Latest Updates
-
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ!
ಉತ್ತರಾಖಂಡ್ನಲ್ಲಿ ಯುಸಿಸಿ ಜಾರಿ..! ವಿವಾಹ, ವಿಚ್ಛೇದನ, ಆಸ್ತಿಹಕ್ಕಿನಲ್ಲಿ ಏನೆಲ್ಲಾ ಬದಲಾವಣೆ ಗೊತ್ತಾ?
ದೇಶದಾದ್ಯಂತ ಸದ್ಯ ಹೆಚ್ಚು ಸುದ್ದಿಯಾಗುತ್ತಿರುವ ಏಕರೂಪ ನಾಗರಿಕ ಸಂಹಿತೆಯು ಮೊದಲ ಬಾರಿಗೆ ಅನುಷ್ಠಾನಕ್ಕೆ ಬರುತ್ತಿದೆ. ಉತ್ತರಾಖಂಡ್ ರಾಜ್ಯವು ಈ ನಾಗರಿಕ ಸಂಹಿತೆಯನ್ನು ಜಾರಿ ಮಾಡಿದೆ. ಅಲ್ಲಿನ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಏಕರೂಪ ನಾಗರಿಕ ಸಂಹಿತೆಯ ಪೋರ್ಟಲ್ ಅನ್ನು ಕೂಡ ಉದ್ಘಾಟಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಈ ನಿಯವನ್ನು ಅಧಿಕೃತವಾಗಿ ಆರಂಭಿಸುವ ಸೂಚನೆ ನೀಡಿದ್ದಾರೆ.
ಆದ್ರೆ ಈ ನಿಯಮ ಜಾರಿಗೆ ಪ್ರಸ್ತಾವನೆಯಾಗಿದ್ದ ಕಾಲದಿಂದಲೂ ವಿರೋಧವಂತು ಕೇಳಿಬಂದಿದೆ. ದೇಶದಲ್ಲಿ ಹಲವು ವಿರೋಧ ಪಕ್ಷಗಳು ಇದು ಅಸಂವಿಧಾನಿಕ ನಡೆ ಎಂದು ಆರೋಪಿಸುತ್ತಾ ಬಂದಿವೆ. ಹಾಗಾದ್ರೆ ನಾವಿಂದು ಈ ನಿಯಮ ಜಾರಿಯಿಂದ ಏನೆಲ್ಲಾ ಬದಲಾವಣೆ ಆಗಲಿದೆ ಎಂಬುದನ್ನು ತಿಳಿದುಕೊಳ್ಳೋಣ.

ಅದರಲ್ಲೂ ಮದುವೆ, ವಿಚ್ಚೇದನ, ಆಸ್ತಿ ಹಂಚಿಕೆ ವಿಚಾರದಲ್ಲಿ ಯಾವ ರೀತಿಯ ಬದಲಾವಣೆ ನೋಡಬಹುದು ಎಂಬುದನ್ನು ಇಂದು ತಿಳಿಯೋಣ. ಇದಕ್ಕೂ ಮೊದಲು ಯುಸಿಸಿ ಅಥವಾ ಏಕರೂಪ ನಾಗರಿಕ ಸಂಹಿತೆ ಅಂದರೆ ಏನು ಎಂಬುದನ್ನು ತಿಳಿಯೋಣ.
ಏಕರೂಪ ನಾಗರಿಕ ಸಂಹಿತೆ ಅಥವಾ ಯುನಿಫಾರ್ಮ್ ಸಿವಿಲ್ ಕೋಡ್ ಅಂದರೆ ಏನು?
ಯಾವುದೇ ವ್ಯಕ್ತಿ ತನ್ನ ಧರ್ಮ, ವಾಸ ಸ್ಥಳದ ಆಧಾರದ ಮೇಲೆ ವೈಯಕ್ತಿಕ ಕಾನೂನು ಹೊಂದಿರದೆ ಕೇವಲ ಏಕ ಕಾನೂನು ಅನುಸರಿಸುವ ವಿಧಾನ. ಅದರಲ್ಲೂ ವಿವಾಹ ಕಾಯ್ದೆ, ಉತ್ತರಾಧಿಕಾರ ಕಾಯ್ದೆಗಳು ಪ್ರತ್ಯೇಕವಾಗಿ ಅನುಸರಿಸಲಾಗುತ್ತಿದೆ. ಈ ಕ್ರಮದ ಬದಲಾಗಿ ಒಂದೇ ಕಾನೂನು ಜಾರಿ ಮಾಡುವ ಪ್ರಕ್ರಿಯೆಯಾಗಿದೆ. ಪ್ರತಿಯೊಂದು ಧರ್ಮಕ್ಕೂ ಒಂದೇ ಕಾನೂನು ಜಾರಿ ಮಾಡುವ ಸಂಹಿತೆ ಇದಾಗಿದೆ. ಈ ಕಾನೂನಿನ ಪ್ರಕಾರ ಮದುವೆ, ಉತ್ತರಾಧಿಕಾರ, ವಿಚ್ಛೇದನಕ್ಕೆ ಒಂದೇ ಕಾನೂನು ಅನ್ವಯವಾಗಲಿದೆ.
ಹಾಗಾದ್ರೆ ಯಾವೆಲ್ಲಾ ನಿಮಯ ಬದಲಾಗುತ್ತಿದೆ?
ಎಲ್ಲಾ ಧರ್ಮದವರಿಗೂ ಒಂದೇ ಸಂಹಿತೆ ಅನ್ವಯ. ವಿವಾಹ ನೋಂದಣಿ ಕಡ್ಡಾಯವಾಗಿ ಮಾಡಬೇಕಿದೆ. ಈ ಮೊದಲು ವಿವಾಹ ನೋಂದಣಿ ಕಡ್ಡಾಯವಾಗಿ ಹಲವರು ಮಾಡುತ್ತಿರಲಿಲ್ಲ. ಆಯಾ ಧರ್ಮದ ಅನುಸಾರವಾಗಿ ವಿವಾಹ ನೋಂದಣಿ ಮಾಡುವಂತಿಲ್ಲ. ಎಲ್ಲಾ ಧರ್ಮದವರಿಗೂ ವಿವಾಹ ವಿಚ್ಛೇದನಕ್ಕೆ ಒಂದೇ ಕಾನೂನು ಅನ್ವಯವಾಗಲಿದೆ. ಹಾಗೆಯೇ ಮದುವೆಯ ನೋಂದಣಿಯಂತೆ ಲಿವ್ -ಇನ್ ರಿಲೇಷನ್ಶಿಪ್ನಲ್ಲಿದ್ದರೂ ಕೂಡ ನೋಂದಣಿ ಕಡ್ಡಾಯ. ಹಾಗೆ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದಾಗ ಮಗು ಜನಿಸಿದರು ಕೂಡ 7 ದಿನಗಳ ಒಳಗೆ ನೋಂದಣಿ ಮಾಡಿಸುವುದು ಕಡ್ಡಾಯ ಆಗಿರಲಿದೆ.
ಹಾಗೆ ಆಸ್ತಿ ಸಂಬಂಧ ಉಯಿಲು ಬರೆಯುವವರು ತಮ್ಮ ಸಂಪೂರ್ಣ ಮಾಹಿತಿಯನ್ನು ದಾಖಲು ಮಾಡಬೇಕಾಗುತ್ತದೆ. ಆಧಾರ್ ನಂಬರ್ ನೀಡಿ ಉಹಿಲು ಬರೆಸುವುದು ಕಡ್ಡಾಯವಾಗಲಿದೆ.
ಈ ಕಾನೂನು ಉತ್ತರಾಖಂಡ್ನಲ್ಲಿ ನೆಲೆಸಿರುವ ನಾಗರಿಕರಿಗೆ ಅನ್ವಯವಾಗಲಿದೆ, ಹಾಗೆ ರಾಜ್ಯದ ಜನರು ಬೇರೆ ರಾಜ್ಯದಲ್ಲಿ ನೆಲೆಸಿದ್ದರೂ ಕೂಡ ಈ ಕಾನೂನು ಅನ್ವಯವಾಗಲಿದೆ.
ಈ ಕಾನೂನು ಜಾರಿಯಿಂದ ಯಾರೊಬ್ಬರಿಗೂ ಸಮಸ್ಯೆ ಆಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆಯೇ ಹೇಳಿದ್ದರು. ಇದು ಯಾರ ವೈಯಕ್ತಿಕ ಕಾನೂನನ್ನು ಹಾನಿಗೊಳಿಸುವುದಿಲ್ಲ, ಅವರ ಹಕ್ಕನ್ನು ಕೂಡ ಕಸಿಯುವುದಿಲ್ಲ ಎಂದಿದ್ದರು.



Click it and Unblock the Notifications