Latest Updates
-
ದೇಹದಲ್ಲಿ ರಕ್ತ ಕಡಿಮೆ ಆಗಿದ್ರೆ ಈ ಎಳ್ಳುಂಡೆ ಮಾಡಿ: ತಿಂಗಳ ಕಾಲ ಇಟ್ಟು ಸವಿಯಬಹುದು! -
ಕರ್ನಾಟಕ ಬಜೆಟ್ 2026: ಆರೋಗ್ಯ ವಲಯಕ್ಕೆ ಬಂಪರ್, ಹೊಸ ಯೋಜನೆಗಳೇನು ನೋಡಿ! -
ನಾಳೆ ಸೂರ್ಯ-ಬುಧ ಸಂಯೋಗ: ಬುಧಾದಿತ್ಯ ಯೋಗದಿಂದ ಈ ರಾಶಿಯವರ ಬದುಕಲ್ಲಿ ಬೆಳಕು! -
ತೂಕ ಇಳಿಸಲು ಪೇಪರ್ ಅಷ್ಟು ತೆಳುವಾದ ರಾಗಿ ದೋಸೆ ಮಾಡಿ! -
ಜೀವನದಲ್ಲಿ ಮಹತ್ವದ ಬದಲಾವಣೆ, ವೈವಾಹಿಕ ಯೋಗ! ಕೊಂಚ ಒತ್ತಡ, ತಾಳ್ಮೆ ಇರಲಿ -
March 06 Horoscope: ಸಾಲ ನೀಡುವಾಗ ಹತ್ತು ಬಾರಿ ಆಲೋಚಿಸಿ! -
ಮೈದಾ, ಮೊಟ್ಟೆ ಎರಡೂ ಬೇಡ! ಈ ಹೊಸ ರುಚಿಯ ಕೇಕ್ ಮಾಡಿ ನೋಡಿ.. ಶುಗರ್ ಇರುವವರು ತಿನ್ನಬಹುದು -
ಉದ್ದು ಬೇಡ 1 ಕಪ್ ರವೆ ಇದ್ರೆ ಥಟ್ ಅಂತ ವಡೆ ಮಾಡಿಕೊಳ್ಳಿ: ಬ್ರೇಕ್ಫಾಸ್ಟ್ಗೆ ಇದು ಬೆಸ್ಟ್ ರೆಸಿಪಿ! -
ಕೊನೆಗೂ ಕಣ್ಣು ಬಿಟ್ಟ ಶುಕ್ರ-ಶನಿ: ಈ ರಾಶಿಯವರ ಜೀವನದಲ್ಲಿ ಭೌತಿಕ ಸುಖ! ಸಂಪತ್ತು ತುಂಬಿ ತುಳುಕಲಿದೆ -
ಬದನೆಕಾಯಿ ಕಹಿ ತೆಗೆಯೋದು ಹೇಗೆ? ಈ ಸಿಂಪಲ್ ಟ್ರಿಕ್ ಬಳಸಿ.. ಬಲು ರುಚಿ! ಕಹಿ ಅನ್ನೋದೇ ಇರಲ್ಲ
ಧನು ರಾಶಿ ಯುಗಾದಿ ರಾಶಿಫಲ (2023-24): ಈ ವರ್ಷ ಇವುಗಳಲ್ಲಿ ನಿಮಗೆ ಶುಭವೋ ಶುಭ
ಮಾರ್ಚ್ 22ಕ್ಕೆ ಶುಭಕೃತ ಸಂವತ್ಸರ ಕಳೆದು ಶೋಭಾಕೃತ ಸಂವತ್ಸರ ಪ್ರಾರಂಭವಾಗಲಿದೆ. ಈ ಹೊಸ ಸಂವತ್ಸರ ನಿಮ್ಮ ಬಾಳಿನಲ್ಲಿ ಒಳಿತನ್ನು ತರಲಿ, ನಿಮ್ಮ ಆಸೆ ಆಕಾಂಕ್ಷೆಗಳು ಈಡೇರಲಿ.

2023-24 ಯುಗಾದಿ ರಾಶಿಫಲ ಪ್ರಕಾರ ಧನು ರಾಶಿಯವರಿಗೆ ಒಂದು ವರ್ಷ ಹೇಗಿರಲಿದೆ ಎಂದು ನೋಡೋಣ:
ಧನು ರಾಶಿಯವರ ಮೇಲೆ 4 ಪ್ರಮುಖ ಗ್ರಹಗಳ ಪ್ರಭಾವ
ಯುಗಾದಿ ರಾಶಿಫಲದ ಪ್ರಕಾರ ಧನು ರಾಶಿಯವರಲ್ಲಿ ರಾಹು-ಗುರು 5ನೇ ಸ್ಥಾನದಲ್ಲಿದೆ. ರಾಹು ನಿಮ್ಮ ರಾಶಿಯಲ್ಲಿ ನವೆಂಬರ್ 29ರವರೆಗೆ ಇರಲಿದೆ. ಏಪ್ರಿಲ್ 22ಕ್ಕೆ ನಿಮ್ಮ ರಾಶಿಯಲ್ಲಿ ಗುರು 5ನೇ ಸ್ಥಾನಕ್ಕೆ ಬರಲಿದೆ. ಇನ್ನೆರಡು ಪ್ರಮುಖ ಗ್ರಹಗಳಾದ ಕೇತು ನಿಮ್ಮ 12ನೇ ಮನೆಯಲ್ಲಿ ಶನಿ ನಿಮ್ಮ 3ನೇ ಮನೆಯಲ್ಲಿದೆ. ಈ ನಾಲ್ಕು ಗ್ರಹಗಳ ಸ್ಥಾನವೂ ನಿಮಗೆ ಅನುಕೂಲಕರವಾಗಿಯೇ ಇರಲಿದೆ. ಇವುಗಳು ನಿಮಗೆ ಶುಭ ಫಲ ನೀಡಲಿದೆ.
ಆರ್ಥಿಕ ಸ್ಥಿತಿ
ಈ ಗ್ರಹಗಳ ಸ್ಥಾನದಿಂದಾಗಿ ನಿಮ್ಮ ಆರ್ಥಿಕ ಸ್ಥಿತಿ ತುಂಬಾನೇ ಚೆನ್ನಾಗಿರಲಿದೆ. ಯಾವುದಾದರೂ ಹಳೆಯ ಸಾಲವಿದ್ದರೆ ಅದನ್ನು ಮರುಪಾವತಿ ಮಾಡುವಿರಿ. ಅಲ್ಲದೆ ಜನವರಿ 17ಕ್ಕೆ ನಿಮಗೆ ಸಾಡೇಸಾತಿಯಿಂದ ಬಿಡುಗಡೆಯಾಗಿದ್ದೀರಿ. ಹಾಗಾಗಿ ಸಾಡೇಸಾತಿ ಸಮಯದಲ್ಲಿ ಅನುಭವಿಸಿದ ಕಷ್ಟಗಳು, ನೋವುಗಳು ಎಲ್ಲವೂ ದೂರಾಗಲಿದೆ. ಈ ವರ್ಷ ಹಣ ಉಳಿತಾಯ ಮಾಡಲು ಸಾಧ್ಯವಾಗುವುದು.
ವೃತ್ತಿ ಜೀವನ
ಈ ವರ್ಷ ವೃತ್ತಿ ಜೀವನದಲ್ಲಿ ತುಂಬಾನೇ ಪ್ರಗತಿ ಕಾಣುವಿರಿ. ಉದ್ಯೋಗ ಬದಲಾಯಿಸಲು ಬಯಸುವವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ದೊರೆಯಲಿದೆ. ಈ ವರ್ಷ ನಿಮಗೆ ಬಡ್ತಿ ಸಿಗಲಿದೆ. ನಿಮ್ಮ ಸ್ಥಾನಮಾನ, ಜವಾಬ್ದಾರಿ ಎಲ್ಲವೂ ಹೆಚ್ಚಾಗಲಿದೆ. ಈ ವರ್ಷ ಕರ್ಚು ಕಮ್ಮಿಯಿರಲಿದೆ.
ಆರೋಗ್ಯ ಹಾಗೂ ಕುಟುಂಬ ಜೀವನ
ಪಂಚಮ ಸ್ಥಾನದಲ್ಲಿ ಗುರು ಇರುವುದರಿಂದ ನಿಮಗೆ ಒಳ್ಳೆಯದಾಗಲಿದೆ. ಆಸ್ತಿಗೆ ಸಂಬಂಧಿಸಿದ ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ. ಶನಿ ಸಾಡೇಸಾತಿ ಇರುವಾಗ ಕುಟುಂಬದಲ್ಲಿ ಉಂಟಾದ ಸಮಸ್ಯೆಗಳಿಂದ ಹೊರಬರುವಿರಿ. ಈ ವರ್ಷ ಗುರುದೆಸೆ ಇರುವುದರಿಂದ ನಿಮಗೆ ತುಂಬಾನೇ ಒಳ್ಳೆಯದಾಗಲಿದೆ. ವಿದ್ಯಾರ್ಥಿಗಳಿಗೆ ಈ ಸಮಯ ಅನುಕೂಲರವಾಗಿದೆ. ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಅಥವಾ ಸಂಶೋಧನೆ ಮಾಡಲು ಬಯಸಿದರೆ ಈ ಅವಧಿಯಲ್ಲಿ ನಿಮ್ಮ ಕನಸು ನನಸಾಗಲಿದೆ.
ಕುಟುಂಬದಲ್ಲಿ ಸಂತೋಷ, ನೆಮ್ಮದಿ ಇರಲಿದೆ. ಒಟ್ಟಿನಲ್ಲಿ ಈ ವರ್ಷ ಯುಗಾದಿ ನಿಮಗೆ ಬೆಲ್ಲದ ಸಿಹಿಯನ್ನೇ ಹೆಚ್ಚಾಗಿ ನೀಡಿರುವುದರಿಂದ ಈ ವರ್ಷ ಖುಷಿಯಾಗಿರುವಿರಿ.
ಪರಿಹಾರ:
ನವೆಂಬರ್ವರೆಗೆ ದೇವಾಲಯಕ್ಕೆ ಉದ್ದಿನ ಬೇಳೆ ದಾನ ಮಾಡುವುದು ಒಳ್ಳೆಯದು.



Click it and Unblock the Notifications












