Latest Updates
-
ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿ ವ್ಯಕ್ತಪಡಿಸುವ ಮುನ್ನ ಎಚ್ಚರ: ದಂಪತಿಗಳಿಗೆ ಇಲ್ಲಿದೆ ಡಿಜಿಟಲ್ ಶಿಷ್ಟಾಚಾರದ ಟಿಪ್ಸ್ -
ಮಳೆಗಾಲದ ಸಂಜೆ: ನಿಮ್ಮ ಅಪಾರ್ಟ್ಮೆಂಟ್ ಸೋರಿಕೆಯಾಗದಂತೆ ತಡೆಯಲು ಈ ತ್ವರಿತ ಟಿಪ್ಸ್ ಫಾಲೋ ಮಾಡಿ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: 30 ನಿಮಿಷದಲ್ಲಿ ಸುಂದರ ಪೂಕಳಂ ಬಿಡಿಸುವುದು ಹೇಗೆ? -
ಶ್ರಾವಣ ಸೋಮವಾರದ ವ್ರತ: ಆಫೀಸ್ ಕೆಲಸದ ನಡುವೆ ಮಧುಮೇಹಿಗಳು ಆರೋಗ್ಯವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್ -
ಮಳೆಗಾಲದ ಫೋಟೋಗಳು ವೈರಲ್ ಆಗಬೇಕಾ? ಈ ಸಿಂಪಲ್ ಮೊಬೈಲ್ ಟ್ರಿಕ್ಸ್ ಟ್ರೈ ಮಾಡಿ! -
ಆಗಸ್ಟ್ 17 ರಂದು ರಜೆ ಇದೆಯಾ? ಕೃಷ್ಣ ಜನ್ಮಾಷ್ಟಮಿ ಗೊಂದಲಕ್ಕೆ ಇಲ್ಲಿದೆ ಸ್ಪಷ್ಟ ಮಾಹಿತಿ -
ಪಾರ್ಸಿ ಹೊಸ ವರ್ಷದ ಸಂಭ್ರಮ: ನಿಮ್ಮ ಪಾರ್ಸಿ ಸಂಬಂಧಿಕರ ಮನೆಗೆ ಹೋಗುವಾಗ ಈ ಶಿಷ್ಟಾಚಾರಗಳನ್ನು ಮರೆಯದಿರಿ! -
ಸ್ವಾತಂತ್ರ್ಯ ದಿನಾಚರಣೆ ನಂತರದ ಕ್ಲೀನಪ್: ಬಾಲ್ಕನಿ ಸ್ವಚ್ಛತೆ ಮತ್ತು ರಾಷ್ಟ್ರಧ್ವಜದ ಗೌರವಯುತ ನಿರ್ವಹಣೆ -
ಸ್ವಾತಂತ್ರ್ಯ ದಿನದ ಸಂಭ್ರಮ: ಟೆರೇಸ್ ಮೇಲೆ ಗಾಳಿಪಟ ಹಾರಿಸುವ ಮುನ್ನ ಈ ಸುರಕ್ಷತಾ ಕ್ರಮಗಳನ್ನು ಮರೆಯದಿರಿ! -
ಸ್ವಾತಂತ್ರ್ಯ ದಿನಾಚರಣೆ: ಸಿಹಿ ತಿನಿಸುಗಳ ಸವಿಯ ಜೊತೆಗೆ ಆರೋಗ್ಯವನ್ನೂ ಕಾಪಾಡಿಕೊಳ್ಳಿ, ಇಲ್ಲಿದೆ ಸಿಂಪಲ್ ಟಿಪ್ಸ್!
ಭಾದ್ರಪದ ಮಾಸದಲ್ಲಿ ಶುಭಕಾರ್ಯ ಮಾಡಬಾರದು ಏಕೆ?
ಹಿಂದೂ ಮಾಸದ 6ನೇ ತಿಂಗಳು ಭಾದ್ರಪದ ಮಾಸ. ಭಾದ್ರಪದ ಮಾಸವೆಂದರೆ ಪಟ್ ಅಂತ ನೆನೆಪಿಗೆ ಬರುವುದು ಗಣೇಶ ಚತುರ್ಥಿ. ಗಣೇಶ ಚತುರ್ಥಿಯನ್ನು ದೇಶದಾದ್ಯಂತ ಸಡಗರ-ಸಂಭ್ರಮದಿಂದ ತುಂಬಾನೇ ಅದ್ಧೂರಿಯಾಗಿ ಆಚರಿಸಲಾಗುವುದು. ಧಾರ್ಮಿಕ ನಂಬಿಕೆ ಪ್ರಕಾರ ಈ ತಿಂಗಳಿನಲ್ಲಿ ಶುಭ ಕಾರ್ಯಗಳನ್ನು ಮಾಡಬಾರದು ಎಂದು ಹೇಳಲಾಗುವುದು. ಈ ತಿಂಗಳು ಉಪವಾಸ ಹಾಗೂ ಪೂಜೆಗೆ ತುಂಬಾನೇ ಶುಭ ತಿಂಗಳಲಾಗಿದೆ. ಕರ್ನಾಟಕದಲ್ಲಿ ಭಾದ್ರಪದ ಮಾಸ ಸೆಪ್ಟೆಂಬರ್ 16ರಿಂದ ಶುರುವಾಗುವುದು, ಅಕ್ಟೋಬರ್ 14ಕ್ಕೆ ಮುಕ್ತಾಯವಾಗಲಿದೆ.

ಭಾದ್ರಪದ ಮಾಸದಲ್ಲಿ ಕೆಲವೊಂದು ಕಾರ್ಯಗಳನ್ನು ಮಾಡಬಾರದು ಎಂದು ಹೇಳಲಾಗುವುದು. ಈ ತಿಂಗಳಿನಲ್ಲಿ ಯಾವ ಕಾರ್ಯವನ್ನು ಮಾಡಬಾರದು, ಯಾವ ಕಾರ್ಯವನ್ನು ಮಾಡಬೇಕು ಎಂದು ನೋಡೋಣ ಬನ್ನಿ:
* ಯಾವುದೇ ಶುಭ ಕಾರ್ಯ ಮಾಡಬಾರದು: ಭಾದ್ರಪದ ಮಾಸ ಪೂಜಾ ಕಾರ್ಯಗಳಿಗೆ ಒಳ್ಳೆಯದು, ಆದರೆ ಯಾವುದೇ ಶುಭ ಕಾರ್ಯಗಳನ್ನು ಮಾಡಬಾರದು. ಏಕೆಂದರೆ ಭಾದ್ರಪದ ಮಾಸವನ್ನು ಶೂನ್ಯ ಮಾಸವೆಂದು ಕರೆಯಲಾಗುವುದು. ಈ ತಿಂಗಳಿನಲ್ಲಿ ಮದುವೆ, ನಿಶ್ಚಿತಾರ್ಥ, ಮಗುವಿನ ನಾಮಕರಣ, ಮಕ್ಕಳ ತಲೆ ಕೂದಲು ತೆಗೆಯುವುದು, ಗೃಹ ಪ್ರವೇಶ, ಹೊಸದಾಗಿ ಉದ್ಯಮ ಪ್ರಾರಂಭಿಸುವುದು ಈ ರೀತಿ ಯಾವುದೇ ಶುಭ ಕಾರ್ಯ ಮಾಡಬಾರದು.
* ಈ ಬಗೆಯ ಆಹಾರಗಳನ್ನು ಸೇವಿಸಬಾರದು
ಭಾದ್ರಪದ ಮಾಸದಲ್ಲಿ ಬೆಲ್ಲ, ಎಳ್ಳು, ಮೊಸರು, ತೆಂಗಿನೆಣ್ಣೆ, ಎಳ್ಳೆಣ್ಣೆ ಇವುಗಳನ್ನು ಬಳಸಬಾರದು. ಈ ಆಹಾರವನ್ನು ಭಾದ್ರಪದ ಮಾಸದಲ್ಲಿ ಬಳಸಿದರೆ ಆರೋಗ್ಯಕ್ಕೆ ಒಳ್ಳೆಯದಲ್ಲ, ಇದರಿಂದ ಆರೋಗ್ಯ ಸಮಸ್ಯೆ ಉಂಟಾಗುವುದು ಎಂದು ಹೇಳಲಾಗುವುದು.
* ಧಾನ್ಯ ಪಡೆದ ಆಹಾರ ಸೇವಿಸಬೇಡಿ
ಈ ತಿಂಗಳಿನಲ್ಲಿ ಧಾನ್ಯ ಪಡೆದ ಆಹಾರ ಸೇವಿಸಬಾರದು ಎಂದು ಹೇಳಲಾಗುವುದು. ಏಕೆಂದರೆ ಈ ಸಮಯದಲ್ಲಿ ಧಾನ ಪಡೆದ ಅಕ್ಕಿಯಿಂದ ಆಹಾರ ಮಾಡಿ ಬಳಸಿದರೆ ಲಕ್ಷ್ಮಿ ಕೃಪೆ ಕಡಿಮೆಯಾಗುವುದು ಎಂದು ಹೇಳಲಾಗುವುದು. ಆದ್ದರಿಂದ ಈ ತಿಂಗಳಿನಲ್ಲಿ ದಾನ ಪಡೆದ ಆಹಾರ ವಸ್ತುಗಳನ್ನು ಬಳಸಬೇಡಿ.
ಭಾದ್ರಪದ ಮಾಸದಲ್ಲಿ ಈ ಕಾರ್ಯಗಳನ್ನು ಮಾಡಲು ತುಂಬಾನೇ ಶುಭವಾಗಿದೆ
* ಸೇವಾ ಕಾರ್ಯಗಳಿಗೆ ಈ ತಿಂಗಳು ತುಂಬಾನೇ ಒಳ್ಳೆಯದು: ಈ ತಿಂಗಳು ಬಡವರಿಗೆ ದಾನ ಮಾಡಿ, ಸಮಾಜ ಸೇವಾ ಕಾರ್ಯಗಳಿಗೆ ಈ ತಿಂಗಳು ಶುಭವಾಗಿದೆ. ಸೇವಾ ಕಾರ್ಯ ಮಾಡುವುದರಿಂದ ಗಣೇಶನ ಆಶೀರ್ವಾದ ಸಿಗಲಿದೆ.
* ಈ ಅವಧಿಯಲ್ಲಿ ಧಾರ್ಮಿಕ ಕಾರ್ಯಗಳನ್ನು ಮಾಡಿ: ಧಾರ್ಮಿಕ ಕಾರ್ಯಗಳಿಗೆ ಈ ಅವಧಿ ತುಂಬಾನೇ ಶುಭವಾಗಿದೆ,
* ಶ್ರೀ ಗಣೇಶನಿಗೆ ಲಡ್ಡು, ಮೋದಕಗಳನ್ನು ಅರ್ಪಿಸಿ ಆರಾಧಿಸಿ.
* ದನಗಳಿಗೆ ಹಸಿರು ಮೇವು ದಾನ ಮಾಡಿ
* ಭಾದ್ರಪದ ತಿಂಗಳಿನಲ್ಲಿ ಮೊಸರು ತಿನ್ನಬಾರದು ಆದರೆ ಹಾಲು ಹಾಗೂ ತುಪ್ಪವನ್ನು ಸೇವಿಸಬಹುದು.
* ನೈಸರ್ಗಿಕಕ್ಕೆ ಹತ್ತಿರವಾಗಿ. ನೀವು ಆಹಾರವನ್ನು ಕುರ್ಚಿ, ಟೇಬಲ್ನಲ್ಲಿ ತಿನ್ನುವ ಬದಲಿಗೆ ನೆಲದ ಮೇಲೆ ಕೂತು ತಿನ್ನಿ.



Click it and Unblock the Notifications