Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಈ ಅಜ್ಜಿಯಷ್ಟು ಸ್ವಾಭಿಮಾನಿ ಬೇರೆ ಯಾರಾದ್ರು ಇದ್ದಾರಾ.? ಹಣ ಬೇಡವೆಂದ ವೃದ್ಧೆ ವಿಡಿಯೋ ವೈರಲ್
ಈಗಿನ ಕಾಲ ಹೇಗಿದೆ ಅಂದ್ರೆ ಒಂದು ರೂಪಾಯಿ ಸಿಕ್ಕರೂ ಸಾಕು ಎಂದು ಸಿಕ್ಕ ಸಿಕ್ಕಲೆಲ್ಲ ಹಣ ಮಾಡೋ ದಾರಿ ಹುಡುತ್ತಿರುತ್ತಾರೆ. ಮತ್ತೆ ಕೆಲವರು ಕೈ ಕಾಲು ಗಿಟ್ಟಿಯಾಗಿದ್ದರು ದುಡಿದು ತಿನ್ನುವ ಬದಲು ಲೂಟಿ, ಕಳ್ಳತನ, ಮೋಸ ಹೀಗೆ ಅನ್ಯ ಮಾರ್ಗ ಅನುಸರಿಸುತ್ತಾತೆ. ಇನ್ನೂ ಕೆಲವರು ಕೈ ಕಾಲು ಇದ್ದರೂ ಭಿಕ್ಷೆ ಬೇಡಿಯೇ ಆ ದಿನ ಹಣ ಮಾಡಿ ಊಟ ತಿಂಡಿ ಮಾಡುವವರನ್ನು ನಾವು ನೋಡಿರುತ್ತೇವೆ.
ಇತ್ತ ಹಣಕ್ಕಾಗಿ ಜನ ಈಗ ಎಂತಹ ಕೆಟ್ಟ ಕಲಸಕ್ಕೂ ಕೈ ಹಾಕುತ್ತಾರೆ. ದಿನದ ಅಂತ್ಯದಲ್ಲಿ ಹಣ ಸಿಕ್ಕರೆ ಸಾಕು ಎಂದು ಬದುಕುವವರು ಸಹ ಇದ್ದಾರೆ. ಆದರೆ ಯಾವ ಮಾರ್ಗದಲ್ಲಿ ನಾವು ಹಣ ಮಾಡುತ್ತೇವೆ ಎಂಬುದು ಮುಖ್ಯವಾಗುತ್ತೆ. ನಾವು ಮೋಸದಿಂದಲೋ, ಯಾರ ಹೊಟ್ಟೆ ಪಾಡಿನ ಮೇಲೋ ಹೊಡೆದು ಹಣ ಮಾಡಿದರೆ ಅದರ ಫಲ ಸಿಗೋದು ಕಷ್ಟ.

ಇನ್ನು ಅದೆಷ್ಟೋ ಜನ ಬೀದಿ ಬದಿಯಲ್ಲಿ ಹಣಕ್ಕಾಗಿ ಏನೆಲ್ಲಾ ಕಸರತ್ತು ಮಾಡುತ್ತಾರೆ ಅನ್ನೋದು ಸಹ ನೋಡಿದ್ದೇವೆ. ಒಂದೊಂದು ರೂಪಾಯಿಗೂ ಒದ್ದಾಡುತ್ತಾರೆ. ಟೀ ಮಾರುತ್ತಾರೆ, ಹೂವು ಮಾರುತ್ತಾರೆ, ಹತ್ತಾರು ಕಸುಬು ಮಾಡಿ ಹಣ ಗಳಿಸುತ್ತಾರೆ. ಇನ್ನು ವಯಸ್ಸಾದವರು ದೇವಾಲಯ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣದಲ್ಲಿ ಭಿಕ್ಷೆ ಬೇಡುವುದನ್ನು ನಾವು ನೋಡಿದ್ದೇವೆ.
ಅವರಿಗೆ ಇದನ್ನು ಬಿಟ್ಟು ಬೇರೆ ಏನು ಮಾಡಲಾಗುವುದಿಲ್ಲ. ಮನೆ ಸಮಸ್ಯೆಯಿಂದಲೋ ಮಕ್ಕಳ ಕಾಟದಿಂದಲೋ ಅವರು ಬೀದಿ ಪಾಲಾಗಿರುತ್ತಾರೆ. ಇಂತಹ ನೂರಾರು ಘಟನೆಗಳ ನಡುವೆ ಕೆಲವೊಂದು ನಮ್ಮ ಗಮನ ಸೆಳೆಯುತ್ತವೆ. ಇದೇ ರೀತಿ ಇಲ್ಲೊಂದು ವಿಡಿಯೋ ಈಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಅಜ್ಜಿಯೊಬ್ಬರ ಸ್ವಾಭಿಮಾನ ಕಂಡು ಜನರು ದಂಗಾಗಿದ್ದಾರೆ.
ವೈರಲ್ ಆಗಿರುವ ವಿಡಿಯೋದಲ್ಲಿ ಹಣ್ಣಣ್ಣು ಮದುಕಿಯೊಬ್ಬರು ಯುವಕನಿಂದ ಹಣ ಪಡೆಯದೇ ಸ್ವಾಭಿಮಾನ ಮೆರೆದಿರುವುದು ನೋಡಿ ಜನರ ಕಣ್ಣಂಚಲಿ ನೀರು ತುಂಬಿಕೊಂಡಿದೆ. ನಡೆಯಲಾಗದ ಅಜ್ಜಿಯೊಬ್ಬರು ಯುವಕನಿಂದ ನನಗೆ ಹಣ ಬೇಡಪ್ಪ ಎಂದು ಆತನಿಗೆ ಆರ್ಶೀವಾದ ಮಾಡಿ ಹರಸಿ ಅಲ್ಲಿಂದ ತೆರಳಿದ್ದು, ನೋಡುಗರ ಕಣ್ಣಾಲಿ ತುಂಬಿ ಬಂದಿದೆ.
ವಿಡಿಯೋದಲ್ಲಿ ಏನಿದೆ?
ಅರುಣ್ 12 (arunnn_12) ಎಂಬ ಇನ್ಸ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಅಷ್ಟಕ್ಕೂ ಈ ವಿಡಿಯೋದಲ್ಲಿ ವೃದ್ಧೆಯೊಬ್ಬಳನ್ನು ಕಂಡ ಯುವಕ ಆಕೆಯನ್ನು ತಡೆದು ನಿಲ್ಲಿಸಿ ಮಾತನಾಡಿಸಲು ಮುಂದಾಗಿರುವುದು ನೋಡಬಹುದು. ಆಕೆಯ ಕುಶಲೋಪರಿ ವಿಚಾರಿಸಿದ ಯುವಕನ ಕಡೆಗೆ ವೃದ್ಧೆ ವಿಶೇಷ ಗೌರವ ಇರುವಂತೆ ಪ್ರತಿಕ್ರಿಯಿಸಿದ್ದಾಳೆ.
ಆಕೆಯ ಜೊತೆ ಮಾತನಾಡುತ್ತಾ ಯುವಕ ಹಣ ಬೇಕಾ ಎಂದು ಪ್ರಶ್ನಿಸಿದ್ದಾನೆ, ಆದರೆ ಆಕೆ ಖಡಾ ಖಂಡಿತವಾಗಿ ಬೇಡವೆಂದು ನಿರಾಕರಿಸಿದ್ದಾಳೆ. ಯುವಕ ಎಷ್ಟು ಒತ್ತಾಯ ಮಾಡಿದರೂ ಸಹ ಆಕೆ ಹಣ ತೆಗೆದುಕೊಳ್ಳಲು ನಿರಾಕರಿಸಿದ್ದಾಳೆ. ಹಣ ಎಂದರೆ ಬಾಯಿ ಬಿಡುವ ಈ ಯುಗದಲ್ಲೂ ಈ ರೀತಿ ಹಣ ನಿರಾಕರಿಸಿ ಯುವಕನಿಗೆ ಆಶೀರ್ವಾದ ಮಾಡಿ ತೆರಳಿದ ವೃದ್ಧೆ ಕಂಡು ಜನರಿಗೆ ಅಚ್ಚರಿಯಾಗಿದೆ.
ಈ ವಿಡಿಯೋ ಪೋಸ್ಟ್ ಮಾಡಿದ್ದ ಬಳಿಕ ಬರೋಬ್ಬರಿ 5 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ. ವಿಡಿಯೋ ನೋಡಿ ಸಾವಿರಾರು ಮಂದಿ ಕಮೆಂಟ್ ಮಾಡಿದ್ದಾರೆ. ಕೆಲವರು ಈ ಅಜ್ಜಿಯ ಸ್ವಾಭಿಮಾನಕ್ಕೆ ಸಲಾಮ್ ಎಂದಿದ್ದಾರೆ. ಮತ್ತೆ ಕೆಲವರು ಈ ಅಜ್ಜಿ ನಿಜವಾಗಿಯೂ ಅಚ್ಚರಿ... ಈ ಕಾಲದಲ್ಲಿ ಹಣ ಬೇಡವೆಂದು ನಿರಾಕರಿಸುತ್ತಾರಾ? ಆಕೆಯ ಆರ್ಥಿಕ ಸ್ಥಿತಿ ಚೆನ್ನಾಗಿರದ ನಡುವೆಯೂ ಹಣಕ್ಕೆ ಆಸೆ ಪಡುತ್ತಿಲ್ಲವೆಂದರೆ ಆಕೆ ಜೀವನದ ಎಂತಹ ಘಟ್ಟ, ಕಷ್ಟಗಳ ಪಾರು ಮಾಡಿರಬಹುದು ಎಂದು ಪ್ರಶ್ನೆ ಮಾಡಿದ್ದಾರೆ.



Click it and Unblock the Notifications