Latest Updates
-
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು?
ಉತ್ತರ ಪ್ರದೇಶದಲ್ಲಿ ನಾಡಿಗೆ ಬಂದ ಈ ದೈತ್ಯ ಮೊಸಳೆಯ ವೀಡಿಯೋ ವೈರಲ್
ಉತ್ತರ ಪ್ರದೇಶದಲ್ಲಿ ದೊಡ್ಡದೊಂದು ಮೊಸಳೆ ಬೇಲಿ ಹಾರಲು ಪ್ರಯತ್ನಿಸುತ್ತಿರುವ ವೀಡಿಯೋ ವೈರಲ್ ಆಗಿದೆ. ಅಷ್ಟೊಂದು ದೊಡ್ಡ ಮೊಸಳೆ ಅದೂ ರಸ್ತೆಯಲ್ಲಿ ನೋಡಿದ ಜನರು ಭಯಭೀತರಾಗಿದ್ದಾರೆ, ಈ ವೀಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗುತ್ತಿದೆ.
ಈ ವೀಡಿಯೋ ಶೇರ್ ಮಾಡಿ ಉತ್ತರ ಪ್ರದೇಶದ ಬುಲೇಂದರ್ಶರ್ ಜಿಲ್ಲೆಗೆ ಈ ಮೊಸಳೆ ಗಂಗಾ ಕಾಲುವೆಯಿಂದ ಬಂದಿದೆ. ಅಲ್ಲಿಗೆ ಬಂದ ಅರಣ್ಯಾಧಿಕಾರಿಗಳು ಆ ಮೊಸಳೆ ರಕ್ಷಣೆ ಮಾಡಿ ನದಿಗೆ ಬಿಟ್ಟಿದ್ದಾರೆ.

ತುಂಬಾ ಜನರು ಈ ಮೊಸಳ ಬಂದಿರುವ ವೀಡಿಯೋ ಮಾಡಿದ್ದು ಇದೀಗ ಈ ವೀಡಿಯೋಗಳು ವೈರಲ್ ಆಗಿವೆ, ಈ ಮೊಸಳೆ ಸುಮಾರು 10 ಅಡಿ ಉದ್ದವಿದೆ.
ಇದನ್ನು ಹೇಗೆ ರಕ್ಷಣೆ ಮಾಡಲಾಯ್ತು?
ಮೊಸಳೆಯ ಬಾಯಿ ಭಾಗವನ್ನು ಬಟ್ಟೆಯಿಂದ ಮುಚ್ಚಿ, ಅದನ್ನು ಅಲುಗಾಡದಂತೆ ಹಗ್ಗದಿಂದ ಕಟ್ಟಿ ಹಿಡಿದು ಅದನ್ನು ಕೊಂಡೊಯ್ಯಲಾಯ್ತು. ಸ್ವಲ್ಪ ಹೆಚ್ಚು ಕಮ್ಮಿಯಾದರೂ ಅನಾಹುತ ಉಂಟಾಗಬಹುದು, ಅದ್ದರಿಂದ ಅತಿ ಜಾಗ್ರತೆಯಿಂದ ಮೊಸಳೆಯನ್ನು ಕಟ್ಟಿ ಕೊಂಡೊಯ್ಯೊದ್ದು ನಂತರ ಹಗ್ಗ ಬಿಚ್ಚಿ ನೀರಿಗೆ ಬಿಡಲಾಯ್ತು.
ಮೊಸಳೆ ಈ ರೀತಿ ಆಗಾಗ ನೀರಿನಿಂದ ನಾಡಿಗೆ ಬಂದಿರುವ ಅನೇಕ ಘಟನೆಗಳಿವೆ. ನದಿಯಲ್ಲಿ ನೀರಿನಂಶ ಹೆಚ್ಚಾದಾಗ ನೀರು ಉಕ್ಕಿ ಹರಿಯಲಾರಂಭಿಸಿದಾಗ ಕೂಡ ಮೊಸಳೆ ನೀರಿನಿಂದ ಹೊರ ಬರುತ್ತದೆ. ಈ ಮೊಸಳೆ ನೀರಿನಲ್ಲಿ ಉಷ್ಣಾಂಶ ಹೆಚ್ಚಾಗಿರುವುದರಿಂದ ಹೊರ ಬಂದಿದೆ ಎಂದು ಹೇಳಲಾಗುವುದು.
ಅಷ್ಟು ದೊಡ್ಡ ಮೊಸಳೆಯು ನದಿಯಿಂದ ಹೊರಬಂದು ಅಲ್ಲಿರುವ ಕಬ್ಬಿಣದ ಬೇಲಿ ಹತ್ತಲು ಹೊರಟಂತೆ ಕಾಣುತ್ತದೆ. ಈ ಮೊಸಳೆಗೆ ನೀರಿನಿಂದ ಹೊರ ಬಂದ ಮೇಲೆ ಗಲಿಬಿಲಿಯಾಗಿರಬಹುದು, ಇದನ್ನು ಸೇರಿ ನೆರೆದಿರುವ ಜನ, ಎತ್ತ ಹೋಗಬೇಕು ಅಂತ ಗೊತ್ತಾಗುವುದಿಲ್ಲ, ಹಾಗಾಗಿ ರೇಲಿಂಗ್ ಹತ್ತಲು ನೋಡಿದೆ.
ಬುಲಂದ್ಶಹರ್ನ ನರೋರಾ ಗಂಗಾ ಕಾಲುವೆ ಬಳಿ ಹಾದುಹೋಗುವ ಕಾಲುವೆಯಲ್ಲಿ ಈ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸಾಕಷ್ಟು ಪ್ರಯತ್ನದ ನಂತರ ಮೊಸಳೆಯನ್ನು ರಕ್ಷಿಣೆ ಮಾಡಲಾಗಿದೆ, ಈ ರಕ್ಷಣೆ ಕಾರ್ಯಾಚರಣೆಯಲ್ಲಿ ಯಾವುದೇ ಜನರಿಗೆ ತೊಂದರೆಯಾಗಿಲ್ಲ, ಆಸ್ತಿಪಾಸ್ತಿ ನಷ್ಟ ಉಂಟಾಗಿಲ್ಲ.



Click it and Unblock the Notifications
