Latest Updates
-
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ! -
ಕರಾವಳಿ ರೆಡ್ ಅಲರ್ಟ್: ಮನೆಯಲ್ಲೇ ಸುರಕ್ಷಿತವಾಗಿ ಫಿಟ್ ಆಗಿರಲು ಈ 12 ನಿಮಿಷಗಳ ವರ್ಕೌಟ್ ಟ್ರೈ ಮಾಡಿ!
ಕನ್ನಡ ಚಿತ್ರರಂಗದ ಬಗ್ಗೆ ನಿಮಗೆ ಗೊತ್ತಿಲ್ಲದ ಅಚ್ಚರಿ ಹುಟ್ಟಿಸುವ ವಿಚಾರಗಳಿವು...!
ಕನ್ನಡ ಚಿತ್ರರಂಗ ಈಗ ಎಷ್ಟು ದೊಡ್ಡದಾಗಿ ಬೆಳೆದಿದೆ ಅಂದ್ರೆ ನಿತ್ಯ ಹತ್ತಾರು ಚಿತ್ರಗಳು ಸಿನಿಮಾ ಮಂದಿರದ ಬಾಗಿಲು ತಟ್ಟುತ್ತಿವೆ. ಕನ್ನಡ ಸಿನಿಮಾಗಳು ಈಗ ಭಾರತ ಮಾತ್ರ ಅಲ್ಲ ವಿದೇಶದಲ್ಲೂ ಸದ್ದು ಮಾಡುತ್ತಿವೆ. ಕನ್ನಡ ಸಿನಿಮಾ ರಿಲೀಸ್ಗಾಗಿ ಅಭಿಮಾನಿಗಳು ಕಾಯುವ ಸಮಯ ಸಹ ಬಂದಿದೆ. ಆದ್ರೆ ನಮ್ಮ ಕನ್ನಡ ಚಿತ್ರರಂಗದ ಬಗ್ಗೆ ನಿಮಗೆಷ್ಟು ಗೊತ್ತಿದೆ.
ಕನ್ನಡ ಚಿತ್ರರಂಗ ಜನ್ಮ ತಳೆದು ಶತಮಾನಗಳು ಕಳೆದಿವೆ. ನೂರಾರು ನಟರು ಬೆಳ್ಳಿ ಪರದೆ ಮೇಲೆ ಮಿಂಚಿದ್ದಾರೆ. ವರನಟ ಡಾ.ರಾಜ್ಕುಮಾರ್ ಅವರಿಂದ ಹಿಡಿದು ಇತ್ತೀಚಿನ ನಾಯಕರು, ನಟರ ವರೆಗೂ ಅಮೂಲ್ಯ ಕೊಡುಗೆ ನೀಡಿದ್ದಾರೆ. ಆದ್ರೆ ಕನ್ನಡ ಚಿತ್ರರಂಗದ ಬಗ್ಗೆ ನಿಮಗೆ ಗೊತ್ತಿಲ್ಲದ ಒಂದಿಷ್ಟು ಅಚ್ಚರಿಯ ವಿಚಾರಗಳು ಇಲ್ಲಿವೆ ನೋಡಿ.

ಎಲ್ಲಾ ಸಿನಿಮಾಗಳಿಗೂ 'ಯು' ಪ್ರಮಾಣಪತ್ರ ಪಡೆದ ಏಕೈಕ ನಟ
ಡಾ. ರಾಜ್ಕುಮಾರ್ ನಿಜ ಜೀವನದಲ್ಲಿ ಹೇಗೆ ಜೀವಿಸಿದ್ದರೋ ಅದೇ ಮಾರ್ಗದಲ್ಲಿಯೇ ಸಿನಿಮಾ ಪರದೆ ಮೇಲೂ ಕಾಣಿಸಿಕೊಂಡಿದ್ದರು. ಅವರ ಎಲ್ಲಾ ಸಿನಿಮಾಗಳು 'ಯು' ಪ್ರಮಾಣ ಪತ್ರ ಪಡೆದಿದ್ದವು. ಅವರು ನಟಿಸಿದ್ದ 205 ಸಿನಿಮಾಗಳಲ್ಲಿ ಒಂದೂ ಸಹ 'ಎ' ಪ್ರಮಾಣ ಪತ್ರ ಪಡೆದಿರಲಿಲ್ಲ. ಬಹುಶಃ ತಮ್ಮ ನಟನೆಯ ಎಲ್ಲಾ ಚಿತ್ರಗಳಿಗೂ ಯು ಪ್ರಮಾಣ ಪತ್ರ ಪಡೆದಿರುವ ಏಕೈಕ ನಟರೂ ಅವರೇ ಆಗಿದ್ದರು.
ಬೆಂಗಳೂರಿನ ಮೊದಲ ಚಿತ್ರಮಂದಿರ
ಬೆಂಗಳೂರಿಗೆ ಮೊಟ್ಟ ಮೊದಲು 1920ರಲ್ಲಿ ಚಿತ್ರಮಂದಿರ ಕಾಲಿಟ್ಟಿತ್ತು. ಪ್ಯಾರಾಮೌಂಟ್ ಥಿಯೇಟರ್ ಮುಂದೆ ಪರಿಮಳ ಚಿತ್ರಮಂದಿರವಾಗಿ ಹೆಸರು ಬದಲಾವಣೆಯಾಯಿತು. ಆದರೆ 1934ರಲ್ಲಿ ಮೊದಲ ಕನ್ನಡ ಸಿನಿಮಾ ಈ ಚಿತ್ರಮಂದಿರದಲ್ಲಿ ಬಿಡುಗಡೆಯಾಯಿತು.
ಕನ್ನಡದ ಮೊದಲ ಹೀರೋ
ಕನ್ನಡ ಚಿತ್ರಕ್ಕೆ ಮೊದಲು ನಾಯಕರಾಗಿದ್ದವರು ಸುಬ್ಬಯ್ಯ ನಾಯ್ಡು ಅವರು, ಲೋಕೇಶ್ ಅವರ ತಂದೆ ಹಾಗೂ ಸೃಜನ್ ಲೋಕೇಶ್ ಅವರ ತಾತ ಕನ್ನಡ ಸಿನಿಮಾದ ಮೊದಲ ಹೀರೋ ಎನಿಸಿಕೊಂಡಿದ್ದಾರೆ. ಹಾಗೆ ಕನ್ನಡದ ಮೊದಲ ಸಿನಿಮಾ ಸತಿ ಸುಲೋಚನಾ 1934ರಲ್ಲಿ ತೆರೆಕಂಡಿತ್ತು. ಅಚ್ಚರಿ ಎಂದರೆ ಈ ಸಿನಿಮಾ ಕೇವಲ 40 ಸಾವಿರ ರೂಪಾಯಿಯಲ್ಲಿ ತಯಾರಾಗಿತ್ತು.
ಕನ್ನಡದ ಬ್ಲಾಕ್ ಬಸ್ಟರ್ ಸಿನಿಮಾಗಳು
ಕನ್ನಡದಲ್ಲಿ ಇತ್ತೀಚಿನ ದಿನಗಳಲ್ಲಿ ಬ್ಲಾಕ್ ಬಸ್ಟರ್ ಸಿನಿಮಾಗಳ ಸಂಖ್ಯೆ ಗಣನೀಯ ಇಳಿಕೆ ಕಂಡಿದೆ. ಆದರೆ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಯೋಗರಾಜ್ ಭಟ್ ನಿರ್ದೇಶನದ ಮುಂಗಾರು ಮಳೆ ಕನ್ನಡ ಮೊದಲ ಬ್ಲಾಕ್ ಬಸ್ಟರ್ ಸಿನಿಮಾ ಎನ್ನಲಾಗಿದೆ. ಈ ಚಿತ್ರ ಮಲ್ಟಿಫ್ಲೆಕ್ಸ್ನಲ್ಲಿಯೇ ಬರೋಬ್ಬರಿ 365 ದಿನ ಪ್ರದರ್ಶನ ಕಂಡಿತ್ತು. ಇದಲ್ಲದೆ ಪುನೀತ್ ರಾಜ್ಕುಮಾರ್ ನಟನೆಯ ಮಿಲನ ಸಿನಿಮಾ ಮಲ್ಟಿಫ್ಲೆಕ್ಸ್ನಲ್ಲಿ 450 ದಿನ ಪ್ರದರ್ಶನ ಕಂಡು ದಾಖಲೆ ಬರೆದಿದೆ.
ಕನ್ನಡದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ
ನಾವು ಇತ್ತೀಚಿಗೆ ಪ್ಯಾನ್ ಇಂಡಿಯಾ ಸಿನಿಮಾ ಎಂಬ ಶಬ್ದ ಕೇಳುತ್ತಿದ್ದೇವೆ. ಆದರೆ 1959ರಲ್ಲೇ ಕನ್ನಡದ ಸಿನಿಮಾವೊಂದು 8 ಭಾಷೆಯಲ್ಲಿ ತೆರೆಕಂಡು ಪ್ಯಾನ್ ಇಂಡಿಯಾ ಸಿನಿಮಾ ಎಂಬ ದಾಖಲೆ ಬರೆದಿದೆ. ರಾಜ್ಕುಮಾರ್ ನಟನೆಯ 'ಮಹಿಷಾಸುರ ಮರ್ದಿನಿ' 8 ಭಾಷೆಗಳಿಗೆ ಡಬ್ ಆಗಿ ಬಿಡುಗಡೆಯಾಗಿತ್ತು.
ಅಪ್ಪುಗೆ ಮುಂಗಾರು ಮಳೆ ಕಥೆ ಹೇಳಿದ್ದ ಭಟ್ಟರು
ನಟ ಗಣೇಶ್ ನಟನೆಯ ಮುಂಗಾರು ಮಳೆ ಚಿತ್ರದ ಕಥೆಯನ್ನು ಮೊದಲು ಪುನೀತ್ ರಾಜ್ಕುಮಾರ್ಗೆ ಹೇಳಿದ್ದರಂತೆ. ಆದರೆ ಅಪ್ಪು ಈ ಸಿನಿಮಾ ಬೇಡವೆಂದಿದ್ದರು. ಅಲ್ಲದೆ ಅನಿಸುತ್ತಿದೆ ಯಾಕೋ ಇಂದು ಹಾಡಿನ ಟ್ಯೂನ್ ಅನ್ನು ಮನೋಮೂರ್ತಿ ಅಮೆರಿಕ ಅಮೆರಿಕ ಸಿನಿಮಾಗಾಗಿ ಮಾಡಿದ್ದರಂತೆ. ಆದರೆ ಆ ಸಿನಿಮಾದಲ್ಲಿ ಟ್ಯೂನ್ ಬಳಸಲು ಅವಕಾಶ ಸಿಗದಿದ್ದಾಗ ಮುಂಗಾರು ಮಳೆ ಸಿನಿಮಾದಲ್ಲಿ ಬಳಸಿದ್ದರಂತೆ.
ಸಾವಿರ ಕೋಟಿ ಕ್ಲಬ್ ಸೇರಿದ ಕನ್ನಡದ ಮೊದಲ ಸಿನಿಮಾ
ಕನ್ನಡದಲ್ಲಿ ಮೊದಲ ಬಾರಿಗೆ ಸಾವಿರ ಕೋಟಿ ಕ್ಲಬ್ ಸೇರಿದ ಸಿನಿಮಾ ಎಂದರೆ ಅದು ಕೆಜಿಎಫ್ ಚಾಪ್ಟರ್-2. ಒಟ್ಟಾರೆ 1200 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಇದು ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದೆ.
ದಾಖಲೆ ಬರೆಯುತ್ತಾ ಸಲಾರ್?
ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಅವರ ಸಲಾರ್ ಸಿನಿಮಾ ಕುರಿತು ಭಾರೀ ನಿರೀಕ್ಷೆ ಇದೆ. ಈ ಸಿನಿಮಾ ಸಹ ಸಾವಿರ ಕೋಟಿ ಕ್ಲಬ್ ಸೇರಿದರೆ ಕನ್ನಡ ಡೈರೆಕ್ಟರ್ ಒಬ್ಬರ 2 ಸಿನಿಮಾಗಳು ಸಾವಿರ ಕ್ಲಬ್ ಸೇರಿದ ದಾಖಲೆ ಮಾಡಲಿದೆ. ಈವರೆಗೆ ಕನ್ನಡ ಯಾವೊಬ್ಬ ನಿರ್ದೇಶಕರು ಇಂತಹ ಅಪರೂಪದ ಸಾಧನೆ ಮಾಡಿಲ್ಲ. ಅವರ ಜೊತೆ ಕನ್ನಡದ ಹೊಂಬಾಳೆ ಫಿಲ್ಸ್ಮ್ ಸಹ ಸಾವಿರ ಕೋಟಿ ಗಳಿಕೆಯ ಸಿನಿಮಾ ನೀಡಿದ ಮೊದಲ ಕನ್ನಡದ ಸಿನಿಮಾ ತಯಾರಿ ಸಂಸ್ಥೆಯಾಗಿ ಹೊರಹೊಮ್ಮಲಿದೆ.



Click it and Unblock the Notifications