Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಭಾದ್ರಪದ ಮಾಸದಲ್ಲಿ ಶುಭಕಾರ್ಯ ಮಾಡಬಾರದು ಏಕೆ?
ಹಿಂದೂ ಮಾಸದ 6ನೇ ತಿಂಗಳು ಭಾದ್ರಪದ ಮಾಸ. ಭಾದ್ರಪದ ಮಾಸವೆಂದರೆ ಪಟ್ ಅಂತ ನೆನೆಪಿಗೆ ಬರುವುದು ಗಣೇಶ ಚತುರ್ಥಿ. ಗಣೇಶ ಚತುರ್ಥಿಯನ್ನು ದೇಶದಾದ್ಯಂತ ಸಡಗರ-ಸಂಭ್ರಮದಿಂದ ತುಂಬಾನೇ ಅದ್ಧೂರಿಯಾಗಿ ಆಚರಿಸಲಾಗುವುದು. ಧಾರ್ಮಿಕ ನಂಬಿಕೆ ಪ್ರಕಾರ ಈ ತಿಂಗಳಿನಲ್ಲಿ ಶುಭ ಕಾರ್ಯಗಳನ್ನು ಮಾಡಬಾರದು ಎಂದು ಹೇಳಲಾಗುವುದು. ಈ ತಿಂಗಳು ಉಪವಾಸ ಹಾಗೂ ಪೂಜೆಗೆ ತುಂಬಾನೇ ಶುಭ ತಿಂಗಳಲಾಗಿದೆ. ಕರ್ನಾಟಕದಲ್ಲಿ ಭಾದ್ರಪದ ಮಾಸ ಸೆಪ್ಟೆಂಬರ್ 16ರಿಂದ ಶುರುವಾಗುವುದು, ಅಕ್ಟೋಬರ್ 14ಕ್ಕೆ ಮುಕ್ತಾಯವಾಗಲಿದೆ.

ಭಾದ್ರಪದ ಮಾಸದಲ್ಲಿ ಕೆಲವೊಂದು ಕಾರ್ಯಗಳನ್ನು ಮಾಡಬಾರದು ಎಂದು ಹೇಳಲಾಗುವುದು. ಈ ತಿಂಗಳಿನಲ್ಲಿ ಯಾವ ಕಾರ್ಯವನ್ನು ಮಾಡಬಾರದು, ಯಾವ ಕಾರ್ಯವನ್ನು ಮಾಡಬೇಕು ಎಂದು ನೋಡೋಣ ಬನ್ನಿ:
* ಯಾವುದೇ ಶುಭ ಕಾರ್ಯ ಮಾಡಬಾರದು: ಭಾದ್ರಪದ ಮಾಸ ಪೂಜಾ ಕಾರ್ಯಗಳಿಗೆ ಒಳ್ಳೆಯದು, ಆದರೆ ಯಾವುದೇ ಶುಭ ಕಾರ್ಯಗಳನ್ನು ಮಾಡಬಾರದು. ಏಕೆಂದರೆ ಭಾದ್ರಪದ ಮಾಸವನ್ನು ಶೂನ್ಯ ಮಾಸವೆಂದು ಕರೆಯಲಾಗುವುದು. ಈ ತಿಂಗಳಿನಲ್ಲಿ ಮದುವೆ, ನಿಶ್ಚಿತಾರ್ಥ, ಮಗುವಿನ ನಾಮಕರಣ, ಮಕ್ಕಳ ತಲೆ ಕೂದಲು ತೆಗೆಯುವುದು, ಗೃಹ ಪ್ರವೇಶ, ಹೊಸದಾಗಿ ಉದ್ಯಮ ಪ್ರಾರಂಭಿಸುವುದು ಈ ರೀತಿ ಯಾವುದೇ ಶುಭ ಕಾರ್ಯ ಮಾಡಬಾರದು.
* ಈ ಬಗೆಯ ಆಹಾರಗಳನ್ನು ಸೇವಿಸಬಾರದು
ಭಾದ್ರಪದ ಮಾಸದಲ್ಲಿ ಬೆಲ್ಲ, ಎಳ್ಳು, ಮೊಸರು, ತೆಂಗಿನೆಣ್ಣೆ, ಎಳ್ಳೆಣ್ಣೆ ಇವುಗಳನ್ನು ಬಳಸಬಾರದು. ಈ ಆಹಾರವನ್ನು ಭಾದ್ರಪದ ಮಾಸದಲ್ಲಿ ಬಳಸಿದರೆ ಆರೋಗ್ಯಕ್ಕೆ ಒಳ್ಳೆಯದಲ್ಲ, ಇದರಿಂದ ಆರೋಗ್ಯ ಸಮಸ್ಯೆ ಉಂಟಾಗುವುದು ಎಂದು ಹೇಳಲಾಗುವುದು.
* ಧಾನ್ಯ ಪಡೆದ ಆಹಾರ ಸೇವಿಸಬೇಡಿ
ಈ ತಿಂಗಳಿನಲ್ಲಿ ಧಾನ್ಯ ಪಡೆದ ಆಹಾರ ಸೇವಿಸಬಾರದು ಎಂದು ಹೇಳಲಾಗುವುದು. ಏಕೆಂದರೆ ಈ ಸಮಯದಲ್ಲಿ ಧಾನ ಪಡೆದ ಅಕ್ಕಿಯಿಂದ ಆಹಾರ ಮಾಡಿ ಬಳಸಿದರೆ ಲಕ್ಷ್ಮಿ ಕೃಪೆ ಕಡಿಮೆಯಾಗುವುದು ಎಂದು ಹೇಳಲಾಗುವುದು. ಆದ್ದರಿಂದ ಈ ತಿಂಗಳಿನಲ್ಲಿ ದಾನ ಪಡೆದ ಆಹಾರ ವಸ್ತುಗಳನ್ನು ಬಳಸಬೇಡಿ.
ಭಾದ್ರಪದ ಮಾಸದಲ್ಲಿ ಈ ಕಾರ್ಯಗಳನ್ನು ಮಾಡಲು ತುಂಬಾನೇ ಶುಭವಾಗಿದೆ
* ಸೇವಾ ಕಾರ್ಯಗಳಿಗೆ ಈ ತಿಂಗಳು ತುಂಬಾನೇ ಒಳ್ಳೆಯದು: ಈ ತಿಂಗಳು ಬಡವರಿಗೆ ದಾನ ಮಾಡಿ, ಸಮಾಜ ಸೇವಾ ಕಾರ್ಯಗಳಿಗೆ ಈ ತಿಂಗಳು ಶುಭವಾಗಿದೆ. ಸೇವಾ ಕಾರ್ಯ ಮಾಡುವುದರಿಂದ ಗಣೇಶನ ಆಶೀರ್ವಾದ ಸಿಗಲಿದೆ.
* ಈ ಅವಧಿಯಲ್ಲಿ ಧಾರ್ಮಿಕ ಕಾರ್ಯಗಳನ್ನು ಮಾಡಿ: ಧಾರ್ಮಿಕ ಕಾರ್ಯಗಳಿಗೆ ಈ ಅವಧಿ ತುಂಬಾನೇ ಶುಭವಾಗಿದೆ,
* ಶ್ರೀ ಗಣೇಶನಿಗೆ ಲಡ್ಡು, ಮೋದಕಗಳನ್ನು ಅರ್ಪಿಸಿ ಆರಾಧಿಸಿ.
* ದನಗಳಿಗೆ ಹಸಿರು ಮೇವು ದಾನ ಮಾಡಿ
* ಭಾದ್ರಪದ ತಿಂಗಳಿನಲ್ಲಿ ಮೊಸರು ತಿನ್ನಬಾರದು ಆದರೆ ಹಾಲು ಹಾಗೂ ತುಪ್ಪವನ್ನು ಸೇವಿಸಬಹುದು.
* ನೈಸರ್ಗಿಕಕ್ಕೆ ಹತ್ತಿರವಾಗಿ. ನೀವು ಆಹಾರವನ್ನು ಕುರ್ಚಿ, ಟೇಬಲ್ನಲ್ಲಿ ತಿನ್ನುವ ಬದಲಿಗೆ ನೆಲದ ಮೇಲೆ ಕೂತು ತಿನ್ನಿ.



Click it and Unblock the Notifications











