Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಧನು ರಾಶಿ ಯುಗಾದಿ ರಾಶಿಫಲ (2023-24): ಈ ವರ್ಷ ಇವುಗಳಲ್ಲಿ ನಿಮಗೆ ಶುಭವೋ ಶುಭ
ಮಾರ್ಚ್ 22ಕ್ಕೆ ಶುಭಕೃತ ಸಂವತ್ಸರ ಕಳೆದು ಶೋಭಾಕೃತ ಸಂವತ್ಸರ ಪ್ರಾರಂಭವಾಗಲಿದೆ. ಈ ಹೊಸ ಸಂವತ್ಸರ ನಿಮ್ಮ ಬಾಳಿನಲ್ಲಿ ಒಳಿತನ್ನು ತರಲಿ, ನಿಮ್ಮ ಆಸೆ ಆಕಾಂಕ್ಷೆಗಳು ಈಡೇರಲಿ.

2023-24 ಯುಗಾದಿ ರಾಶಿಫಲ ಪ್ರಕಾರ ಧನು ರಾಶಿಯವರಿಗೆ ಒಂದು ವರ್ಷ ಹೇಗಿರಲಿದೆ ಎಂದು ನೋಡೋಣ:
ಧನು ರಾಶಿಯವರ ಮೇಲೆ 4 ಪ್ರಮುಖ ಗ್ರಹಗಳ ಪ್ರಭಾವ
ಯುಗಾದಿ ರಾಶಿಫಲದ ಪ್ರಕಾರ ಧನು ರಾಶಿಯವರಲ್ಲಿ ರಾಹು-ಗುರು 5ನೇ ಸ್ಥಾನದಲ್ಲಿದೆ. ರಾಹು ನಿಮ್ಮ ರಾಶಿಯಲ್ಲಿ ನವೆಂಬರ್ 29ರವರೆಗೆ ಇರಲಿದೆ. ಏಪ್ರಿಲ್ 22ಕ್ಕೆ ನಿಮ್ಮ ರಾಶಿಯಲ್ಲಿ ಗುರು 5ನೇ ಸ್ಥಾನಕ್ಕೆ ಬರಲಿದೆ. ಇನ್ನೆರಡು ಪ್ರಮುಖ ಗ್ರಹಗಳಾದ ಕೇತು ನಿಮ್ಮ 12ನೇ ಮನೆಯಲ್ಲಿ ಶನಿ ನಿಮ್ಮ 3ನೇ ಮನೆಯಲ್ಲಿದೆ. ಈ ನಾಲ್ಕು ಗ್ರಹಗಳ ಸ್ಥಾನವೂ ನಿಮಗೆ ಅನುಕೂಲಕರವಾಗಿಯೇ ಇರಲಿದೆ. ಇವುಗಳು ನಿಮಗೆ ಶುಭ ಫಲ ನೀಡಲಿದೆ.
ಆರ್ಥಿಕ ಸ್ಥಿತಿ
ಈ ಗ್ರಹಗಳ ಸ್ಥಾನದಿಂದಾಗಿ ನಿಮ್ಮ ಆರ್ಥಿಕ ಸ್ಥಿತಿ ತುಂಬಾನೇ ಚೆನ್ನಾಗಿರಲಿದೆ. ಯಾವುದಾದರೂ ಹಳೆಯ ಸಾಲವಿದ್ದರೆ ಅದನ್ನು ಮರುಪಾವತಿ ಮಾಡುವಿರಿ. ಅಲ್ಲದೆ ಜನವರಿ 17ಕ್ಕೆ ನಿಮಗೆ ಸಾಡೇಸಾತಿಯಿಂದ ಬಿಡುಗಡೆಯಾಗಿದ್ದೀರಿ. ಹಾಗಾಗಿ ಸಾಡೇಸಾತಿ ಸಮಯದಲ್ಲಿ ಅನುಭವಿಸಿದ ಕಷ್ಟಗಳು, ನೋವುಗಳು ಎಲ್ಲವೂ ದೂರಾಗಲಿದೆ. ಈ ವರ್ಷ ಹಣ ಉಳಿತಾಯ ಮಾಡಲು ಸಾಧ್ಯವಾಗುವುದು.
ವೃತ್ತಿ ಜೀವನ
ಈ ವರ್ಷ ವೃತ್ತಿ ಜೀವನದಲ್ಲಿ ತುಂಬಾನೇ ಪ್ರಗತಿ ಕಾಣುವಿರಿ. ಉದ್ಯೋಗ ಬದಲಾಯಿಸಲು ಬಯಸುವವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ದೊರೆಯಲಿದೆ. ಈ ವರ್ಷ ನಿಮಗೆ ಬಡ್ತಿ ಸಿಗಲಿದೆ. ನಿಮ್ಮ ಸ್ಥಾನಮಾನ, ಜವಾಬ್ದಾರಿ ಎಲ್ಲವೂ ಹೆಚ್ಚಾಗಲಿದೆ. ಈ ವರ್ಷ ಕರ್ಚು ಕಮ್ಮಿಯಿರಲಿದೆ.
ಆರೋಗ್ಯ ಹಾಗೂ ಕುಟುಂಬ ಜೀವನ
ಪಂಚಮ ಸ್ಥಾನದಲ್ಲಿ ಗುರು ಇರುವುದರಿಂದ ನಿಮಗೆ ಒಳ್ಳೆಯದಾಗಲಿದೆ. ಆಸ್ತಿಗೆ ಸಂಬಂಧಿಸಿದ ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ. ಶನಿ ಸಾಡೇಸಾತಿ ಇರುವಾಗ ಕುಟುಂಬದಲ್ಲಿ ಉಂಟಾದ ಸಮಸ್ಯೆಗಳಿಂದ ಹೊರಬರುವಿರಿ. ಈ ವರ್ಷ ಗುರುದೆಸೆ ಇರುವುದರಿಂದ ನಿಮಗೆ ತುಂಬಾನೇ ಒಳ್ಳೆಯದಾಗಲಿದೆ. ವಿದ್ಯಾರ್ಥಿಗಳಿಗೆ ಈ ಸಮಯ ಅನುಕೂಲರವಾಗಿದೆ. ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಅಥವಾ ಸಂಶೋಧನೆ ಮಾಡಲು ಬಯಸಿದರೆ ಈ ಅವಧಿಯಲ್ಲಿ ನಿಮ್ಮ ಕನಸು ನನಸಾಗಲಿದೆ.
ಕುಟುಂಬದಲ್ಲಿ ಸಂತೋಷ, ನೆಮ್ಮದಿ ಇರಲಿದೆ. ಒಟ್ಟಿನಲ್ಲಿ ಈ ವರ್ಷ ಯುಗಾದಿ ನಿಮಗೆ ಬೆಲ್ಲದ ಸಿಹಿಯನ್ನೇ ಹೆಚ್ಚಾಗಿ ನೀಡಿರುವುದರಿಂದ ಈ ವರ್ಷ ಖುಷಿಯಾಗಿರುವಿರಿ.
ಪರಿಹಾರ:
ನವೆಂಬರ್ವರೆಗೆ ದೇವಾಲಯಕ್ಕೆ ಉದ್ದಿನ ಬೇಳೆ ದಾನ ಮಾಡುವುದು ಒಳ್ಳೆಯದು.



Click it and Unblock the Notifications
