Latest Updates
-
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ!
3 ಸಾವಿರ ಕೋಟಿಯ ಬ್ರಹತ್ ಸಾಮ್ರಾಜ್ಯ ಕಟ್ಟಿದ್ದ ಸಿ.ಜೆ ರಾಯ್: ಮಾರುತಿ 800 ಕಾರಿಗೆ ₹10 ಲಕ್ಷ ನೀಡಿದ್ದ ಉದ್ಯಮಿ!
ಬೆಂಗಳೂರು ರಿಯಲ್ ಎಸ್ಟೇಟ್ ಲೋಕದ ದಿಗ್ಗಜ, ಖ್ಯಾತ ಉದ್ಯಮಿ ಮತ್ತು ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಹಲವರಲ್ಲಿ ಆಘಾತ ತರಿಸಿದೆ. ಇಂದು ಐಟಿ ದಾಳಿ ನಡುವೆ ಅವರು ಈ ರೀತಿಯ ಹೆಜ್ಜೆ ಇಟ್ಟಿದ್ದಾರೆ ಎಂದು ವರದಿಯಾಗಿವೆ. ತಕ್ಷಣ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ ಎಂದು ವರದಿಯಾಗಿದೆ.
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಾನ್ಫಿಡೆಂಟ್ ಗ್ರೂಪ್ಗೆ ಸಂಬಂಧಿಸಿದ ಕಚೇರಿಗಳ ಮೇಲೆ ದಾಳಿ ನಡೆಸಿದರು. ಐಟಿ ದಾಳಿಗೆ ಸಂಬಂಧಿಸಿದ ಭಯ ಮತ್ತು ಒತ್ತಡದಿಂದಾಗಿ ಅವರು ಆತ್ಮಹತ್ಯೆಗೆ ಮುಂದಾದರು ಎಂದು ವರದಿಗಳಾಗಿವೆ. ಘಟನೆ ಸಂಬಂಧ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ, ಆದರೆ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಬಹುದೊಡ್ಡ ಹೆಸರು ಮಾಡಿರುವ ಅವರ ದಿಢೀರ್ ನಿಧನದ ಸುದ್ದಿ ಆಘಾತ ತಂದಿದೆ.

ಸಿಜೆ ರಾಯ್ ಎಂದು ಕರೆಯಲ್ಪಡುವ ಡಾ. ರಾಯ್ ಚಿರಿಯಂಕಂದತ್ ಜೋಸೆಫ್ ಬೆಂಗಳೂರು ಸೇರಿ ದೇಶದ ವಿವಿಧ ಕಡೆ ತಮ್ಮ ರಿಯಲ್ ಎಸ್ಟೇಟ್ ಉದ್ಯಮ ವಿಸ್ತರಿಸಿದ್ದಾರೆ, ಹಾಗೆ ವಿದೇಶದಲ್ಲೂ ತಮ್ಮ ಉದ್ಯಮ ಮುನ್ನಡೆಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಮುಕ್ತಾಯಗೊಂಡಿದ್ದ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋದ ಪ್ರಥಮ ಬಹುಮಾನವಾದ 50 ಲಕ್ಷ ರೂಪಾಯಿ ಕೂಡ ಅವರೇ ನೀಡಿದ್ದರು.
ಅವರು ಬೆಂಗಳೂರಿನಲ್ಲಿ ದೊಡ್ಡ ವ್ಯಾಪಾರ ಸಾಮ್ರಾಜ್ಯ ಕಟ್ಟಿದ್ದರು. ಸಿಜೆ ರಾಯ್ 65 ಕ್ಕೂ ಹೆಚ್ಚು ಯೋಜನೆಗಳನ್ನು ಅಭಿವೃದ್ಧಿಪಡಿಸಲು ಮತ್ತು ಶೂನ್ಯ-ಸಾಲದ ವ್ಯವಹಾರ ಮಾದರಿಯನ್ನು ಅನುಸರಿಸಲು ಹೆಸರುವಾಸಿಯಾಗಿದ್ದರು. ಅವರ ಬಳಿ ವಿಶ್ವದ ಐಷಾರಾಮಿ ಕಾರುಗಳ ಸಂಗ್ರಹವೇ ಇತ್ತು, ಕಳೆದ ವರ್ಷ ಅವರು ತಮ್ಮ 12ನೇ ರೋಲ್ಸ್ ರಾಯ್ಸ್ ಕಾರು ಖರೀದಿಸಿದ್ದರು.
ಕೇರಳದ ಕೊಚ್ಚಿ ಮೂಲದ ಅವರು ಬೆಂಗಳೂರಿನಲ್ಲಿ ನೆಲೆಸಿ ದಶಕಗಳೇ ಕಳೆದಿವೆ. ಸಣ್ಣ ರಿಯಲ್ ಎಸ್ಟೇಟ್ ಉದ್ಯಮದಿಂದ ಆರಂಭಗೊಂಡಿದ್ದ ಪ್ರಯಾಣ ಈಗ ವಿದೇಶದಲ್ಲೂ ಸೇರಿ ನೂರಾರು ಕೋಟಿ ಉದ್ಯಮ ಕಟ್ಟಿ ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.
ಮಾರುತಿ 800 ಕಾರಿಗೆ 10 ಲಕ್ಷ ರೂ.ನೀಡಿದ್ದ ಉದ್ಯಮಿ
ಇತ್ತೀಚಿಗೆ ಅವರು ತಮ್ಮ ಮೊದಲ ಕಾರು ಮಾರುತಿ 800 ಅನ್ನು ಮರಳಿ ಪಡದಿದ್ದರು, ಬರೋಬ್ಬರಿ 10 ಲಕ್ಷ ರೂಪಾಯಿ ನೀಡಿ ಇದನ್ನು ಖರೀದಿಸಿದ್ದರು. 1994 ರಲ್ಲಿ ಖರೀದಿಸಿದ್ದ 800 ಕಾರನ್ನು ಮರಳಿ ಪಡೆಯಲು ಅವರು ಯೋಜನೆ ರೂಪಿಸಿದ್ದರು. ತಮ್ಮ ಮೊದಲ ಕಾರನ್ನು ಹುಡುಕಿ ತಂದವರಿಗೆ 10 ಲಕ್ಷ ರೂಪಾಯಿ ನೀಡುವುದಾಗಿ ಹೇಳಿದ್ದರು. ಅವರನ್ನು ತಂಡವೊಂದು ಸಂಪರ್ಕಿಸಿತ್ತು. ಈ ಕಾರು ಚಲಾವಣೆಯಲ್ಲಿ ಇಲ್ಲದೆ ಮೂಲೆಯಲ್ಲಿ ಬಿದ್ದಿತ್ತು. ಅದನ್ನು 10 ಲಕ್ಷ ನೀಡಿ ಖರೀದಿಸಿದರು.
ಬರೋಬ್ಬರಿ 3 ಸಾವಿರ ಕೋಟಿ ರೂಪಾಯಿ ಆಸ್ತಿ
ಸಿಜೆ ರಾಯ್ ಬರೋಬ್ಬರಿ 3 ಸಾವಿರ ಕೋಟಿ ರೂ.ನ ದೊಡ್ಡ ಸಾಮ್ರಾಜ್ಯ ಕಟ್ಟಿದ್ದಾರೆ. ಬೆಂಗಳೂರು, ಕೇರಳ, ದುಬೈನಲ್ಲೂ ರಿಯಲ್ ಎಸ್ಟೇಟ್ ಉದ್ಯಮ ಹೊಂದಿದ್ದಾರೆ. ಹಾಗೆ ಸಿನಿಮಾ ನಿರ್ಮಾಣದಿಂದ ಹಿಡಿದು ಮನೊರಂಜನಾ ವಲಯದಲ್ಲೂ ತಮ್ಮನ್ನು ಗುರುತಿಸಿಕೊಂಡಿದ್ದರು.



Click it and Unblock the Notifications
