪ್ರಭಾವ
ಯುಗಾದಿ ರಾಶಿಫಲದ ಪ್ರಕಾರ ಧನು ರಾಶಿಯವರಲ್ಲಿ ರಾಹು-ಗುರು 5ನೇ ಸ್ಥಾನದಲ್ಲಿದೆ. ರಾಹು ನಿಮ್ಮ ರಾಶಿಯಲ್ಲಿ ನವೆಂಬರ್ 29ರವರೆಗೆ ಇರಲಿದೆ. ಏಪ್ರಿಲ್ 22ಕ್ಕೆ ನಿಮ್ಮ ರಾಶಿಯಲ್ಲಿ ಗುರು 5ನೇ ಸ್ಥಾನಕ್ಕೆ ಬರಲಿದೆ. ಇನ್ನೆರಡು ಪ್ರಮುಖ ಗ್ರಹಗಳಾದ ಕೇತು ನಿಮ್ಮ 12ನೇ ಮನೆಯಲ್ಲಿ ಶನಿ ನಿಮ್ಮ 3ನೇ ಮನೆಯಲ್ಲಿದೆ. ಈ ನಾಲ್ಕು ಗ್ರಹಗಳ ಸ್ಥಾನವೂ ನಿಮಗೆ ಅನುಕೂಲಕರವಾಗಿಯೇ ಇರಲಿದೆ. ಇವುಗಳು ನಿಮಗೆ ಶುಭ ಫಲ ನೀಡಲಿದೆ.
ಆರ್ಥಿಕ ಸ್ಥಿತಿ
ಈ ಗ್ರಹಗಳ ಸ್ಥಾನದಿಂದಾಗಿ ನಿಮ್ಮ ಆರ್ಥಿಕ ಸ್ಥಿತಿ ತುಂಬಾನೇ ಚೆನ್ನಾಗಿರಲಿದೆ. ಯಾವುದಾದರೂ ಹಳೆಯ ಸಾಲವಿದ್ದರೆ ಅದನ್ನು ಮರುಪಾವತಿ ಮಾಡುವಿರಿ. ಅಲ್ಲದೆ ಜನವರಿ 17ಕ್ಕೆ ನಿಮಗೆ ಸಾಡೇಸಾತಿಯಿಂದ ಬಿಡುಗಡೆಯಾಗಿದ್ದೀರಿ. ಹಾಗಾಗಿ ಸಾಡೇಸಾತಿ ಸಮಯದಲ್ಲಿ ಅನುಭವಿಸಿದ ಕಷ್ಟಗಳು, ನೋವುಗಳು ಎಲ್ಲವೂ ದೂರಾಗಲಿದೆ. ಈ ವರ್ಷ ಹಣ ಉಳಿತಾಯ ಮಾಡಲು ಸಾಧ್ಯವಾಗುವುದು.
ವೃತ್ತಿ ಜೀವನ
ಈ ವರ್ಷ ವೃತ್ತಿ ಜೀವನದಲ್ಲಿ ತುಂಬಾನೇ ಪ್ರಗತಿ ಕಾಣುವಿರಿ. ಉದ್ಯೋಗ ಬದಲಾಯಿಸಲು ಬಯಸುವವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ದೊರೆಯಲಿದೆ. ಈ ವರ್ಷ ನಿಮಗೆ ಬಡ್ತಿ ಸಿಗಲಿದೆ. ನಿಮ್ಮ ಸ್ಥಾನಮಾನ, ಜವಾಬ್ದಾರಿ ಎಲ್ಲವೂ ಹೆಚ್ಚಾಗಲಿದೆ. ಈ ವರ್ಷ ಕರ್ಚು ಕಮ್ಮಿಯಿರಲಿದೆ.
ಆರೋಗ್ಯ ಹಾಗೂ ಕುಟುಂಬ ಜೀವನ
ಪಂಚಮ ಸ್ಥಾನದಲ್ಲಿ ಗುರು ಇರುವುದರಿಂದ ನಿಮಗೆ ಒಳ್ಳೆಯದಾಗಲಿದೆ. ಆಸ್ತಿಗೆ ಸಂಬಂಧಿಸಿದ ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ. ಶನಿ ಸಾಡೇಸಾತಿ ಇರುವಾಗ ಕುಟುಂಬದಲ್ಲಿ ಉಂಟಾದ ಸಮಸ್ಯೆಗಳಿಂದ ಹೊರಬರುವಿರಿ. ಈ ವರ್ಷ ಗುರುದೆಸೆ ಇರುವುದರಿಂದ ನಿಮಗೆ ತುಂಬಾನೇ ಒಳ್ಳೆಯದಾಗಲಿದೆ. ವಿದ್ಯಾರ್ಥಿಗಳಿಗೆ ಈ ಸಮಯ ಅನುಕೂಲರವಾಗಿದೆ. ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಅಥವಾ ಸಂಶೋಧನೆ ಮಾಡಲು ಬಯಸಿದರೆ ಈ ಅವಧಿಯಲ್ಲಿ ನಿಮ್ಮ ಕನಸು ನನಸಾಗಲಿದೆ.
ಕುಟುಂಬದಲ್ಲಿ ಸಂತೋಷ, ನೆಮ್ಮದಿ ಇರಲಿದೆ. ಒಟ್ಟಿನಲ್ಲಿ ಈ ವರ್ಷ ಯುಗಾದಿ ನಿಮಗೆ ಬೆಲ್ಲದ ಸಿಹಿಯನ್ನೇ ಹೆಚ್ಚಾಗಿ ನೀಡಿರುವುದರಿಂದ ಈ ವರ್ಷ ಖುಷಿಯಾಗಿರುವಿರಿ.
ಪರಿಹಾರ:
ನವೆಂಬರ್ವರೆಗೆ ದೇವಾಲಯಕ್ಕೆ ಉದ್ದಿನ ಬೇಳೆ ದಾನ ಮಾಡುವುದು ಒಳ್ಳೆಯದು.



Click it and Unblock the Notifications
