Latest Updates
-
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ! -
ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯನ್ನು ತೋರಿಸುವ ಹೊಸ ಟ್ರೆಂಡ್: 'ಸಾಫ್ಟ್ ಲಾಂಚ್' ಮೂಲಕ ನಿಮ್ಮ ಸಂಬಂಧವನ್ನು ಭದ್ರಪಡಿಸಿಕೊಳ್ಳಿ! -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಲ್ಲೂ ನಿಮ್ಮ ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಉಳಿಸಲು ಈ ಟಿಪ್ಸ್ ಸಾಕು! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಆಹಾರ ಕ್ರಮಗಳನ್ನು ಮರೆಯದೆ ಪಾಲಿಸಿ! -
ಮುಟ್ಟಿನ ನೈರ್ಮಲ್ಯ ದಿನ: ಕೇವಲ 200 ರೂಪಾಯಿಗೂ ಕಡಿಮೆ ಬೆಲೆಯಲ್ಲಿ ಸಿಗುತ್ತಿವೆ ಈ ಅಗತ್ಯ ಉತ್ಪನ್ನಗಳು, ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ!
ಕುಂಭ ರಾಶಿ ಯುಗಾದಿ ರಾಶಿಫಲ 2023: ಈ ವರ್ಷ ಶುಭವೋ, ಮಿಶ್ರಫಲವೋ?
ಎಲ್ಲರಿಗೂ ಶೋಭಾಕೃತ ಸಂವತ್ಸರ ಶುಭಾಶಯಗಳು. ಈ ಸಂವತ್ಸರ ನಿಮ್ಮೆಲ್ಲರ ಬದುಕಿನಲ್ಲಿ ಹೊಸತನ ತುಂಬಲಿ, ನಿಮ್ಮ ಬಾಳು ಬಂಗಾರವಾಗಲಿ, ಈ ಯುಗಾದಿ ನಿಮಗೆ ಹರ್ಷದ ಯುಗಾದಿ ಆಗಿರಲಿ ಎಂದು ಹೇಳುತ್ತಾ ನಾವಿಲ್ಲಿ ಕುಂಭ ರಾಶಿಯವರಿ 2023-34ರ ಯುಗಾದಿ ರಾಶಿಫಲ ನೀಡಿದ್ದೇವೆ ನೋಡಿ:
ಕುಂಭ ರಾಶಿಯವರಲ್ಲಿ 2023-24 ಯುಗಾದಿಯವರೆಗೆ ಗ್ರಹಗತಿಗಳ ಪ್ರಭಾವ:
ಕುಂಭ ರಾಶಿಯವರ ಯುಗಾದಿ ಭವಿಷ್ಯ ನೋಡುವುದಾದರೆ ರಾಹು, ಗುರು ನಿಮ್ಮ 3ನೇ ಮನೆಯಲ್ಲಿ ಇರಲಿದೆ. ಕೇತು ನಿಮ್ಮ 10ನೇ ಮನೆಯಲ್ಲಿ ಇದೆ, ಶನಿಯು ನಿಮ್ಮ ಲಗ್ನ ಮನೆಯಲ್ಲಿದೆ. ಆದ್ದರಿಂದ ಈ ವರ್ಷ ನಿಮ್ಮ ಬಾಳಲ್ಲಿ ಬೇವು-ಬೆಲ್ಲ ಎರಡೂ ಇದೆ.

ಏಕೆಂದರೆ ನಿಮಗೆ ಶನಿ ಸಾಡೇಸಾತಿ ಇದೆ. ಇದರಿಂದಾಗಿ ಈ ವರ್ಷ ಶುಭ ಹಾಗೂ ಅಶುಭ ಫಲ ಎರಡೂ ಇರಲಿದೆ. ಗುರು ಕೂಡ 3ನೇ ಮನೆಯಲ್ಲಿ ಇರುವುದರಿಂದ ಗುರುವಿನ ಅನುಕೂಲ ಶುಭ ಫಲ ನೀಡುತ್ತಾನೆ.
ಆರ್ಥಿಕ ಸ್ಥಿತಿ
ಈ ವರ್ಷ ನಿಮ್ಮ ಆರ್ಥಿಕ ಸ್ಥಿತಿಯ ಬಗ್ಗೆ ನೋಡುವುದಾದರೆ ಕೆಲವೊಂದು ಹಣ ಕಾಸಿನ ತೊಂದರೆ ಕಾಣಿಸಬಹುದು. ಬೇರೆಯವರ ಮಾತು ಕೇಳಿ ಹಣದ ಹೂಡಿಕೆ ಮಾಡಲು ಹೋಗಬೇಡಿ, ಒಂದು ವೇಳೆ ಮಾಡಿದರೆ ನಷ್ಟ ಅನುಭವಿಷಬೇಕಾಗುವುದು. ನೀವು ದುಡ್ಡಿನಲ್ಲಿ ಮೋಸ ಹೋಗುವ ಸಾಧ್ಯತೆ ಇದೆ. ಆದ್ದರಿಂದ ಯಾರಿಗಾದರೂ ಸಾಲ ನೀಡಿದರೆ ಆ ಹಣ ವಾಪಾಸು ಬರಲ್ಲ. ಅಲ್ಲದೆ ಈ ವರ್ಷ ಇರುವ ವ್ಯವಹಾರವನ್ನು ಮುಂದುವರೆಸಿಕೊಂಡು ಹೋಗಲು ಪ್ರಯತ್ನಿಸಿ, ಯಾವುದೇ ದೊಡ್ಡ ಹೂಡಿಕೆ ಮಾಡಬೇಡಿ. ಇಲ್ಲದಿದ್ದರೆ ಹಣ ನಷ್ಟವಾಗಬಹುದು. ಅಲ್ಲದೆ ಬೇರೆಯವರ ಸಾಲಕ್ಕೆ ಶ್ಯೂರಿಟಿ ಹಾಕದಿರುವುದು ಒಳ್ಳೆಯದು.
ವೃತ್ತಿ ಜೀವನ
ವೃತ್ತಿ ಜೀವನದ ಬಗ್ಗೆ ಹೇಳುವುದಾದರೆ ಈ ಅವಧಿಯಲ್ಲಿ ಕೆಲಸದ ಒತ್ತಡ ಅಧಿಕ ಇರಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗುತ್ತಿಲ್ಲ ಎಂದು ನಿಮಗನಿಸಬಹುದು. ಕೆಲಸ ಬದಲಾಯಿಸಬೇಕೆಂದು ಅನಿಸುವುದು. ಆದರೆ ಒಂದು ಸಲಹೆ ಏನೆಂದರೆ ನಿಮಗೆ ಸರಿಯಾದ ಒಂದು ಕೆಲಸ ಸಿಗುವ ಮೊದಲು ಕೆಲಸ ಬಿಡಬೇಡಿ. ಕೆಲಸ ಬಿಟ್ಟು ಮತ್ತು ಹುಡುಕುವ ಎಂದು ಯೋಚಿಸಿದರೆ ಕೆಲಸದ ವಿಷಯದಲ್ಲಿ ತೊಂದರೆ ಉಂಟಾಗಿ ಆರ್ಥಿಕ ಸಂಕಷ್ಟ ಎದುರಾಗುವುದು.
ಇನ್ನು ನೀವು ಕೆಲಸ ಬದಲಾಯಿಸಿ ಬೇರೆ ಕಡೆ ಹೋದರೂ ಅಲ್ಲಿಯೂ ಕೆಲಸದಲ್ಲಿ ಒತ್ತಡವಿರಲಿದೆ. ಆದ್ದರಿಂದ ನೀವು ಕೆಲಸದಲ್ಲಿನ ಸಮಸ್ಯೆ ಕಡಿಮೆ ಮಾಡಲು ಶನಿಗೆ ಪರಿಹಾರ ಮಾಡುವುದು ಒಳ್ಳೆಯದು
ಕುಟುಂಬ ಮತ್ತು ಆರೋಗ್ಯ
ಕುಟುಂಬ ಜೀವನದಲ್ಲಿ ಚಿಕ್ಕ-ಪುಟ್ಟ ಭಿನ್ನಾಭಿಪ್ರಾಯಗಳಿರುತ್ತದೆ, ಆದರೆ ಸರಿಪಡಿಸಿಕೊಂಡು ಹೋಗಲು ಪ್ರಯತ್ನಿಸಿ. ಆರೋಗ್ಯದಲ್ಲೂ ಸಣ್ಣಪುಟ್ಟ ಸಮಸ್ಯೆಗಳಿರುತ್ತದೆ.
ಶನಿಗೆ ಪರಿಹಾರ
* ಪ್ರತಿ ಶನಿವಾರ ಶನಿ ದೇವಾಲಯಕ್ಕೆ ಭೇಟಿ ನೀಡಿ.
* ಶನಿ ದೇವಾಲಯಕ್ಕೆ ಸಾಸಿವೆ ಎಣ್ಣೆ ಹಾಗೂ ಕಪ್ಪು ಎಳ್ಳು ದಾನ ಮಾಡಿ.
* ನೀವು ಮಂಗಳವಾರ ಹಾಗೂ ಶನಿವಾರ ಹನುಮಾನ್ ದೇವಾಲಯಕ್ಕೆ ಭೇಟಿ.
* ಶನಿವಾರ ನಿರ್ಗತಿಕರಿಗೆ ದಾನ ಮಾಡಿ
* ಪ್ರತಿದಿನ ಹನುಮಾನ್ ಚಾಲೀಸ ಪಠಿಸಿ.



Click it and Unblock the Notifications
