Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಉತ್ತರ ಪ್ರದೇಶದಲ್ಲಿ ನಾಡಿಗೆ ಬಂದ ಈ ದೈತ್ಯ ಮೊಸಳೆಯ ವೀಡಿಯೋ ವೈರಲ್
ಉತ್ತರ ಪ್ರದೇಶದಲ್ಲಿ ದೊಡ್ಡದೊಂದು ಮೊಸಳೆ ಬೇಲಿ ಹಾರಲು ಪ್ರಯತ್ನಿಸುತ್ತಿರುವ ವೀಡಿಯೋ ವೈರಲ್ ಆಗಿದೆ. ಅಷ್ಟೊಂದು ದೊಡ್ಡ ಮೊಸಳೆ ಅದೂ ರಸ್ತೆಯಲ್ಲಿ ನೋಡಿದ ಜನರು ಭಯಭೀತರಾಗಿದ್ದಾರೆ, ಈ ವೀಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗುತ್ತಿದೆ.
ಈ ವೀಡಿಯೋ ಶೇರ್ ಮಾಡಿ ಉತ್ತರ ಪ್ರದೇಶದ ಬುಲೇಂದರ್ಶರ್ ಜಿಲ್ಲೆಗೆ ಈ ಮೊಸಳೆ ಗಂಗಾ ಕಾಲುವೆಯಿಂದ ಬಂದಿದೆ. ಅಲ್ಲಿಗೆ ಬಂದ ಅರಣ್ಯಾಧಿಕಾರಿಗಳು ಆ ಮೊಸಳೆ ರಕ್ಷಣೆ ಮಾಡಿ ನದಿಗೆ ಬಿಟ್ಟಿದ್ದಾರೆ.

ತುಂಬಾ ಜನರು ಈ ಮೊಸಳ ಬಂದಿರುವ ವೀಡಿಯೋ ಮಾಡಿದ್ದು ಇದೀಗ ಈ ವೀಡಿಯೋಗಳು ವೈರಲ್ ಆಗಿವೆ, ಈ ಮೊಸಳೆ ಸುಮಾರು 10 ಅಡಿ ಉದ್ದವಿದೆ.
ಇದನ್ನು ಹೇಗೆ ರಕ್ಷಣೆ ಮಾಡಲಾಯ್ತು?
ಮೊಸಳೆಯ ಬಾಯಿ ಭಾಗವನ್ನು ಬಟ್ಟೆಯಿಂದ ಮುಚ್ಚಿ, ಅದನ್ನು ಅಲುಗಾಡದಂತೆ ಹಗ್ಗದಿಂದ ಕಟ್ಟಿ ಹಿಡಿದು ಅದನ್ನು ಕೊಂಡೊಯ್ಯಲಾಯ್ತು. ಸ್ವಲ್ಪ ಹೆಚ್ಚು ಕಮ್ಮಿಯಾದರೂ ಅನಾಹುತ ಉಂಟಾಗಬಹುದು, ಅದ್ದರಿಂದ ಅತಿ ಜಾಗ್ರತೆಯಿಂದ ಮೊಸಳೆಯನ್ನು ಕಟ್ಟಿ ಕೊಂಡೊಯ್ಯೊದ್ದು ನಂತರ ಹಗ್ಗ ಬಿಚ್ಚಿ ನೀರಿಗೆ ಬಿಡಲಾಯ್ತು.
ಮೊಸಳೆ ಈ ರೀತಿ ಆಗಾಗ ನೀರಿನಿಂದ ನಾಡಿಗೆ ಬಂದಿರುವ ಅನೇಕ ಘಟನೆಗಳಿವೆ. ನದಿಯಲ್ಲಿ ನೀರಿನಂಶ ಹೆಚ್ಚಾದಾಗ ನೀರು ಉಕ್ಕಿ ಹರಿಯಲಾರಂಭಿಸಿದಾಗ ಕೂಡ ಮೊಸಳೆ ನೀರಿನಿಂದ ಹೊರ ಬರುತ್ತದೆ. ಈ ಮೊಸಳೆ ನೀರಿನಲ್ಲಿ ಉಷ್ಣಾಂಶ ಹೆಚ್ಚಾಗಿರುವುದರಿಂದ ಹೊರ ಬಂದಿದೆ ಎಂದು ಹೇಳಲಾಗುವುದು.
ಅಷ್ಟು ದೊಡ್ಡ ಮೊಸಳೆಯು ನದಿಯಿಂದ ಹೊರಬಂದು ಅಲ್ಲಿರುವ ಕಬ್ಬಿಣದ ಬೇಲಿ ಹತ್ತಲು ಹೊರಟಂತೆ ಕಾಣುತ್ತದೆ. ಈ ಮೊಸಳೆಗೆ ನೀರಿನಿಂದ ಹೊರ ಬಂದ ಮೇಲೆ ಗಲಿಬಿಲಿಯಾಗಿರಬಹುದು, ಇದನ್ನು ಸೇರಿ ನೆರೆದಿರುವ ಜನ, ಎತ್ತ ಹೋಗಬೇಕು ಅಂತ ಗೊತ್ತಾಗುವುದಿಲ್ಲ, ಹಾಗಾಗಿ ರೇಲಿಂಗ್ ಹತ್ತಲು ನೋಡಿದೆ.
ಬುಲಂದ್ಶಹರ್ನ ನರೋರಾ ಗಂಗಾ ಕಾಲುವೆ ಬಳಿ ಹಾದುಹೋಗುವ ಕಾಲುವೆಯಲ್ಲಿ ಈ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸಾಕಷ್ಟು ಪ್ರಯತ್ನದ ನಂತರ ಮೊಸಳೆಯನ್ನು ರಕ್ಷಿಣೆ ಮಾಡಲಾಗಿದೆ, ಈ ರಕ್ಷಣೆ ಕಾರ್ಯಾಚರಣೆಯಲ್ಲಿ ಯಾವುದೇ ಜನರಿಗೆ ತೊಂದರೆಯಾಗಿಲ್ಲ, ಆಸ್ತಿಪಾಸ್ತಿ ನಷ್ಟ ಉಂಟಾಗಿಲ್ಲ.



Click it and Unblock the Notifications












