Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ತಾಪಮಾನ ಏರಿಕೆ ನಡುವೆ ಭಾರೀ ಮಳೆಯ ಎಚ್ಚರಿಕೆ..! ಯೆಲ್ಲೋ ಅಲರ್ಟ್ ಘೋಷಿಸಿದ ಐಎಂಡಿ!
ದೇಶದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನ ಹೀಟ್ ವೇವ್ ಜನರ ನಿದ್ದೆಗೆಡಿಸಿದೆ. ಈಗಾಗಲೆ ರಾಜ್ಯದ ಹಲವು ಭಾಗದಲ್ಲಿ ಗರಿಷ್ಟ ತಾಪಮಾನ ಏರಿಕೆ ಆಗುತ್ತಿರುವುದು ಎಲ್ಲರಲ್ಲೂ ಆತಂಕ ಹುಟ್ಟಿಸಿದೆ. ಏಕೆಂದರೆ ಇನ್ನು ಕೂಡ ಹಲವು ತಿಂಗಳ ಬೇಸಿಗೆ ಬಾಕಿ ಉಳಿದಿದೆ. ಅದರಲ್ಲೂ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿನಲ್ಲಿ ಈ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಅದರಲ್ಲೂ ಕರಾವಳಿ ಭಾಗದಲ್ಲಿ ಬಿಸಿಗಾಳಿಯಿಂದ ಜನರು ತತ್ತರಿಸಿದ್ದಾರೆ. ಮುಂಬೈಯಿಂದ ಹಿಡಿದು ರಾಜ್ಯ ಕರಾವಳಿ ಭಾಗದಲ್ಲೂ ತಾಪಮಾನ ಏರಿಕೆಯಾಗಿದೆ. ಹಾಗೆ ಈಗ ಈ ತಾಪಮಾನ ಮತ್ತಷ್ಟು ಏರಿಕಾಗುವ ಭೀತಿ ಕೂಡ ಇದೆ. ಒಂದು ಕಡೆ ಈ ರೀತಿ ತಾಪಮಾನ ಏರಿಕೆ, ಬಿಸಿಲು ಕಾಡುತ್ತಿದ್ದರೆ ಮತ್ತೊಂದು ಕಡೆ ಭೀಕರ ಮಳೆಯ ಮುನ್ಸೂಚನೆಯೂ ಇದೆ.

ಉತ್ತರ ಭಾರತದ ಹಲವು ಭಾಗದಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ ಎಂದು ಐಎಂಡಿ ಮಾಹಿತಿ ಹಂಚಿಕೊಂಡಿದೆ. ಬಿಸಿಗಾಳಿಯ ನಡುವೆ ಈ ಮಳೆ ಆಗಮನದ ಸುದ್ದಿ ಹಲವಿಗೆ ತಂಪು ತಂದಿದೆ. ಆದ್ರೆ ಉತ್ತರ ಭಾತರದ ಕೆಲವು ಭಾಗದಲ್ಲಿ ಮಾತ್ರವೇ ಮಳೆಯ ಸೂಚನೆ ನೀಡಲಾಗಿದೆ. ಉಳಿದಂತೆ ಹಲವು ಕಡೆ ಬಿಸಿಗಾಳಿ ಮುಂದುವರೆಯಲಿದೆ ಎಂದಿದೆ
ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಉತ್ತರ ಭಾರತದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಹಿಮಪಾತವಾಗುತ್ತಿದ್ದು, ಪಂಜಾಬ್ನಲ್ಲಿ ಆಲಿಕಲ್ಲು ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ 24 ಗಂಟೆಗಳಲ್ಲಿ ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಜಮ್ಮುವಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಉತ್ತರಾಖಂಡದಲ್ಲಿ ಮಳೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹಾಗೆ ಗೋವಾ ಮತ್ತು ಕೊಂಕಣದ ಪ್ರತ್ಯೇಕ ಪ್ರದೇಶಗಳಲ್ಲಿ ಒಣ ಹವೆ ಮುಂದುವರೆಯಲಿದ್ದು, ಇಲ್ಲಿಯೂ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಹಾಗೆ ದೆಹಲಿಯಲ್ಲಿ ಮಂಜು ಕವಿದ ವಾತಾವರಣ ಇರಲಿದೆ. ರಾಷ್ಟ್ರ ರಾಜಧಾನಿಯಲ್ಲಿ ಗರಿಷ್ಠ 28 ರಿಂದ 30 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ನಿರೀಕ್ಷೆ ಕೂಡ ಇದೆ.
ದಕ್ಷಿಣದಲ್ಲಿ ತಾಪಮಾನ ಮತ್ತಷ್ಟು ಏರಿಕೆ
ಉತ್ತರ ಭಾರತದ ಕೆಲವು ಭಾಗದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಆದ್ರೆ ದಕ್ಷಿಣ ಭಾರತದಲ್ಲಿ ಬಿಸಿಗಾಳಿ ಅಬ್ಬರಿಸಲಿದೆ ಎಂದಿದೆ. ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ರಾಜ್ಯದಲ್ಲಿಯೇ ಕಡಿಮೆ ಎಂಬಂತೆ 16.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ತಾಪಮಾನ ದಾಖಲಾಗಿದೆ. ಹಾಗೆ ಕಾರವಾರದಲ್ಲಿ ಗರಿಷ್ಠ 38 ಡಿಗ್ರಿ ದಾಖಲಾಗಿತ್ತು. ಇನ್ನೆರಡು ದಿನ ತಾಪಮಾದಲ್ಲಿ ಯಾವುದೇ ದೊಡ್ಡ ಬದಲಾವಣೆ ಆಗುವುದಿಲ್ಲ ಎಂದಿದೆ.
ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ ಹಾಗೆ ತಾಪಮಾನ ಕೂಡ ಏರಿಕೆಯಾಗಲಿದೆ. ಆದ್ರೆ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಇಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.



Click it and Unblock the Notifications