Latest Updates
-
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ
ಉತ್ತರಾಖಂಡ್ನಲ್ಲಿ ಯುಸಿಸಿ ಜಾರಿ..! ವಿವಾಹ, ವಿಚ್ಛೇದನ, ಆಸ್ತಿಹಕ್ಕಿನಲ್ಲಿ ಏನೆಲ್ಲಾ ಬದಲಾವಣೆ ಗೊತ್ತಾ?
ದೇಶದಾದ್ಯಂತ ಸದ್ಯ ಹೆಚ್ಚು ಸುದ್ದಿಯಾಗುತ್ತಿರುವ ಏಕರೂಪ ನಾಗರಿಕ ಸಂಹಿತೆಯು ಮೊದಲ ಬಾರಿಗೆ ಅನುಷ್ಠಾನಕ್ಕೆ ಬರುತ್ತಿದೆ. ಉತ್ತರಾಖಂಡ್ ರಾಜ್ಯವು ಈ ನಾಗರಿಕ ಸಂಹಿತೆಯನ್ನು ಜಾರಿ ಮಾಡಿದೆ. ಅಲ್ಲಿನ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಏಕರೂಪ ನಾಗರಿಕ ಸಂಹಿತೆಯ ಪೋರ್ಟಲ್ ಅನ್ನು ಕೂಡ ಉದ್ಘಾಟಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಈ ನಿಯವನ್ನು ಅಧಿಕೃತವಾಗಿ ಆರಂಭಿಸುವ ಸೂಚನೆ ನೀಡಿದ್ದಾರೆ.
ಆದ್ರೆ ಈ ನಿಯಮ ಜಾರಿಗೆ ಪ್ರಸ್ತಾವನೆಯಾಗಿದ್ದ ಕಾಲದಿಂದಲೂ ವಿರೋಧವಂತು ಕೇಳಿಬಂದಿದೆ. ದೇಶದಲ್ಲಿ ಹಲವು ವಿರೋಧ ಪಕ್ಷಗಳು ಇದು ಅಸಂವಿಧಾನಿಕ ನಡೆ ಎಂದು ಆರೋಪಿಸುತ್ತಾ ಬಂದಿವೆ. ಹಾಗಾದ್ರೆ ನಾವಿಂದು ಈ ನಿಯಮ ಜಾರಿಯಿಂದ ಏನೆಲ್ಲಾ ಬದಲಾವಣೆ ಆಗಲಿದೆ ಎಂಬುದನ್ನು ತಿಳಿದುಕೊಳ್ಳೋಣ.

ಅದರಲ್ಲೂ ಮದುವೆ, ವಿಚ್ಚೇದನ, ಆಸ್ತಿ ಹಂಚಿಕೆ ವಿಚಾರದಲ್ಲಿ ಯಾವ ರೀತಿಯ ಬದಲಾವಣೆ ನೋಡಬಹುದು ಎಂಬುದನ್ನು ಇಂದು ತಿಳಿಯೋಣ. ಇದಕ್ಕೂ ಮೊದಲು ಯುಸಿಸಿ ಅಥವಾ ಏಕರೂಪ ನಾಗರಿಕ ಸಂಹಿತೆ ಅಂದರೆ ಏನು ಎಂಬುದನ್ನು ತಿಳಿಯೋಣ.
ಏಕರೂಪ ನಾಗರಿಕ ಸಂಹಿತೆ ಅಥವಾ ಯುನಿಫಾರ್ಮ್ ಸಿವಿಲ್ ಕೋಡ್ ಅಂದರೆ ಏನು?
ಯಾವುದೇ ವ್ಯಕ್ತಿ ತನ್ನ ಧರ್ಮ, ವಾಸ ಸ್ಥಳದ ಆಧಾರದ ಮೇಲೆ ವೈಯಕ್ತಿಕ ಕಾನೂನು ಹೊಂದಿರದೆ ಕೇವಲ ಏಕ ಕಾನೂನು ಅನುಸರಿಸುವ ವಿಧಾನ. ಅದರಲ್ಲೂ ವಿವಾಹ ಕಾಯ್ದೆ, ಉತ್ತರಾಧಿಕಾರ ಕಾಯ್ದೆಗಳು ಪ್ರತ್ಯೇಕವಾಗಿ ಅನುಸರಿಸಲಾಗುತ್ತಿದೆ. ಈ ಕ್ರಮದ ಬದಲಾಗಿ ಒಂದೇ ಕಾನೂನು ಜಾರಿ ಮಾಡುವ ಪ್ರಕ್ರಿಯೆಯಾಗಿದೆ. ಪ್ರತಿಯೊಂದು ಧರ್ಮಕ್ಕೂ ಒಂದೇ ಕಾನೂನು ಜಾರಿ ಮಾಡುವ ಸಂಹಿತೆ ಇದಾಗಿದೆ. ಈ ಕಾನೂನಿನ ಪ್ರಕಾರ ಮದುವೆ, ಉತ್ತರಾಧಿಕಾರ, ವಿಚ್ಛೇದನಕ್ಕೆ ಒಂದೇ ಕಾನೂನು ಅನ್ವಯವಾಗಲಿದೆ.
ಹಾಗಾದ್ರೆ ಯಾವೆಲ್ಲಾ ನಿಮಯ ಬದಲಾಗುತ್ತಿದೆ?
ಎಲ್ಲಾ ಧರ್ಮದವರಿಗೂ ಒಂದೇ ಸಂಹಿತೆ ಅನ್ವಯ. ವಿವಾಹ ನೋಂದಣಿ ಕಡ್ಡಾಯವಾಗಿ ಮಾಡಬೇಕಿದೆ. ಈ ಮೊದಲು ವಿವಾಹ ನೋಂದಣಿ ಕಡ್ಡಾಯವಾಗಿ ಹಲವರು ಮಾಡುತ್ತಿರಲಿಲ್ಲ. ಆಯಾ ಧರ್ಮದ ಅನುಸಾರವಾಗಿ ವಿವಾಹ ನೋಂದಣಿ ಮಾಡುವಂತಿಲ್ಲ. ಎಲ್ಲಾ ಧರ್ಮದವರಿಗೂ ವಿವಾಹ ವಿಚ್ಛೇದನಕ್ಕೆ ಒಂದೇ ಕಾನೂನು ಅನ್ವಯವಾಗಲಿದೆ. ಹಾಗೆಯೇ ಮದುವೆಯ ನೋಂದಣಿಯಂತೆ ಲಿವ್ -ಇನ್ ರಿಲೇಷನ್ಶಿಪ್ನಲ್ಲಿದ್ದರೂ ಕೂಡ ನೋಂದಣಿ ಕಡ್ಡಾಯ. ಹಾಗೆ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದಾಗ ಮಗು ಜನಿಸಿದರು ಕೂಡ 7 ದಿನಗಳ ಒಳಗೆ ನೋಂದಣಿ ಮಾಡಿಸುವುದು ಕಡ್ಡಾಯ ಆಗಿರಲಿದೆ.
ಹಾಗೆ ಆಸ್ತಿ ಸಂಬಂಧ ಉಯಿಲು ಬರೆಯುವವರು ತಮ್ಮ ಸಂಪೂರ್ಣ ಮಾಹಿತಿಯನ್ನು ದಾಖಲು ಮಾಡಬೇಕಾಗುತ್ತದೆ. ಆಧಾರ್ ನಂಬರ್ ನೀಡಿ ಉಹಿಲು ಬರೆಸುವುದು ಕಡ್ಡಾಯವಾಗಲಿದೆ.
ಈ ಕಾನೂನು ಉತ್ತರಾಖಂಡ್ನಲ್ಲಿ ನೆಲೆಸಿರುವ ನಾಗರಿಕರಿಗೆ ಅನ್ವಯವಾಗಲಿದೆ, ಹಾಗೆ ರಾಜ್ಯದ ಜನರು ಬೇರೆ ರಾಜ್ಯದಲ್ಲಿ ನೆಲೆಸಿದ್ದರೂ ಕೂಡ ಈ ಕಾನೂನು ಅನ್ವಯವಾಗಲಿದೆ.
ಈ ಕಾನೂನು ಜಾರಿಯಿಂದ ಯಾರೊಬ್ಬರಿಗೂ ಸಮಸ್ಯೆ ಆಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆಯೇ ಹೇಳಿದ್ದರು. ಇದು ಯಾರ ವೈಯಕ್ತಿಕ ಕಾನೂನನ್ನು ಹಾನಿಗೊಳಿಸುವುದಿಲ್ಲ, ಅವರ ಹಕ್ಕನ್ನು ಕೂಡ ಕಸಿಯುವುದಿಲ್ಲ ಎಂದಿದ್ದರು.



Click it and Unblock the Notifications
