Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ಮೇ.4ಕ್ಕೆ ವರೂಧಿನಿ ಏಕಾದಶಿ: ಈ ಏಕಾದಶಿ ಆಚರಣೆಯಿಂದ ಸಿಗುವ ಫಲವೇನು? ಈ ದಿನ ಪಠಿಸಬೇಕಾದ ಮಂತ್ರಗಳು
ಪ್ರತಿಯೊಂದು ಏಕಾದಶಿಗೆ ಅದರದ್ದೇ ಆದ ಮಹತ್ವವಿದೆ. ಪ್ರತಿ ಮಾಸ ಎರಡು ಏಕಾದಶಿ ಬರುತ್ತದೆ. ವರ್ಷದಲ್ಲಿ ಒಟ್ಟು 24 ಏಕಾದಶಿಯನ್ನು ಆಚರಿಸಲಾಗುವುದು. ಪ್ರತಿಯೊಂದು ಏಕಾದಶಿ ಶ್ರೀ ವಿಷ್ಣುವಿಗೆ ಮೀಸಲಾಗಿರುವ ವಿಶೇಷ ದಿನವಾಗಿದೆ.
ಈ ದಿನ ಉಪವಾಸವಿದ್ದು ಶ್ರೀ ವಿಷ್ಣುವಿನ ಆರಾಧನೆ ಮಾಡಿದರೆ ನಮ್ಮ ಕಷ್ಟಗಳೆಲ್ಲಾ ದೂರಾಗುವುದು ಜೊತೆಗೆ ಒಂದೊಂದು ಏಕಾದಶಿಗೆ ಅದರದ್ದೇ ಆದ ಮಹತ್ವವಿದೆ, ಆ ಏಕಾದಶಿಗಳನ್ನು ಆಚರಣೆ ಮಾಡುವುದರಿಂದ ಅದರ ಪ್ರಯೋಜನ ದೊರೆಯಲಿದೆ.

ವೈಶಾಖ ಮಾಸದ ಕೃಷ್ಣ ಪಕ್ಷದ ಏಕಾದಶಿಯನ್ನು ವರೂಧಿನಿ ಏಕಾದಶಿ ಎಂದು ಆಚರಿಸಲಾಗುವುದು. ವೈಶಾಖ ಮಾಸವೆಂದರೆ ಶ್ರೀವಿಷ್ಣುವಿಗೆ ಪ್ರಿಯವಾದ ಮಾಸವೆಂದು ಹೇಳಲಾಗುವುದು, ಹಾಗಾಗಿ ಅದೇ ಮಾಸದಲ್ಲಿ ಬರುವ ಏಕಾದಶಿ ಕೂಡ ತುಂಬಾನೇ ವಿಶೇಷವಾಗಿರಲಿದೆ. ಆದ್ದರಿಂದ ಈ ದಿನ ವಿಷ್ಣುವಿಗೆ ಪೂಜೆ ಮಾಡಿದರೆ ಹೆಚ್ಚಿನ ಫಲ ಸಿಗಲಿದೆ. ಭಕ್ತರು ಏನಾದರೂ ಸಂಕಲ್ಪ ತೆಗೆದುಕೊಂಡು ಈ ಏಕಾದಶಿ ಆಚರಣೆ ಮಾಡಿದರೆ ಆ ಸಂಕಲ್ಪ ನೆರವೇರುವುದು.
ವರೂಧಿನಿ ಏಕಾದಶಿ ದಿನಾಂಕ ಮತ್ತು ಸಮಯ
ಏಕಾದಶಿ ತಿಥಿ ಪ್ರಾರಂಭ: ಮೇ 3 ರಾತ್ರಿ 11:24ಕ್ಕೆ
ಏಕಾದಶಿ ತಿಥಿ ಮುಕ್ತಾಯ: ಮೇ 4 ರಾತ್ರಿ 08: 38ರವರೆಗೆ
ಪಾರಣ ಸಮಯ: ಮೇ 5 ಬೆಳಗ್ಗೆ 05:15ರಿಂದ 07:51ರವರೆಗೆ
ವರೂಧಿನಿ ಏಕಾದಶಿ ಪೂಜೆ
ಈ ದಿನ ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಬಂದು ದೇವರ ಕೋಣೆ ಶುದ್ಧ ಮಾಡಿ ಶ್ರೀ ವಿಷ್ಣು ಮೂರ್ತಿ ಅಥವಾ ಫೋಟೋವನ್ನು ಸ್ವಚ್ಛಗೊಳಿಸಿ ಹಳದಿ ಹೂವುಗಳಿಂದ ಅಲಂಕರಿಸಿ, ನಂತರ ಹಳದಿ ಬಣ್ಣದ ಹಣ್ಣುಗಳ ಜೊತೆಗೆ ಇತರ ಹಣ್ಣುಗಳನ್ನೂ ಅರ್ಪಿಸಬಹುದು, ನಂತರ ಶ್ರೀ ವಿಷ್ಣುವಿನ ಮಂತ್ರ ಪಠಣೆ ಮಾಡುತ್ತಾ ಶ್ರೀ ವಿಷ್ಣುವನ್ನು ಪೂಜಿಸಿ ಬಳಿಕ ತುಳಸಿ ಹಾಕಿದ ನೈವೇದ್ಯ ಅರ್ಪಿಸಿ, ಮಂಗಳಾರತಿ ಬೆಳಗಿ.
ಪದ್ಮ ಪುರಾಣದ ಪ್ರಕಾರ ವ್ಯಕ್ತಿಯು ಉಪವಾಸವಿದ್ದು ಈ ಏಕಾದಶಿ ಆಚರಣೆ ಮಾಡುವುದರಿಂದ ಅವನಿಗೆ ವೈಕುಂಠದಲ್ಲಿ ಸ್ಥಾನ ಸಿಗುವುದು. ಈ ಏಕಾದಶಿ ಆಚರಣೆ ಮಾಡುವುದರಿಂದ ತಪಸ್ಸು ಮಾಡಿದ ಪುಣ್ಯ ಸಿಗಲಿದೆ ಎಂದು ಹೇಳಲಾಗುವುದು. ಬಡತನ, ಆರೋಗ್ಯ ಸಮಸ್ಯೆ ಎಲ್ಲಾ ಕಷ್ಟಗಳು ದೂರಾಗುವುದು.
ವಿಷ್ಣು ಮಂತ್ರಗಳು:
ವಿಷ್ಣು ಮೂಲ ಮಂತ್ರ:
ಓಂ ನಮೋ ನಾರಾಯಣಾಯ
ಓಂ ನಮೋ ಭಗವತೇ ವಾಸುದೇವಾಯ
ವಿಷ್ಣು ಗಾಯತ್ರಿ ಮಂತ್ರ
ಓಂ ನಾರಾಯಣಯೇ ವಿದ್ಮಹೇ ವಾಸುದೇವಾಯ ಧೀಮಹಿ ತನ್ನೋ ವಿಷ್ಣು ಪ್ರಚೋದಯಾತ್
ಮುಕ್ತಿ ಮಂತ್ರ:
ಓಂ ಭಗವತೇ ವಾಸುದೇವಾಯ ನಮಃ
ವಿಷ್ಣು ಶಾಂತಾಕಾರಂ ಮಂತ್ರ:
ಶಾಂತಾಕಾರಂ ಭುಜಗಶಯನಂ ಪದ್ಮನಾಭಂ ಸುರೇಶಂ ವಿಶ್ವಧಾರಂ ಗಗನಸದ್ರಿಶಂ,
ಮೇಘವರ್ಣಂ ಶುಭಾಂಗಂ ಲಕ್ಷ್ಮಿಂಕಾತಂ ಕಮಲಾನಯನಂ,
ಯೋಗಿಭಿರ್ಧ್ಯಾನಗಮ್ಯಂ ವಂದೇ ವಿಷ್ಣುಂ ಭವಭಯಹರಂ, ಸರ್ವಲೋಕೈಕನಾಥಂ
ಶ್ರೀ ವಿಷ್ಣು ಮಂತ್ರ:
ತ್ವಮೇವ ಮಾತಾ ಚ ಪಿತಾ ತ್ವಮೇವ ತ್ವಮೇವ ಬಂಧುಶ್ ಚ ಸಖಾ ತ್ವಮೇವ ತ್ವಮೇವ ವಿದ್ಯಾ ದ್ರವಿಣಂ ತ್ವಮೇವ ತ್ವಮೇವ ಸರ್ವಂ ಮಮ ದೇವದೇವ
ಪೌರಾಣಿಕ ಕತೆ
ಹಿಂದಿನ ಕಾಲದಲ್ಲಿ ಮಾಂಧಾತ ಎಂಬ ತಪಸ್ವಿ ರಾಜನು ನರ್ಮದಾ ನದಿಯ ದಡದಲ್ಲಿ ತಪಸ್ಸು ಮಾಡುತ್ತಿದ್ದಾಗ ಕಾಡು ಕರಡಿಯೊಂದು ಅಲ್ಲಿಗೆ ಬಂದು ರಾಜನ ಕಾಲನ್ನು ಕಚ್ಚಲಾರಂಭಿಸಿತು. ಆದರೆ ರಾಜನು ತಪಸ್ಸಿನಲ್ಲಿ ಮಗ್ನನಾಗಿದ್ದನು. ಕರಡಿ ರಾಜನನ್ನು ಕಾಡಿಗೆ ಎಳೆದುಕೊಂಡು ಹೋಯ್ತು ರಾಜ ಕಣ್ಣು ಬಿಟ್ಟಾಗ ಕರಡಿ, ಭಯಗೊಂಡ ರಾಜ ಶ್ರೀ ವಿಷ್ಣುವನ್ನು ಪ್ರಾರ್ಥಿಸಿದನು. ಅವನ ಕರೆಯನ್ನು ಕೇಳಿದ ಭಗವಂತ ಕರಡಿಯಿಂದ ರಾಜನ ಪ್ರಾಣ ರಕ್ಷಣೆ ಮಾಡುತ್ತಾನೆ, ಆದರೆ ಅಷ್ಟರಲ್ಲಿಯೇ ಕರಡಿ ರಾಜನ ಕಾಲು ತುಂಡರಿಸಿತ್ತು. ಆಗ ವಿಷ್ಣು ವರೂಧಿನಿ ವ್ರತದ ಬಗ್ಗೆ ಹೇಳುತ್ತಾನೆ. ರಾಜನು ಅದರಂತೆ ವರಾಹ ಮೂರ್ತಿಯನ್ನು ಪೂಜಿಸಿದನು. ಆ ರಾಜನ ಕಷ್ಟಗಳು ದೂರಾಗುತ್ತದೆ, ಸಾವಿನ ನಂತರ ಸುಂದರ ರೂಪದಲ್ಲಿ ವೈಕುಂಠಕ್ಕೆ ಹೋದಾಗ ಅಲ್ಲಿ ಅವನಿಗೆ ಸ್ವಾಗತ ಸಿಗುತ್ತದೆ.



Click it and Unblock the Notifications