Latest Updates
-
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ!
ವಯನಾಡ್ ದುರಂತದ 6 ದಿನಗಳ ಬಳಿಕ ಯಜಮಾನಿ ಸಿಕ್ಕಾಗ ನಾಯಿಗಾದ ಖುಷಿಯ ವೀಡಿಯೋ ವೈರಲ್
ವಯನಾಡಿನ ದುರಂತದಲ್ಲಿ ಕಣ್ಣೀರ ಕತೆಗಳು ಮಾತ್ರವಲ್ಲ ಕೆಲ ಹೃದಯಸ್ಪರ್ಶಿ ಕತೆಗಳೂ ಗಮನ ಸೆಳೆಯುತ್ತಿದೆ, ಮಾನವೀಯತೆ, ಪ್ರೀತಿ, ಮೌಲ್ಯಗಳು ಕೂಡ ಎದ್ದು ಕಾಣುತ್ತಿದೆ. ಪ್ರಕೃತಿಯ ರೌದ್ರಾವಾತಾರಕ್ಕೆ ನೂರಾರು ಜನ ಬದುಕು ಕಳೆದುಕೊಂಡರೆ ಸಾವಿರಾರು ಜನ ಬದುಕಿನಲ್ಲಿ ಎಲ್ಲವನ್ನೂ, ಎಲ್ಲರನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ.

ಬದುಕುಳಿದವರಲ್ಲಿ ನಮ್ಮವರು ಯಾರಾದರು ಇದ್ದಾರೆಯೇ ಎಂದು ಎಲ್ಲಾ ಕಡೆ ಹುಡುಕಾಡುತ್ತಿದ್ದಾರೆ. ನಮ್ಮವರು ಯಾರಾದರು ಕಂಡರೆ ಅವರಿಗೆ ಅದುವೇ ಕೋಟಿ ಸಂತೋಷ. ಮನುಷ್ಯದ ಸಂಕಟ ಒಂದು ರೀತಿಯಾದರೆ ಮೂಕ ಪ್ರಾಣಿಗಳ ವೇದನೆ ಮತ್ತೊಂದು ರೀತಿ, ತಮ್ಮವರನ್ನು ಕಾಣದೆ, ಊಟವೂ ಮಾಡದೆ ಅವು ಆ ಪ್ರದೇಶದಲ್ಲಿ ಯಾರಿಗೋ ಹುಡುಕಾಡುತ್ತಿರುವುದನ್ನು ನೋಡುವಾಗ ಅಯ್ಯೋ ಅನಿಸುತ್ತಿದೆ. ಅದರಲ್ಲೊಂದು ವೀಡಿಯೋ ತುಂಬಾನೆ ವೈರಲ್ ಆಗುತ್ತಿದೆ, 6 ದಿನಗಳ ಬಳಿಕ ತನ್ನ ಯಜಮಾನಿ ಸಿಕ್ಕಾಗ ಆ ನಾಯಿ ಸಂತೋಷ ಪಟ್ಟ ವೀಡಿಯೋ ಇದೀಗ ವೈರಲ್ ಆಗುತ್ತಿದೆ.
ತನ್ನ ಯಜಮಾನರನ್ನು ಕಾಣದೆ ಆಹಾರವು ಸೇವಿಸದೆ ದುಃಖಿಸುತ್ತಿತ್ತು ಈ ನಾಯಿ
ಘಟನೆ ನಡೆದು 6 ದಿನಗಳಲ್ಲಿ ಆ ನಾಯಿ ಅ ಜಾಗ ಬಿಟ್ಟು ಕದಲಿರಲಿಲ್ಲ. ಅತ್ತಿತ್ತ ಓಡಾಡುತ್ತಾ ಯಾರನ್ನೋ ಹುಡುಕುತ್ತಿತ್ತು. ಅಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವವರು ಆಹಾರ ನೀಡಿದರು ದುಃಖದಿಂದ ಆಹಾರದತ್ತ ಕೂಡ ಗಮನ ಹರಿಸುತ್ತಿರಲಿಲ್ಲ.
ಮನೆ ಕುಸಿದು ಬಿದ್ದಲ್ಲಿ ಬಂದು ತಮ್ಮ ವಸ್ತುಗಳಿಗಾಗಿ ಹುಡುಕುತ್ತಿರುವ ಜನ
ತಮ್ಮ ಹಣ, ಒಡವೆ ಎಲ್ಲವೂ ಮಣ್ಣು ಪಾಲಾಗಿದೆ, ನಾಳೆಯ ಬದುಕಿನ ಬಗ್ಗೆ ಒಂದೂ ತೋಚುತ್ತಿಲ್ಲ, ಹೀಗಿರುವಾಗ ತಮ್ಮ ಮನೆಯಲ್ಲಿದ್ದ ಚಿನ್ನ, ಹಣವಾದರೂ ಸಿಕ್ಕರೆ ಒಳ್ಳೆಯದಿತ್ತು ಎಂದು ಜನ ಯೋಚಿಸುತ್ತಿದ್ದಾಗ ತಮ್ಮ-ತಮ್ಮ ಮನೆಗಳ ಬಳಿ ಹಫಗಿ ಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹೀಗೆ ಮನೆ ಬಳಿಗೆ ಬಂದ ಯಜಮಾನಿಯನ್ನು ಕಂಡು ಓಡಿ ಬಂದ ನಾಯಿ ಖುಷಿಯನ್ನು ವ್ಯಕ್ತಪಡಿಸುತ್ತಿರುವ ರೀತಿ ನೆಟ್ಟಿಗರ ಗಮನ ಸೆಳೆದಿದೆ.
ನಾಯಿ ವರ್ಷಗಳು ಕಳೆದರೂ ತನ್ನ ಯಜಮಾನರನ್ನು ಮರೆಯಲ್ಲ
ಒಂದು ನಾಯಿಯನ್ನು ಸಾಕಿ ನಾವು ಎಲ್ಲಿಗಾದರು ಹೋಗಿ ವರ್ಷಗಳ ಬಳಿಕ ಬಂದರು ನಮ್ಮನ್ನು ಗುರುತು ಹಿಡಿಯುತ್ತದೆ, ಹೀಗಾಗಿ ನಾಯಿ ಮನುಷ್ಯನ ಸಂಬಂಧ ವಿಶೇಷವಾದದ್ದು. ತನ್ನ ಯಜಮಾನನ ರಕ್ಷಣೆ ಮಾಡುವುದರ ಜೊತೆಗೆ ಅವರನ್ನು ಮುದ್ದು ಮಾಡಿ ಅವರ ಒಂಟಿತನ ಹೋಗಲಾಡಿಸುವ ಗುಣ ನಾಯಿಯಲ್ಲಿದೆ.
ಹಾಗಾಗಿಯೇ ಹೇಳುವುದು ನಾಯಿ ನಿಯತ್ತಿನ ಪ್ರಾಣಿಯೆಂದು....



Click it and Unblock the Notifications