Latest Updates
-
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್!
ಉತ್ತರಾಖಂಡ್ನಲ್ಲಿ ಯುಸಿಸಿ ಜಾರಿ..! ವಿವಾಹ, ವಿಚ್ಛೇದನ, ಆಸ್ತಿಹಕ್ಕಿನಲ್ಲಿ ಏನೆಲ್ಲಾ ಬದಲಾವಣೆ ಗೊತ್ತಾ?
ದೇಶದಾದ್ಯಂತ ಸದ್ಯ ಹೆಚ್ಚು ಸುದ್ದಿಯಾಗುತ್ತಿರುವ ಏಕರೂಪ ನಾಗರಿಕ ಸಂಹಿತೆಯು ಮೊದಲ ಬಾರಿಗೆ ಅನುಷ್ಠಾನಕ್ಕೆ ಬರುತ್ತಿದೆ. ಉತ್ತರಾಖಂಡ್ ರಾಜ್ಯವು ಈ ನಾಗರಿಕ ಸಂಹಿತೆಯನ್ನು ಜಾರಿ ಮಾಡಿದೆ. ಅಲ್ಲಿನ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಏಕರೂಪ ನಾಗರಿಕ ಸಂಹಿತೆಯ ಪೋರ್ಟಲ್ ಅನ್ನು ಕೂಡ ಉದ್ಘಾಟಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಈ ನಿಯವನ್ನು ಅಧಿಕೃತವಾಗಿ ಆರಂಭಿಸುವ ಸೂಚನೆ ನೀಡಿದ್ದಾರೆ.
ಆದ್ರೆ ಈ ನಿಯಮ ಜಾರಿಗೆ ಪ್ರಸ್ತಾವನೆಯಾಗಿದ್ದ ಕಾಲದಿಂದಲೂ ವಿರೋಧವಂತು ಕೇಳಿಬಂದಿದೆ. ದೇಶದಲ್ಲಿ ಹಲವು ವಿರೋಧ ಪಕ್ಷಗಳು ಇದು ಅಸಂವಿಧಾನಿಕ ನಡೆ ಎಂದು ಆರೋಪಿಸುತ್ತಾ ಬಂದಿವೆ. ಹಾಗಾದ್ರೆ ನಾವಿಂದು ಈ ನಿಯಮ ಜಾರಿಯಿಂದ ಏನೆಲ್ಲಾ ಬದಲಾವಣೆ ಆಗಲಿದೆ ಎಂಬುದನ್ನು ತಿಳಿದುಕೊಳ್ಳೋಣ.

ಅದರಲ್ಲೂ ಮದುವೆ, ವಿಚ್ಚೇದನ, ಆಸ್ತಿ ಹಂಚಿಕೆ ವಿಚಾರದಲ್ಲಿ ಯಾವ ರೀತಿಯ ಬದಲಾವಣೆ ನೋಡಬಹುದು ಎಂಬುದನ್ನು ಇಂದು ತಿಳಿಯೋಣ. ಇದಕ್ಕೂ ಮೊದಲು ಯುಸಿಸಿ ಅಥವಾ ಏಕರೂಪ ನಾಗರಿಕ ಸಂಹಿತೆ ಅಂದರೆ ಏನು ಎಂಬುದನ್ನು ತಿಳಿಯೋಣ.
ಏಕರೂಪ ನಾಗರಿಕ ಸಂಹಿತೆ ಅಥವಾ ಯುನಿಫಾರ್ಮ್ ಸಿವಿಲ್ ಕೋಡ್ ಅಂದರೆ ಏನು?
ಯಾವುದೇ ವ್ಯಕ್ತಿ ತನ್ನ ಧರ್ಮ, ವಾಸ ಸ್ಥಳದ ಆಧಾರದ ಮೇಲೆ ವೈಯಕ್ತಿಕ ಕಾನೂನು ಹೊಂದಿರದೆ ಕೇವಲ ಏಕ ಕಾನೂನು ಅನುಸರಿಸುವ ವಿಧಾನ. ಅದರಲ್ಲೂ ವಿವಾಹ ಕಾಯ್ದೆ, ಉತ್ತರಾಧಿಕಾರ ಕಾಯ್ದೆಗಳು ಪ್ರತ್ಯೇಕವಾಗಿ ಅನುಸರಿಸಲಾಗುತ್ತಿದೆ. ಈ ಕ್ರಮದ ಬದಲಾಗಿ ಒಂದೇ ಕಾನೂನು ಜಾರಿ ಮಾಡುವ ಪ್ರಕ್ರಿಯೆಯಾಗಿದೆ. ಪ್ರತಿಯೊಂದು ಧರ್ಮಕ್ಕೂ ಒಂದೇ ಕಾನೂನು ಜಾರಿ ಮಾಡುವ ಸಂಹಿತೆ ಇದಾಗಿದೆ. ಈ ಕಾನೂನಿನ ಪ್ರಕಾರ ಮದುವೆ, ಉತ್ತರಾಧಿಕಾರ, ವಿಚ್ಛೇದನಕ್ಕೆ ಒಂದೇ ಕಾನೂನು ಅನ್ವಯವಾಗಲಿದೆ.
ಹಾಗಾದ್ರೆ ಯಾವೆಲ್ಲಾ ನಿಮಯ ಬದಲಾಗುತ್ತಿದೆ?
ಎಲ್ಲಾ ಧರ್ಮದವರಿಗೂ ಒಂದೇ ಸಂಹಿತೆ ಅನ್ವಯ. ವಿವಾಹ ನೋಂದಣಿ ಕಡ್ಡಾಯವಾಗಿ ಮಾಡಬೇಕಿದೆ. ಈ ಮೊದಲು ವಿವಾಹ ನೋಂದಣಿ ಕಡ್ಡಾಯವಾಗಿ ಹಲವರು ಮಾಡುತ್ತಿರಲಿಲ್ಲ. ಆಯಾ ಧರ್ಮದ ಅನುಸಾರವಾಗಿ ವಿವಾಹ ನೋಂದಣಿ ಮಾಡುವಂತಿಲ್ಲ. ಎಲ್ಲಾ ಧರ್ಮದವರಿಗೂ ವಿವಾಹ ವಿಚ್ಛೇದನಕ್ಕೆ ಒಂದೇ ಕಾನೂನು ಅನ್ವಯವಾಗಲಿದೆ. ಹಾಗೆಯೇ ಮದುವೆಯ ನೋಂದಣಿಯಂತೆ ಲಿವ್ -ಇನ್ ರಿಲೇಷನ್ಶಿಪ್ನಲ್ಲಿದ್ದರೂ ಕೂಡ ನೋಂದಣಿ ಕಡ್ಡಾಯ. ಹಾಗೆ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದಾಗ ಮಗು ಜನಿಸಿದರು ಕೂಡ 7 ದಿನಗಳ ಒಳಗೆ ನೋಂದಣಿ ಮಾಡಿಸುವುದು ಕಡ್ಡಾಯ ಆಗಿರಲಿದೆ.
ಹಾಗೆ ಆಸ್ತಿ ಸಂಬಂಧ ಉಯಿಲು ಬರೆಯುವವರು ತಮ್ಮ ಸಂಪೂರ್ಣ ಮಾಹಿತಿಯನ್ನು ದಾಖಲು ಮಾಡಬೇಕಾಗುತ್ತದೆ. ಆಧಾರ್ ನಂಬರ್ ನೀಡಿ ಉಹಿಲು ಬರೆಸುವುದು ಕಡ್ಡಾಯವಾಗಲಿದೆ.
ಈ ಕಾನೂನು ಉತ್ತರಾಖಂಡ್ನಲ್ಲಿ ನೆಲೆಸಿರುವ ನಾಗರಿಕರಿಗೆ ಅನ್ವಯವಾಗಲಿದೆ, ಹಾಗೆ ರಾಜ್ಯದ ಜನರು ಬೇರೆ ರಾಜ್ಯದಲ್ಲಿ ನೆಲೆಸಿದ್ದರೂ ಕೂಡ ಈ ಕಾನೂನು ಅನ್ವಯವಾಗಲಿದೆ.
ಈ ಕಾನೂನು ಜಾರಿಯಿಂದ ಯಾರೊಬ್ಬರಿಗೂ ಸಮಸ್ಯೆ ಆಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆಯೇ ಹೇಳಿದ್ದರು. ಇದು ಯಾರ ವೈಯಕ್ತಿಕ ಕಾನೂನನ್ನು ಹಾನಿಗೊಳಿಸುವುದಿಲ್ಲ, ಅವರ ಹಕ್ಕನ್ನು ಕೂಡ ಕಸಿಯುವುದಿಲ್ಲ ಎಂದಿದ್ದರು.



Click it and Unblock the Notifications