Latest Updates
-
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
45 ಡಿಗ್ರಿ ಬಿಸಿಲಲ್ಲಿ ಮದುವೆ ಪ್ಲಾನ್ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ ಎಚ್ಚರಿಕೆ ಮರೆಯದಿರಿ! -
ಶಾಖದ ಅಲೆ ಎಚ್ಚರಿಕೆ: ಎಸಿ ಇಲ್ಲದೆ ಮನೆಯನ್ನು ತಂಪಾಗಿಡಲು ಮತ್ತು ನಿಮ್ಮ ಗಿಡಗಳನ್ನು ಬಿಸಿಲಿನಿಂದ ರಕ್ಷಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ಪಾನೀಯ ಮತ್ತು ಆಹಾರವೇ ಸಂಜೀವಿನಿ! -
ಸೀರೆ ಉಡೋದ್ರಲ್ಲಿ ಹೊಸ ಕ್ರಾಂತಿ: ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗ್ತಿರೋ 'ದೇಸಿ-ಕೋರ್' ಸೀರೆ ಸ್ಟೈಲ್ಸ್ ಮಿಸ್ ಮಾಡ್ಬೇಡಿ!
ಭಾದ್ರಪದ ಮಾಸದಲ್ಲಿ ಶುಭಕಾರ್ಯ ಮಾಡಬಾರದು ಏಕೆ?
ಹಿಂದೂ ಮಾಸದ 6ನೇ ತಿಂಗಳು ಭಾದ್ರಪದ ಮಾಸ. ಭಾದ್ರಪದ ಮಾಸವೆಂದರೆ ಪಟ್ ಅಂತ ನೆನೆಪಿಗೆ ಬರುವುದು ಗಣೇಶ ಚತುರ್ಥಿ. ಗಣೇಶ ಚತುರ್ಥಿಯನ್ನು ದೇಶದಾದ್ಯಂತ ಸಡಗರ-ಸಂಭ್ರಮದಿಂದ ತುಂಬಾನೇ ಅದ್ಧೂರಿಯಾಗಿ ಆಚರಿಸಲಾಗುವುದು. ಧಾರ್ಮಿಕ ನಂಬಿಕೆ ಪ್ರಕಾರ ಈ ತಿಂಗಳಿನಲ್ಲಿ ಶುಭ ಕಾರ್ಯಗಳನ್ನು ಮಾಡಬಾರದು ಎಂದು ಹೇಳಲಾಗುವುದು. ಈ ತಿಂಗಳು ಉಪವಾಸ ಹಾಗೂ ಪೂಜೆಗೆ ತುಂಬಾನೇ ಶುಭ ತಿಂಗಳಲಾಗಿದೆ. ಕರ್ನಾಟಕದಲ್ಲಿ ಭಾದ್ರಪದ ಮಾಸ ಸೆಪ್ಟೆಂಬರ್ 16ರಿಂದ ಶುರುವಾಗುವುದು, ಅಕ್ಟೋಬರ್ 14ಕ್ಕೆ ಮುಕ್ತಾಯವಾಗಲಿದೆ.

ಭಾದ್ರಪದ ಮಾಸದಲ್ಲಿ ಕೆಲವೊಂದು ಕಾರ್ಯಗಳನ್ನು ಮಾಡಬಾರದು ಎಂದು ಹೇಳಲಾಗುವುದು. ಈ ತಿಂಗಳಿನಲ್ಲಿ ಯಾವ ಕಾರ್ಯವನ್ನು ಮಾಡಬಾರದು, ಯಾವ ಕಾರ್ಯವನ್ನು ಮಾಡಬೇಕು ಎಂದು ನೋಡೋಣ ಬನ್ನಿ:
* ಯಾವುದೇ ಶುಭ ಕಾರ್ಯ ಮಾಡಬಾರದು: ಭಾದ್ರಪದ ಮಾಸ ಪೂಜಾ ಕಾರ್ಯಗಳಿಗೆ ಒಳ್ಳೆಯದು, ಆದರೆ ಯಾವುದೇ ಶುಭ ಕಾರ್ಯಗಳನ್ನು ಮಾಡಬಾರದು. ಏಕೆಂದರೆ ಭಾದ್ರಪದ ಮಾಸವನ್ನು ಶೂನ್ಯ ಮಾಸವೆಂದು ಕರೆಯಲಾಗುವುದು. ಈ ತಿಂಗಳಿನಲ್ಲಿ ಮದುವೆ, ನಿಶ್ಚಿತಾರ್ಥ, ಮಗುವಿನ ನಾಮಕರಣ, ಮಕ್ಕಳ ತಲೆ ಕೂದಲು ತೆಗೆಯುವುದು, ಗೃಹ ಪ್ರವೇಶ, ಹೊಸದಾಗಿ ಉದ್ಯಮ ಪ್ರಾರಂಭಿಸುವುದು ಈ ರೀತಿ ಯಾವುದೇ ಶುಭ ಕಾರ್ಯ ಮಾಡಬಾರದು.
* ಈ ಬಗೆಯ ಆಹಾರಗಳನ್ನು ಸೇವಿಸಬಾರದು
ಭಾದ್ರಪದ ಮಾಸದಲ್ಲಿ ಬೆಲ್ಲ, ಎಳ್ಳು, ಮೊಸರು, ತೆಂಗಿನೆಣ್ಣೆ, ಎಳ್ಳೆಣ್ಣೆ ಇವುಗಳನ್ನು ಬಳಸಬಾರದು. ಈ ಆಹಾರವನ್ನು ಭಾದ್ರಪದ ಮಾಸದಲ್ಲಿ ಬಳಸಿದರೆ ಆರೋಗ್ಯಕ್ಕೆ ಒಳ್ಳೆಯದಲ್ಲ, ಇದರಿಂದ ಆರೋಗ್ಯ ಸಮಸ್ಯೆ ಉಂಟಾಗುವುದು ಎಂದು ಹೇಳಲಾಗುವುದು.
* ಧಾನ್ಯ ಪಡೆದ ಆಹಾರ ಸೇವಿಸಬೇಡಿ
ಈ ತಿಂಗಳಿನಲ್ಲಿ ಧಾನ್ಯ ಪಡೆದ ಆಹಾರ ಸೇವಿಸಬಾರದು ಎಂದು ಹೇಳಲಾಗುವುದು. ಏಕೆಂದರೆ ಈ ಸಮಯದಲ್ಲಿ ಧಾನ ಪಡೆದ ಅಕ್ಕಿಯಿಂದ ಆಹಾರ ಮಾಡಿ ಬಳಸಿದರೆ ಲಕ್ಷ್ಮಿ ಕೃಪೆ ಕಡಿಮೆಯಾಗುವುದು ಎಂದು ಹೇಳಲಾಗುವುದು. ಆದ್ದರಿಂದ ಈ ತಿಂಗಳಿನಲ್ಲಿ ದಾನ ಪಡೆದ ಆಹಾರ ವಸ್ತುಗಳನ್ನು ಬಳಸಬೇಡಿ.
ಭಾದ್ರಪದ ಮಾಸದಲ್ಲಿ ಈ ಕಾರ್ಯಗಳನ್ನು ಮಾಡಲು ತುಂಬಾನೇ ಶುಭವಾಗಿದೆ
* ಸೇವಾ ಕಾರ್ಯಗಳಿಗೆ ಈ ತಿಂಗಳು ತುಂಬಾನೇ ಒಳ್ಳೆಯದು: ಈ ತಿಂಗಳು ಬಡವರಿಗೆ ದಾನ ಮಾಡಿ, ಸಮಾಜ ಸೇವಾ ಕಾರ್ಯಗಳಿಗೆ ಈ ತಿಂಗಳು ಶುಭವಾಗಿದೆ. ಸೇವಾ ಕಾರ್ಯ ಮಾಡುವುದರಿಂದ ಗಣೇಶನ ಆಶೀರ್ವಾದ ಸಿಗಲಿದೆ.
* ಈ ಅವಧಿಯಲ್ಲಿ ಧಾರ್ಮಿಕ ಕಾರ್ಯಗಳನ್ನು ಮಾಡಿ: ಧಾರ್ಮಿಕ ಕಾರ್ಯಗಳಿಗೆ ಈ ಅವಧಿ ತುಂಬಾನೇ ಶುಭವಾಗಿದೆ,
* ಶ್ರೀ ಗಣೇಶನಿಗೆ ಲಡ್ಡು, ಮೋದಕಗಳನ್ನು ಅರ್ಪಿಸಿ ಆರಾಧಿಸಿ.
* ದನಗಳಿಗೆ ಹಸಿರು ಮೇವು ದಾನ ಮಾಡಿ
* ಭಾದ್ರಪದ ತಿಂಗಳಿನಲ್ಲಿ ಮೊಸರು ತಿನ್ನಬಾರದು ಆದರೆ ಹಾಲು ಹಾಗೂ ತುಪ್ಪವನ್ನು ಸೇವಿಸಬಹುದು.
* ನೈಸರ್ಗಿಕಕ್ಕೆ ಹತ್ತಿರವಾಗಿ. ನೀವು ಆಹಾರವನ್ನು ಕುರ್ಚಿ, ಟೇಬಲ್ನಲ್ಲಿ ತಿನ್ನುವ ಬದಲಿಗೆ ನೆಲದ ಮೇಲೆ ಕೂತು ತಿನ್ನಿ.



Click it and Unblock the Notifications