Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಉತ್ತರ ಪ್ರದೇಶದಲ್ಲಿ ನಾಡಿಗೆ ಬಂದ ಈ ದೈತ್ಯ ಮೊಸಳೆಯ ವೀಡಿಯೋ ವೈರಲ್
ಉತ್ತರ ಪ್ರದೇಶದಲ್ಲಿ ದೊಡ್ಡದೊಂದು ಮೊಸಳೆ ಬೇಲಿ ಹಾರಲು ಪ್ರಯತ್ನಿಸುತ್ತಿರುವ ವೀಡಿಯೋ ವೈರಲ್ ಆಗಿದೆ. ಅಷ್ಟೊಂದು ದೊಡ್ಡ ಮೊಸಳೆ ಅದೂ ರಸ್ತೆಯಲ್ಲಿ ನೋಡಿದ ಜನರು ಭಯಭೀತರಾಗಿದ್ದಾರೆ, ಈ ವೀಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗುತ್ತಿದೆ.
ಈ ವೀಡಿಯೋ ಶೇರ್ ಮಾಡಿ ಉತ್ತರ ಪ್ರದೇಶದ ಬುಲೇಂದರ್ಶರ್ ಜಿಲ್ಲೆಗೆ ಈ ಮೊಸಳೆ ಗಂಗಾ ಕಾಲುವೆಯಿಂದ ಬಂದಿದೆ. ಅಲ್ಲಿಗೆ ಬಂದ ಅರಣ್ಯಾಧಿಕಾರಿಗಳು ಆ ಮೊಸಳೆ ರಕ್ಷಣೆ ಮಾಡಿ ನದಿಗೆ ಬಿಟ್ಟಿದ್ದಾರೆ.

ತುಂಬಾ ಜನರು ಈ ಮೊಸಳ ಬಂದಿರುವ ವೀಡಿಯೋ ಮಾಡಿದ್ದು ಇದೀಗ ಈ ವೀಡಿಯೋಗಳು ವೈರಲ್ ಆಗಿವೆ, ಈ ಮೊಸಳೆ ಸುಮಾರು 10 ಅಡಿ ಉದ್ದವಿದೆ.
ಇದನ್ನು ಹೇಗೆ ರಕ್ಷಣೆ ಮಾಡಲಾಯ್ತು?
ಮೊಸಳೆಯ ಬಾಯಿ ಭಾಗವನ್ನು ಬಟ್ಟೆಯಿಂದ ಮುಚ್ಚಿ, ಅದನ್ನು ಅಲುಗಾಡದಂತೆ ಹಗ್ಗದಿಂದ ಕಟ್ಟಿ ಹಿಡಿದು ಅದನ್ನು ಕೊಂಡೊಯ್ಯಲಾಯ್ತು. ಸ್ವಲ್ಪ ಹೆಚ್ಚು ಕಮ್ಮಿಯಾದರೂ ಅನಾಹುತ ಉಂಟಾಗಬಹುದು, ಅದ್ದರಿಂದ ಅತಿ ಜಾಗ್ರತೆಯಿಂದ ಮೊಸಳೆಯನ್ನು ಕಟ್ಟಿ ಕೊಂಡೊಯ್ಯೊದ್ದು ನಂತರ ಹಗ್ಗ ಬಿಚ್ಚಿ ನೀರಿಗೆ ಬಿಡಲಾಯ್ತು.
ಮೊಸಳೆ ಈ ರೀತಿ ಆಗಾಗ ನೀರಿನಿಂದ ನಾಡಿಗೆ ಬಂದಿರುವ ಅನೇಕ ಘಟನೆಗಳಿವೆ. ನದಿಯಲ್ಲಿ ನೀರಿನಂಶ ಹೆಚ್ಚಾದಾಗ ನೀರು ಉಕ್ಕಿ ಹರಿಯಲಾರಂಭಿಸಿದಾಗ ಕೂಡ ಮೊಸಳೆ ನೀರಿನಿಂದ ಹೊರ ಬರುತ್ತದೆ. ಈ ಮೊಸಳೆ ನೀರಿನಲ್ಲಿ ಉಷ್ಣಾಂಶ ಹೆಚ್ಚಾಗಿರುವುದರಿಂದ ಹೊರ ಬಂದಿದೆ ಎಂದು ಹೇಳಲಾಗುವುದು.
ಅಷ್ಟು ದೊಡ್ಡ ಮೊಸಳೆಯು ನದಿಯಿಂದ ಹೊರಬಂದು ಅಲ್ಲಿರುವ ಕಬ್ಬಿಣದ ಬೇಲಿ ಹತ್ತಲು ಹೊರಟಂತೆ ಕಾಣುತ್ತದೆ. ಈ ಮೊಸಳೆಗೆ ನೀರಿನಿಂದ ಹೊರ ಬಂದ ಮೇಲೆ ಗಲಿಬಿಲಿಯಾಗಿರಬಹುದು, ಇದನ್ನು ಸೇರಿ ನೆರೆದಿರುವ ಜನ, ಎತ್ತ ಹೋಗಬೇಕು ಅಂತ ಗೊತ್ತಾಗುವುದಿಲ್ಲ, ಹಾಗಾಗಿ ರೇಲಿಂಗ್ ಹತ್ತಲು ನೋಡಿದೆ.
ಬುಲಂದ್ಶಹರ್ನ ನರೋರಾ ಗಂಗಾ ಕಾಲುವೆ ಬಳಿ ಹಾದುಹೋಗುವ ಕಾಲುವೆಯಲ್ಲಿ ಈ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸಾಕಷ್ಟು ಪ್ರಯತ್ನದ ನಂತರ ಮೊಸಳೆಯನ್ನು ರಕ್ಷಿಣೆ ಮಾಡಲಾಗಿದೆ, ಈ ರಕ್ಷಣೆ ಕಾರ್ಯಾಚರಣೆಯಲ್ಲಿ ಯಾವುದೇ ಜನರಿಗೆ ತೊಂದರೆಯಾಗಿಲ್ಲ, ಆಸ್ತಿಪಾಸ್ತಿ ನಷ್ಟ ಉಂಟಾಗಿಲ್ಲ.



Click it and Unblock the Notifications












