Latest Updates
-
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು? -
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ಇಂದು ರಾತ್ರಿ ದೆಹಲಿ-ಎನ್ಸಿಆರ್ನಲ್ಲಿ ಭೀಕರ ಮಳೆ: ಹೊರಗೆ ಹೋಗುವ ಪ್ಲಾನ್ ಇದೆಯಾ? ಎಚ್ಚರ! -
ಮಳೆಗಾಲದಲ್ಲಿ ಮನೆ ಹಾಳಾಗದಂತೆ ತಡೆಯುವುದು ಹೇಗೆ? ತೇವಾಂಶ ಮತ್ತು ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
'ಹೆಲ್ದಿ' ಆಹಾರದ ಹೆಸರಿನಲ್ಲಿ ಮೋಸ ಹೋಗ್ತಿದ್ದೀರಾ? FSSAI ಹೊಸ ನಿಯಮದ ಅಸಲಿಯತ್ತು ಇಲ್ಲಿದೆ! -
UGC NET 2026 ಅಡ್ಮಿಟ್ ಕಾರ್ಡ್ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ಹೋಗುವ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ!
ತಾಪಮಾನ ಏರಿಕೆ ನಡುವೆ ಭಾರೀ ಮಳೆಯ ಎಚ್ಚರಿಕೆ..! ಯೆಲ್ಲೋ ಅಲರ್ಟ್ ಘೋಷಿಸಿದ ಐಎಂಡಿ!
ದೇಶದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನ ಹೀಟ್ ವೇವ್ ಜನರ ನಿದ್ದೆಗೆಡಿಸಿದೆ. ಈಗಾಗಲೆ ರಾಜ್ಯದ ಹಲವು ಭಾಗದಲ್ಲಿ ಗರಿಷ್ಟ ತಾಪಮಾನ ಏರಿಕೆ ಆಗುತ್ತಿರುವುದು ಎಲ್ಲರಲ್ಲೂ ಆತಂಕ ಹುಟ್ಟಿಸಿದೆ. ಏಕೆಂದರೆ ಇನ್ನು ಕೂಡ ಹಲವು ತಿಂಗಳ ಬೇಸಿಗೆ ಬಾಕಿ ಉಳಿದಿದೆ. ಅದರಲ್ಲೂ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿನಲ್ಲಿ ಈ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಅದರಲ್ಲೂ ಕರಾವಳಿ ಭಾಗದಲ್ಲಿ ಬಿಸಿಗಾಳಿಯಿಂದ ಜನರು ತತ್ತರಿಸಿದ್ದಾರೆ. ಮುಂಬೈಯಿಂದ ಹಿಡಿದು ರಾಜ್ಯ ಕರಾವಳಿ ಭಾಗದಲ್ಲೂ ತಾಪಮಾನ ಏರಿಕೆಯಾಗಿದೆ. ಹಾಗೆ ಈಗ ಈ ತಾಪಮಾನ ಮತ್ತಷ್ಟು ಏರಿಕಾಗುವ ಭೀತಿ ಕೂಡ ಇದೆ. ಒಂದು ಕಡೆ ಈ ರೀತಿ ತಾಪಮಾನ ಏರಿಕೆ, ಬಿಸಿಲು ಕಾಡುತ್ತಿದ್ದರೆ ಮತ್ತೊಂದು ಕಡೆ ಭೀಕರ ಮಳೆಯ ಮುನ್ಸೂಚನೆಯೂ ಇದೆ.

ಉತ್ತರ ಭಾರತದ ಹಲವು ಭಾಗದಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ ಎಂದು ಐಎಂಡಿ ಮಾಹಿತಿ ಹಂಚಿಕೊಂಡಿದೆ. ಬಿಸಿಗಾಳಿಯ ನಡುವೆ ಈ ಮಳೆ ಆಗಮನದ ಸುದ್ದಿ ಹಲವಿಗೆ ತಂಪು ತಂದಿದೆ. ಆದ್ರೆ ಉತ್ತರ ಭಾತರದ ಕೆಲವು ಭಾಗದಲ್ಲಿ ಮಾತ್ರವೇ ಮಳೆಯ ಸೂಚನೆ ನೀಡಲಾಗಿದೆ. ಉಳಿದಂತೆ ಹಲವು ಕಡೆ ಬಿಸಿಗಾಳಿ ಮುಂದುವರೆಯಲಿದೆ ಎಂದಿದೆ
ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಉತ್ತರ ಭಾರತದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಹಿಮಪಾತವಾಗುತ್ತಿದ್ದು, ಪಂಜಾಬ್ನಲ್ಲಿ ಆಲಿಕಲ್ಲು ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ 24 ಗಂಟೆಗಳಲ್ಲಿ ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಜಮ್ಮುವಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಉತ್ತರಾಖಂಡದಲ್ಲಿ ಮಳೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹಾಗೆ ಗೋವಾ ಮತ್ತು ಕೊಂಕಣದ ಪ್ರತ್ಯೇಕ ಪ್ರದೇಶಗಳಲ್ಲಿ ಒಣ ಹವೆ ಮುಂದುವರೆಯಲಿದ್ದು, ಇಲ್ಲಿಯೂ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಹಾಗೆ ದೆಹಲಿಯಲ್ಲಿ ಮಂಜು ಕವಿದ ವಾತಾವರಣ ಇರಲಿದೆ. ರಾಷ್ಟ್ರ ರಾಜಧಾನಿಯಲ್ಲಿ ಗರಿಷ್ಠ 28 ರಿಂದ 30 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ನಿರೀಕ್ಷೆ ಕೂಡ ಇದೆ.
ದಕ್ಷಿಣದಲ್ಲಿ ತಾಪಮಾನ ಮತ್ತಷ್ಟು ಏರಿಕೆ
ಉತ್ತರ ಭಾರತದ ಕೆಲವು ಭಾಗದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಆದ್ರೆ ದಕ್ಷಿಣ ಭಾರತದಲ್ಲಿ ಬಿಸಿಗಾಳಿ ಅಬ್ಬರಿಸಲಿದೆ ಎಂದಿದೆ. ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ರಾಜ್ಯದಲ್ಲಿಯೇ ಕಡಿಮೆ ಎಂಬಂತೆ 16.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ತಾಪಮಾನ ದಾಖಲಾಗಿದೆ. ಹಾಗೆ ಕಾರವಾರದಲ್ಲಿ ಗರಿಷ್ಠ 38 ಡಿಗ್ರಿ ದಾಖಲಾಗಿತ್ತು. ಇನ್ನೆರಡು ದಿನ ತಾಪಮಾದಲ್ಲಿ ಯಾವುದೇ ದೊಡ್ಡ ಬದಲಾವಣೆ ಆಗುವುದಿಲ್ಲ ಎಂದಿದೆ.
ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ ಹಾಗೆ ತಾಪಮಾನ ಕೂಡ ಏರಿಕೆಯಾಗಲಿದೆ. ಆದ್ರೆ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಇಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.



Click it and Unblock the Notifications