Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ವಾಚ್ಮೆನ್ಗೆ ಒಲಿದ ಅದೃಷ್ಟ ಲಕ್ಷ್ಮಿ: 2 ಕೋಟಿ ಲಾಟರಿ ಗೆದ್ದ 60 ವರ್ಷದ ರಾಚಮಲ್ಲಯ್ಯ
ಅದೃಷ್ಟಲಕ್ಷ್ಮಿ ಒಲಿದಳು ಅಂದ್ರೆ ಒಂದೇ ದಿನದಲ್ಲಿ ಲಕ್ಷಾಧಿಪತಿಗಳು, ಕೋಟ್ಯಾಧಿಪತಿಗಳಾಗಬಹುದು ಎಂಬ ಹಲವು ಉದಾಹರಣೆಗಳನ್ನು ನೋಡಿದ್ದೇವೆ. ಈಗ ಅಂಥದ್ದೇ ಅದೃಷ್ಟ ಹೈದರಾಬಾದ್ ಮೂಲದ ವ್ಯಕ್ತಿಗೆ ಒಲಿದಿದೆ. ಅದರಲ್ಲಿಯೂ ಅವರು ತಮ್ಮ 60ನೇ ವಯಸ್ಸಿನಲ್ಲಿ ಒಂದೇ ದಿನದಲ್ಲಿ ಶ್ರೀಮಂತ ವ್ಯಕ್ತಿಯಾಗಿ ಬಿಟ್ಟಿದ್ದಾರೆ.

ನಿವೃತ್ತಿ ವಯಸ್ಸಿನಲ್ಲಿ ಒಲಿದಳು ಅದೃಷ್ಟ ಲಕ್ಷ್ಮಿ
ಹೈದರಾಬಾದ್ನ ಈ ಅದೃಷ್ಟವಂತನ ಹೆಸರು ನಾಂಪಲ್ಲಿ ರಾಚಮಲ್ಲಯ್ಯ. ವಯಸ್ಸು 60 ವರ್ಷ. ಕಳೆದ 3 ದಶಕಗಳಿಂದ ಅಬುದಾಬಿಯಲ್ಲಿ ವಾಚ್ಮೆನ್ ಮೆನ್ ಆಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಇವರು ಅಪರೂಪಕ್ಕೆ ಲಾಟರಿ ಖರೀದಿಸುತ್ತಿದ್ದರು. ಆದರೆ ಈ ಬಾರಿಯ ಲಾಟರಿ ಅವರ ಕೈ ಹಿಡಿದಿದೆ. ಅವರೀಗ ಮಿಲಿನಿಯರ್ ಆಗಿದ್ದಾರೆ. ಇವರಿಗೆ ಸುಮಾರು ಎರಡು ಕೋಟಿ ರುಪಾಯಿ ಲಾಟರಿ ಹೊಡೆದಿದೆ. ಪಾಪ ಇದರಿಂದಾಗಿ ಅವರ ಅದೃಷ್ಟವೇ ಬದಲಾಗಿದೆ. ಇಷ್ಟು ವರ್ಷ ಕುಟುಂಬದಿಂದ ದೂರವಿದ್ದು ದುಡಿಯುತ್ತಿದ್ದರು, ಈಗ ಲಾಟರಿ ಹೊಡೆದಿರುವುದರಿಂದ ಅವರ ಆರ್ಥಿಕ ಸ್ಥಿತಿಯೇ ಬದಲಾಗಿದೆ.
ಇತ್ತೀಚೆಗೆ ಮಂಡ್ಯದ ಮೆಕ್ಯಾನಿಕ್ಗೆ ಬರೋಬರಿ 25 ಕೋಟಿ ಲಾಟಿ ಹೊಡೆದಿತ್ತು. ಈ ಬಾರಿ ಓಣಂ ಬಂಪರ್ ಅವರ ಪಾಲಿಗೆ ಒಲಿದಿತ್ತು, ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗುವ ಮೂಲಕ ತುಂಬಾನೇ ಸುದ್ದಿ ಮಾಡಿದರು. ಮಂಡ್ಯದ ಅಲ್ತಾಫ್ ಕೇರಳಕ್ಕೆ ಹೋದಾಗ ಲಾಟರಿ ಖರೀದಿ ಮಾಡಿ ಬಂದಿದ್ದರು ಆದರೆ ಅವರ ಅದೃಷ್ಟ ಮಾತ್ರ ತುಂಬಾ ಚೆನ್ನಾಗಿತ್ತು, ಆ 25 ಕೋಟಿ ಲಾಟರಿ ಇವರಿಗೆ ಒಲಿದಿತ್ತು. ಅವರು ಲಾಟರಿ ಹಣದಲ್ಲಿ ಮಕ್ಕಳ ಮದುವೆ ಮಾಡುವುದಾಗಿ , ಮನೆ ಕಟ್ಟುವುದಾಗಿ ಸ್ವಲ್ಪ ಹಣವನ್ನು ಅಗ್ಯತವಿರುವವರೆಗೆ ದಾನ ಮಾಡುವುದಾಗಿ ಹೇಳಿದ್ದರು. ಕೇರಳದ ಒಂದು ಲಾಟರಿ ಅಲ್ತಾಫ್ ಬದುಕನ್ನೇ ಬದಲಾಯಿಸಿತು, ಮೆಕ್ಯಾನಿಕ್ ವೃತ್ತಿಯಿಂದ ಜೀವನ ನಡೆಸುತ್ತಿದ್ದ ಅಲ್ತಾಫ್ ಈಗ ಕೋಟ್ಯಾಧಿಪತಿ.
ಲಾಟರಿ ಕರ್ನಾಟಕದಲ್ಲಿ ಬ್ಯಾನ್ ಮಾಡಲಾಗಿದೆ
ಕರ್ನಾಟಕದಲ್ಲಿ ಲಾಟರಿ ನಿಷೇಧಿಸಲಾಗಿದೆ, ಎಷ್ಟೋ ಕುಟುಂಬಗಳು ಲಾಟರಿಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದೆ. ದುಡಿದ ಹಣವನ್ನು ಲಾಟರಿ ಖರೀದಿಗೆ ಖರ್ಚು ಮಾಡಿ ಮನೆಯಲ್ಲಿ ಹೆಂಡತಿ ಮಕ್ಕಳು ಊಟಕ್ಕೂ ಪರಿದಾಡುವಂತೆ ಮಾಡುತ್ತಿದೆ. ಈ ಕಾರಣದಿಂದಲೇ ಲಾಟರಿಯನ್ನು ಕರ್ನಾಟಕದಲ್ಲಿ ನಿಷೇಧಿಸಲಾಗಿದೆ.



Click it and Unblock the Notifications