Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಕರುವಿನ ಮೇಲೆ ದಾಳಿ ಮಾಡಿದ ಹುಲಿ, ಪುಣ್ಯಕೋಟಿ ಮಾಡಿದ ಕಾರ್ಯನೋಡಿ ಮೂಕ ವಿಸ್ಮಿತರಾದ ನೆಟ್ಟಿಗರು
ಪುಣ್ಯಕೋಟಿ ಕತೆ ನಿಮಗೆಲ್ಲಾ ಗೊತ್ತಿರಬಹುದು. ದುಷ್ಟ ವ್ಯಾಘ್ರನು ಹಸುವನ್ನು ತಿನ್ನಲು ಮುಂದಾದಾಗ ನನ್ನ ಕಂದನು ನನ್ನನ್ನು ಕಾಯುತ್ತಾ ಹಟ್ಟಿಯಲ್ಲಿದೆ, ಅದಕ್ಕೆ ಹಾಲುಣಿಸಿ ಬಂದ ನಿನಗೆ ಆಹಾರವಾಗುವೆ ಎಂದು ಹೇಳಿ ಆ ಪುಣ್ಯಕೋಟಿ ಕೊನೆಯ ಬಾರಿ ತನ್ನ ಕಂದನಿಗೆ ಹಾಲುಣಿಸಿ ಬರುತ್ತೇನೆ ಎಂದು ತೆರಳುತ್ತದೆ. ಆದರೆ ಈ ರಿಯಲ್ ಕತೆ ಕೂಡ ಪುಣ್ಯಕೋಟಿ ಹಾಗೂ ಹುಲಿಗೆ ಸಂಬಂಧಿಸಿದ್ದೇ ಆದರೆ ಇದರಲ್ಲಿರುವ ಟ್ವಿಸ್ಟ್ ಮಾತ್ರ ರೋಚಕ...
ಹುಲಿಯೊಂದು ಆಹಾರ ಹುಡುಕುತ್ತಾ ನಾಡಿಗೆ ಬಂದಿದೆ, ಅಲ್ಲಿ ಹಸುಗಳ ದಂಡು ಆಹಾರ ಮೇಯುತ್ತಿರುವುದನ್ನು ಕಂಡು ಸೀದಾ ಅವುಗಳತ್ತ ದಾಳಿ ಮಾಡಲು ಹೋಗುತ್ತದೆ. ಹುಲಿಯನ್ನು ನೋಡಿದ ತಕ್ಷಣ ಹಸುಗಳು ಪ್ರಾಣ ರಕ್ಷಣೆಗೆ ಓಡಿ ಹೋಗುತ್ತವೆ, ಆದರೆ ಪಾಪ ಕರುವೊಂದು ಹುಲಿ ಸಿಕ್ಕಾಕಿಕೊಳ್ಳುತ್ತದೆ. ಹುಲಿ ಕರುವನ್ನು ಹಿಡಿದು ಇನ್ನೇನು ಅದನ್ನು ಸಾಯಿಸಬೇಕು, ಅಷ್ಟರಲ್ಲಿ ಅದರ ತಾಯಿ ಕರುವಿನ ರಕ್ಷಣೆ ಓಡಿ ಮಾಡುತ್ತದೆ.

ತನ್ನ ಕರುವನ್ನು ದುಷ್ಟ ವ್ಯಾಘ್ರನ ವಿರುದ್ಧ ಸೆಣಸಿ ರಕ್ಷಣೆ ಮಾಡುತ್ತದೆ. ಹಸುವಿನ ದಾಳಿಯಿಂದ ಕಂಗಲಾದ ಹುಲಿ ಅಲ್ಲಿಂದ ಓಡಿ ಹೋಗುತ್ತದೆ. ಇದೀಗ ಈ ಅದ್ಭುತ ವೀಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. ಹೆತ್ತ ಕಂದನ ರಕ್ಷಣೆಗೆ ಪಾಪದ ಹಸು ಕೂಡ ಹುಲಿಯ ಜೊತೆ ಹೋರಾಡುತ್ತದೆ ಎಂದರೆ ಅದಲ್ಲವೇ ತಾಯ್ತನದ ಶಕ್ತಿ. ಎಂಥದ್ದೇ ಪರಿಸ್ಥಿತಿ ಬರಲಿ ಹೆತ್ತ ತಾಯಿ ತನ್ನ ಕಂದನ ಎಂದಿಗೂ ಬಿಟ್ಟುಕೊಡಲ್ಲ ಎಂಬುವುದಕ್ಕೆ ಈ ವೀಡಿಯೋ ಸಾಕ್ಷಿಯಾಗಿದೆ.
ಈ ವೀಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಒಬ್ಬೊಬ್ಬರು ಒಂದೊಂದು ಮಾತನಾಡುತ್ತಿದ್ದಾರೆ. ಕೆಲವರು ಜನರಿರುವ ಪ್ರದೇಶಕ್ಕೆ ಹುಲಿ ಬಾರದಂತೆ ತಡೆಯಬೇಕಾಗಿದೆ. ವಿಶ್ವದ ಶೇ. 75ರಷ್ಟು ಹುಲಿ ಭಾರತದಲ್ಲಿದೆ, ಸದ್ಯಕ್ಕೆ ಹುಲಿಗಳ ಸಂಖ್ಯೆ 3200 ಇದೆ, ಇವುಗಳ ಸಂಖ್ಯೆ ಇನ್ನಷ್ಟು ಅಧಿಕವಾಗಲಿದೆ. ಹುಲಿಗಳನ್ನು ಸಂರಕ್ಷಿತ ಕಾಡಿನಲ್ಲಿ ಬಿಡಬೇಕೆಂದು ಕೆಲವರು ಹೇಳಿದರೆ, ಇನ್ನು ಕೆಲವರು ನಾವು ಮನುಷ್ಯರ ಕಾಡನ್ನು ನಾಶ ಪಡಿಸಿದರ ಪರಿಣಾಮ ಕಾಡು ಪ್ರಾಣಿಗಳು ನಾಡಿಗೆ ಬರುತ್ತಿವೆ ಎಂದು ಇನ್ನು ಕೆಲವರು ಹೇಳುತ್ತಿದ್ದಾರೆ.
ನೆಟ್ಟಿಗರನ್ನು ಪುಣ್ಯಕೋಟಿ ಕತೆ ನೆನಪು ಮಾಡುವಂತೆ ಮಾಡಿದ ಈ ವೀಡಿಯೋ ತುಂಬಾನೇ ವೈರಲ್ ಆಗುತ್ತಿದೆ, ಈ ಕುರಿತು ನಿಮ್ಮ ಅಭಿಪ್ರಾಯವೇನು ಕಮೆಂಟ್ ಮಾಡಿ....



Click it and Unblock the Notifications