Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
Valmiki Jayanti Wishes: ವಾಲ್ಮೀಕಿ ಜಯಂತಿಗೆ ಶುಭ ಕೋರಲು, ಹಂಚಿಕೊಳ್ಳಲು ಇಲ್ಲಿವೆ ಶುಭಾಶಯಗಳು
Valmiki Jayanti Wishes: ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿದೆ. ಹಿಂದೂಗಳ ಪವಿತ್ರ ಧರ್ಮಗ್ರಂಥ ರಾಮಾಯಣ ಮಹಾಕಾವ್ಯದ ಕರ್ತೃ ಆಗಿರುವ ಅವರನ್ನು ನೆನೆಯುವ ದಿನವಾಗಿದೆ. ವಾಲ್ಮೀಕಿ ಮಹರ್ಷಿಗಳು ಬ್ರಹ್ಮನ ಅನುಗ್ರಹದಿಂದ ರಾಮಾಯಣವನ್ನು ರಚಿಸಿದರು ಎಂಬುದು ಭಾರತೀಯ ನಂಬಿಕೆ. ಇದು ಭಾರತದ ಮೊಟ್ಟ ಮೊದಲ ಮಹಾಕಾವ್ಯ ಎಂಬ ಹಿರಿಮೆಗೆ ಸಹ ಪಾತ್ರವಾದ ಕೃತಿ ಇದಾಗಿದೆ.
ಅಕ್ಟೋಬರ್ 07ರಂದು ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ದಿನ ಪೂಜ್ಯರು ಹೇಳಿಕೊಟ್ಟ, ಹಾಗೆ ಭೋದಿಸಿದಂತಹ ಹಿತನುಡಿಗಳನ್ನು ನೆನೆಯುವ ಹಾಗೆ ಅವರು ಹೇಳಿಕೊಟ್ಟ ಸಿದ್ದಾಂತದಂತೆ ಬದುಕು ನಡೆಯುವಂತಹ ಪ್ರತಿಜ್ಞೆ ಮಾಡಬೇಕಿದೆ. ಇದು ಅವರಿಗೆ ನಾವು ನೀಡುವ ನಿಜವಾದ ಗೌರವವೂ ಹೌದು.

ವಿಶೇಷವಾಗಿ ಕರ್ನಾಟಕದಲ್ಲಿ ವಾಲ್ಮೀಕಿ ಜಯಂತಿಗೆ ವಿಶೇಷ ಗೌರವ ನೀಡಲಾಗಿದೆ. ವಾಲ್ಮೀಕಿ ಸಮುದಾಯದ ಮಂದಿ ಈ ದಿನವನ್ನು ಬಹಳ ಸಂಭ್ರಮದಿಂದ ಆಚರಿಸುತ್ತಾರೆ. ಆದ್ರೆ ಅವರು ಒಂದು ಸಮುದಾಯಕ್ಕೆ ಮಾತ್ರ ಸೀಮಿತಿವಾಗಿಲ್ಲ. ಅವರ ಹಿತನುಡಿಗಳು ಕೂಡ ಒಂದೇ ಸಮುದಾಯಕ್ಕೆ ಸೀಮಿತವಾಗಿಲ್ಲ.
ಬೆನ್ನ ಹಿಂದೆ ಆಡಿಕೊಳ್ಳುವ ಜನರ ಬಗ್ಗೆ ತಲೆಕೆಡಿಸಿಕೊಳ್ಳಬೇಡ, ಏಕೆಂದರೆ ನಿನ್ನ ಬೆನ್ನೇ ನಿನಗೆ ಕಾಣುವುದಿಲ್ಲ, ಎದುರಾದರೆ ಎದುರಿಸು ಗೆದ್ದೇ ಗೆಲ್ಲುವೆ. ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು.
ಸತ್ಯವು ಸದಾಚಾರ ಮತ್ತು ಧರ್ಮದ ಅಡಿಪಾಯ. ಸತ್ಯವಂತ ಜೀವನವು ಶಾಂತಿ ಮತ್ತು ದೈವಿಕ ಅನುಗ್ರಹಕ್ಕೆ ಕಾರಣವಾಗುತ್ತದೆ.
ದೇವರಿಗೆ ಭಕ್ತಿಯು ಕುಟುಂಬ, ಸಮಾಜ ಮತ್ತು ಸದಾಚಾರದ ಕಡೆಗೆ ಒಬ್ಬರ ಕರ್ತವ್ಯಗಳಲ್ಲಿ ಪ್ರತಿಫಲಿಸಬೇಕು. ಎಲ್ಲಾ ಜೀವಿಗಳಿಗೂ ಸಮಾನತೆ ಮತ್ತು ಕರುಣೆ.
ಪ್ರತಿಯೊಂದು ಕ್ರಿಯೆ, ಅದು ಒಳ್ಳೆಯದಾಗಲಿ ಅಥವಾ ಕೆಟ್ಟದ್ದಾಗಲಿ, ಫಲ ನೀಡುತ್ತದೆ. ಆದ್ದರಿಂದ, ಒಬ್ಬರು ಅರಿವು ಮತ್ತು ಸದ್ಗುಣದಿಂದ ವರ್ತಿಸಬೇಕು.
ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ ಎಂದರ್ಥ
ಪ್ರಶ್ನಿಸಿದರು ಎಂದು ಕುಗ್ಗಬೇಡ, ಪ್ರಶ್ನೆ ಯಾರಾದರೂ ಕೇಳುವರು, ಸಮಯ ನೋಡಿ ಉತ್ತರ ಕೊಡುವವನೇ ಚಾಣಾಕ್ಯ.
ವ್ಯಕ್ತಿಯು ಆನೆಯನ್ನೇ ಉಡುಗೊರೆಯಾಗಿ ನೀಡುವಾಗ, ಆನೆಯನ್ನು ಕಟ್ಟುವ ಹಗ್ಗದ ಮೇಲೆ ಮನಸ್ಸಿದ್ದರೆ ಏನು ಪ್ರಯೋಜನ. ಆನೆಯನ್ನೇ ಕಳೆದುಕೊಂಡಾಗ ಹಗ್ಗದ ಮೇಲಿನ ಬಾಂಧವ್ಯದಿಂದ ಏನು ಉಪಯೋಗ.
ಯಾವಾಗಲೂ ಸಂತೋಷವಾಗಿರಲು ಹೇಗೆ ತಾನೇ ಸಾಧ್ಯ. ಜೀವನ ಎಂದ ಮೇಲೆ ಸುಖ ಮತ್ತು ದುಃಖಗಳ ಮಿಳಿತವಾಗಿರುತ್ತದೆ, ನಿರಂತರವಾದ ಸಂತೋಷ ಮಾತ್ರ ಇರಲು ಸಾಧ್ಯವೇ ಇಲ್ಲ.



Click it and Unblock the Notifications






