Latest Updates
-
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು! -
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ!
ಉತ್ತರಾಖಂಡ್ನಲ್ಲಿ ಯುಸಿಸಿ ಜಾರಿ..! ವಿವಾಹ, ವಿಚ್ಛೇದನ, ಆಸ್ತಿಹಕ್ಕಿನಲ್ಲಿ ಏನೆಲ್ಲಾ ಬದಲಾವಣೆ ಗೊತ್ತಾ?
ದೇಶದಾದ್ಯಂತ ಸದ್ಯ ಹೆಚ್ಚು ಸುದ್ದಿಯಾಗುತ್ತಿರುವ ಏಕರೂಪ ನಾಗರಿಕ ಸಂಹಿತೆಯು ಮೊದಲ ಬಾರಿಗೆ ಅನುಷ್ಠಾನಕ್ಕೆ ಬರುತ್ತಿದೆ. ಉತ್ತರಾಖಂಡ್ ರಾಜ್ಯವು ಈ ನಾಗರಿಕ ಸಂಹಿತೆಯನ್ನು ಜಾರಿ ಮಾಡಿದೆ. ಅಲ್ಲಿನ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಏಕರೂಪ ನಾಗರಿಕ ಸಂಹಿತೆಯ ಪೋರ್ಟಲ್ ಅನ್ನು ಕೂಡ ಉದ್ಘಾಟಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಈ ನಿಯವನ್ನು ಅಧಿಕೃತವಾಗಿ ಆರಂಭಿಸುವ ಸೂಚನೆ ನೀಡಿದ್ದಾರೆ.
ಆದ್ರೆ ಈ ನಿಯಮ ಜಾರಿಗೆ ಪ್ರಸ್ತಾವನೆಯಾಗಿದ್ದ ಕಾಲದಿಂದಲೂ ವಿರೋಧವಂತು ಕೇಳಿಬಂದಿದೆ. ದೇಶದಲ್ಲಿ ಹಲವು ವಿರೋಧ ಪಕ್ಷಗಳು ಇದು ಅಸಂವಿಧಾನಿಕ ನಡೆ ಎಂದು ಆರೋಪಿಸುತ್ತಾ ಬಂದಿವೆ. ಹಾಗಾದ್ರೆ ನಾವಿಂದು ಈ ನಿಯಮ ಜಾರಿಯಿಂದ ಏನೆಲ್ಲಾ ಬದಲಾವಣೆ ಆಗಲಿದೆ ಎಂಬುದನ್ನು ತಿಳಿದುಕೊಳ್ಳೋಣ.

ಅದರಲ್ಲೂ ಮದುವೆ, ವಿಚ್ಚೇದನ, ಆಸ್ತಿ ಹಂಚಿಕೆ ವಿಚಾರದಲ್ಲಿ ಯಾವ ರೀತಿಯ ಬದಲಾವಣೆ ನೋಡಬಹುದು ಎಂಬುದನ್ನು ಇಂದು ತಿಳಿಯೋಣ. ಇದಕ್ಕೂ ಮೊದಲು ಯುಸಿಸಿ ಅಥವಾ ಏಕರೂಪ ನಾಗರಿಕ ಸಂಹಿತೆ ಅಂದರೆ ಏನು ಎಂಬುದನ್ನು ತಿಳಿಯೋಣ.
ಏಕರೂಪ ನಾಗರಿಕ ಸಂಹಿತೆ ಅಥವಾ ಯುನಿಫಾರ್ಮ್ ಸಿವಿಲ್ ಕೋಡ್ ಅಂದರೆ ಏನು?
ಯಾವುದೇ ವ್ಯಕ್ತಿ ತನ್ನ ಧರ್ಮ, ವಾಸ ಸ್ಥಳದ ಆಧಾರದ ಮೇಲೆ ವೈಯಕ್ತಿಕ ಕಾನೂನು ಹೊಂದಿರದೆ ಕೇವಲ ಏಕ ಕಾನೂನು ಅನುಸರಿಸುವ ವಿಧಾನ. ಅದರಲ್ಲೂ ವಿವಾಹ ಕಾಯ್ದೆ, ಉತ್ತರಾಧಿಕಾರ ಕಾಯ್ದೆಗಳು ಪ್ರತ್ಯೇಕವಾಗಿ ಅನುಸರಿಸಲಾಗುತ್ತಿದೆ. ಈ ಕ್ರಮದ ಬದಲಾಗಿ ಒಂದೇ ಕಾನೂನು ಜಾರಿ ಮಾಡುವ ಪ್ರಕ್ರಿಯೆಯಾಗಿದೆ. ಪ್ರತಿಯೊಂದು ಧರ್ಮಕ್ಕೂ ಒಂದೇ ಕಾನೂನು ಜಾರಿ ಮಾಡುವ ಸಂಹಿತೆ ಇದಾಗಿದೆ. ಈ ಕಾನೂನಿನ ಪ್ರಕಾರ ಮದುವೆ, ಉತ್ತರಾಧಿಕಾರ, ವಿಚ್ಛೇದನಕ್ಕೆ ಒಂದೇ ಕಾನೂನು ಅನ್ವಯವಾಗಲಿದೆ.
ಹಾಗಾದ್ರೆ ಯಾವೆಲ್ಲಾ ನಿಮಯ ಬದಲಾಗುತ್ತಿದೆ?
ಎಲ್ಲಾ ಧರ್ಮದವರಿಗೂ ಒಂದೇ ಸಂಹಿತೆ ಅನ್ವಯ. ವಿವಾಹ ನೋಂದಣಿ ಕಡ್ಡಾಯವಾಗಿ ಮಾಡಬೇಕಿದೆ. ಈ ಮೊದಲು ವಿವಾಹ ನೋಂದಣಿ ಕಡ್ಡಾಯವಾಗಿ ಹಲವರು ಮಾಡುತ್ತಿರಲಿಲ್ಲ. ಆಯಾ ಧರ್ಮದ ಅನುಸಾರವಾಗಿ ವಿವಾಹ ನೋಂದಣಿ ಮಾಡುವಂತಿಲ್ಲ. ಎಲ್ಲಾ ಧರ್ಮದವರಿಗೂ ವಿವಾಹ ವಿಚ್ಛೇದನಕ್ಕೆ ಒಂದೇ ಕಾನೂನು ಅನ್ವಯವಾಗಲಿದೆ. ಹಾಗೆಯೇ ಮದುವೆಯ ನೋಂದಣಿಯಂತೆ ಲಿವ್ -ಇನ್ ರಿಲೇಷನ್ಶಿಪ್ನಲ್ಲಿದ್ದರೂ ಕೂಡ ನೋಂದಣಿ ಕಡ್ಡಾಯ. ಹಾಗೆ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದಾಗ ಮಗು ಜನಿಸಿದರು ಕೂಡ 7 ದಿನಗಳ ಒಳಗೆ ನೋಂದಣಿ ಮಾಡಿಸುವುದು ಕಡ್ಡಾಯ ಆಗಿರಲಿದೆ.
ಹಾಗೆ ಆಸ್ತಿ ಸಂಬಂಧ ಉಯಿಲು ಬರೆಯುವವರು ತಮ್ಮ ಸಂಪೂರ್ಣ ಮಾಹಿತಿಯನ್ನು ದಾಖಲು ಮಾಡಬೇಕಾಗುತ್ತದೆ. ಆಧಾರ್ ನಂಬರ್ ನೀಡಿ ಉಹಿಲು ಬರೆಸುವುದು ಕಡ್ಡಾಯವಾಗಲಿದೆ.
ಈ ಕಾನೂನು ಉತ್ತರಾಖಂಡ್ನಲ್ಲಿ ನೆಲೆಸಿರುವ ನಾಗರಿಕರಿಗೆ ಅನ್ವಯವಾಗಲಿದೆ, ಹಾಗೆ ರಾಜ್ಯದ ಜನರು ಬೇರೆ ರಾಜ್ಯದಲ್ಲಿ ನೆಲೆಸಿದ್ದರೂ ಕೂಡ ಈ ಕಾನೂನು ಅನ್ವಯವಾಗಲಿದೆ.
ಈ ಕಾನೂನು ಜಾರಿಯಿಂದ ಯಾರೊಬ್ಬರಿಗೂ ಸಮಸ್ಯೆ ಆಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆಯೇ ಹೇಳಿದ್ದರು. ಇದು ಯಾರ ವೈಯಕ್ತಿಕ ಕಾನೂನನ್ನು ಹಾನಿಗೊಳಿಸುವುದಿಲ್ಲ, ಅವರ ಹಕ್ಕನ್ನು ಕೂಡ ಕಸಿಯುವುದಿಲ್ಲ ಎಂದಿದ್ದರು.



Click it and Unblock the Notifications