Latest Updates
-
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು!
Valmiki Jayanti Wishes: ವಾಲ್ಮೀಕಿ ಜಯಂತಿಗೆ ಶುಭ ಕೋರಲು, ಹಂಚಿಕೊಳ್ಳಲು ಇಲ್ಲಿವೆ ಶುಭಾಶಯಗಳು
Valmiki Jayanti Wishes: ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿದೆ. ಹಿಂದೂಗಳ ಪವಿತ್ರ ಧರ್ಮಗ್ರಂಥ ರಾಮಾಯಣ ಮಹಾಕಾವ್ಯದ ಕರ್ತೃ ಆಗಿರುವ ಅವರನ್ನು ನೆನೆಯುವ ದಿನವಾಗಿದೆ. ವಾಲ್ಮೀಕಿ ಮಹರ್ಷಿಗಳು ಬ್ರಹ್ಮನ ಅನುಗ್ರಹದಿಂದ ರಾಮಾಯಣವನ್ನು ರಚಿಸಿದರು ಎಂಬುದು ಭಾರತೀಯ ನಂಬಿಕೆ. ಇದು ಭಾರತದ ಮೊಟ್ಟ ಮೊದಲ ಮಹಾಕಾವ್ಯ ಎಂಬ ಹಿರಿಮೆಗೆ ಸಹ ಪಾತ್ರವಾದ ಕೃತಿ ಇದಾಗಿದೆ.
ಅಕ್ಟೋಬರ್ 07ರಂದು ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ದಿನ ಪೂಜ್ಯರು ಹೇಳಿಕೊಟ್ಟ, ಹಾಗೆ ಭೋದಿಸಿದಂತಹ ಹಿತನುಡಿಗಳನ್ನು ನೆನೆಯುವ ಹಾಗೆ ಅವರು ಹೇಳಿಕೊಟ್ಟ ಸಿದ್ದಾಂತದಂತೆ ಬದುಕು ನಡೆಯುವಂತಹ ಪ್ರತಿಜ್ಞೆ ಮಾಡಬೇಕಿದೆ. ಇದು ಅವರಿಗೆ ನಾವು ನೀಡುವ ನಿಜವಾದ ಗೌರವವೂ ಹೌದು.

ವಿಶೇಷವಾಗಿ ಕರ್ನಾಟಕದಲ್ಲಿ ವಾಲ್ಮೀಕಿ ಜಯಂತಿಗೆ ವಿಶೇಷ ಗೌರವ ನೀಡಲಾಗಿದೆ. ವಾಲ್ಮೀಕಿ ಸಮುದಾಯದ ಮಂದಿ ಈ ದಿನವನ್ನು ಬಹಳ ಸಂಭ್ರಮದಿಂದ ಆಚರಿಸುತ್ತಾರೆ. ಆದ್ರೆ ಅವರು ಒಂದು ಸಮುದಾಯಕ್ಕೆ ಮಾತ್ರ ಸೀಮಿತಿವಾಗಿಲ್ಲ. ಅವರ ಹಿತನುಡಿಗಳು ಕೂಡ ಒಂದೇ ಸಮುದಾಯಕ್ಕೆ ಸೀಮಿತವಾಗಿಲ್ಲ.
ಬೆನ್ನ ಹಿಂದೆ ಆಡಿಕೊಳ್ಳುವ ಜನರ ಬಗ್ಗೆ ತಲೆಕೆಡಿಸಿಕೊಳ್ಳಬೇಡ, ಏಕೆಂದರೆ ನಿನ್ನ ಬೆನ್ನೇ ನಿನಗೆ ಕಾಣುವುದಿಲ್ಲ, ಎದುರಾದರೆ ಎದುರಿಸು ಗೆದ್ದೇ ಗೆಲ್ಲುವೆ. ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು.
ಸತ್ಯವು ಸದಾಚಾರ ಮತ್ತು ಧರ್ಮದ ಅಡಿಪಾಯ. ಸತ್ಯವಂತ ಜೀವನವು ಶಾಂತಿ ಮತ್ತು ದೈವಿಕ ಅನುಗ್ರಹಕ್ಕೆ ಕಾರಣವಾಗುತ್ತದೆ.
ದೇವರಿಗೆ ಭಕ್ತಿಯು ಕುಟುಂಬ, ಸಮಾಜ ಮತ್ತು ಸದಾಚಾರದ ಕಡೆಗೆ ಒಬ್ಬರ ಕರ್ತವ್ಯಗಳಲ್ಲಿ ಪ್ರತಿಫಲಿಸಬೇಕು. ಎಲ್ಲಾ ಜೀವಿಗಳಿಗೂ ಸಮಾನತೆ ಮತ್ತು ಕರುಣೆ.
ಪ್ರತಿಯೊಂದು ಕ್ರಿಯೆ, ಅದು ಒಳ್ಳೆಯದಾಗಲಿ ಅಥವಾ ಕೆಟ್ಟದ್ದಾಗಲಿ, ಫಲ ನೀಡುತ್ತದೆ. ಆದ್ದರಿಂದ, ಒಬ್ಬರು ಅರಿವು ಮತ್ತು ಸದ್ಗುಣದಿಂದ ವರ್ತಿಸಬೇಕು.
ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ ಎಂದರ್ಥ
ಪ್ರಶ್ನಿಸಿದರು ಎಂದು ಕುಗ್ಗಬೇಡ, ಪ್ರಶ್ನೆ ಯಾರಾದರೂ ಕೇಳುವರು, ಸಮಯ ನೋಡಿ ಉತ್ತರ ಕೊಡುವವನೇ ಚಾಣಾಕ್ಯ.
ವ್ಯಕ್ತಿಯು ಆನೆಯನ್ನೇ ಉಡುಗೊರೆಯಾಗಿ ನೀಡುವಾಗ, ಆನೆಯನ್ನು ಕಟ್ಟುವ ಹಗ್ಗದ ಮೇಲೆ ಮನಸ್ಸಿದ್ದರೆ ಏನು ಪ್ರಯೋಜನ. ಆನೆಯನ್ನೇ ಕಳೆದುಕೊಂಡಾಗ ಹಗ್ಗದ ಮೇಲಿನ ಬಾಂಧವ್ಯದಿಂದ ಏನು ಉಪಯೋಗ.
ಯಾವಾಗಲೂ ಸಂತೋಷವಾಗಿರಲು ಹೇಗೆ ತಾನೇ ಸಾಧ್ಯ. ಜೀವನ ಎಂದ ಮೇಲೆ ಸುಖ ಮತ್ತು ದುಃಖಗಳ ಮಿಳಿತವಾಗಿರುತ್ತದೆ, ನಿರಂತರವಾದ ಸಂತೋಷ ಮಾತ್ರ ಇರಲು ಸಾಧ್ಯವೇ ಇಲ್ಲ.



Click it and Unblock the Notifications






