Latest Updates
-
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ!
ಭಾದ್ರಪದ ಮಾಸದಲ್ಲಿ ಶುಭಕಾರ್ಯ ಮಾಡಬಾರದು ಏಕೆ?
ಹಿಂದೂ ಮಾಸದ 6ನೇ ತಿಂಗಳು ಭಾದ್ರಪದ ಮಾಸ. ಭಾದ್ರಪದ ಮಾಸವೆಂದರೆ ಪಟ್ ಅಂತ ನೆನೆಪಿಗೆ ಬರುವುದು ಗಣೇಶ ಚತುರ್ಥಿ. ಗಣೇಶ ಚತುರ್ಥಿಯನ್ನು ದೇಶದಾದ್ಯಂತ ಸಡಗರ-ಸಂಭ್ರಮದಿಂದ ತುಂಬಾನೇ ಅದ್ಧೂರಿಯಾಗಿ ಆಚರಿಸಲಾಗುವುದು. ಧಾರ್ಮಿಕ ನಂಬಿಕೆ ಪ್ರಕಾರ ಈ ತಿಂಗಳಿನಲ್ಲಿ ಶುಭ ಕಾರ್ಯಗಳನ್ನು ಮಾಡಬಾರದು ಎಂದು ಹೇಳಲಾಗುವುದು. ಈ ತಿಂಗಳು ಉಪವಾಸ ಹಾಗೂ ಪೂಜೆಗೆ ತುಂಬಾನೇ ಶುಭ ತಿಂಗಳಲಾಗಿದೆ. ಕರ್ನಾಟಕದಲ್ಲಿ ಭಾದ್ರಪದ ಮಾಸ ಸೆಪ್ಟೆಂಬರ್ 16ರಿಂದ ಶುರುವಾಗುವುದು, ಅಕ್ಟೋಬರ್ 14ಕ್ಕೆ ಮುಕ್ತಾಯವಾಗಲಿದೆ.

ಭಾದ್ರಪದ ಮಾಸದಲ್ಲಿ ಕೆಲವೊಂದು ಕಾರ್ಯಗಳನ್ನು ಮಾಡಬಾರದು ಎಂದು ಹೇಳಲಾಗುವುದು. ಈ ತಿಂಗಳಿನಲ್ಲಿ ಯಾವ ಕಾರ್ಯವನ್ನು ಮಾಡಬಾರದು, ಯಾವ ಕಾರ್ಯವನ್ನು ಮಾಡಬೇಕು ಎಂದು ನೋಡೋಣ ಬನ್ನಿ:
* ಯಾವುದೇ ಶುಭ ಕಾರ್ಯ ಮಾಡಬಾರದು: ಭಾದ್ರಪದ ಮಾಸ ಪೂಜಾ ಕಾರ್ಯಗಳಿಗೆ ಒಳ್ಳೆಯದು, ಆದರೆ ಯಾವುದೇ ಶುಭ ಕಾರ್ಯಗಳನ್ನು ಮಾಡಬಾರದು. ಏಕೆಂದರೆ ಭಾದ್ರಪದ ಮಾಸವನ್ನು ಶೂನ್ಯ ಮಾಸವೆಂದು ಕರೆಯಲಾಗುವುದು. ಈ ತಿಂಗಳಿನಲ್ಲಿ ಮದುವೆ, ನಿಶ್ಚಿತಾರ್ಥ, ಮಗುವಿನ ನಾಮಕರಣ, ಮಕ್ಕಳ ತಲೆ ಕೂದಲು ತೆಗೆಯುವುದು, ಗೃಹ ಪ್ರವೇಶ, ಹೊಸದಾಗಿ ಉದ್ಯಮ ಪ್ರಾರಂಭಿಸುವುದು ಈ ರೀತಿ ಯಾವುದೇ ಶುಭ ಕಾರ್ಯ ಮಾಡಬಾರದು.
* ಈ ಬಗೆಯ ಆಹಾರಗಳನ್ನು ಸೇವಿಸಬಾರದು
ಭಾದ್ರಪದ ಮಾಸದಲ್ಲಿ ಬೆಲ್ಲ, ಎಳ್ಳು, ಮೊಸರು, ತೆಂಗಿನೆಣ್ಣೆ, ಎಳ್ಳೆಣ್ಣೆ ಇವುಗಳನ್ನು ಬಳಸಬಾರದು. ಈ ಆಹಾರವನ್ನು ಭಾದ್ರಪದ ಮಾಸದಲ್ಲಿ ಬಳಸಿದರೆ ಆರೋಗ್ಯಕ್ಕೆ ಒಳ್ಳೆಯದಲ್ಲ, ಇದರಿಂದ ಆರೋಗ್ಯ ಸಮಸ್ಯೆ ಉಂಟಾಗುವುದು ಎಂದು ಹೇಳಲಾಗುವುದು.
* ಧಾನ್ಯ ಪಡೆದ ಆಹಾರ ಸೇವಿಸಬೇಡಿ
ಈ ತಿಂಗಳಿನಲ್ಲಿ ಧಾನ್ಯ ಪಡೆದ ಆಹಾರ ಸೇವಿಸಬಾರದು ಎಂದು ಹೇಳಲಾಗುವುದು. ಏಕೆಂದರೆ ಈ ಸಮಯದಲ್ಲಿ ಧಾನ ಪಡೆದ ಅಕ್ಕಿಯಿಂದ ಆಹಾರ ಮಾಡಿ ಬಳಸಿದರೆ ಲಕ್ಷ್ಮಿ ಕೃಪೆ ಕಡಿಮೆಯಾಗುವುದು ಎಂದು ಹೇಳಲಾಗುವುದು. ಆದ್ದರಿಂದ ಈ ತಿಂಗಳಿನಲ್ಲಿ ದಾನ ಪಡೆದ ಆಹಾರ ವಸ್ತುಗಳನ್ನು ಬಳಸಬೇಡಿ.
ಭಾದ್ರಪದ ಮಾಸದಲ್ಲಿ ಈ ಕಾರ್ಯಗಳನ್ನು ಮಾಡಲು ತುಂಬಾನೇ ಶುಭವಾಗಿದೆ
* ಸೇವಾ ಕಾರ್ಯಗಳಿಗೆ ಈ ತಿಂಗಳು ತುಂಬಾನೇ ಒಳ್ಳೆಯದು: ಈ ತಿಂಗಳು ಬಡವರಿಗೆ ದಾನ ಮಾಡಿ, ಸಮಾಜ ಸೇವಾ ಕಾರ್ಯಗಳಿಗೆ ಈ ತಿಂಗಳು ಶುಭವಾಗಿದೆ. ಸೇವಾ ಕಾರ್ಯ ಮಾಡುವುದರಿಂದ ಗಣೇಶನ ಆಶೀರ್ವಾದ ಸಿಗಲಿದೆ.
* ಈ ಅವಧಿಯಲ್ಲಿ ಧಾರ್ಮಿಕ ಕಾರ್ಯಗಳನ್ನು ಮಾಡಿ: ಧಾರ್ಮಿಕ ಕಾರ್ಯಗಳಿಗೆ ಈ ಅವಧಿ ತುಂಬಾನೇ ಶುಭವಾಗಿದೆ,
* ಶ್ರೀ ಗಣೇಶನಿಗೆ ಲಡ್ಡು, ಮೋದಕಗಳನ್ನು ಅರ್ಪಿಸಿ ಆರಾಧಿಸಿ.
* ದನಗಳಿಗೆ ಹಸಿರು ಮೇವು ದಾನ ಮಾಡಿ
* ಭಾದ್ರಪದ ತಿಂಗಳಿನಲ್ಲಿ ಮೊಸರು ತಿನ್ನಬಾರದು ಆದರೆ ಹಾಲು ಹಾಗೂ ತುಪ್ಪವನ್ನು ಸೇವಿಸಬಹುದು.
* ನೈಸರ್ಗಿಕಕ್ಕೆ ಹತ್ತಿರವಾಗಿ. ನೀವು ಆಹಾರವನ್ನು ಕುರ್ಚಿ, ಟೇಬಲ್ನಲ್ಲಿ ತಿನ್ನುವ ಬದಲಿಗೆ ನೆಲದ ಮೇಲೆ ಕೂತು ತಿನ್ನಿ.



Click it and Unblock the Notifications