Latest Updates
-
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ!
ಕೃಷ್ಣ ಜನ್ಮಾಷ್ಟಮಿಯಂದು ಶ್ರೀ ಕೃಷ್ಣನನ್ನು ಮಧ್ಯರಾತ್ರಿ ಯಾವ ಸಮಯದಲ್ಲಿ ಪೂಜಿಸಬೇಕು?
ಭಗವಾನ್ ಕೃಷ್ಣನನ್ನು ವಿಷ್ಣುವಿನ ಅವತಾರ ಎಂದು ಕರೆಯಲಾಗುವುದು. ಶ್ರೀಕೃಷ್ಣು ಅಧರ್ಮವನ್ನು ಕೊನೆಯಾಗಿಸಲು ಭೂಮಿಗೆ ಬಂದ ಎಂದು ಹೇಳಲಾಗುವುದು. ಶ್ರೀ ಕಷ್ಣನು ಅಷ್ಟಮಿ ತಿಥಿಯಂದು ಜನಿಸಿದನು, ಈ ದಿನವನ್ನು ಕೃಷ್ಣ ಜನ್ಮಾಷ್ಟಮಿಯೆಂದು ಆಚರಿಸಲಾಗುವುದು.
ಕೃಷ್ಣ ಜನ್ಮಾಷ್ಟಮಿಯಂದು ಶ್ರೀ ವಿಷ್ಣುವಿಗೆ ಪೂಜೆ ಸಲ್ಲಿಸಿ ತುಂಬಾ ಸಡಗರ-ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುತ್ತಾರೆ. ಈ ವರ್ಷ ಕೃಷ್ಣ ಜನ್ಮಾಷ್ಟಮಿ ಯಾವಾಗ? ಪೂಜೆಗೆ ಶುಭ ಸಮಯ ಮತ್ತಿತರ ಮಾಹಿತಿಯನ್ನು ತಿಳಿಯೋಣ:

ಈ ವರ್ಷ ಕೃಷ್ಣ ಜನ್ಮಾಷ್ಟಮಿಯನ್ನು ಆಗಸ್ಟ್ 26ರಂದು ಆಚರಿಸಲಾಗುವುದು. ಈ ದಿನ ಜಯಂತಿ ಯೋಗದಲ್ಲಿ ಶ್ರೀ ಕೃಷ್ಣ ಪೂಜೆ ಮಾಡಿದರೆ ಎಲ್ಲಾ ಕಷ್ಟಗಳು ದೂರಾಗುವುದು ಎಂದು ಹೇಳಲಾಗುವುದು.
ಈ ವರ್ಷ ಆಗಸ್ಟ್ 26 ರ ಸೋಮವಾರದಂದು ಕೃಷ್ಣ ಪಕ್ಷದ ಅಷ್ಟಮಿ ತಿಥಿ ಬರುತ್ತಿದ್ದು, ಅದೇ ದಿನ ಕೃಷ್ಣ ಜನ್ಮಾಷ್ಟಮಿಯ ಹಬ್ಬವನ್ನು ಆಚರಿಸಲಾಗುವುದು.
ಪೂಜಾ ಸಮಯ
ನಿಶಿತ್ ಪೂಜೆ ಮುಹೂರ್ತ: 24:00:30 ರಿಂದ 24:45:02( ರಾತ್ರಿ 12 ಗಂಟೆ 30 ಸೆಕೆಂಡ್ನಿಂದ 12 ಗಂಟೆ, 45 ನಿಮಿಷ 2 ಸೆಕೆಂಡ್ವರೆಗೆ ಪೂಜಾ ಮುಹೂರ್ತವಿದೆ.
ಪೂಜೆಗೆ ಶುಭ ಸಮಯ: 0 ಗಂಟೆ 44 ನಿಮಿಷಗಳು
ಆಗಸ್ಟ್ 27 ರಂದು ಜನ್ಮಾಷ್ಟಮಿ ಪಾರಣ ಮುಹೂರ್ತ: ಬೆಳಗ್ಗೆ 5 ಗಂಟೆ 56 ನಿಮಿಷ 15 ಸೆಕೆಂಡ್ಗೆ ಇದೆ. ಈ ಸಮಯದಲ್ಲಿ ಉಪವಾಸ ಮುರಿಯಬೇಕು.
ಅಷ್ಟಮಿ ಮೊದಲ ದಿನದ ಮಧ್ಯರಾತ್ರಿಯವರೆಗೆ ಇದ್ದರೆ ಜನ್ಮಾಷ್ಟಮಿ ಉಪವಾಸವನ್ನು ಮೊದಲ ದಿನ ಆಚರಿಸಲಾಗುತ್ತದೆ.
ಅದೇ ಎರಡನೇ ದಿನದಂದು ಮಧ್ಯರಾತ್ರಿ ಅಷ್ಟಮಿ ಪ್ರಚಲಿತದಲ್ಲಿದ್ದರೆ, ಎರಡನೇ ದಿನ ಜನ್ಮಾಷ್ಟಮಿ ಉಪವಾಸವನ್ನು ಮಾಡಲಾಗುವುದು
ಅಷ್ಟಮಿಯಂದು ರೋಹಿಣಿ ನಕ್ಷತ್ರದ ಸಂಯೋಗವಿದ್ದರೆ ರೋಹಿಣಿ ನಕ್ಷತ್ರ ಸಂಯೋಗವಾದಾಗ ಕರಷ್ಣ ಜನ್ಮಾಷ್ಟಮಿ ಆಚರಿಸಲಾಗುವುದು.
ಜನ್ಮಾಷ್ಟಮಿಯ ಸರಿಯಾದ ಪೂಜಾ ವಿಧಾನ
ಬೆಳಗ್ಗ ಎದ್ದು ಸ್ನಾನ ಮಾಡಿ ಶ್ರೀ ಕೃಷ್ಣನ ವಿಗ್ರಹವನ್ನು ಹೂವುಗಳಿಂದ ಅಲಂಕರಿಸಿ. ಈ ದಿನ ಕೆಲವರು ಸಂಪೂರ್ಣ ಉಪವಾಸ(ನೀರು ಕೂಡ ಸೇವಿಸದೆ) ಇದ್ದರೆ ಇನ್ನು ಕೆಲವರು ಸಾತ್ವಿಕ ಆಹಾರ ಮಾತ್ರ ಸೇವಿಸುತ್ತಾರೆ.
ಪೂಜೆಗೆ ಮೊದಲು ಶ್ರೀ ಕೃಷ್ಣನನ್ನು ಮನಸ್ಸಿನಲ್ಲಿ ಪ್ರಾರ್ಥಿಸಿ ಸಂಲ್ಪ ತೆಗೆದುಕೊಂಡು ನಂತರ ಎಲ್ಲಾ ದೇವರುಗಳಿಗೆ ನಮಸ್ಕರಿಸಿ ಶ್ರೀ ವಿಷ್ಣುವಿನ ಮಂತ್ರಗಳನ್ನು ಪಠಿಸುತ್ತಾ ಆಚರಿಸಬೇಕು.
ಈ ಮಂತ್ರಗಳನ್ನು ಪಠಿಸಿ
ಹರೇ ಕೃಷ್ಣ ಮಹಾ ಮಂತ್ರ
ಹರೇ ಕೃಷ್ಣ, ಹರೇ ಕೃಷ್ಣ, ಕೃಷ್ಣ ಕೃಷ್ಣ ಹರೇ ಹರೇ
ಹರೇ ರಾಮ, ಹರೇ ರಾಮ, ರಾಮ ರಾಮ ಹರೇ ಹರೇ
ಈ ಮಂತ್ರವನ್ನು ಮಹಾಮಂತ್ರ ಎಂದು ಕರೆಯಲಾಗುವುದು. ಈ ಮಂತ್ರವನ್ನು ಪ್ರತಿದಿನ ಪಠಿಸಿ.
ಕೃಷ್ಣ ಗಾಯತ್ರಿ ಮಂತ್ರ
|| ಓಂ ದೇವಕಿ ನಂದನಾಯ ವಿದ್ಮಹೇ
ವಾಸುದೇವಾಯ ಧೀಮಹಿ
ತನ್ನೋ ಕೃಷ್ಣಃ ಪ್ರಚೋದಯಾತ್ ||
|| ಓಂ ದೇವಕಿನಂದನಾಯ ವಿದ್ಮಿಹೇ ವಾಸುದೇವಾಯ ಧೀಮಹಿ |
ತನ್ನೋ: ಕೃಷ್ಣಃ ಪ್ರಚೋದಯಾತ್ ||
ಈ ಮಂತ್ರವನ್ನು ಪಠಿಸುವುದರಿಂದ ಮನಸ್ಸಿನಲ್ಲಿ ಧೈರ್ಯ ಹೆಚ್ಚಾಗುವುದು. ಅಲ್ಲದ ಎಬದುಕಿನಲ್ಲಿರುವ ಕಷ್ಟಗಳು ದೂರಾಗುವುದು ಎಂದು ನಂಬಲಾಗುವುದು.
ಯಶಸ್ವಿಗೆ ಶ್ರೀ ಕೃಷ್ಣ ಮಂತ್ರ
ಓಂ ಶ್ರೀ ಕೃಷ್ಣ ಶರಣಂ ನಮಃ
ಈ ಮಂತ್ರವನ್ನು ಪಠಿಸುವುದರಿಂದ ಯಶಸ್ಸು ಸಿಗಲಿದೆ.
ಹಣದ ಸ್ಥಿತಿಗತಿ ಉತ್ತಮವಾಗಲು
ಕ್ಲೀಂ ಗ್ಲೈಂ ಕ್ಲೀಂ ಶ್ಯಾಮಲಾಂಗಾಯ ನಮಃ
ಪ್ರೇಮ ವಿವಾಹವಾಗಲು ಬಯಸಿದರೆ
ಓಂ ನಮೋ ಭಾಗ್ವತೇ ಶ್ರೀ ಗೋವಿಂದಾಯೇ
ಓಂ
ಕ್ಲೀಂ ಕೃಷ್ಣಾಯ ಗೋಪಿಜಾನ್ ವಲ್ಲಾಬಾಯ್ ಸ್ವಾಹಾ
ಕೃಷ್ಣ ಭಕ್ತಿ ಮಂತ್ರ
ಜೈ ಶ್ರೀ ಕೃಷ್ಣ ಚೈತನ್ಯ ಪ್ರಭು ನಿತ್ಯಾನಂದ ಶ್ರೀ ಅದ್ವೈತ ಗದಾಧರ ಶ್ರೀವಾಸದಿ ಗೌರ ಭಕ್ತ ವೃಂದ
ಕೃಷ್ಣ ಕ್ಲೀಂ ಮಂತ್ರ
ಓಂ ಕ್ಲೀಂ ಕೃಷ್ಣಾಯ ನಮಃ



Click it and Unblock the Notifications