Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ತಿರುಪತಿಯಲ್ಲಿ ಲಡ್ಡು ಪ್ರಸಾದ ಆರಂಭವಾಗಿದ್ದು ಯಾವಾಗ? ಯಾರು ಈ ಕಲ್ಯಾಣಂ ಅಯ್ಯಂಗಾರ್?
ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಕಲಬೆರೆಕೆಯಾಗಿರುವ ಸುದ್ದಿ ಈಗ ವಿವಾದ ಹುಟ್ಟುಹಾಕಿದೆ. ಹಾಗೆ ತನಿಖೆಗೂ ಆಗ್ರಹ ಕೇಳಿಬಂದಿದ್ದು, ದೇವಾಲಯದಲ್ಲಿ ಹೋಮ ಹವನಕ್ಕೆ ಸಿದ್ದತೆಯೂ ನಡೆದಿದೆ. ವಿಶ್ವದಲ್ಲೇ ಪ್ರಸಿದ್ಧಿ ಪಡೆದಿದ್ದ ತಿರುಪತಿ ಲಡ್ಡು ಈಗ ವಿವಾದದ ಕೇಂದ್ರಬಿಂದುವಾಗಿದೆ.
ಸದ್ಯ ದೇವಾಲಯ ಆಡಳಿತ ಮಂಡಳಿ ಹಾಗೂ ಸರ್ಕಾರದ ನಡುವೆ ಈಗ ತಿಕ್ಕಾಟ ಆರಂಭಗೊಂಡಿದೆ. ಘಟನೆ ಸಂಬಂಧ ಹತ್ತಾರು ಊಹಾ ಪೋಹಗಳು, ಅನುಮಾನಗಳು ಸಹ ವಿವಾದಕ್ಕೆ ಮತ್ತಷ್ಟು ಕಿಡಿ ಹೊತ್ತಿಸುತ್ತಿದೆ. ದೇಶದಾದ್ಯಂತ ಲಕ್ಷಾಂತರ ಮಂದಿಯ ನಂಬಿಕೆಗೆ ಕೊಡಲಿ ಪೆಟ್ಟು ಬಿದ್ದಂತಾಗಿದೆ.

ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಸಾದವಾಗಿ ನೀಡಲಾದ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಬುಧವಾರ ಹೇಳಿದಾಗ ವಿವಾದ ಹುಟ್ಟುಕೊಂಡಿತ್ತು. ಲ್ಯಾಬ್ ವರದಿಯೂ ಸಹ ಇದಕ್ಕೆ ಪೂರಕವಾಗಿ ಬಂದಿತ್ತು. ತಿರುಪತಿ ಲಡ್ಡುವಿನಲ್ಲಿ ಬಳಸುವ ತುಪ್ಪದ ಮಾದರಿಯಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಮತ್ತು ಹಂದಿ ಕೊಬ್ಬು (ಹಂದಿ ಕೊಬ್ಬು) ಭಾಗಗಳಿವೆ ಎಂದು ಹೇಳಲಾಗಿದೆ.
ತಿರುಪತಿ ದೇವಸ್ಥಾನವು ನೂರಾರು ವರ್ಷಗಳ ಇತಿಹಾಸ ತನ್ನಲ್ಲಿಟ್ಟುಕೊಂಡಿದೆ. ವಿಷ್ಣುವಿನ ಅವತಾರದಲ್ಲಿ ವೆಂಕಟೇಶ್ವರನಾಗಿ ಭೂಲೋಕಕ್ಕೆ ವಿಷ್ಣು ಬಂದಿದ್ದಾನೆ, ಆತ ಕಲಿಯುಗದ ನೋವು, ಮಾನವರ ಕಷ್ಟ ಕಾರ್ಪಣ್ಯಗಳನ್ನು ನಿವಾರಿಸುತ್ತಾನೆ ಎಂದು ನಂಬಲಾಗಿದೆ.
300 ವರ್ಷದ ಹಿಂದೆ ಮೊದಲ ಲಡ್ಡು ವಿತರಣೆ
ವೆಂಕಟೇಶ್ವರ ದೇವರ ಪ್ರಸಾದವಾಗಿ ನೀಡುವ ತಿರುಪತಿ ಲಡ್ಡು ತನ್ನ ವಿಶಿಷ್ಟ ರುಚಿ ಮತ್ತು ವಿನ್ಯಾಸಕ್ಕೆ ಸಾಕಷ್ಟು ಹೆಸರುವಾಸಿಯಾಗಿದೆ. ಇದು 300 ವರ್ಷಗಳ ಹಿಂದೆ ಪ್ರಾರಂಭವಾಯಿತು. 1715 ಆಗಸ್ಟ್ 2 ರಂದು ಮೊಟ್ಟ ಮೊದಲ ಬಾರಿಗೆ ಈ ಲಡ್ಡು ಪ್ರಸಾದವಾಗಿ ತಿರುಪತಿಯಲ್ಲಿ ವಿತರಿಸಲಾಗಿತ್ತು ಎಂದು ಹೇಳಲಾಗಿದೆ. ಇಂದು ನಾವು ನೋಡುತ್ತಿರುವ ಲಡ್ಡು ಸುಮಾರು ಆರು ಬಾರಿ ವಿವಿಧ ವಿನ್ಯಾಸಗಳನ್ನು ಮಾಡಿದ ನಂತರ 1940 ರ ಸುಮಾರಿಗೆ ಮದ್ರಾಸ್ ಸರ್ಕಾರದ ಅಡಿಯಲ್ಲಿ ಅದರ ಪ್ರಸ್ತುತ ಆಕಾರವನ್ನು ಪಡೆದುಕೊಂಡಿದೆ.
ತಿರುಪತಿ 'ಲಡ್ಡು ರಾಜ' ಕಲ್ಯಾಣಂ ಅಯ್ಯಂಗಾರ್
ಲಡ್ಡು ಪ್ರಸಾದ ಆರಂಭಿಸಲು ಕಾರಣವಾಗಿದ್ದು ಕಲ್ಯಾಣಂ ಅಯ್ಯಂಗಾರ್ ಎಂಬ ವ್ಯಕ್ತಿಯಂತೆ. ಈತನನ್ನು ಲಡ್ಡು ರಾಜ ಎಂದು ಕರೆಯಲಾಗಿದೆ. ಈ ಲಡ್ಡು ಇಷ್ಟೊಂದು ರುಚಿಕರವಾಗಿರಲು ಇವರೇ ಕಾರಣೀಕರ್ತರು ಎಂದು ಹೇಳಲಾಗಿದೆ. ಇದನ್ನು ಮಿರಾಸಿದಾರಿ ವಿಧಾನದಲ್ಲಿ ತಯಾರಿಸಲಾಗಿತ್ತಂತೆ.
ಮಿರಾಸಿದಾರಿ ವಿಧಾನ ಎಂದರೇನು?
ಕಲ್ಯಾಣಂ ಅಯ್ಯಂಗಾರ್ ಜನಪ್ರಿಯ ಮಿರಾಸಿದಾರಿ ಪದ್ಧತಿಯನ್ನು ಪರಿಚಯಿಸಿದರು. ಇದು ವಂಶಪಾರಂಪರ್ಯ ವ್ಯವಸ್ಥೆಯಾಗಿದ್ದು, ಸಿಹಿತಿಂಡಿಗಳನ್ನು ತಯಾರಿಸುವುದು ಇದರ ಉದ್ದೇಶವಾಗಿತ್ತು. ಅಡುಗೆಮನೆಯಲ್ಲಿ ಲಡ್ಡುಗಳನ್ನು ತಯಾರಿಸುವ ಜವಾಬ್ದಾರಿಯನ್ನು ಗೇಮಕರ್ ಮಿರಸಿದಾರರು ಎಂದು ಕರೆಯಲಾಗುತ್ತಿತ್ತು. 2001 ರ ಮೊದಲು ಮತ್ತು ನಂತರವೂ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ನೌಕರರು ಸ್ವತಃ ಲಡ್ಡುಗಳನ್ನು ತಯಾರಿಸುತ್ತಿದ್ದರು. ಆದರೆ, ಸಮಯ ಕಳೆದಂತೆ ಭಕ್ತರ ಹರಿವು ಹೆಚ್ಚಾದಂತೆ ಪ್ರತಿದಿನ ತಯಾರಿಸುವ ಲಡ್ಡುಗಳ ಸಂಖ್ಯೆಯನ್ನು ಹೆಚ್ಚಿಸಬೇಕಾಯಿತು.
ಆದರೆ ಬರು ಬರುತ್ತಾ ಲಡ್ಡು ಪ್ರಸಿದ್ಧಿ ಪಡೆಯಿತು. ಬೇಡಿಕೆ ಹೆಚ್ಚಾಯಿತು. ಹೀಗಾಗಿ ದೇವಾಲಯದಲ್ಲಿ ದೊಡ್ಡ ಅಡುಗೆ ಮನೆ ನಿರ್ಮಿಸಲು ನಿರ್ಧರಿಸಲಾಗಿತ್ತು. ಕಟ್ಟಿಗೆ ಒಲೆಗಳ ಮೂಲಕ ಒಲೆ ಹತ್ತಿಸಿ ಈ ಲಡ್ಡು ತಯಾರಿಕೆ ಮಾಡುತ್ತಿದ್ದರು. ಈ ವೇಳೆಗಾಗಲೆ ದಿನಕ್ಕೆ 70 ಸಾವಿರ ಲಡ್ಡುಗಳ ಬೇಡಿಕೆ ಇತ್ತು. ಬರು ಬರುತ್ತಾ ಈ ಸಂಖ್ಯೆ ಏರುತ್ತಲೇ ಸಾಗಿತ್ತು.
ಈಗ ತಿರುಪತಿ ಲಡ್ಡು ದಿನವೊಂದಕ್ಕೆ ಲಕ್ಷ ಲಕ್ಷ ಬೇಡಿಕೆ ಇದೆ. ದೇಶದ ಮೂಲೆ ಮೂಲೆಯಿಂದ ಭಕ್ತರು ಆಗಮಿಸಿ ಲಡ್ಡು ಸ್ವೀಕಾರ ಮಾಡುತ್ತಾರೆ, ಹಾಗೆ ಮನೆಗೆ, ಸ್ನೇಹಿತರಿಗೂ ಇಲ್ಲಿಂದಲೇ ತೆಗೆದುಕೊಂಡು ಹೋಗುತ್ತಾರೆ.



Click it and Unblock the Notifications
