Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕೃಷ್ಣ ಜನ್ಮಾಷ್ಟಮಿಯಂದು ಶ್ರೀ ಕೃಷ್ಣನನ್ನು ಮಧ್ಯರಾತ್ರಿ ಯಾವ ಸಮಯದಲ್ಲಿ ಪೂಜಿಸಬೇಕು?
ಭಗವಾನ್ ಕೃಷ್ಣನನ್ನು ವಿಷ್ಣುವಿನ ಅವತಾರ ಎಂದು ಕರೆಯಲಾಗುವುದು. ಶ್ರೀಕೃಷ್ಣು ಅಧರ್ಮವನ್ನು ಕೊನೆಯಾಗಿಸಲು ಭೂಮಿಗೆ ಬಂದ ಎಂದು ಹೇಳಲಾಗುವುದು. ಶ್ರೀ ಕಷ್ಣನು ಅಷ್ಟಮಿ ತಿಥಿಯಂದು ಜನಿಸಿದನು, ಈ ದಿನವನ್ನು ಕೃಷ್ಣ ಜನ್ಮಾಷ್ಟಮಿಯೆಂದು ಆಚರಿಸಲಾಗುವುದು.
ಕೃಷ್ಣ ಜನ್ಮಾಷ್ಟಮಿಯಂದು ಶ್ರೀ ವಿಷ್ಣುವಿಗೆ ಪೂಜೆ ಸಲ್ಲಿಸಿ ತುಂಬಾ ಸಡಗರ-ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುತ್ತಾರೆ. ಈ ವರ್ಷ ಕೃಷ್ಣ ಜನ್ಮಾಷ್ಟಮಿ ಯಾವಾಗ? ಪೂಜೆಗೆ ಶುಭ ಸಮಯ ಮತ್ತಿತರ ಮಾಹಿತಿಯನ್ನು ತಿಳಿಯೋಣ:

ಈ ವರ್ಷ ಕೃಷ್ಣ ಜನ್ಮಾಷ್ಟಮಿಯನ್ನು ಆಗಸ್ಟ್ 26ರಂದು ಆಚರಿಸಲಾಗುವುದು. ಈ ದಿನ ಜಯಂತಿ ಯೋಗದಲ್ಲಿ ಶ್ರೀ ಕೃಷ್ಣ ಪೂಜೆ ಮಾಡಿದರೆ ಎಲ್ಲಾ ಕಷ್ಟಗಳು ದೂರಾಗುವುದು ಎಂದು ಹೇಳಲಾಗುವುದು.
ಈ ವರ್ಷ ಆಗಸ್ಟ್ 26 ರ ಸೋಮವಾರದಂದು ಕೃಷ್ಣ ಪಕ್ಷದ ಅಷ್ಟಮಿ ತಿಥಿ ಬರುತ್ತಿದ್ದು, ಅದೇ ದಿನ ಕೃಷ್ಣ ಜನ್ಮಾಷ್ಟಮಿಯ ಹಬ್ಬವನ್ನು ಆಚರಿಸಲಾಗುವುದು.
ಪೂಜಾ ಸಮಯ
ನಿಶಿತ್ ಪೂಜೆ ಮುಹೂರ್ತ: 24:00:30 ರಿಂದ 24:45:02( ರಾತ್ರಿ 12 ಗಂಟೆ 30 ಸೆಕೆಂಡ್ನಿಂದ 12 ಗಂಟೆ, 45 ನಿಮಿಷ 2 ಸೆಕೆಂಡ್ವರೆಗೆ ಪೂಜಾ ಮುಹೂರ್ತವಿದೆ.
ಪೂಜೆಗೆ ಶುಭ ಸಮಯ: 0 ಗಂಟೆ 44 ನಿಮಿಷಗಳು
ಆಗಸ್ಟ್ 27 ರಂದು ಜನ್ಮಾಷ್ಟಮಿ ಪಾರಣ ಮುಹೂರ್ತ: ಬೆಳಗ್ಗೆ 5 ಗಂಟೆ 56 ನಿಮಿಷ 15 ಸೆಕೆಂಡ್ಗೆ ಇದೆ. ಈ ಸಮಯದಲ್ಲಿ ಉಪವಾಸ ಮುರಿಯಬೇಕು.
ಅಷ್ಟಮಿ ಮೊದಲ ದಿನದ ಮಧ್ಯರಾತ್ರಿಯವರೆಗೆ ಇದ್ದರೆ ಜನ್ಮಾಷ್ಟಮಿ ಉಪವಾಸವನ್ನು ಮೊದಲ ದಿನ ಆಚರಿಸಲಾಗುತ್ತದೆ.
ಅದೇ ಎರಡನೇ ದಿನದಂದು ಮಧ್ಯರಾತ್ರಿ ಅಷ್ಟಮಿ ಪ್ರಚಲಿತದಲ್ಲಿದ್ದರೆ, ಎರಡನೇ ದಿನ ಜನ್ಮಾಷ್ಟಮಿ ಉಪವಾಸವನ್ನು ಮಾಡಲಾಗುವುದು
ಅಷ್ಟಮಿಯಂದು ರೋಹಿಣಿ ನಕ್ಷತ್ರದ ಸಂಯೋಗವಿದ್ದರೆ ರೋಹಿಣಿ ನಕ್ಷತ್ರ ಸಂಯೋಗವಾದಾಗ ಕರಷ್ಣ ಜನ್ಮಾಷ್ಟಮಿ ಆಚರಿಸಲಾಗುವುದು.
ಜನ್ಮಾಷ್ಟಮಿಯ ಸರಿಯಾದ ಪೂಜಾ ವಿಧಾನ
ಬೆಳಗ್ಗ ಎದ್ದು ಸ್ನಾನ ಮಾಡಿ ಶ್ರೀ ಕೃಷ್ಣನ ವಿಗ್ರಹವನ್ನು ಹೂವುಗಳಿಂದ ಅಲಂಕರಿಸಿ. ಈ ದಿನ ಕೆಲವರು ಸಂಪೂರ್ಣ ಉಪವಾಸ(ನೀರು ಕೂಡ ಸೇವಿಸದೆ) ಇದ್ದರೆ ಇನ್ನು ಕೆಲವರು ಸಾತ್ವಿಕ ಆಹಾರ ಮಾತ್ರ ಸೇವಿಸುತ್ತಾರೆ.
ಪೂಜೆಗೆ ಮೊದಲು ಶ್ರೀ ಕೃಷ್ಣನನ್ನು ಮನಸ್ಸಿನಲ್ಲಿ ಪ್ರಾರ್ಥಿಸಿ ಸಂಲ್ಪ ತೆಗೆದುಕೊಂಡು ನಂತರ ಎಲ್ಲಾ ದೇವರುಗಳಿಗೆ ನಮಸ್ಕರಿಸಿ ಶ್ರೀ ವಿಷ್ಣುವಿನ ಮಂತ್ರಗಳನ್ನು ಪಠಿಸುತ್ತಾ ಆಚರಿಸಬೇಕು.
ಈ ಮಂತ್ರಗಳನ್ನು ಪಠಿಸಿ
ಹರೇ ಕೃಷ್ಣ ಮಹಾ ಮಂತ್ರ
ಹರೇ ಕೃಷ್ಣ, ಹರೇ ಕೃಷ್ಣ, ಕೃಷ್ಣ ಕೃಷ್ಣ ಹರೇ ಹರೇ
ಹರೇ ರಾಮ, ಹರೇ ರಾಮ, ರಾಮ ರಾಮ ಹರೇ ಹರೇ
ಈ ಮಂತ್ರವನ್ನು ಮಹಾಮಂತ್ರ ಎಂದು ಕರೆಯಲಾಗುವುದು. ಈ ಮಂತ್ರವನ್ನು ಪ್ರತಿದಿನ ಪಠಿಸಿ.
ಕೃಷ್ಣ ಗಾಯತ್ರಿ ಮಂತ್ರ
|| ಓಂ ದೇವಕಿ ನಂದನಾಯ ವಿದ್ಮಹೇ
ವಾಸುದೇವಾಯ ಧೀಮಹಿ
ತನ್ನೋ ಕೃಷ್ಣಃ ಪ್ರಚೋದಯಾತ್ ||
|| ಓಂ ದೇವಕಿನಂದನಾಯ ವಿದ್ಮಿಹೇ ವಾಸುದೇವಾಯ ಧೀಮಹಿ |
ತನ್ನೋ: ಕೃಷ್ಣಃ ಪ್ರಚೋದಯಾತ್ ||
ಈ ಮಂತ್ರವನ್ನು ಪಠಿಸುವುದರಿಂದ ಮನಸ್ಸಿನಲ್ಲಿ ಧೈರ್ಯ ಹೆಚ್ಚಾಗುವುದು. ಅಲ್ಲದ ಎಬದುಕಿನಲ್ಲಿರುವ ಕಷ್ಟಗಳು ದೂರಾಗುವುದು ಎಂದು ನಂಬಲಾಗುವುದು.
ಯಶಸ್ವಿಗೆ ಶ್ರೀ ಕೃಷ್ಣ ಮಂತ್ರ
ಓಂ ಶ್ರೀ ಕೃಷ್ಣ ಶರಣಂ ನಮಃ
ಈ ಮಂತ್ರವನ್ನು ಪಠಿಸುವುದರಿಂದ ಯಶಸ್ಸು ಸಿಗಲಿದೆ.
ಹಣದ ಸ್ಥಿತಿಗತಿ ಉತ್ತಮವಾಗಲು
ಕ್ಲೀಂ ಗ್ಲೈಂ ಕ್ಲೀಂ ಶ್ಯಾಮಲಾಂಗಾಯ ನಮಃ
ಪ್ರೇಮ ವಿವಾಹವಾಗಲು ಬಯಸಿದರೆ
ಓಂ ನಮೋ ಭಾಗ್ವತೇ ಶ್ರೀ ಗೋವಿಂದಾಯೇ
ಓಂ
ಕ್ಲೀಂ ಕೃಷ್ಣಾಯ ಗೋಪಿಜಾನ್ ವಲ್ಲಾಬಾಯ್ ಸ್ವಾಹಾ
ಕೃಷ್ಣ ಭಕ್ತಿ ಮಂತ್ರ
ಜೈ ಶ್ರೀ ಕೃಷ್ಣ ಚೈತನ್ಯ ಪ್ರಭು ನಿತ್ಯಾನಂದ ಶ್ರೀ ಅದ್ವೈತ ಗದಾಧರ ಶ್ರೀವಾಸದಿ ಗೌರ ಭಕ್ತ ವೃಂದ
ಕೃಷ್ಣ ಕ್ಲೀಂ ಮಂತ್ರ
ಓಂ ಕ್ಲೀಂ ಕೃಷ್ಣಾಯ ನಮಃ



Click it and Unblock the Notifications