Latest Updates
-
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು!
ಯಾರು ಈ ರಣವೀರ್ ಅಲಹಾಬಾದಿಯಾ? ಪಾಕಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿದ್ಯಾಕೆ?
ಡಿಜಿಟಲ್ ಕಂಟೆಂಟ್ ಕ್ರಿಯೇಟರ್, ಇನ್ಪ್ಯೂಯೆನ್ಸರ್ ರಣವೀರ್ ಅಲಹಾಬಾದಿಯಾ ಕೀಳುಮಟ್ಟದ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ, ಇಂಡಿಯಾ ಗಾಟ್ ಲೇಟೆಂಟ್ ಶೋನಲ್ಲಿ ಆತ ನೀಡಿದ್ದ ಹೇಳಿಕೆ ಭಾರೀ ವೈರಲ್ ಆಗಿದೆ. ಹಾಗೆ ಎಫ್ಐಆರ್ಗಳು, ನೋಟಿಸ್ ಜಾರಿಯಾಗುತ್ತಲೇ ಇದೆ. ಕಳೆದೊಂದು ವಾರದಿಂದ ನೆಮ್ಮದಿ ಇಲ್ಲದ ದಿನ ಆತ ಕಂಡಿದ್ದಾನೆ.
ತಂದೆ ತಾಯಿ ಕುರಿತಂತೆ ಆತ ನೀಡಿರುವ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶದ ಕಿಡಿ ಹೊತ್ತಿದೆ. ಆತನ ಬಂಧನಕ್ಕೆ ಭಾರೀ ಒತ್ತಾಯಗಳು ಕೇಳಿಬಂದಿವೆ. ಆತನ ಜೊತೆಗೆ ಶೋ ನಡೆಸುತ್ತಿದ್ದವರಿಗೂ ಕೂಡ ಆಘಾತ ಎದುರಾಗಿದೆ. ಪಾಡ್ ಕಾಸ್ಟ್ ಚಾನಲ್ ಮೂಲಕ ಅತ್ಯಂತ ಉದ್ಯಮಿಗಳು, ರಾಜಕಾರಣಿಗಳು, ಸಾಧಕೆ ಸಂದರ್ಶನ ನಡೆಸಿದ್ದ ಆತ ಏಕಾಏಕಿ ಇಂತಹ ಕೀಳು ಮಟ್ಟದ ಹೇಳಿಕೆ ನೀಡಿ ಎಲ್ಲರ ಆಕ್ರೋಶಕ್ಕೆ ಕಾರಣನಾಗಿದ್ದಾನೆ.

ಸಮಯ್ ರೈನಾ ಎಂಬಾತ ನಡೆಸಿಕೊಡುವ ಇಂಡಿಯಾ ಗಾಟ್ ಲ್ಯಾಟೆಂಟ್ ಎಂಬ ಶೋನಲ್ಲಿ ರಣವೀರ್ ಪೋಷಕರ ಲೈಂಗಿಕತೆಯ ಕುರಿತಾಗಿ ಅಶ್ಲೀಲವಾಗಿ ಮಾತನಾಡಿದ್ದರು. ಈ ಶೋ ಯೂಟ್ಯೂಬ್ನಲ್ಲಿ ಹಂಚಿಕೊಂಡ ಬಳಿಕ ಎಲ್ಲರಿಗೂ ಶಾಕ್ ಕಾದಿತ್ತು, ಆದ್ರೆ ಆಕ್ರೋಶ ಹೆಚ್ಚಾದಂತೆ ಆತ ಕ್ಷಮೆಯಾಚಿಸಿದ್ದ ಇಷ್ಟಾದರೂ ಸಮಸ್ಯೆ ಬಗೆಹರಿದಿಲ್ಲ. ಮಹಿಳಾ ಆಯೋಗ ಕೂಡ ನೋಟಿಸ್ ಜಾರಿ ಮಾಡಿದ್ದರೆ, ರಾಜಕೀಯ ಗಣ್ಯರು, ಉದ್ಯಮಿಗಳು, ಯೂಟ್ಯೂಬರ್ಗಳು ಕೂಡ ಆತನ ಹೇಳಿಕೆ ಖಂಡಿಸಿದ್ಧಾರೆ.
ಯಾರು ಈ ರಣವೀರ್ ಅಲಹಾಬಾದಿಯಾ? ಪಾಕಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿದ್ದೇಕೆ ಗೊತ್ತಾ?
ರಣವೀರ್ ಅಲಹಾಬಾದಿಯಾ ಈಗ ಭಾರತದಲ್ಲಿ ವಿವಾದಾತ್ಮಕ ವ್ಯಕ್ತಿಯಾಗಿದ್ದಾರೆ. ಹಿಂದೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ಕೈಯಿಂದಲೇ ನ್ಯಾಷನಲ್ ಕ್ರಿಯೇಟರ್ಸ್ ಅವಾರ್ಡ್ ಪಡೆದಿದ್ದರು. ಹೀಗಾಗಿ ಬಹುಬೇಗ ಅವರ ಯೂಟ್ಯೂಬ್ ಚಾನಲ್ ಸದ್ದು ಮಾಡಿತ್ತು. ಆತ ತನ್ನ 22ನೇ ವಯಸ್ಸಿನಲ್ಲೇ ಯೂಟ್ಯೂಬ್ ಚಾನಲ್ ಆರಂಭಿಸಿದ್ದರು, ಈಗ ದೊಡ್ಡ ದೊಡ್ಡ ಬಾಲಿವುಡ್ ನಟರು ಕೂಡ ಅವರ ಪಾಡ್ಕಾಸ್ಟ್ನಲ್ಲಿ ಬಂದು ಹೋಗಿದ್ದಾರೆ.
ಈ ಹಿಂದೆ ಅವರು ಕಲಾವಿದೆ ಭಾರತಿ ಸಿಂಗ್ ಪತಿ ಹರ್ಷ್ ಲಿಂಬಾಚಿಯಾ ಅವರ ಸಂದರ್ಶನದ ವೇಳೆ ತನ್ನ ಉಪನಾಮ ಹಾಗೂ ಪಾಕಿಸ್ತಾನದೊಂದಿಗಿನ ಸಂಬಂಧ ಕುರಿತು ಹೇಳಿದ್ದರು. ಅವರು ಅಲಹಾಬಾದ್ನಿಂದ ಮುಂಬೈಗೆ ಹೇಗೆ ಬಂದರು ಎಂಬ ಕುರಿತು ಹಾಗೆ ಪಾಕಿಸ್ತಾನದ ನಂಟಿನ ಕುರಿತಂತೆಯೂ ವಿವರಿಸಿದ್ದರು.
ನನ್ನ ಕುಟುಂಬ ಮೂಲತಃ ಪಾಕಿಸ್ತಾನದಿಂದ ಇಲ್ಲಿಗೆ ಬಂದಿದೆ ಎಂದು ನಮ್ಮ ಕುಟುಂಬದಲ್ಲಿ ಆಗಾಗ ಹೇಳುತ್ತಿದ್ದರು. ಪಾಕಿಸ್ತಾನದಲ್ಲಿ ನಮ್ಮ ಮುತ್ತಾತ ಒಬ್ಬರು ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದರು. ಆಗೆಲ್ಲಾ ಸಾಧನೆ ಮಾಡಿದವರು, ಶಿಕ್ಷಣದಲ್ಲಿ ಉನ್ನತ ಸ್ಥಾನ ಪಡೆದವರಿಗೆ ಬಿರುದು ಕೊಡುತ್ತಿದ್ದರು. ಹೀಗಾಗಿ ನನ್ನ ಮುತ್ತಾತನಿಗೆ ಇಲಾಮ್ ವಾಡಿ ಎಂಬ ಬಿರುದು ನೀಡಲಾಗಿತ್ತು. ಆದರೆ ಕಾಲಾಂತರದಲ್ಲಿ ನಾವು ಭಾರತಕ್ಕೆ ಬಂದು ನೆಲೆಸಿದೆವು. ತದನಂತರ ನಮ್ಮ ಹೆಸರಿನ ಮುಂದೆ ಅಲ್ಲಾಹವಾದಿಯಾ ಎಂದು ಬದಲಾಯಿತು. ಆದ್ರೆ ಇದು ನಿಜ ಎಂದು ನನಗೆ ತಿಳಿದಿಲ್ಲ ಎಂದು ಅವರು ಹೇಳಿಕೊಂಡಿದ್ದರು.
'ಬಿಯರ್ಬೈಸೆಪ್ಸ್' ಎಂಬುದಾಗಿಯೇ ಅವರು ಫೇಮಸ್ ಆಗಿದ್ದರು. ಆದ್ರೆ ಈಗ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಅವರೊಬ್ಬರೆ ಅಲ್ಲ ಅದೇ ದಿನ ಅದೇ ಶೋನಲ್ಲಿ ಜಸ್ಪ್ರೀತ್ ಸಿಂಗ್ ಎಂಬಾತ ಕೂಡ ಕೇರಳದ ಕುರಿತು ಅವಹೇಳನಕಾರಿ ಮಾತನಾಡಿದ್ದರು. ಇದು ಕೇರಳ ಮಂದಿಯ ಭಾವನೆಗೆ ಧಕ್ಕೆ ಉಂಟಾಗಿದ್ದು, ಆತನ ವಿರುದ್ಧವೂ ಆಕ್ರೋಶ ಕೇಳಿಬಂದಿದೆ. ಆತನ 100ರಷ್ಟು ಸಾಕ್ಷರತೆ ಹೊಂದಿರುವ ಕೇರಳವನ್ನು ಶಿಕ್ಷಣದ ಆಧಾರದ ಮೇಲೆಯೇ ಕುಹಕವಾಗದ್ದ, ತನ ವಿರುದ್ಧ ಕೂಡ ಈಗ ಆಕ್ರೋಶ ಕೇಳಿಬಂದಿದೆ. ಆಗೆ ಈ ಶೋ ಅನ್ನು ಶಾಶ್ವತವಾಗಿ ನಿಷೇಧಿಸುವಂತೆ ಕೂಗು ಕೇಳಿಬಂದಿದೆ.



Click it and Unblock the Notifications