Latest Updates
-
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ? -
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ?
ಇದೆ ಮೊದಲು: ಮಿಲಿಟರಿ ಕಾರ್ಯಾಚರಣೆ ಕುರಿತು ಮಹಿಳಾ ಅಧಿಕಾರಿ ಮಾಹಿತಿ..! ಈ ಇಬ್ಬರು ಯಾರು ಗೊತ್ತಾ?
ಭಾರತ ಹಾಗೂ ಪಾಕ್ ನಡುವಿನ ಯುದ್ಧ ಭೀತಿ ಹೆಚ್ಚಾಗುತ್ತಿರುವ ನಡುವೆ ಭಾರತ ಪಾಕ್ ನೆಲದಲ್ಲಿ ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಿರುವುದಾಗಿ ಅಧಿಕೃತ ಹೇಳಿಕೆ ನೀಡಿದೆ. ಪಹಲ್ಗಾಮ್ನಲ್ಲಿ ನಡೆದ ಪ್ರವಾಸಿಗರ ಮೇಲಿನ ದಾಳಿ ಸಂಬಂಧ ಈಗ ಪ್ರತಿಕಾರವಾಗಿ ಪಾಕ್ ವಿರುದ್ಧ ಕ್ಷಿಪಣಿ ದಾಳಿ ನಡೆದಿದೆ. ಆಪರೇಷನ್ ಸಿಂಧೂರ್ ಯಶಸ್ವಿಯಾಗಿದೆ ಎಂದು ಭಾರತ ಹೇಳಿಕೊಂಡಿದೆ.
ಇನ್ನು ಈ ಸಂಬಂಧವಾಗಿ ಮಾಧ್ಯಮ ಹೇಳಿಕೆ ನೀಡುವಾಗ ಇಬ್ಬರು ಮಹಿಳಾ ಅಧಿಕಾರಿಗಳು ವೇದಿಕೆ ಮೇಲೆ ಹಾಜರಿದ್ದರು. ಭಾರತೀಯ ಸೇನೆಯಲ್ಲಿ ಮಹಿಳಾ ಕಮಾಂಡರ್ಗಳ ಸಂಖ್ಯೆ ಕಡಿಮೆ ಇದ್ದರೂ ಇದೇ ಮೊದಲ ಬಾರಿಗೆ ಮಹಿಳಾ ಅಧಿಕಾರಿಗಳು ಅಧಿಕೃತ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದು ಎಲ್ಲರ ಗಮನ ಸೆಳೆದಿದೆ.

ಸಶಸ್ತ್ರ ಪಡೆಗಳು ಮಾಧ್ಯಮಗಳನ್ನು ಉದ್ದೇಶಿಸಿ ಇಬ್ಬರು ಮಹಿಳಾ ಅಧಿಕಾರಿಗಳೊಂದಿಗೆ ಆಪರೇಷನ್ ಸಿಂಧೂರ್ ಅನ್ನು ಹೇಗೆ ಯೋಜಿಸಲಾಗಿದೆ ಮತ್ತು ಗುರಿಗಳೇನು ಎಂಬುದನ್ನು ವಿವರಿಸಿದರು. ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಕರ್ನಲ್ ಸೋಫಿಯಾ ಖುರೇಷಿ ಈ ಜವಾಬ್ದಾರಿ ಹೊತ್ತಿದ್ದರು. ಇದೇ ಮೊದಲ ಬಾರಿಗೆ ಮಹಿಳಾ ಅಧಿಕಾರಿಗಳು ಈ ಜವಾಬ್ದಾರಿಯುವ ಕಾರ್ಯಕ್ಕೆ ನಿಯೋಜನೆಗೊಂಡಿದ್ದರು. ಇದು ಎಲ್ಲರ ಅಚ್ಚರಿಗೂ ಕಾರಣವಾಗಿತ್ತು.
ಹಾಗಾದ್ರೆ ಯಾರು ಈ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರ ಪಾತ್ರವೇನು? ಎಂಬುದನ್ನು ತಿಳಿಯುವುದು ಮುಖ್ಯವಾಗಿದೆ.
ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಯಾರು?
ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್ಸಿಸಿ) ಗೆ ಸೇರಿದರು ಮತ್ತು ನಂತರ ತಮ್ಮ ಎಂಜಿನಿಯರಿಂಗ್ ಪೂರ್ಣಗೊಳಿಸಿದರು. ಅವರ ಕುಟುಂಬದಲ್ಲಿ ಸಶಸ್ತ್ರ ಪಡೆಗೆ ಸೇರಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆ ಅವರದ್ದು, ವ್ಯೋಮಿಕಾ ಸಿಂಗ್ ಐಎಎಫ್ನಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ ನೇಮಕಗೊಂಡರು. ಅವರಿಗೆ 2,500 ಕ್ಕೂ ಹೆಚ್ಚು ಗಂಟೆಗಳ ಕಾಳ ಯುದ್ಧ ವಿಮಾನದಗಳ ಹಾರಾಟದ ಅನುಭವವಿದೆ. ಈಗ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದ ಅವರು ರೂಪು ರೇಷೆಗಳು, ಸೇರಿದಂತೆ ಕಾರ್ಯಾಚರಣೆಯ ಕುರಿತಾಗಿ ವಿವರಣೆ ನೀಡಿದರು.
ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ಯಾರು?
ಭಾರತೀಯ ಸೇನೆಯ ಮಾಧ್ಯಮಗೋಷ್ಠಿಯಲ್ಲಿ ಗಮನ ಸೆಳೆದ ಮತ್ತೋರ್ವ ಮಹಿಳಾ ಅಧಿಕಾರಿ ಈ ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ. ಕರ್ನಲ್ ಸೋಫಿಯಾ ಖುರೇಷಿ ಗುಜರಾತ್ಗೆ ಸೇರಿದವರು. ಅವರು ಜೀವರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಖುರೇಷಿ ಅವರ ಅಜ್ಜ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಹಾಗೆ ಖುರೇಷಿ ಯಾಂತ್ರಿಕೃತ ಪದಾತಿ ದಳ ಅಧಿಕಾರಿಯನ್ನು ವಿವಾಹ ಕೂಡ ಆಗಿದ್ದಾರೆ. ಹೀಗಾಗಿ ಇವರ ಕುಟುಂಬದಲ್ಲಿ ಸೇನೆಗೆ ಸಂಬಂಧಿದಂತೆ ಮೊದಲೇ ಕರ್ತವ್ಯ ನಿರ್ವಹಿಸಿದ್ದಾರೆ.
ಕರ್ನಲ್ ಸೋಫಿಯಾ ಖುರೇಷಿ ಭಾರತೀಯ ಸೇನೆಯ ಸಿಗ್ನಲ್ಸ್ ಕಾರ್ಪ್ಸ್ನ ಅಧಿಕಾರಿಯಾಗಿದ್ದಾರೆ. 2016 ರಲ್ಲಿ ಕರ್ನಲ್ ಸೋಫಿಯಾ ಖುರೇಷಿ ಅವರು ಆಸಿಯಾನ್ ಪ್ಲಸ್ ಬಹುರಾಷ್ಟ್ರೀಯ ಕ್ಷೇತ್ರ ತರಬೇತಿ ವ್ಯಾಯಾಮ, ಫೋರ್ಸ್ 18 ನಲ್ಲಿ ಭಾರತೀಯ ಸೇನಾ ತರಬೇತಿ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆ ಕೂಡ ಪಡೆದಿದ್ದಾರೆ.
ಸೇನೆಯ ಇಬ್ಬರು ಹಿರಿಯ ಮಹಿಳಾ ಅಧಿಕಾರಿಗಳು ಜಂಟಿಯಾಗಿ ಮಾಧ್ಯಮಗಳಿಗೆ ಆಪರೇಷನ್ ಸಿಂಧೂರ್ ಕುರಿತಾದ ಮಾಹಿತಿ ನೀಡಿದರು. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳಿಗೆ ನ್ಯಾಯ ಒದಗಿಸಲು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. ಬುಧವಾರ ಬೆಳಗಿನ ಜಾವ 1:05 ರಿಂದ 1:30 ರ ನಡುವೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.



Click it and Unblock the Notifications