Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ತಾಯಿಯ ಖುಣ ತೀರಿಸಲು ತೊಡೆಯ ಚರ್ಮದಿಂದ ತಾಯಿಗೆ ಚಪ್ಪಲಿ ಮಾಡಿಸಿದ ಪುತ್ರ..!
ಜಗತ್ತಿನಲ್ಲಿ ತಾಯಿ ಖುಣ ತೀರಿಸಲು ಸಾಧ್ಯವಿಲ್ಲ ಎಂಬ ಮಾತಿದೆ. ಆಕೆ ತಮ್ಮ ಮಕ್ಕಳಿಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದವಳು. ಮಕ್ಕಳ ಆರೋಗ್ಯ ಬಯಸೋದೂ ಬಿಟ್ಟು ಆಕೆ ಬೇರೆನು ಮಾಡಿಯೇ ಇರುವುದಿಲ್ಲ. ಹೀಗಿರುವಾಗ ನಿಮಗೆಲ್ಲಾ ತ್ರಾತಾಯುಗದ ಶ್ರವಣ ಕುಮಾರನ ಕಥೆ ಗೊತ್ತಿರಬಹುದು. ಆತ ತನ್ನ ಭುಜದ ಮೇಲೆ ತನ್ನ ಕುರುಡ ಪೋಷಕರನ್ನು ಯಾತ್ರೆ ಮಾಡಿಸಿದ್ದ.
ಆದ್ರೆ ಇಲ್ಲೊಂದು ಕಥೆ ಸಹ ಯಾವ ಶ್ರವಣ ಕುಮಾರನಿಗಿಂತಲೂ ಕಡಿಮೆ ಇಲ್ಲ. ಆತ ತನ್ನ ತಾಯಿಗಾಗಿ ಈ ಜಗತ್ತಿನಲ್ಲೇ ಯಾರು ಮಾಡದ ಕೆಲಸ ಮಾಡಿದ್ದಾನೆ. ತಾಯಿ ಪ್ರೀತಿಗೆ ಸರಿಸಾಟಿ ಯಾರು ಇಲ್ಲ. ಸ್ವಾರ್ಥವಿಲ್ಲದೆ ಪ್ರೀತಿ ನೀಡುವ ತಾಯಿಗೆ ಇಲ್ಲೊಬ್ಬ ಮಗ ತನ್ನ ತೊಡೆಯ ಚರ್ಮದಿಂದ ಚಪ್ಪಲಿ ಮಾಡಿಸಿದ್ದಾನೆ.

ಹೌದು ಈ ರೀತಿಯ ವಿಚಿತ್ರ ಘಟನೆಯೊಂದು ನಡೆದಿದ್ದು ಎಲ್ಲರ ಹುಬ್ಬೇರುವಂತೆ ಮಾಡಿದೆ. ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ಉಜ್ಜಯಿನಿಯಲ್ಲಿ. ಆತ ತನ್ನ ತಾಯಿಗೆ ಯಾರು ಊಹಿಸದ ಕೊಡುಗೆ ನೀಡಿದ್ದಾನೆ. ತನ್ನ ಪಾಪ ಕರ್ಮಗಳು ಕೊನೆಯಾಗಲಿ ಎಂದು ತೊಡೆಯ ಚರ್ಮದಿಂದ ಚಪ್ಪಲಿ ಮಾಡಿಸಿ ತಾಯಿಗೆ ನೀಡಿದ್ದಾನೆ. ರೋನಕ್ ಗುರ್ಜರ್ ಎಂಬಾತ ರಾಮಾಯಣದಿಂದ ಪ್ರೇರೇಪಿತನಾಗಿ ತನ್ನ ತಾಯಿಗೆ ಈ ರೀತಿಯ ಕೊಡುಗೆ ನೀಡಬೇಕು ಎಂದು ನಿರ್ಧರಿಸಿದ್ದನಂತೆ.
ಚರ್ಮ ತೆಗೆಯಲು ಶಸ್ತ್ರ ಚಿಕಿತ್ಸೆ
ತಾಯಿಗೆ ತನ್ನ ಚರ್ಮದಲ್ಲಿ ಚಪ್ಪಲಿ ಮಾಡಿಸಬೇಕು ಎಂದು ನಿರ್ಧರಿಸಿದ ಆತ ಚರ್ಮ ತೆಗೆಯಬೇಕಾದರೆ ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಿತ್ತು. ಈ ಹಿನ್ನೆಲೆ ಆಸ್ಪತ್ರೆಗೆ ತೆರಳಿ ಈ ಕುರಿತು ವೈದ್ಯರ ಬಳಿ ತಿಳಿಸದಾಗ ಅಕ್ಷರಶಃ ಅವರು ಶಾಕ್ಗೆ ಒಳಗಾಗಿದ್ದರಂತೆ. ಈ ರೀತಿ ಎಂದಿಗೂ ಅವರು ಕೇಳಿರಲಿಲ್ಲ. ಆದರೆ ತೊಡೆ ಭಾಗದ ಚರ್ಮ ತೆಗೆದು ಬೇರೆ ಚಿಕಿತ್ಸೆಗೆ ಬಳಸಿರುವ ಉದಾಹರಣೆ ಇದೆ. ಯಾರಾದರು ಆಸಿಡ್ ದಾಳಿಗೆ ಒಳಗಾದರೆ ಇಲ್ಲವೆ ಬೆಂಕಿ ಅನಾಹುತದಲ್ಲಿ ಮುಖದ ಚರ್ಮ ಹಾಳಾದರೆ ತೊಡೆಯ ಚರ್ಮ ತೆಗೆದು ಶಸ್ತ್ರ ಚಿಕಿತ್ಸೆ ನೆರವೇರಿಸುತ್ತಾರೆ. ಆದರೆ ಈ ವಿಚಿತ್ರ ಪ್ರಕರಣದಲ್ಲಿ ವೈದ್ಯರಿಗೂ ಅಚ್ಚರಿಯಾಗಿತ್ತು. ಆದರೆ ವೈದ್ಯರು ಸಹ ಆ ಮಗನ ಆಸೆಗೆ ಕೈ ಜೋಡಿಸಿದ್ದಾರೆ. ಆತ ಎರಡೂ ಕಡೆ ತೊಡೆಯ ಚರ್ಮ ತೆಗೆಯಲು ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದಾರೆ.
ಕಣ್ಣೀರಿಟ್ಟ ತಾಯಿ
ಇನ್ನು ತನ್ನ ಚರ್ಮದಿಂದ ಮಾಡಿದ್ದ ಚಪ್ಪಲಿಯನ್ನು ತಾಯಿಗೆ ನೀಡಲು ಆತ ಜಿತೇಂದ್ರ ಮಹಾರಾಜ್ ಅವರ ಧಾರ್ಮಿಕ ಕಾರ್ಯಕ್ರದಲ್ಲಿ ತಾಯಿ ಭಾಗಿಯಾಗಿದ್ದರು. ಇದೇ ಕಾರ್ಯಕ್ರಮಕ್ಕೆ ಬಂದಿದ್ದ ಪುತ್ರ ಅಲ್ಲಿಯೇ ತಾಯಿಗೆ ಚರ್ಮದ ಚಪ್ಪಲಿ ನೀಡಿದ್ದಾನೆ. ತನ್ನ ಮಗನ ತೊಡೆಯ ಚರ್ಮದಿಂದ ಮಾಡಿದ್ದ ಚಪ್ಪಲಿ ಎಂದು ತಿಳಿದ ಬಳಿಕ ತಾಯಿ ಕಣ್ಣೀರಿಟ್ಟಿದ್ದಾರೆ. ಮಗನನ್ನು ತಬ್ಬಿಕೊಂಡಾಕೆ ಕಣ್ಣೀರು ಹಾಕಿದ್ದಾರೆ. ಈ ರೀತಿಯ ಹರಕೆ ಇಟ್ಟುಕೊಳ್ಳುತ್ತಾನೆ ಎಂದು ನಾನು ಭಾವಿಸಿರಲಿಲ್ಲ ಎಂದು ಆಕೆ ಕಣ್ಣೀರಿಟ್ಟು ಆತನ ತಂಬಿಕೊಂಡರು. ಈ ರೀತಿಯ ಮಗನ ಪಡೆದಿರುವ ನಾನು ಅದೃಷ್ಟಶಾಲಿ ಎಂದು ಭಾವಿಸುತ್ತೇನೆ. ದೇವರು ಅವನ ಎಲ್ಲಾ ಕಷ್ಟಗಳನ್ನು ದೂರಮಾಡಲಿ ಎಂದು ಆಕೆ ಬೇಡಿಕೊಂಡಳು.
ಪುತ್ರನ ವಿರುದ್ಧ ಇವೆ ಕ್ರಿಮಿನಲ್ ಕೇಸ್
ಅಚ್ಚರಿ ಅಂದರೆ ತನ್ನ ತೊಡೆಯ ಚರ್ಮದಿಂದ ಚಪ್ಪಲಿ ಮಾಡಿಸಿಕೊಟ್ಟ ಪುತ್ರನ ಮೇಲೆ ಹಲವು ಕ್ರಿಮಿನಲ್ ಕೇಸ್ಗಳಿವೆ. ಉಜ್ಜಯಿನಿಯ ಚಿಮಂಗಂಜ್ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಧಂಚಾ ಭವನದ ನಿವಾಸಿಯಾಗಿರುವ ಈತನ ವಿರುದ್ಧ 2019ರಲ್ಲಿ ಕಾಲಿಗೆ ಗುಂಡೇಟು ಬಿದ್ದಿತ್ತು, ಪೊಲೀಸರು ಒಂದು ಕಾಲಿಗೆ ಗುಂಡು ಹಾರಿಸಿದ್ದರು. ಈತನ ವಿರುದ್ಧ ದರೋಡೆ, ಕೊಲೆ ಸೇರಿ ಒಟ್ಟು 37 ಕ್ರಿಮಿನಲ್ ಕೇಸ್ಗಳಿವೆ ಎಂದು ತಿಳಿದುಬಂದಿದೆ.



Click it and Unblock the Notifications











