Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಕರ್ಕಾಟಕ ರಾಶಿಯಲ್ಲಿ ಶುಕ್ರ ಸಂಚಾರ 2023 : ಈ ರಾಶಿಯವರಿಗೆ ಧನ ನಷ್ಟ!
ಕರ್ಕಾಟಕ ರಾಶಿಯಲ್ಲಿ ಶುಕ್ರ ಸಂಚಾರ ಮಾಡುತ್ತಿರೋದ್ರಿಂದ ಕೆಲವೊಂದು ರಾಶಿಯವರಿಗೆ ಈ ಸಂಚಾರದಿಂದ ಸಂಕಷ್ಟಗಳು ಎದುರಾಗಲಿದೆ. ಶುಕ್ರನು ಮೇ 30 ರಂದು ಕರ್ಕಾಟಕ ರಾಶಿಯನ್ನು ಪ್ರವೇಶ ಮಾಡಲಿದ್ದಾನೆ. ಮತ್ತು ಜುಲೈ 7 ರವರೆಗೆ ಅದೇ ರಾಶಿಯಲ್ಲಿ ಇರಲಿದ್ದಾನೆ. ಜೂನ್ ತಿಂಗಳ ಶುಕ್ರ ಸಂಕ್ರಮಣದಿಂದ ಕೆಲವೊಂದು ರಾಶಿಯ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಹಾಗಾದ್ರೆ ಯಾವೆಲ್ಲಾ ರಾಶಿಯವರಿಗೆ ಇದರಿಂದ ತೊಂದರೆ ಆಗಲಿದೆ ಅನ್ನೋದನ್ನು ತಿಳಿಯೋಣ.
ವೃಷಭ ರಾಶಿ
ಕರ್ಕಾಟಕ ರಾಶಿಯಲ್ಲಿ ಶುಕ್ರನು ಸಂಚಾರ ಮಾಡುತ್ತಿರೋದ್ರಿಂದ ವೃಷಭ ರಾಶಿಯವರು ಕೊಂಚ ಜಾಗರೂಕರಾಗಿ ಇರಬೇಕು. ನಿಮ್ಮ ಸ್ನೇಹಿತರಿಂದಾಗಿ ನೀವು ತೊಂದರೆಗೆ ಒಳಗಾಗಬಹುದು. ಪ್ರೀತಿಸಿದವರ ಜೊತೆಯಲ್ಲಿ ಕಲಹ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ನಿಮ್ಮ ಕೆಲವು ಹವ್ಯಾಸಗಳು ನಿಮ್ಮ ಜೇಬು ಖಾಲಿ ಮಾಡಿಬಿಡಬಹುದು. ಆದ್ದರಿಂದ ಯಾವುದೇ ಬೇಡದ ವಿಚಾರದ ಬಗ್ಗೆ ಉತ್ಸುಕರಾಗಿ ಇರಬೇಡಿ.ಇದರಿಂದ ನಿಮಗೆ ನಷ್ಟ ಉಂಟಾಗುತ್ತದೆ.

ಸಿಂಹ ರಾಶಿ
ಕರ್ಕಾಟಕ ರಾಶಿಯಲ್ಲಿ ಶುಕ್ರನು ಸಂಚಾರ ಮಾಡುತ್ತಿರೋದ್ರಿಂದ ಸಿಂಹ ರಾಶಿಯವರಿಗೆ ಈ ಸಮಯದಲ್ಲಿ ಕೆಲವೊಂದು ಸಂಕಷ್ಟಗಳು ಎದುರಾಗಲಿದೆ. ನಿಮ್ಮ ಖರ್ಚುಗಳು ಹೆಚ್ಚಾಗಿ ಜೇಬು ಖಾಲಿಯಾಗುವ ಪರಿಸ್ಥಿತಿ ಬರಬಹುದು. ನಿಮಗೆ ಯಾವುದೇ ಕೆಲಸ ಮಾಡುವುದಕ್ಕೂ ಈ ಸಮಯದಲ್ಲಿ ಆಸಕ್ತಿ ಇರೋದಿಲ್ಲ. ಆರ್ಥಿಕ ಸಂಕಷ್ಟ ಎದುರಾದಿತು. ಕೆಲಸದ ಸ್ಥಳದಲ್ಲಿ ಬಹಳ ಜಾಗರೂಕತೆಯಿಂದ ಇರಬೇಕು. ಈ ಸಮಯದಲ್ಲಿ ಶೀತ ಮತ್ತು ಕಣ್ಣಿಗೆ ಸಂಬಂಧಿಸಿದ ಸಮಸ್ಯೆ ಬರಬಹುದು. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಧನು ರಾಶಿ
ಕರ್ಕಾಟಕ ರಾಶಿಯಲ್ಲಿ ಶುಕ್ರನು ಸಂಚಾರ ಮಾಡುತ್ತಿರೋದ್ರಿಂದ ಧನು ರಾಶಿಯವರು ಈ ಸಮಯದಲ್ಲಿ ಹಣಕಾಸಿನ ವಿಚಾರಗಳಲ್ಲಿ ಜಾಗರೂಕರಾಗಿರಬೇಕು. ಆದಷ್ಟು ಉಳಿತಾಯದ ಬಗ್ಗೆ ಗಮನ ಕೊಡಿ. ಅನೈತಿಕ ಚಟುವಟಿಕೆಗಳಿಂದ ದೂರ ಇದ್ದರೆ ನಿಮಗೆ ಒಳ್ಳೆಯದು. ಈ ಅವಧಿಯಲ್ಲಿ ನಿಮ್ಮ ಕುಟುಂಬದೊಂದಿಗೆ ನೀವು ಜಗಳವಾಡಬಹುದು. ಕೆಲಸದ ಸ್ಥಳದಲ್ಲಿ ಮಹಿಳಾ ಕೆಲಸಗಾರರೊಂದಿಗೆ ಉತ್ತಮವಾಗಿ ನಡೆದುಕೊಳ್ಳಿ. ಉದ್ಯೊಗದ ಸ್ಥಳದಲ್ಲಿ ಜಗಳ ಮಾಡಿಕೊಳ್ಳಬೇಡಿ. ಮೌನವಾಗಿದ್ದಷ್ಟು ಒಳ್ಳೆಯದು. ಕೌಟುಂಬಿಕ ಜೀವನದಲ್ಲಿ ಒತ್ತಡ ಎದುರಾಗಬಹುದು.
ಕುಂಭ ರಾಶಿ
ಕರ್ಕಾಟಕ ರಾಶಿಯಲ್ಲಿ ಶುಕ್ರನು ಸಂಚಾರ ಮಾಡುತ್ತಿರೋದ್ರಿಂದ ಕುಂಭ ರಾಶಿಯವರು ನಿಮ್ಮ ವಿರೋಧಿಗಳಿಂದ ದೂರ ಇರಬೇಕು. ಈ ಸಮಯದಲ್ಲಿ ನಿಮ್ಮ ವಿರೋಧಿಗಳು ತುಂಬಾ ಬಲಶಾಲಿಯಾಗಿರುತ್ತಾರೆ. ನಿಮ್ಮ ವಿರೋಧಿಗಳು ನಿಮಗೆ ತುಂಬಾ ತೊಂದರೆ ಕೊಡಬಹುದು. ನಿಮ್ಮ ಆರೋಗ್ಯದ ಕಾಳಜಿ ವಹಿಸಿ. ಇನ್ನೂ ಹೊಸ ಕೆಲಸ ಮಾಡಬೇಕು ಅಂದುಕೊಂಡಿದ್ದರೆ ಸದ್ಯಕ್ಕೆ ಅಂತಹ ಯೋಚನೆಯಿಂದ ದೂರವಿರಿ. ಇದರಿಂದ ನಿಮಗೆ ಒಳ್ಳೆಯದಾಗೋದಿಲ್ಲ.



Click it and Unblock the Notifications