Latest Updates
-
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ! -
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು
ಉತ್ತರಾಖಂಡ್ನಲ್ಲಿ ಯುಸಿಸಿ ಜಾರಿ..! ವಿವಾಹ, ವಿಚ್ಛೇದನ, ಆಸ್ತಿಹಕ್ಕಿನಲ್ಲಿ ಏನೆಲ್ಲಾ ಬದಲಾವಣೆ ಗೊತ್ತಾ?
ದೇಶದಾದ್ಯಂತ ಸದ್ಯ ಹೆಚ್ಚು ಸುದ್ದಿಯಾಗುತ್ತಿರುವ ಏಕರೂಪ ನಾಗರಿಕ ಸಂಹಿತೆಯು ಮೊದಲ ಬಾರಿಗೆ ಅನುಷ್ಠಾನಕ್ಕೆ ಬರುತ್ತಿದೆ. ಉತ್ತರಾಖಂಡ್ ರಾಜ್ಯವು ಈ ನಾಗರಿಕ ಸಂಹಿತೆಯನ್ನು ಜಾರಿ ಮಾಡಿದೆ. ಅಲ್ಲಿನ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಏಕರೂಪ ನಾಗರಿಕ ಸಂಹಿತೆಯ ಪೋರ್ಟಲ್ ಅನ್ನು ಕೂಡ ಉದ್ಘಾಟಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಈ ನಿಯವನ್ನು ಅಧಿಕೃತವಾಗಿ ಆರಂಭಿಸುವ ಸೂಚನೆ ನೀಡಿದ್ದಾರೆ.
ಆದ್ರೆ ಈ ನಿಯಮ ಜಾರಿಗೆ ಪ್ರಸ್ತಾವನೆಯಾಗಿದ್ದ ಕಾಲದಿಂದಲೂ ವಿರೋಧವಂತು ಕೇಳಿಬಂದಿದೆ. ದೇಶದಲ್ಲಿ ಹಲವು ವಿರೋಧ ಪಕ್ಷಗಳು ಇದು ಅಸಂವಿಧಾನಿಕ ನಡೆ ಎಂದು ಆರೋಪಿಸುತ್ತಾ ಬಂದಿವೆ. ಹಾಗಾದ್ರೆ ನಾವಿಂದು ಈ ನಿಯಮ ಜಾರಿಯಿಂದ ಏನೆಲ್ಲಾ ಬದಲಾವಣೆ ಆಗಲಿದೆ ಎಂಬುದನ್ನು ತಿಳಿದುಕೊಳ್ಳೋಣ.

ಅದರಲ್ಲೂ ಮದುವೆ, ವಿಚ್ಚೇದನ, ಆಸ್ತಿ ಹಂಚಿಕೆ ವಿಚಾರದಲ್ಲಿ ಯಾವ ರೀತಿಯ ಬದಲಾವಣೆ ನೋಡಬಹುದು ಎಂಬುದನ್ನು ಇಂದು ತಿಳಿಯೋಣ. ಇದಕ್ಕೂ ಮೊದಲು ಯುಸಿಸಿ ಅಥವಾ ಏಕರೂಪ ನಾಗರಿಕ ಸಂಹಿತೆ ಅಂದರೆ ಏನು ಎಂಬುದನ್ನು ತಿಳಿಯೋಣ.
ಏಕರೂಪ ನಾಗರಿಕ ಸಂಹಿತೆ ಅಥವಾ ಯುನಿಫಾರ್ಮ್ ಸಿವಿಲ್ ಕೋಡ್ ಅಂದರೆ ಏನು?
ಯಾವುದೇ ವ್ಯಕ್ತಿ ತನ್ನ ಧರ್ಮ, ವಾಸ ಸ್ಥಳದ ಆಧಾರದ ಮೇಲೆ ವೈಯಕ್ತಿಕ ಕಾನೂನು ಹೊಂದಿರದೆ ಕೇವಲ ಏಕ ಕಾನೂನು ಅನುಸರಿಸುವ ವಿಧಾನ. ಅದರಲ್ಲೂ ವಿವಾಹ ಕಾಯ್ದೆ, ಉತ್ತರಾಧಿಕಾರ ಕಾಯ್ದೆಗಳು ಪ್ರತ್ಯೇಕವಾಗಿ ಅನುಸರಿಸಲಾಗುತ್ತಿದೆ. ಈ ಕ್ರಮದ ಬದಲಾಗಿ ಒಂದೇ ಕಾನೂನು ಜಾರಿ ಮಾಡುವ ಪ್ರಕ್ರಿಯೆಯಾಗಿದೆ. ಪ್ರತಿಯೊಂದು ಧರ್ಮಕ್ಕೂ ಒಂದೇ ಕಾನೂನು ಜಾರಿ ಮಾಡುವ ಸಂಹಿತೆ ಇದಾಗಿದೆ. ಈ ಕಾನೂನಿನ ಪ್ರಕಾರ ಮದುವೆ, ಉತ್ತರಾಧಿಕಾರ, ವಿಚ್ಛೇದನಕ್ಕೆ ಒಂದೇ ಕಾನೂನು ಅನ್ವಯವಾಗಲಿದೆ.
ಹಾಗಾದ್ರೆ ಯಾವೆಲ್ಲಾ ನಿಮಯ ಬದಲಾಗುತ್ತಿದೆ?
ಎಲ್ಲಾ ಧರ್ಮದವರಿಗೂ ಒಂದೇ ಸಂಹಿತೆ ಅನ್ವಯ. ವಿವಾಹ ನೋಂದಣಿ ಕಡ್ಡಾಯವಾಗಿ ಮಾಡಬೇಕಿದೆ. ಈ ಮೊದಲು ವಿವಾಹ ನೋಂದಣಿ ಕಡ್ಡಾಯವಾಗಿ ಹಲವರು ಮಾಡುತ್ತಿರಲಿಲ್ಲ. ಆಯಾ ಧರ್ಮದ ಅನುಸಾರವಾಗಿ ವಿವಾಹ ನೋಂದಣಿ ಮಾಡುವಂತಿಲ್ಲ. ಎಲ್ಲಾ ಧರ್ಮದವರಿಗೂ ವಿವಾಹ ವಿಚ್ಛೇದನಕ್ಕೆ ಒಂದೇ ಕಾನೂನು ಅನ್ವಯವಾಗಲಿದೆ. ಹಾಗೆಯೇ ಮದುವೆಯ ನೋಂದಣಿಯಂತೆ ಲಿವ್ -ಇನ್ ರಿಲೇಷನ್ಶಿಪ್ನಲ್ಲಿದ್ದರೂ ಕೂಡ ನೋಂದಣಿ ಕಡ್ಡಾಯ. ಹಾಗೆ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದಾಗ ಮಗು ಜನಿಸಿದರು ಕೂಡ 7 ದಿನಗಳ ಒಳಗೆ ನೋಂದಣಿ ಮಾಡಿಸುವುದು ಕಡ್ಡಾಯ ಆಗಿರಲಿದೆ.
ಹಾಗೆ ಆಸ್ತಿ ಸಂಬಂಧ ಉಯಿಲು ಬರೆಯುವವರು ತಮ್ಮ ಸಂಪೂರ್ಣ ಮಾಹಿತಿಯನ್ನು ದಾಖಲು ಮಾಡಬೇಕಾಗುತ್ತದೆ. ಆಧಾರ್ ನಂಬರ್ ನೀಡಿ ಉಹಿಲು ಬರೆಸುವುದು ಕಡ್ಡಾಯವಾಗಲಿದೆ.
ಈ ಕಾನೂನು ಉತ್ತರಾಖಂಡ್ನಲ್ಲಿ ನೆಲೆಸಿರುವ ನಾಗರಿಕರಿಗೆ ಅನ್ವಯವಾಗಲಿದೆ, ಹಾಗೆ ರಾಜ್ಯದ ಜನರು ಬೇರೆ ರಾಜ್ಯದಲ್ಲಿ ನೆಲೆಸಿದ್ದರೂ ಕೂಡ ಈ ಕಾನೂನು ಅನ್ವಯವಾಗಲಿದೆ.
ಈ ಕಾನೂನು ಜಾರಿಯಿಂದ ಯಾರೊಬ್ಬರಿಗೂ ಸಮಸ್ಯೆ ಆಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆಯೇ ಹೇಳಿದ್ದರು. ಇದು ಯಾರ ವೈಯಕ್ತಿಕ ಕಾನೂನನ್ನು ಹಾನಿಗೊಳಿಸುವುದಿಲ್ಲ, ಅವರ ಹಕ್ಕನ್ನು ಕೂಡ ಕಸಿಯುವುದಿಲ್ಲ ಎಂದಿದ್ದರು.



Click it and Unblock the Notifications