Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಆ.7ಕ್ಕೆ ಕರ್ಕ ರಾಶಿಗೆ ಬಂದ ಶುಕ್ರ: ಶುಕ್ರನ ಹಿಮ್ಮುಖ ಚಲನೆಯಲ್ಲಿ ಈ ಪರಿಹಾರ ಮಾಡಿದರೆ ಒಳ್ಳೆಯದು
ಆಗಸ್ಟ್ 7ಕ್ಕೆ ಶುಕ್ರನು ಕರ್ಕ ರಾಶಿಗೆ ಸಂಚರಿಸಿದೆ. ವೈದಿಕ ಶಾಸ್ತ್ರದ ಪ್ರಕಾರ ಶುಕ್ರನ ಸ್ಥಾನದ ಪ್ರಕಾರ ನಮ್ಮ ಸಂಪತ್ತು, ಐಶ್ವರ್ಯ ಭಾಗ್ಯ ಹೇಗಿರಲಿದೆ ಎಂದು ಹೇಳಲಾಗುವುದು. ಅದೇ ಶುಕ್ರನ ಸ್ಥಾನ ಸರಿಯಿಲ್ಲದಿದ್ದರೆ ಈ ಸಮಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗುವುದು, ವ್ಯವಹಾರದಲ್ಲಿ ಲಾಭ ಗಳಿಸಲು ಕಷ್ಟವಾಗುವುದು.

ಅದರಲ್ಲೂ ಶುಕ್ರ ಹಿಮ್ಮುಖ ಚಲನೆಯಲ್ಲಿದೆ. ಆದ್ದರಿಂದ ಇದು ಸಿಂಹ ರಾಶಿಯಿಂದ ಕರ್ಕ ರಾಶಿಗೆ ಸಂಚರಿಸಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಶುಕ್ರನ ಹಿಮ್ಮುಖ ಚಲನೆ ಕೆಲವು ರಾಶಿಯವರಿಗೆ ಒಳ್ಳೆಯದಲ್ಲ. ಈ ಸಮಯದಲ್ಲಿ ಸಂಬಂಧದಲ್ಲಿ ಕೆಲವು ಸಮಸ್ಯೆಗಳು ಉಂಟಾಗುವುದು. ಅಲ್ಲದೆ ಈ ಸಮಯದಲ್ಲಿ ಹಣದ ಖರ್ಚು ಅಧಿಕವಿರಲಿದೆ. ಇನ್ನು ಈ ಸಮಯದಲ್ಲಿ ಯಾರಿಗಾದರು ಸಾಲ ನೀಡಿದರೆ ಹಣವನ್ನು ಮರಳಿ ಪಡೆಯಲು ಕಷ್ಟವಾಗುವುದು.
ಈ ಸಮಯದಲ್ಲಿ ಈ ಪರಿಹಾರ ಮಾಡಿದರೆ ಒಳ್ಳೆಯದು:
* ಈ ಅವಧಿಯಲ್ಲಿ ಶ್ರೀ ವಿಷ್ಣುವಿನ ಆರಾಧನೆ ಮಾಡಿ.
* ಹಣೆಗೆ ಪ್ರತಿದಿನ ಚಂದನ ಹಚ್ಚಿಕೊಳ್ಳಿ
* ಶಿವನಿಗೆ ಜೇನು ಮತ್ತು ಮೊಸರಿನಿಂದ ಅಭಿಷೇಕ ಮಾಡಿ.
* ಹೊರಗಡೆ ಹೋಗುವ ಮುನ್ನ ಪರ್ಫ್ಯೂಮ್ ಹಾಕಿ.
ಗಾಯತ್ರಿ ಮಂತ್ರ ಪಠಿಸಿ
1. ಗಾಯತ್ರಿ ಮಂತ್ರ ಪಠಿಸುವುದರಿಂದ ಸೂರ್ಯನ ಸ್ಥಾನ ಬಲವಾಗುವುದು ಅಲ್ಲದೆ ಶುಕ್ರನ ಕೆಟ್ಟ ಪ್ರಭಾವವನ್ನು ತಗ್ಗಿಸುತ್ತದೆ.
2. ಮಹಾ ಮೃತ್ಯುಂಜಯ ಮಂತ್ರ ಪಠಿಸಿ: ಈ ಪವರ್ಫುಲ್ ಮಂತ್ರ ಪಠಣೆ ಮಾಡುವುದರಿಂದ ಅನೇಕ ಕೆಟ್ಟ ಪ್ರಭಾವಗಳನ್ನು ತಡೆಗಟ್ಟಬಹುದು, ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ.
3. ಲಕ್ಷ್ಮಿಗೆ ಆರಾಧನೆ ಮಾಡಿ
ಈ ಅವಧಿಯಲ್ಲಿ ಶ್ರೀ ಲಕ್ಷ್ಮಿ ದೇವಾಲಯಕ್ಕೆ ಹೋಗಿ ಪೂಜೆ ಮಾಡಿಸಿದರೆ ಒಳ್ಳೆಯದು.
4. ಶಿವ ಆರಾಧನೆ ಮಾಡಿ: ಸೋಮವಾರ ಶಿವನಿಗೆ ವಿಶೇಷ ಪೂಜೆ ಮಾಡಿಸಿ, ಪ್ರತಿದಿನ 'ಓಂ ನಮಃ ಶಿವಾಯ' ಮಂತ್ರವನ್ನು 108 ಬಾರಿ ಪಠಣೆ ಮಾಡಿ.



Click it and Unblock the Notifications