Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
Valmiki Jayanti Wishes: ವಾಲ್ಮೀಕಿ ಜಯಂತಿಗೆ ಶುಭ ಕೋರಲು, ಹಂಚಿಕೊಳ್ಳಲು ಇಲ್ಲಿವೆ ಶುಭಾಶಯಗಳು
Valmiki Jayanti Wishes: ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿದೆ. ಹಿಂದೂಗಳ ಪವಿತ್ರ ಧರ್ಮಗ್ರಂಥ ರಾಮಾಯಣ ಮಹಾಕಾವ್ಯದ ಕರ್ತೃ ಆಗಿರುವ ಅವರನ್ನು ನೆನೆಯುವ ದಿನವಾಗಿದೆ. ವಾಲ್ಮೀಕಿ ಮಹರ್ಷಿಗಳು ಬ್ರಹ್ಮನ ಅನುಗ್ರಹದಿಂದ ರಾಮಾಯಣವನ್ನು ರಚಿಸಿದರು ಎಂಬುದು ಭಾರತೀಯ ನಂಬಿಕೆ. ಇದು ಭಾರತದ ಮೊಟ್ಟ ಮೊದಲ ಮಹಾಕಾವ್ಯ ಎಂಬ ಹಿರಿಮೆಗೆ ಸಹ ಪಾತ್ರವಾದ ಕೃತಿ ಇದಾಗಿದೆ.
ಅಕ್ಟೋಬರ್ 07ರಂದು ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ದಿನ ಪೂಜ್ಯರು ಹೇಳಿಕೊಟ್ಟ, ಹಾಗೆ ಭೋದಿಸಿದಂತಹ ಹಿತನುಡಿಗಳನ್ನು ನೆನೆಯುವ ಹಾಗೆ ಅವರು ಹೇಳಿಕೊಟ್ಟ ಸಿದ್ದಾಂತದಂತೆ ಬದುಕು ನಡೆಯುವಂತಹ ಪ್ರತಿಜ್ಞೆ ಮಾಡಬೇಕಿದೆ. ಇದು ಅವರಿಗೆ ನಾವು ನೀಡುವ ನಿಜವಾದ ಗೌರವವೂ ಹೌದು.

ವಿಶೇಷವಾಗಿ ಕರ್ನಾಟಕದಲ್ಲಿ ವಾಲ್ಮೀಕಿ ಜಯಂತಿಗೆ ವಿಶೇಷ ಗೌರವ ನೀಡಲಾಗಿದೆ. ವಾಲ್ಮೀಕಿ ಸಮುದಾಯದ ಮಂದಿ ಈ ದಿನವನ್ನು ಬಹಳ ಸಂಭ್ರಮದಿಂದ ಆಚರಿಸುತ್ತಾರೆ. ಆದ್ರೆ ಅವರು ಒಂದು ಸಮುದಾಯಕ್ಕೆ ಮಾತ್ರ ಸೀಮಿತಿವಾಗಿಲ್ಲ. ಅವರ ಹಿತನುಡಿಗಳು ಕೂಡ ಒಂದೇ ಸಮುದಾಯಕ್ಕೆ ಸೀಮಿತವಾಗಿಲ್ಲ.
ಬೆನ್ನ ಹಿಂದೆ ಆಡಿಕೊಳ್ಳುವ ಜನರ ಬಗ್ಗೆ ತಲೆಕೆಡಿಸಿಕೊಳ್ಳಬೇಡ, ಏಕೆಂದರೆ ನಿನ್ನ ಬೆನ್ನೇ ನಿನಗೆ ಕಾಣುವುದಿಲ್ಲ, ಎದುರಾದರೆ ಎದುರಿಸು ಗೆದ್ದೇ ಗೆಲ್ಲುವೆ. ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು.
ಸತ್ಯವು ಸದಾಚಾರ ಮತ್ತು ಧರ್ಮದ ಅಡಿಪಾಯ. ಸತ್ಯವಂತ ಜೀವನವು ಶಾಂತಿ ಮತ್ತು ದೈವಿಕ ಅನುಗ್ರಹಕ್ಕೆ ಕಾರಣವಾಗುತ್ತದೆ.
ದೇವರಿಗೆ ಭಕ್ತಿಯು ಕುಟುಂಬ, ಸಮಾಜ ಮತ್ತು ಸದಾಚಾರದ ಕಡೆಗೆ ಒಬ್ಬರ ಕರ್ತವ್ಯಗಳಲ್ಲಿ ಪ್ರತಿಫಲಿಸಬೇಕು. ಎಲ್ಲಾ ಜೀವಿಗಳಿಗೂ ಸಮಾನತೆ ಮತ್ತು ಕರುಣೆ.
ಪ್ರತಿಯೊಂದು ಕ್ರಿಯೆ, ಅದು ಒಳ್ಳೆಯದಾಗಲಿ ಅಥವಾ ಕೆಟ್ಟದ್ದಾಗಲಿ, ಫಲ ನೀಡುತ್ತದೆ. ಆದ್ದರಿಂದ, ಒಬ್ಬರು ಅರಿವು ಮತ್ತು ಸದ್ಗುಣದಿಂದ ವರ್ತಿಸಬೇಕು.
ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ ಎಂದರ್ಥ
ಪ್ರಶ್ನಿಸಿದರು ಎಂದು ಕುಗ್ಗಬೇಡ, ಪ್ರಶ್ನೆ ಯಾರಾದರೂ ಕೇಳುವರು, ಸಮಯ ನೋಡಿ ಉತ್ತರ ಕೊಡುವವನೇ ಚಾಣಾಕ್ಯ.
ವ್ಯಕ್ತಿಯು ಆನೆಯನ್ನೇ ಉಡುಗೊರೆಯಾಗಿ ನೀಡುವಾಗ, ಆನೆಯನ್ನು ಕಟ್ಟುವ ಹಗ್ಗದ ಮೇಲೆ ಮನಸ್ಸಿದ್ದರೆ ಏನು ಪ್ರಯೋಜನ. ಆನೆಯನ್ನೇ ಕಳೆದುಕೊಂಡಾಗ ಹಗ್ಗದ ಮೇಲಿನ ಬಾಂಧವ್ಯದಿಂದ ಏನು ಉಪಯೋಗ.
ಯಾವಾಗಲೂ ಸಂತೋಷವಾಗಿರಲು ಹೇಗೆ ತಾನೇ ಸಾಧ್ಯ. ಜೀವನ ಎಂದ ಮೇಲೆ ಸುಖ ಮತ್ತು ದುಃಖಗಳ ಮಿಳಿತವಾಗಿರುತ್ತದೆ, ನಿರಂತರವಾದ ಸಂತೋಷ ಮಾತ್ರ ಇರಲು ಸಾಧ್ಯವೇ ಇಲ್ಲ.



Click it and Unblock the Notifications






