Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಇದೆ ಮೊದಲು: ಮಿಲಿಟರಿ ಕಾರ್ಯಾಚರಣೆ ಕುರಿತು ಮಹಿಳಾ ಅಧಿಕಾರಿ ಮಾಹಿತಿ..! ಈ ಇಬ್ಬರು ಯಾರು ಗೊತ್ತಾ?
ಭಾರತ ಹಾಗೂ ಪಾಕ್ ನಡುವಿನ ಯುದ್ಧ ಭೀತಿ ಹೆಚ್ಚಾಗುತ್ತಿರುವ ನಡುವೆ ಭಾರತ ಪಾಕ್ ನೆಲದಲ್ಲಿ ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಿರುವುದಾಗಿ ಅಧಿಕೃತ ಹೇಳಿಕೆ ನೀಡಿದೆ. ಪಹಲ್ಗಾಮ್ನಲ್ಲಿ ನಡೆದ ಪ್ರವಾಸಿಗರ ಮೇಲಿನ ದಾಳಿ ಸಂಬಂಧ ಈಗ ಪ್ರತಿಕಾರವಾಗಿ ಪಾಕ್ ವಿರುದ್ಧ ಕ್ಷಿಪಣಿ ದಾಳಿ ನಡೆದಿದೆ. ಆಪರೇಷನ್ ಸಿಂಧೂರ್ ಯಶಸ್ವಿಯಾಗಿದೆ ಎಂದು ಭಾರತ ಹೇಳಿಕೊಂಡಿದೆ.
ಇನ್ನು ಈ ಸಂಬಂಧವಾಗಿ ಮಾಧ್ಯಮ ಹೇಳಿಕೆ ನೀಡುವಾಗ ಇಬ್ಬರು ಮಹಿಳಾ ಅಧಿಕಾರಿಗಳು ವೇದಿಕೆ ಮೇಲೆ ಹಾಜರಿದ್ದರು. ಭಾರತೀಯ ಸೇನೆಯಲ್ಲಿ ಮಹಿಳಾ ಕಮಾಂಡರ್ಗಳ ಸಂಖ್ಯೆ ಕಡಿಮೆ ಇದ್ದರೂ ಇದೇ ಮೊದಲ ಬಾರಿಗೆ ಮಹಿಳಾ ಅಧಿಕಾರಿಗಳು ಅಧಿಕೃತ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದು ಎಲ್ಲರ ಗಮನ ಸೆಳೆದಿದೆ.

ಸಶಸ್ತ್ರ ಪಡೆಗಳು ಮಾಧ್ಯಮಗಳನ್ನು ಉದ್ದೇಶಿಸಿ ಇಬ್ಬರು ಮಹಿಳಾ ಅಧಿಕಾರಿಗಳೊಂದಿಗೆ ಆಪರೇಷನ್ ಸಿಂಧೂರ್ ಅನ್ನು ಹೇಗೆ ಯೋಜಿಸಲಾಗಿದೆ ಮತ್ತು ಗುರಿಗಳೇನು ಎಂಬುದನ್ನು ವಿವರಿಸಿದರು. ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಕರ್ನಲ್ ಸೋಫಿಯಾ ಖುರೇಷಿ ಈ ಜವಾಬ್ದಾರಿ ಹೊತ್ತಿದ್ದರು. ಇದೇ ಮೊದಲ ಬಾರಿಗೆ ಮಹಿಳಾ ಅಧಿಕಾರಿಗಳು ಈ ಜವಾಬ್ದಾರಿಯುವ ಕಾರ್ಯಕ್ಕೆ ನಿಯೋಜನೆಗೊಂಡಿದ್ದರು. ಇದು ಎಲ್ಲರ ಅಚ್ಚರಿಗೂ ಕಾರಣವಾಗಿತ್ತು.
ಹಾಗಾದ್ರೆ ಯಾರು ಈ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರ ಪಾತ್ರವೇನು? ಎಂಬುದನ್ನು ತಿಳಿಯುವುದು ಮುಖ್ಯವಾಗಿದೆ.
ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಯಾರು?
ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್ಸಿಸಿ) ಗೆ ಸೇರಿದರು ಮತ್ತು ನಂತರ ತಮ್ಮ ಎಂಜಿನಿಯರಿಂಗ್ ಪೂರ್ಣಗೊಳಿಸಿದರು. ಅವರ ಕುಟುಂಬದಲ್ಲಿ ಸಶಸ್ತ್ರ ಪಡೆಗೆ ಸೇರಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆ ಅವರದ್ದು, ವ್ಯೋಮಿಕಾ ಸಿಂಗ್ ಐಎಎಫ್ನಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ ನೇಮಕಗೊಂಡರು. ಅವರಿಗೆ 2,500 ಕ್ಕೂ ಹೆಚ್ಚು ಗಂಟೆಗಳ ಕಾಳ ಯುದ್ಧ ವಿಮಾನದಗಳ ಹಾರಾಟದ ಅನುಭವವಿದೆ. ಈಗ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದ ಅವರು ರೂಪು ರೇಷೆಗಳು, ಸೇರಿದಂತೆ ಕಾರ್ಯಾಚರಣೆಯ ಕುರಿತಾಗಿ ವಿವರಣೆ ನೀಡಿದರು.
ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ಯಾರು?
ಭಾರತೀಯ ಸೇನೆಯ ಮಾಧ್ಯಮಗೋಷ್ಠಿಯಲ್ಲಿ ಗಮನ ಸೆಳೆದ ಮತ್ತೋರ್ವ ಮಹಿಳಾ ಅಧಿಕಾರಿ ಈ ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ. ಕರ್ನಲ್ ಸೋಫಿಯಾ ಖುರೇಷಿ ಗುಜರಾತ್ಗೆ ಸೇರಿದವರು. ಅವರು ಜೀವರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಖುರೇಷಿ ಅವರ ಅಜ್ಜ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಹಾಗೆ ಖುರೇಷಿ ಯಾಂತ್ರಿಕೃತ ಪದಾತಿ ದಳ ಅಧಿಕಾರಿಯನ್ನು ವಿವಾಹ ಕೂಡ ಆಗಿದ್ದಾರೆ. ಹೀಗಾಗಿ ಇವರ ಕುಟುಂಬದಲ್ಲಿ ಸೇನೆಗೆ ಸಂಬಂಧಿದಂತೆ ಮೊದಲೇ ಕರ್ತವ್ಯ ನಿರ್ವಹಿಸಿದ್ದಾರೆ.
ಕರ್ನಲ್ ಸೋಫಿಯಾ ಖುರೇಷಿ ಭಾರತೀಯ ಸೇನೆಯ ಸಿಗ್ನಲ್ಸ್ ಕಾರ್ಪ್ಸ್ನ ಅಧಿಕಾರಿಯಾಗಿದ್ದಾರೆ. 2016 ರಲ್ಲಿ ಕರ್ನಲ್ ಸೋಫಿಯಾ ಖುರೇಷಿ ಅವರು ಆಸಿಯಾನ್ ಪ್ಲಸ್ ಬಹುರಾಷ್ಟ್ರೀಯ ಕ್ಷೇತ್ರ ತರಬೇತಿ ವ್ಯಾಯಾಮ, ಫೋರ್ಸ್ 18 ನಲ್ಲಿ ಭಾರತೀಯ ಸೇನಾ ತರಬೇತಿ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆ ಕೂಡ ಪಡೆದಿದ್ದಾರೆ.
ಸೇನೆಯ ಇಬ್ಬರು ಹಿರಿಯ ಮಹಿಳಾ ಅಧಿಕಾರಿಗಳು ಜಂಟಿಯಾಗಿ ಮಾಧ್ಯಮಗಳಿಗೆ ಆಪರೇಷನ್ ಸಿಂಧೂರ್ ಕುರಿತಾದ ಮಾಹಿತಿ ನೀಡಿದರು. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳಿಗೆ ನ್ಯಾಯ ಒದಗಿಸಲು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. ಬುಧವಾರ ಬೆಳಗಿನ ಜಾವ 1:05 ರಿಂದ 1:30 ರ ನಡುವೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.



Click it and Unblock the Notifications