Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಗ್ಲಾಸ್ನಲ್ಲಿ ಅರಶಿಣ ಹಾಕಿ ವಿಡಿಯೋ ಮಾಡಿದ್ರಾ..! ಜ್ಯೋತಿಷಿ ಮಾತು ಕೇಳಿದ್ರೆ ಶಾಕ್ ಆಗ್ತಿರಾ..!
ಸಾಮಾಜಿಕ ಜಾಲತಾಣದಲ್ಲಿ ನಿತ್ಯ ನೀವು ವಿಡಿಯೋಗಳ ರೀಲ್ಸ್ಗಳ ನೋಡುತ್ತಿರುತ್ತೀರಿ, ಅದ್ರಲ್ಲೂ ಕೆಲವೊಂದು ವಿಡಿಯೋಗಳು ಸಿಕ್ಕಾಪಟ್ಟೆ ವೈರಲ್ ಆಗಿರುತ್ತವೆ. ಹಾಗೆ ಕೆಲವೊಂದು ಟ್ರೆಂಡ್ ಹುಟ್ಟುಹಾಕುತ್ತವೆ. ಅಂದರೆ ಒಬ್ಬರು ಮಾಡಿದ ರೀತಿಯಲ್ಲಿ ಮತ್ತೊಬ್ಬರು ಕೂಡ ವಿಡಿಯೋ ಮಾಡಿ ಪೋಸ್ಟ್ ಮಾಡುವುದಾಗಿದೆ. ಈಗಂತು ಸೋಶಿಯಲ್ ಮೀಡಿಯದಿಂದ ಬದುಕು ಕಟ್ಟಿಕೊಳ್ಳೋದು ಹಾಗೆ ಇದೇ ಸೋಶಿಯಲ್ ಮೀಡಿಯಾ ಜೀವನವನ್ನು ಕೂಡ ಹಾಳು ಮಾಡಬಹದು.
ಇನ್ನು ಈ ಟ್ರೆಂಡ್ ಸೆಟ್ಟಿಂಗ್ ಹಾಗೆ ವೈರಸ್ ಆಗುತ್ತಿರುವ ವಿಡಿಯೋಗಳ ಪೈಕಿ ನಾವೀಗ ನೀರಿಗೆ ಅರಶಿಣ ಪುಡಿ ಹಾಕಿ ಮಾಡುವ ವಿಡಿಯೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಕಳೆದ ವಾರದಿಂದಲೂ ಈ ರೀತಿಯ ವಿಡಿಯೋಗಳನ್ನು ಮಾಡಿ ಆನ್ಲೈನ್ ಹಂಚಿಕೊಳ್ಳುತ್ತಿರುವುದು ನೋಡಬಹುದು. ಒಂದು ಮೊಬೈಲ್ ಇಟ್ಟು ಅದರ ಫ್ಲಾಶ್ ಲೈಟ್ ಆನ್ ಮಾಡಿ ಬಳಿಕ ಅದರ ಮೇಲೆ ಗಾಜಿನ ಗ್ಲಾಸ್ನಲ್ಲಿ ನೀರು ಇಟ್ಟು ಬಳಿಕ ಅದಕ್ಕೆ ಅರಶಿಣ ಪುಡಿಯನ್ನು ಮೇಲಿನಿಂದ ಹಾಕುವ ಟ್ರೆಂಡ್ ಇದಾಗಿದೆ.

ಸದ್ಯ ಎಲ್ಲರೂ ಈ ವಿಡಿಯೋ ಮಾಡಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಂಡಿರುವುದು ಸಹ ನೋಡಬಹುದು. ಆದರೆ ಈ ರೀತಿಯ ವಿಡಿಯೋ ಮಾಡುವವರಿಗೆ ಈಗ ಆಘಾತ ಹುಟ್ಟಿಸುವ ಸುದ್ದಿಯೊಂದು ಹೊರಬಿದ್ದಿದೆ. ಅದ್ರಲ್ಲೂ ಈ ವೈರಲ್ ವಿಡಿಯೋದಿಂದ ಅಪಾಯ ಕುರಿತು ಜ್ಯೋತಿಷಿಯೊಬ್ಬರು ಹೇಳಿರುವುದು ಈಗ ಸುದ್ದಿಯಾಗಿದೆ.
ಜ್ಯೋತಿಷಿ ಅರುಣ್ ಕುಮಾರ್ ವ್ಯಾಸ್ ಎಂಬುವರೊಬ್ಬರು ಈ ಟ್ರೆಂಡ್ ಹಿಂದಿರುವ ಅಪಾಯಕಾರಿ ವಿಚಾರವನ್ನು ಹಂಚಿಕೊಂಡಿದ್ದಾರೆ. ಅದ್ರಲ್ಲೂ ಈ ರೀತಿ ಅರಶಿಣವನ್ನು ಗಾಜಿನ ಗ್ಲಾಸ್ನಲ್ಲಿ ಹಾಕುವುದು ನಕಾರಾತ್ಮಕ ಶಕ್ತಿಯ ಶಕ್ತಿಯ ಆಹ್ವಾನಿಸಲಿದೆಯಂತೆ. ವ್ಯಾಸ್ ಪ್ರಕಾರ ಅರಿಶಿನವನ್ನು ನೀರಿಗೆ ಹಾಕಿ ಕತ್ತಲೆಯಲ್ಲಿ ಬೆಳಕಿನ ಕೆಳಗೆ ಇಡುವ ಪ್ರಕ್ರಿಯೆಯು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುವ ಹಾಗೆ ಸಂಹವನ ನಡೆಸಲು ತಂತ್ರಗಾರಿಕೆ ಮಾಡುವವರು ಅಥವಾ ಮಾಟ ಮಂತ್ರ ಪ್ರವೀಣರು ಬಳಸುವ ಮಾರ್ಗವಂತೆ. ಹೀಗಾಗಿ ಮನೆಯಲ್ಲಿ ಈ ರೀತಿಯಾಗಿ ಅರಶಿಣವನ್ನು ಗಾಜಿನ ಗ್ಲಾಸ್ನಲ್ಲಿ ಹಾಕುವುದು ಅಶುಭ ಎಂದು ಅವರು ಹೇಳಿದ್ದಾರೆ.
ಹಾಗೆ ಈ ಅರಶಿಣವನ್ನು ನೀರಿನಲ್ಲಿ ಹಾಕಿಡುವುದು ಅನಾರೋಗ್ಯ, ಅಶಾಂತಿ, ಭಾವನಾತ್ಮಕ ಸಮಸ್ಯೆ, ಆರ್ಥಿಕ ಅಸ್ಥಿರತೆ, ಒತ್ತಡ, ಆತಂಕ ಹೆಚ್ಚಾಗುವುದಕ್ಕೆ ಇದು ಕಾರಣವಾಗಲಿದೆಯಂತೆ. ಹಾಗೆ ಇದು ವಿಶೇಷವಾಗಿ ಚಂದ್ರ ಮತ್ತು ಗುರು ಬಲದ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದ್ದಾರೆ. ಚಂದ್ರನು ನಿಮ್ಮ ಮನಸ್ಸು ಮತ್ತು ಭಾವನೆಗಳ ಹಿಡಿತ ಸಾಧಿಸಿರುವ ಗ್ರಹವಾಗಿದೆ. ಹಾಗೆ ಗುರು ಬುದ್ಧಿವಂತಿಕೆ, ಅದೃಷ್ಟ, ಆಧ್ಯಾತ್ಮಿಕ ವಿಚಾರಗಳ ಪ್ರತಿನಿಧಿಸಲಿದ್ದಾನೆ. ಹೀಗಾಗಿ ಈ ಅವಕಾಶಗಳಿಗೆ ಅರಶಿಣ ನೀರು ಪ್ರಭಾವ ಬೀರಬಹುದು. ಹಾಗೆ ಅದರಿಂದ ನೀವು ವಂಚಿತರಾಗಬಹುದು.
ಚಂದ್ರ ಹಾಗೂ ಗುರುವಿನ ಮೇಲಿನ ಪ್ರಭಾವವು ನಿಮಗೆ ಅಶಾಂತಿ, ಆತಂಕ, ನಿರ್ಧಾರ ತೆಗೆದುಕೊಳ್ಳುವಾಗ ಗೊಂದಲ, ಮಾನಸಿಕ ಅಸ್ಥಿರತೆ, ಕೆಲಸ ಕಾರ್ಯಗಳಲ್ಲಿ ಅಡಚಣೆ, ಅದ್ರಲ್ಲೂ ಹಣಕಾಸು ವಿಚಾರಗಳಲ್ಲಿ ಅಡ್ಡಿ ಉಂಟಾಗುವುದಕ್ಕೆ ಇದು ಕಾರಣವಾಗಬಹುದು ಎಂದು ಅವರು ಹೇಳಿದ್ದಾರೆ. ಅವರ ಈ ಮಾತುಗಳು ಕೂಡ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಇನ್ನು ಇತ್ತೀಚಿಗೆ ಆನ್ಲೈನ್ನಲ್ಲಿ ಕಾಣಸಿಗುವ ಹಲವು ರೀತಿಯ ವಿಚಾರಗಳನ್ನು ಎಲ್ಲರು ಫಾಲೋ ಮಾಡುತ್ತಾರೆ. ಅದರಿಂದ ಮುಂದೆ ಆಗಬಹುದಾದ ಅಪಾಯಗಳ ಅರಿವಿಲ್ಲದೆ ಅದನ್ನೇ ಅನುಸರಿಸುವ ಮಂದಿಯನ್ನು ನೋಡಬಹುದು. ಸದ್ಯ ಈಗ ಈ ಅರಶಿಣ ನೀರಿನ ಟ್ರೆಂಡ್ ಎಲ್ಲಾ ಕಡೆ ಸುದ್ದಿ ಮಾಡುತ್ತಿದೆ. ಆದ್ರೆ ಅದರಿಂದಾ ಹಲವು ರೀತಿಯ ಸಮಸ್ಯೆಗಳ ಕೂಡ ಎದುರಿಸಬೇಕಾಗುತ್ತದೆ ಎಂಬುದನ್ನು ಯಾರು ಕೂಡ ತಿಳಿದಂತಿಲ್ಲ.



Click it and Unblock the Notifications


