Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ತಾಪಮಾನ ಏರಿಕೆ ನಡುವೆ ಭಾರೀ ಮಳೆಯ ಎಚ್ಚರಿಕೆ..! ಯೆಲ್ಲೋ ಅಲರ್ಟ್ ಘೋಷಿಸಿದ ಐಎಂಡಿ!
ದೇಶದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನ ಹೀಟ್ ವೇವ್ ಜನರ ನಿದ್ದೆಗೆಡಿಸಿದೆ. ಈಗಾಗಲೆ ರಾಜ್ಯದ ಹಲವು ಭಾಗದಲ್ಲಿ ಗರಿಷ್ಟ ತಾಪಮಾನ ಏರಿಕೆ ಆಗುತ್ತಿರುವುದು ಎಲ್ಲರಲ್ಲೂ ಆತಂಕ ಹುಟ್ಟಿಸಿದೆ. ಏಕೆಂದರೆ ಇನ್ನು ಕೂಡ ಹಲವು ತಿಂಗಳ ಬೇಸಿಗೆ ಬಾಕಿ ಉಳಿದಿದೆ. ಅದರಲ್ಲೂ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿನಲ್ಲಿ ಈ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಅದರಲ್ಲೂ ಕರಾವಳಿ ಭಾಗದಲ್ಲಿ ಬಿಸಿಗಾಳಿಯಿಂದ ಜನರು ತತ್ತರಿಸಿದ್ದಾರೆ. ಮುಂಬೈಯಿಂದ ಹಿಡಿದು ರಾಜ್ಯ ಕರಾವಳಿ ಭಾಗದಲ್ಲೂ ತಾಪಮಾನ ಏರಿಕೆಯಾಗಿದೆ. ಹಾಗೆ ಈಗ ಈ ತಾಪಮಾನ ಮತ್ತಷ್ಟು ಏರಿಕಾಗುವ ಭೀತಿ ಕೂಡ ಇದೆ. ಒಂದು ಕಡೆ ಈ ರೀತಿ ತಾಪಮಾನ ಏರಿಕೆ, ಬಿಸಿಲು ಕಾಡುತ್ತಿದ್ದರೆ ಮತ್ತೊಂದು ಕಡೆ ಭೀಕರ ಮಳೆಯ ಮುನ್ಸೂಚನೆಯೂ ಇದೆ.

ಉತ್ತರ ಭಾರತದ ಹಲವು ಭಾಗದಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ ಎಂದು ಐಎಂಡಿ ಮಾಹಿತಿ ಹಂಚಿಕೊಂಡಿದೆ. ಬಿಸಿಗಾಳಿಯ ನಡುವೆ ಈ ಮಳೆ ಆಗಮನದ ಸುದ್ದಿ ಹಲವಿಗೆ ತಂಪು ತಂದಿದೆ. ಆದ್ರೆ ಉತ್ತರ ಭಾತರದ ಕೆಲವು ಭಾಗದಲ್ಲಿ ಮಾತ್ರವೇ ಮಳೆಯ ಸೂಚನೆ ನೀಡಲಾಗಿದೆ. ಉಳಿದಂತೆ ಹಲವು ಕಡೆ ಬಿಸಿಗಾಳಿ ಮುಂದುವರೆಯಲಿದೆ ಎಂದಿದೆ
ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಉತ್ತರ ಭಾರತದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಹಿಮಪಾತವಾಗುತ್ತಿದ್ದು, ಪಂಜಾಬ್ನಲ್ಲಿ ಆಲಿಕಲ್ಲು ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ 24 ಗಂಟೆಗಳಲ್ಲಿ ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಜಮ್ಮುವಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಉತ್ತರಾಖಂಡದಲ್ಲಿ ಮಳೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹಾಗೆ ಗೋವಾ ಮತ್ತು ಕೊಂಕಣದ ಪ್ರತ್ಯೇಕ ಪ್ರದೇಶಗಳಲ್ಲಿ ಒಣ ಹವೆ ಮುಂದುವರೆಯಲಿದ್ದು, ಇಲ್ಲಿಯೂ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಹಾಗೆ ದೆಹಲಿಯಲ್ಲಿ ಮಂಜು ಕವಿದ ವಾತಾವರಣ ಇರಲಿದೆ. ರಾಷ್ಟ್ರ ರಾಜಧಾನಿಯಲ್ಲಿ ಗರಿಷ್ಠ 28 ರಿಂದ 30 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ನಿರೀಕ್ಷೆ ಕೂಡ ಇದೆ.
ದಕ್ಷಿಣದಲ್ಲಿ ತಾಪಮಾನ ಮತ್ತಷ್ಟು ಏರಿಕೆ
ಉತ್ತರ ಭಾರತದ ಕೆಲವು ಭಾಗದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಆದ್ರೆ ದಕ್ಷಿಣ ಭಾರತದಲ್ಲಿ ಬಿಸಿಗಾಳಿ ಅಬ್ಬರಿಸಲಿದೆ ಎಂದಿದೆ. ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ರಾಜ್ಯದಲ್ಲಿಯೇ ಕಡಿಮೆ ಎಂಬಂತೆ 16.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ತಾಪಮಾನ ದಾಖಲಾಗಿದೆ. ಹಾಗೆ ಕಾರವಾರದಲ್ಲಿ ಗರಿಷ್ಠ 38 ಡಿಗ್ರಿ ದಾಖಲಾಗಿತ್ತು. ಇನ್ನೆರಡು ದಿನ ತಾಪಮಾದಲ್ಲಿ ಯಾವುದೇ ದೊಡ್ಡ ಬದಲಾವಣೆ ಆಗುವುದಿಲ್ಲ ಎಂದಿದೆ.
ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ ಹಾಗೆ ತಾಪಮಾನ ಕೂಡ ಏರಿಕೆಯಾಗಲಿದೆ. ಆದ್ರೆ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಇಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.



Click it and Unblock the Notifications