Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ವಯನಾಡ್ ದುರಂತದ 6 ದಿನಗಳ ಬಳಿಕ ಯಜಮಾನಿ ಸಿಕ್ಕಾಗ ನಾಯಿಗಾದ ಖುಷಿಯ ವೀಡಿಯೋ ವೈರಲ್
ವಯನಾಡಿನ ದುರಂತದಲ್ಲಿ ಕಣ್ಣೀರ ಕತೆಗಳು ಮಾತ್ರವಲ್ಲ ಕೆಲ ಹೃದಯಸ್ಪರ್ಶಿ ಕತೆಗಳೂ ಗಮನ ಸೆಳೆಯುತ್ತಿದೆ, ಮಾನವೀಯತೆ, ಪ್ರೀತಿ, ಮೌಲ್ಯಗಳು ಕೂಡ ಎದ್ದು ಕಾಣುತ್ತಿದೆ. ಪ್ರಕೃತಿಯ ರೌದ್ರಾವಾತಾರಕ್ಕೆ ನೂರಾರು ಜನ ಬದುಕು ಕಳೆದುಕೊಂಡರೆ ಸಾವಿರಾರು ಜನ ಬದುಕಿನಲ್ಲಿ ಎಲ್ಲವನ್ನೂ, ಎಲ್ಲರನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ.

ಬದುಕುಳಿದವರಲ್ಲಿ ನಮ್ಮವರು ಯಾರಾದರು ಇದ್ದಾರೆಯೇ ಎಂದು ಎಲ್ಲಾ ಕಡೆ ಹುಡುಕಾಡುತ್ತಿದ್ದಾರೆ. ನಮ್ಮವರು ಯಾರಾದರು ಕಂಡರೆ ಅವರಿಗೆ ಅದುವೇ ಕೋಟಿ ಸಂತೋಷ. ಮನುಷ್ಯದ ಸಂಕಟ ಒಂದು ರೀತಿಯಾದರೆ ಮೂಕ ಪ್ರಾಣಿಗಳ ವೇದನೆ ಮತ್ತೊಂದು ರೀತಿ, ತಮ್ಮವರನ್ನು ಕಾಣದೆ, ಊಟವೂ ಮಾಡದೆ ಅವು ಆ ಪ್ರದೇಶದಲ್ಲಿ ಯಾರಿಗೋ ಹುಡುಕಾಡುತ್ತಿರುವುದನ್ನು ನೋಡುವಾಗ ಅಯ್ಯೋ ಅನಿಸುತ್ತಿದೆ. ಅದರಲ್ಲೊಂದು ವೀಡಿಯೋ ತುಂಬಾನೆ ವೈರಲ್ ಆಗುತ್ತಿದೆ, 6 ದಿನಗಳ ಬಳಿಕ ತನ್ನ ಯಜಮಾನಿ ಸಿಕ್ಕಾಗ ಆ ನಾಯಿ ಸಂತೋಷ ಪಟ್ಟ ವೀಡಿಯೋ ಇದೀಗ ವೈರಲ್ ಆಗುತ್ತಿದೆ.
ತನ್ನ ಯಜಮಾನರನ್ನು ಕಾಣದೆ ಆಹಾರವು ಸೇವಿಸದೆ ದುಃಖಿಸುತ್ತಿತ್ತು ಈ ನಾಯಿ
ಘಟನೆ ನಡೆದು 6 ದಿನಗಳಲ್ಲಿ ಆ ನಾಯಿ ಅ ಜಾಗ ಬಿಟ್ಟು ಕದಲಿರಲಿಲ್ಲ. ಅತ್ತಿತ್ತ ಓಡಾಡುತ್ತಾ ಯಾರನ್ನೋ ಹುಡುಕುತ್ತಿತ್ತು. ಅಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವವರು ಆಹಾರ ನೀಡಿದರು ದುಃಖದಿಂದ ಆಹಾರದತ್ತ ಕೂಡ ಗಮನ ಹರಿಸುತ್ತಿರಲಿಲ್ಲ.
ಮನೆ ಕುಸಿದು ಬಿದ್ದಲ್ಲಿ ಬಂದು ತಮ್ಮ ವಸ್ತುಗಳಿಗಾಗಿ ಹುಡುಕುತ್ತಿರುವ ಜನ
ತಮ್ಮ ಹಣ, ಒಡವೆ ಎಲ್ಲವೂ ಮಣ್ಣು ಪಾಲಾಗಿದೆ, ನಾಳೆಯ ಬದುಕಿನ ಬಗ್ಗೆ ಒಂದೂ ತೋಚುತ್ತಿಲ್ಲ, ಹೀಗಿರುವಾಗ ತಮ್ಮ ಮನೆಯಲ್ಲಿದ್ದ ಚಿನ್ನ, ಹಣವಾದರೂ ಸಿಕ್ಕರೆ ಒಳ್ಳೆಯದಿತ್ತು ಎಂದು ಜನ ಯೋಚಿಸುತ್ತಿದ್ದಾಗ ತಮ್ಮ-ತಮ್ಮ ಮನೆಗಳ ಬಳಿ ಹಫಗಿ ಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹೀಗೆ ಮನೆ ಬಳಿಗೆ ಬಂದ ಯಜಮಾನಿಯನ್ನು ಕಂಡು ಓಡಿ ಬಂದ ನಾಯಿ ಖುಷಿಯನ್ನು ವ್ಯಕ್ತಪಡಿಸುತ್ತಿರುವ ರೀತಿ ನೆಟ್ಟಿಗರ ಗಮನ ಸೆಳೆದಿದೆ.
ನಾಯಿ ವರ್ಷಗಳು ಕಳೆದರೂ ತನ್ನ ಯಜಮಾನರನ್ನು ಮರೆಯಲ್ಲ
ಒಂದು ನಾಯಿಯನ್ನು ಸಾಕಿ ನಾವು ಎಲ್ಲಿಗಾದರು ಹೋಗಿ ವರ್ಷಗಳ ಬಳಿಕ ಬಂದರು ನಮ್ಮನ್ನು ಗುರುತು ಹಿಡಿಯುತ್ತದೆ, ಹೀಗಾಗಿ ನಾಯಿ ಮನುಷ್ಯನ ಸಂಬಂಧ ವಿಶೇಷವಾದದ್ದು. ತನ್ನ ಯಜಮಾನನ ರಕ್ಷಣೆ ಮಾಡುವುದರ ಜೊತೆಗೆ ಅವರನ್ನು ಮುದ್ದು ಮಾಡಿ ಅವರ ಒಂಟಿತನ ಹೋಗಲಾಡಿಸುವ ಗುಣ ನಾಯಿಯಲ್ಲಿದೆ.
ಹಾಗಾಗಿಯೇ ಹೇಳುವುದು ನಾಯಿ ನಿಯತ್ತಿನ ಪ್ರಾಣಿಯೆಂದು....



Click it and Unblock the Notifications