Latest Updates
-
ಲಿವ್-ಇನ್ ಸಂಬಂಧ ಮುರಿದರೆ ಕ್ರಿಮಿನಲ್ ಕೇಸ್? ಸುಪ್ರೀಂ ಕೋರ್ಟ್ನಿಂದ ಬಂತು ಬಿಗ್ ಶಾಕ್! -
ಉರಿಬಿಸಿಲಿನ ತಾಪಕ್ಕೆ ಸುಸ್ತಾದ್ರಾ? ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಹೀಟ್ ವೇವ್ ಎಚ್ಚರಿಕೆ: ಬಿಸಿಲಿನ ಬೇಗೆಯಿಂದ ಬಚಾವಾಗಲು ಈ ಪಾನೀಯಗಳೇ ಮದ್ದು! -
ಅನುಷ್ಕಾ ಶರ್ಮಾ ಐಪಿಎಲ್ ಲುಕ್: ಸಿಂಪಲ್ ಡ್ರೆಸ್ನಲ್ಲೇ ಮ್ಯಾಜಿಕ್ ಮಾಡಿದ್ದು ಹೇಗೆ? -
ಬಿಸಿಗಾಳಿ ಎಚ್ಚರಿಕೆ: ಏಪ್ರಿಲ್ ಬಿಸಿಲಿನಿಂದ ಪಾರಾಗಲು ನಿಮ್ಮ ಫಿಟ್ನೆಸ್ ರೂಟೀನ್ ಬದಲಾಯಿಸುವುದು ಹೇಗೆ? -
ಪೊಲೀಸ್ ಕಿರುಕುಳದಿಂದ ಬೇಸತ್ತಿದ್ದೀರಾ? ಪ್ರೇಮಿಗಳಿಗೆ ರಕ್ಷಣೆ ನೀಡಲು ಹೈಕೋರ್ಟ್ ಕೊಟ್ಟಿದೆ ಬಿಗ್ ರಿಲೀಫ್! -
ಬಿಸಿಲ ಬೇಗೆಯಿಂದ ತತ್ತರಿಸಿದೆಯೇ? ನಿಮ್ಮ ಮನೆ ಮತ್ತು ಗಿಡಗಳನ್ನು ತಂಪಾಗಿರಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಸರಳ ಟಿಪ್ಸ್ ಪಾಲಿಸಿ: ಸುಡುವ ಬಿಸಿಲಿನಲ್ಲಿ ಆರೋಗ್ಯವಾಗಿರುವುದು ಹೇಗೆ? -
ಸುಡುವ ಬಿಸಿಲಿಗೆ ಸುಸ್ತಾದ್ರಾ? ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ಕೂಲಿಂಗ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿಯ ಅಬ್ಬರ: ನಿಮ್ಮ ವರ್ಕೌಟ್ ರೂಟೀನ್ ಬದಲಾಯಿಸದಿದ್ದರೆ ಕಾದಿದೆ ದೊಡ್ಡ ಅಪಾಯ!
ಭಾದ್ರಪದ ಮಾಸದಲ್ಲಿ ಶುಭಕಾರ್ಯ ಮಾಡಬಾರದು ಏಕೆ?
ಹಿಂದೂ ಮಾಸದ 6ನೇ ತಿಂಗಳು ಭಾದ್ರಪದ ಮಾಸ. ಭಾದ್ರಪದ ಮಾಸವೆಂದರೆ ಪಟ್ ಅಂತ ನೆನೆಪಿಗೆ ಬರುವುದು ಗಣೇಶ ಚತುರ್ಥಿ. ಗಣೇಶ ಚತುರ್ಥಿಯನ್ನು ದೇಶದಾದ್ಯಂತ ಸಡಗರ-ಸಂಭ್ರಮದಿಂದ ತುಂಬಾನೇ ಅದ್ಧೂರಿಯಾಗಿ ಆಚರಿಸಲಾಗುವುದು. ಧಾರ್ಮಿಕ ನಂಬಿಕೆ ಪ್ರಕಾರ ಈ ತಿಂಗಳಿನಲ್ಲಿ ಶುಭ ಕಾರ್ಯಗಳನ್ನು ಮಾಡಬಾರದು ಎಂದು ಹೇಳಲಾಗುವುದು. ಈ ತಿಂಗಳು ಉಪವಾಸ ಹಾಗೂ ಪೂಜೆಗೆ ತುಂಬಾನೇ ಶುಭ ತಿಂಗಳಲಾಗಿದೆ. ಕರ್ನಾಟಕದಲ್ಲಿ ಭಾದ್ರಪದ ಮಾಸ ಸೆಪ್ಟೆಂಬರ್ 16ರಿಂದ ಶುರುವಾಗುವುದು, ಅಕ್ಟೋಬರ್ 14ಕ್ಕೆ ಮುಕ್ತಾಯವಾಗಲಿದೆ.

ಭಾದ್ರಪದ ಮಾಸದಲ್ಲಿ ಕೆಲವೊಂದು ಕಾರ್ಯಗಳನ್ನು ಮಾಡಬಾರದು ಎಂದು ಹೇಳಲಾಗುವುದು. ಈ ತಿಂಗಳಿನಲ್ಲಿ ಯಾವ ಕಾರ್ಯವನ್ನು ಮಾಡಬಾರದು, ಯಾವ ಕಾರ್ಯವನ್ನು ಮಾಡಬೇಕು ಎಂದು ನೋಡೋಣ ಬನ್ನಿ:
* ಯಾವುದೇ ಶುಭ ಕಾರ್ಯ ಮಾಡಬಾರದು: ಭಾದ್ರಪದ ಮಾಸ ಪೂಜಾ ಕಾರ್ಯಗಳಿಗೆ ಒಳ್ಳೆಯದು, ಆದರೆ ಯಾವುದೇ ಶುಭ ಕಾರ್ಯಗಳನ್ನು ಮಾಡಬಾರದು. ಏಕೆಂದರೆ ಭಾದ್ರಪದ ಮಾಸವನ್ನು ಶೂನ್ಯ ಮಾಸವೆಂದು ಕರೆಯಲಾಗುವುದು. ಈ ತಿಂಗಳಿನಲ್ಲಿ ಮದುವೆ, ನಿಶ್ಚಿತಾರ್ಥ, ಮಗುವಿನ ನಾಮಕರಣ, ಮಕ್ಕಳ ತಲೆ ಕೂದಲು ತೆಗೆಯುವುದು, ಗೃಹ ಪ್ರವೇಶ, ಹೊಸದಾಗಿ ಉದ್ಯಮ ಪ್ರಾರಂಭಿಸುವುದು ಈ ರೀತಿ ಯಾವುದೇ ಶುಭ ಕಾರ್ಯ ಮಾಡಬಾರದು.
* ಈ ಬಗೆಯ ಆಹಾರಗಳನ್ನು ಸೇವಿಸಬಾರದು
ಭಾದ್ರಪದ ಮಾಸದಲ್ಲಿ ಬೆಲ್ಲ, ಎಳ್ಳು, ಮೊಸರು, ತೆಂಗಿನೆಣ್ಣೆ, ಎಳ್ಳೆಣ್ಣೆ ಇವುಗಳನ್ನು ಬಳಸಬಾರದು. ಈ ಆಹಾರವನ್ನು ಭಾದ್ರಪದ ಮಾಸದಲ್ಲಿ ಬಳಸಿದರೆ ಆರೋಗ್ಯಕ್ಕೆ ಒಳ್ಳೆಯದಲ್ಲ, ಇದರಿಂದ ಆರೋಗ್ಯ ಸಮಸ್ಯೆ ಉಂಟಾಗುವುದು ಎಂದು ಹೇಳಲಾಗುವುದು.
* ಧಾನ್ಯ ಪಡೆದ ಆಹಾರ ಸೇವಿಸಬೇಡಿ
ಈ ತಿಂಗಳಿನಲ್ಲಿ ಧಾನ್ಯ ಪಡೆದ ಆಹಾರ ಸೇವಿಸಬಾರದು ಎಂದು ಹೇಳಲಾಗುವುದು. ಏಕೆಂದರೆ ಈ ಸಮಯದಲ್ಲಿ ಧಾನ ಪಡೆದ ಅಕ್ಕಿಯಿಂದ ಆಹಾರ ಮಾಡಿ ಬಳಸಿದರೆ ಲಕ್ಷ್ಮಿ ಕೃಪೆ ಕಡಿಮೆಯಾಗುವುದು ಎಂದು ಹೇಳಲಾಗುವುದು. ಆದ್ದರಿಂದ ಈ ತಿಂಗಳಿನಲ್ಲಿ ದಾನ ಪಡೆದ ಆಹಾರ ವಸ್ತುಗಳನ್ನು ಬಳಸಬೇಡಿ.
ಭಾದ್ರಪದ ಮಾಸದಲ್ಲಿ ಈ ಕಾರ್ಯಗಳನ್ನು ಮಾಡಲು ತುಂಬಾನೇ ಶುಭವಾಗಿದೆ
* ಸೇವಾ ಕಾರ್ಯಗಳಿಗೆ ಈ ತಿಂಗಳು ತುಂಬಾನೇ ಒಳ್ಳೆಯದು: ಈ ತಿಂಗಳು ಬಡವರಿಗೆ ದಾನ ಮಾಡಿ, ಸಮಾಜ ಸೇವಾ ಕಾರ್ಯಗಳಿಗೆ ಈ ತಿಂಗಳು ಶುಭವಾಗಿದೆ. ಸೇವಾ ಕಾರ್ಯ ಮಾಡುವುದರಿಂದ ಗಣೇಶನ ಆಶೀರ್ವಾದ ಸಿಗಲಿದೆ.
* ಈ ಅವಧಿಯಲ್ಲಿ ಧಾರ್ಮಿಕ ಕಾರ್ಯಗಳನ್ನು ಮಾಡಿ: ಧಾರ್ಮಿಕ ಕಾರ್ಯಗಳಿಗೆ ಈ ಅವಧಿ ತುಂಬಾನೇ ಶುಭವಾಗಿದೆ,
* ಶ್ರೀ ಗಣೇಶನಿಗೆ ಲಡ್ಡು, ಮೋದಕಗಳನ್ನು ಅರ್ಪಿಸಿ ಆರಾಧಿಸಿ.
* ದನಗಳಿಗೆ ಹಸಿರು ಮೇವು ದಾನ ಮಾಡಿ
* ಭಾದ್ರಪದ ತಿಂಗಳಿನಲ್ಲಿ ಮೊಸರು ತಿನ್ನಬಾರದು ಆದರೆ ಹಾಲು ಹಾಗೂ ತುಪ್ಪವನ್ನು ಸೇವಿಸಬಹುದು.
* ನೈಸರ್ಗಿಕಕ್ಕೆ ಹತ್ತಿರವಾಗಿ. ನೀವು ಆಹಾರವನ್ನು ಕುರ್ಚಿ, ಟೇಬಲ್ನಲ್ಲಿ ತಿನ್ನುವ ಬದಲಿಗೆ ನೆಲದ ಮೇಲೆ ಕೂತು ತಿನ್ನಿ.



Click it and Unblock the Notifications